Homeಕರೋನಾ ತಲ್ಲಣಹಳ್ಳಿಗಳಲ್ಲಿ ದಾಖಲಾಗದ ಕೋವಿಡ್ ಸಾವುಗಳು: ಸಾಲುತ್ತಿಲ್ಲ ಕರ್ನಾಟಕದ ಆರೋಗ್ಯ ವ್ಯವಸ್ಥೆ..

ಹಳ್ಳಿಗಳಲ್ಲಿ ದಾಖಲಾಗದ ಕೋವಿಡ್ ಸಾವುಗಳು: ಸಾಲುತ್ತಿಲ್ಲ ಕರ್ನಾಟಕದ ಆರೋಗ್ಯ ವ್ಯವಸ್ಥೆ..

- Advertisement -
- Advertisement -

‘ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೇಯೇ ಹಳ್ಳ ಹಿಡಿದಿದೆ ಎಂಬುದು ಸಾಬೀತಾಗುತ್ತಿದೆ’ ಎಂದು ಅದೇ ತಾನೇ ಕೋವಿಡ್ ಕೇರ್ ಸೆಂಟರ್‌ನಿಂದ ಹೊರಬಂದ ಧಾರವಾಡದ ಸರ್ಕಾರಿ ವೈದ್ಯರೊಬ್ಬರು ತುಂಬ ಕಳವಳದಲ್ಲಿ ನಾನುಗೌರಿ.ಕಾಂಗೆ ಹೇಳಿದರು.

ಈಗ ಕೋವಿಡ್ ಎರಡನೇ ಅಲೆ ಹಳ್ಳಿಗಳಿಗೆ ದಾಳಿ ಇಟ್ಟಿದೆ. ಇದೇನೂ ಅನಿರೀಕ್ಷಿತವಲ್ಲ. ನಮ್ಮ ಪ್ರಭುತ್ವ ತೋರಿದ ಹೊಣೆಗೇಡಿತನವೇ ಇದಕ್ಕೆ ಕಾರಣ. ಉತ್ತರಪ್ರದೇಶ, ಬಿಹಾರ್ ರಾಜ್ಯಗಳ ಕೋವಿಡ್ ಶವಗಳು ಗಂಗೆಯಲ್ಲಿ ತೇಲಿ ಹೋಗಿದ್ದು ಕಣ್ಣಿಗೆ ರಾಚಿ ಹೋದ ದೃಶ್ಯಗಳಾಗಿದ್ದವು. ಪ್ರಧಾನಿ ಕೂಡ ಅತ್ತಂತೆ ಮಾಡಿದರು. ಆದರೆ ಇಲ್ಲಿ ಕರ್ನಾಟಕದ ಹಳ್ಳಿಗಳಲ್ಲಿ ಕೋವಿಡ್ ಸಾವುಗಳು ವರದಿಯಾಗದೇ ಹೋಗುತ್ತಿವೆ.

ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳನ್ನು ಸುತ್ತಿದ ಪ್ರಜಾವಾಣಿ ವರದಿಗಾರ ಮನೋಜ್ ಕುಮಾರ್ ಗುದ್ದಿ, ‘ಹಳ್ಳಿಗಳಲ್ಲಿ ಪರೀಕ್ಷೆಯೇ ಆಗ್ತಿಲ್ಲ. ಲಸಿಕೆಯಂತೂ ದೂರದ ಮಾತು. ಕೋವಿಡ್‌ಗೆ ಅಪ್ಪ ಸತ್ತರೆ ಅಂತ್ಯಸಂಸ್ಕಾರ ಮಾಡಲು ಮಗನಿಲ್ಲ. ಏಕೆಂದರೆ ಆತನೂ ಕೋವಿಡ್ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಒಂದೇ ಕುಟುಂಬದಲ್ಲಿ 3-4 ಕೋವಿಡ್ ಸಾವು ಸಂಭವಿಸುತ್ತಿವೆ. ಪರಿಸ್ಥಿತಿ ಭೀಕರವಾಗಿದೆ’ ಎಂದು ನಾನುಗೌರಿ. ಕಾಂಗೆ ತಿಳಿಸಿದರು.

