Homeಕರೋನಾ ತಲ್ಲಣವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

ವಿದೇಶಕ್ಕೆ ತೆರಳುವವರಿಗೆ ಲಸಿಕೆ ಆದ್ಯತೆ: ಕೊವ್ಯಾಕ್ಸಿನ್ ಹಾಕಿಸಿಕೊಂಡವರು ವಿದೇಶಕ್ಕೆ ಹೋಗಲಾಗದು!

- Advertisement -
- Advertisement -

18-44ರ ವಯೋಮಾನದಲ್ಲಿ ಲಸಿಕೆ ಪಡೆಯುವವರಲ್ಲಿ ವಿದೇಶಕ್ಕೆ ಉದ್ಯೋಗ ಮತ್ತು ವಿದ್ಯಾಭ್ಯಾಸಕ್ಕೆ ತೆರಳುವವರನ್ನು ಆದ್ಯತಾ ಪಟ್ಟಿಗೆ ಸೇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿಕೆ ಉಲ್ಲೇಖಿಸಿ ಇಂದು ಪ್ರಜಾವಾಣಿ ವರದಿ ಮಾಡಿದೆ.

ಆದರೆ ಅವರು ಯಾವ ಲಸಿಕೆ ಪಡೆಯಬೇಕೆಂದು ಎಲ್ಲೂ ಹೇಳಿಲ್ಲ. ಕೊವ್ಯಾಕ್ಸಿನ್ ಲಸಿಕೆ ಪಡೆದು ಸರ್ಟಿಫಿಕೇಟ್ ಪಡೆದರೆ ಅದಕ್ಕೆ ಬಹುತೇಕ ದೇಶಗಳಲ್ಲಿ ಮಾನ್ಯತೆ ಇಲ್ಲ.
ಹಾಗೆ ನೋಡಿದರೆ ತರಾತುರಿಯಲ್ಲಿ ಕೇಂದ್ರ ಸರ್ಕಾರ ಬಳಕೆಗೆ ಅನುಮತಿ ನೀಡಿದ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್‌ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆ ಇನ್ನು ಸಿಕ್ಕಿಲ್ಲ. ಎಷ್ಟೋ ವೈದ್ಯರು ಮತ್ತು ವೈದ್ಯ ಸಿಬ್ಬಂದಿ ಕೊವ್ಯಾಕ್ಸಿನ್ ಬದಲು ಕೋವಿಶೀಲ್ಡ್ ಹಾಕಿಸಿಕೊಳ್ಳಲು ಆದ್ಯತೆ ನೀಡುತ್ತಾರೆ ಎಂಬ ವರದಿಗಳು ಬರುತ್ತಲೇ ಇವೆ.

WHO ತನ್ನ ಅನುಮೋದಿತ ಪಟ್ಟಿಯಲ್ಲಿ ಫಿಜರ್, ಮಾಡೆರ್ನಾ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಹೊಂದಿದೆ. ಆದರೆ ಕೊವ್ಯಾಕ್ಸಿನ್ ಆ ಪಟ್ಟಿಯಲ್ಲಿ ಇಲ್ಲ. ಪಟ್ಟಿಯಲ್ಲಿ ಸೇರಿಸಲು “ಹೆಚ್ಚಿನ ಮಾಹಿತಿ, ಪುರಾವೆ ಅಗತ್ಯವಿದೆ” ಎಂದು WHO ಹೇಳುತ್ತದೆ.

ದೀರ್ಘಕಾಲದ ಕೋವಿಡ್ ನಿರ್ಬಂಧಗಳ ನಂತರ ಹಲವಾರು ದೇಶಗಳು ಪ್ರಯಾಣ ಮತ್ತು ಪ್ರವಾಸೋದ್ಯಮವನ್ನು ಕ್ರಮೇಣ ಮರುಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಂತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅನೇಕ ದೇಶಗಳು ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಅನ್ನು ಅನುಮೋದಿತ ಲಸಿಕೆಗಳಲ್ಲಿ ಪಟ್ಟಿ ಮಾಡದಿರುವ ಬಗ್ಗೆ ವಿದೇಶಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಲ್ಲಿ ಆತಂಕ ಶುರುವಾಗಿದೆ ಎಂದು ಮೂರು ದಿನದ ಹಿಂದೆ ಎನ್‌ಡಿಟಿವಿ ವರದಿ ಮಾಡಿದೆ.

ಈ ಪೈಕಿ ಈಗಾಗಲೇ ಕೆಲವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಐರ್ಲೆಂಡ್ ಮತ್ತು ಯುರೋಪಿಯನ್ ಒಕ್ಕೂಟದ ದೇಶಗಳು ಕೋವಾಕ್ಸಿನ್ ಅನ್ನು ತಮ್ಮ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಹೊಂದಿಲ್ಲ. ಉನ್ನತ ವಿಶ್ವವಿದ್ಯಾಲಯಗಳು, ಆಯಾ ದೇಶಗಳು ಅಥವಾ ಡಬ್ಲ್ಯುಎಚ್‌ಒ ಅನುಮೋದಿಸಿದ ಲಸಿಕೆಗಳನ್ನು ಪಡೆದವರಿಗೆ ಅವಕಾಶ ನೀಡುತ್ತಿವೆ ಎಂದು ವರದಿಯಾಗಿದೆ.