ಇತ್ತೀಚೆಗೆ ಪ್ರಮುಖ ದಿನಪತ್ರಿಕೆಯಲ್ಲಿ ಬಂದ ಸುದ್ದಿಯನ್ನು ಉಲ್ಲೇಖಿಸಿದ ಧಾರವಾಡದ ಸರ್ಕಾರಿ ವೈದ್ಯರು, ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಕಳೆದ 15 ದಿನಗಳಲ್ಲಿ 60 ಸಾವು ಸಂಭವಿಸಿವೆ. ಇದರಲ್ಲಿ ಕೇವಲ 4 ಸಾವುಗಳನ್ನು ಕೋವಿಡ್ ಸಾವುಗಳು ಎಂದು ದಾಖಲಿಸಲಾಗಿದೆ. ಇದನ್ನು ನಂಬಲಾಗುತ್ತದೆಯೇ? ಕೋವಿಡ್ ಸಂಬಂಧಕ್ಕೇ ಹೃದಯಾಘಾತ ಹೊಂದಿದವರ ಸಾವನ್ನು ಹೃದಯಾಘಾತ ಪಟ್ಟಿಯಲ್ಲಿ ಸೇರಿಸಲಾಗುತ್ತಿದೆ. ತಮ್ಮ ತಮ್ಮ ಜವಾಬ್ದಾರಿಗಳನ್ನು ಮರೆತ ವೈದ್ಯ ಸಿಬ್ದಂದಿ ಅಸಹಾಯಕವಾಗಿದೆಯೋ ಅಥವಾ ದಾರಿ ತಪ್ಪಿಸುತ್ತಿದೆಯೋ ಗೊತ್ತಾಗುತ್ತಿಲ್ಲ’ ಎನ್ನುತ್ತಾರೆ.

ಕಲಬುರ್ಗಿ ಕತೆ

ನಿತ್ಯ ದುಡಿದು ಮನೆಯನ್ನು ನಡೆಸುವ ಯುವಕರು, ಚಿಕ್ಕವರಿಗೆ ಮಾರ್ಗದರ್ಶನ ಮಾಡುತ್ತಿದ್ದ ಹಿರಿಯರು, ಮೊಮ್ಮಕ್ಕಳಿಗೆ ಚಂದಮಾಮನ ಕಥೆ ಹೇಳಿ ರಂಜಿಸುತ್ತಿದ್ದ ಅಜ್ಜ, ಅಜ್ಜಿ ಹೀಗೆ ಮನೆಗೆ, ಗ್ರಾಮಗಳಿಗೆ ಊರುಗೋಲಾಗಿದ್ದವರನ್ನೇ ಕೊರೋನಾದ ಎರಡನೇ ಅಲೆ ಆಪೋಶನ ತೆಗೆದುಕೊಂಡಿದೆ. ಅವರ ಬದುಕನ್ನು ನುಂಗಿ ನೀರು ಕುಡಿದಿದೆ ಎಂದು ಪ್ರಜಾವಾಣಿಯ ಮನೋಜ್ ಬರೆಯುತ್ತಾರೆ. ಹಲವಾರಿ ಹಳ್ಳಿಗಳನ್ನು ಸುತ್ತಿ ವಿಡಿಯೋ ವರದಿ ಮಾಡಿದ ಮನೋಜ್, ನಾನುಗೌರಿಯೊಂದಿಗೆ ಮಾತನಾಡುತ್ತ, 20ನೇ ಶತಮಾನದಲ್ಲಿ ಕಾಣಿಸಿಕೊಂಡ ಪ್ಲೇಗ್ ಮಹಾಮಾರಿ, 1970ರ ದಶಕದಲ್ಲಿ ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ‘ಡೌಗಿ’ ಬರದ ಬಳಿಕ ಕೊರೋನಾ ಹಾವಳಿಯಿಂದಾಗಿ ಇಷ್ಟೊಂದು ಸಾವುಗಳು ಸಂಭವಿಸಿದ್ದರಿಂದ ಗ್ರಾಮಗಳು ಅಕ್ಷರಶಃ ತತ್ತರಿಸಿ ಹೋಗಿವೆ’ ಎನ್ನುತ್ತಾರೆ.

ಆಳಂದ ತಾಲ್ಲೂಕಿನ ಗಡಿ ಗ್ರಾಮಗಳಾದ ಆಳಂಗಾ, ಖಜೂರಿ, ಅಫಜಲಪುರ ತಾಲ್ಲೂಕಿನ ಬಂದರವಾಡ, ಗೊಬ್ಬುರ (ಬಿ), ಚೌಡಾಪುರ, ಕಲಬುರ್ಗಿ ತಾಲ್ಲೂಕಿನ ಸಣ್ಣೂರ, ಹಾಗರಗಾ, ದಾರ್ಯ ನಾಯಕ ತಾಂಡಾ, ಖಾಜಾ ಕೋಟನೂರ, ಚಿತ್ತಾಪುರ ತಾಲ್ಲೂಕಿನ ಗುಂಡಗುರ್ತಿ, ಮಾಡಬೂಳ, ರಾಷ್ಟ್ರಕೂಟರ ರಾಜಧಾನಿಯಾಗಿದ್ದ ಸೇಡಂ ತಾಲ್ಲೂಕಿನ ಮಳಖೇಡ, ರಾಜಶ್ರೀ ಸಿಮೆಂಟ್ ಕಾರ್ಖಾನೆಗೆ ಹೊಂದಿಕೊಂಡಂತಿರುವ ಹೂಡಾ (ಬಿ) ಸೇರಿದಂತೆ ಹಲವು ಗ್ರಾಮಗಳಲ್ಲಿ ತಮ್ಮ ಸಂಬಂಧಿಕರು, ನೆರೆ ಹೊರೆಯವರನ್ನು ಕಳೆದುಕೊಂಡ ದುಃಖ, ಬೇಸರ ಕುದಿ ಮೌನದ ರೂಪದಲ್ಲಿದೆ ಎಂದು ಮನೋಜ್ ನಮಗೆ ತಿಳಿಸಿದರು.

ವಿಚಿತ್ರ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕೋವಿಡ್‌ನಿಂದ ಮೃತಪಟ್ಟ ತಂದೆಗೆ ಅಂತ್ಯಸಂಸ್ಕಾರ ಮಾಡಬೇಕಿದ್ದ ಮಗ ಆಸ್ಪತ್ರೆಯಲ್ಲಿ ಅದೇ ಕಾಯಿಲೆಯೊಂದಿಗೆ ಹೋರಾಡುತ್ತಿದ್ದಾನೆ. ಪತಿ ಸತ್ತ ಸುದ್ದಿ ಪಕ್ಕದ ಕೋವಿಡ್ ವಾರ್ಡ್ನಲ್ಲಿರುವ ಪತ್ನಿಗೂ ತಿಳಿಸಲಾಗದೇ ಅಂತ್ಯಸಂಸ್ಕಾರ ಮಾಡುವ ಅನಿವಾರ್ಯತೆ ಎದುರಾಗಿದೆ ಈಗ.
3 ಸಾವಿರ ಜನಸಂಖ್ಯೆ ಹೊಂದಿರುವ ಪುಟ್ಟ ಊರಲ್ಲಿ ಒಂದೇ ದಿನ ನಾಲ್ಕು ಜನ ತೀರಿಕೊಂಡ, ಬೆಳಿಗ್ಗೆ ತಂದೆ, ಸಂಜೆ ಮಗ ತೀರಿಕೊಂಡ, ಸ್ವತಃ ವೈದ್ಯ ಪತಿಯ ಕಣ್ಣೆದುರೇ ಉಸಿರುಗಟ್ಟಿ ಅಪಾರ ಯಾತನೆಯಿಂದ ಪತ್ನಿ ಮೃತಪಟ್ಟ ಉದಾಹರಣೆಗಳೂ ಇವೆ ಎನ್ನುತ್ತಾರೆ ಮನೋಜ್.