“ಕೊವ್ಯಾಕ್ಸಿನ್ ಅನುಮೋದಿತ ಪಟ್ಟಿಯಲ್ಲಿಲ್ಲ, ಇದರರ್ಥ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹೋಟೆಲ್ ಕ್ಯಾರೆಂಟೈನ್‌ನಿಂದ ಮುಕ್ತಗೊಳಿಸಲಾಗುವುದಿಲ್ಲ. 14 ದಿನಗಳ ಕಾಲ ಹೋಟೆಲ್‌ನಲ್ಲಿ ಉಳಿಯುವುದು ತುಂಬಾ ದುಬಾರಿಯಾಗಿದೆ” ಎಂದು ಲಿಮೆರಿಕ್ ವಿಶ್ವವಿದ್ಯಾಲಯದ ಅಧ್ಯಯನ ಸಲಹೆಗಾರ್ತಿ ಸೌಮ್ಯಾ ಪಾಂಡೆ ಹೇಳಿದ್ದಾರೆ.

ಅಮೆರಿಕ, ಬ್ರೆಜಿಲ್ ಮತ್ತು ಹಂಗೇರಿ ಸೇರಿದಂತೆ “60 ಕ್ಕೂ ಹೆಚ್ಚು ದೇಶಗಳಲ್ಲಿ” ಕೊವ್ಯಾಕ್ಸಿನ್‌ನ ಅನುಮೋದನೆಗಳು ಪ್ರಕ್ರಿಯೆಯಲ್ಲಿವೆ ಎಂದು ಭಾರತ್ ಬಯೋಟೆಕ್ ಹೇಳಿಕೆಯಲ್ಲಿ ತಿಳಿಸಿದೆ.
“13 ದೇಶಗಳಲ್ಲಿ ತುರ್ತು ಬಳಕೆಯ ದೃಢೀಕರಣಗಳನ್ನು ಪಡೆಯಲಾಗಿದೆ. ತುರ್ತು ಬಳಕೆ ಪಟ್ಟಿಗೆ ಅರ್ಜಿಯನ್ನು ಡಬ್ಲ್ಯುಎಚ್‌ಒ ಜಿನೀವಾ ಕಚೇರಿಗೆ ಸಲ್ಲಿಸಲಾಗಿದೆ ಮತ್ತು ಜುಲೈ-ಸೆಪ್ಟೆಂಬರ್‌ನಲ್ಲಿ ನಿಯಂತ್ರಕ ಅನುಮೋದನೆಗಳನ್ನು ನಿರೀಕ್ಷಿಸಲಾಗಿದೆ” ಎಂದು ಕಂಪನಿ ತಿಳಿಸಿದೆ.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಶೈಕ್ಷಣಿಕ ಅವಧಿಗಳು ಪ್ರಾರಂಭವಾಗಲಿವೆ.

ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಎರಡು ಲಸಿಕೆಗಳು ಈಗ ದೇಶದಲ್ಲಿ ಬಳಕೆಯಲ್ಲಿವೆ. ರಷ್ಯಾದ ಸ್ಪುಟ್ನಿಕ್ ಮೂರನೇ ಸ್ಥಾನ ಪಡೆಯಲಿದೆ. ಕೊವ್ಯಾಕ್ಸಿನ್ ಅನ್ನು ಪೂರ್ಣ ಕ್ಲಿನಿಕಲ್ ಮಾಹಿತಿಯಿಲ್ಲದೆ ಜನವರಿಯಲ್ಲಿ ತುರ್ತು ಬಳಕೆಗಾಗಿ ಅನುಮೋದಿಸಲಾಯಿತು. ಇದು ಸಾಕಷ್ಟು ವಿವಾದಗಳಿಗೆ ಕಾರಣವಾಯಿತು ಮತ್ತು ರಾಷ್ಟ್ರವ್ಯಾಪಿ ಲಸಿಕೆ ಚಾಲನೆಯ ಆರಂಭಿಕ ಹಂತಗಳಲ್ಲಿ ಈ ಲಸಿಕೆ ಪಡೆಯಲು ಸಾವಿರಾರು ಜನರು ಮುಖ್ಯವಾಗಿ ವೈದ್ಯಕೀಯ ಸಿಬ್ಬಂದಿ ಹಿಂಜರಿಕೆ ತೋರಿದರು.


ಇದನ್ನೂ ಓದಿ: ದೆಹಲಿ ವಾಸ್ತು- ಹಿನ್ನೋಟ; ಭವ್ಯ ಕಟ್ಟಡವೊಂದಕ್ಕೆ ಪರಂಪರೆಯ ನೆಲಸಮ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...