ಮಾರ್ಚ್ ಕೊನೆಯ ಹಾಗೂ ಏಪ್ರಿಲ್ ಮೊದಲ ವಾರದಲ್ಲಿ ಜಿಲ್ಲೆಯ ಗ್ರಾಮಗಳಿಗೆ ಹರಡಿದ ಕೊರೋನಾ ಸೋಂಕು ಸದ್ದಿಲ್ಲದೇ ಜನರ ಸಾವಿಗೆ ಕಾರಣವಾಯಿತು. ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಆಳಂದ, ಅಫಜಲಪುರ ತಾಲ್ಲೂಕುಗಳಲ್ಲಿ ಚೆಕ್ ಪೋಸ್ಟ್ ಆರಂಭಿಸಲಾಯಿತಾದರೂ ಕಟ್ಟುನಿಟ್ಟಿನ ತಪಾಸಣೆ ನಡೆಯಲಿಲ್ಲ. ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಪರಿಶೀಲಿಸದೆಯೇ ಎಷ್ಟೋ ಸಂದರ್ಭಗಳಲ್ಲಿ ಜಿಲ್ಲೆಗೆ ಪ್ರವೇಶ ನೀಡಲಾಯಿತು.

ಅಲ್ಲಿ ಏರುಗತಿ, ಇಲ್ಲಿ ಚೆಕಿಂಗ್ ಇಲ್ಲ!

ಕಲಬುರಗಿ ಜಿಲ್ಲೆಯ ಕೆಲಭಾಗ ಮಹಾರಾಷ್ಟ್ರದ ಗಡಿಗಳಿಗೆ ಹೊಂದಿಕೊಂಡಿದೆ ಮತ್ತು ಎರಡೂ ಕಡೆ ಕೊಡಕೊಳ್ಳುವ ಸಂಬಂಧವಿದೆ. ಇಲ್ಲಿಯವರು ಅಲ್ಲಿ, ಅಲ್ಲಿನವರು ಇಲ್ಲಿ ಕೆಲಸ ಮಾಡುತ್ತಾರೆ. ಜೊತೆಗೆ ವೈವಾಹಿಕ ಸಂಬಂಧಗಳಂತೂ ಸಹಜವಾಗಿವೆ. ಮಹಾರಾಷ್ಟ್ರದಲ್ಲಿ ಪ್ರಕರಣಗಳು ಏರುಗತಿಯಲ್ಲಿದ್ದ ಸಂದರ್ಭದಲ್ಲಿಯೂ ಕಲಬುರ್ಗಿ ಜಿಲ್ಲೆಗೆ ಬರುವ ಮಹಾರಾಷ್ಟ್ರ ಸಾರಿಗೆ ಬಸ್ ಹಾಗೂ ಇಲ್ಲಿಂದ ಪ್ರಯಾಣ ಆರಂಭಿಸಿ ವಾಪಸ್ ಜಿಲ್ಲೆಗೆ ಮುಂಬೈ, ಪುಣೆಯಲ್ಲಿದ್ದ ಜನರನ್ನು ಕರೆತಂದ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ತಪಾಸಣೆ ಮಾಡಲೇ ಇಲ್ಲ.
ಆಳಂದ ತಾಲ್ಲೂಕಿನ ಗಡಿ ಗ್ರಾಮ ಖಜೂರಿ ಚೆಕ್‌ಪೋಸ್ಟ್‌ನಲ್ಲಿ ಹೇಳಿಕೊಳ್ಳುವಂಥ ಕಟ್ಟುನಿಟ್ಟು ಕಂಡು ಬರಲೇ ಇಲ್ಲ.

ಧಾರವಾಡ ಮತ್ತು ಬೆಳಗಾವಿ ಕೂಡ ಮಹಾರಾಷ್ಟ್ರದ ಜೊತೆ ಗಡಿ ಹಂಚಿಕೊಂಡಿವೆ ಮತ್ತು ಆಪ್ತ ಸಂಬಂಧಗಳನ್ನು ಹೊಂದಿವೆ ಎಂಬುದನ್ನು ಇಲ್ಲಿ ನೆನಪಿಡಬೇಕು. ಹತ್ತು ದಿನಗಳ ಹಿಂದೆ ಮುಂಬೈ ಕರ್ನಾಟಕದಲ್ಲಿ ಸುತ್ತಾಡಿ ಹೋದ ಆರೋಗ್ಯ ಸಚಿವರಿಗೆ ಈ ಖಬರು ಇಲ್ಲವೇ ಇಲ್ಲ.
ಇದು ಕೇವಲ ಧಾರವಾಡ, ಕಲಬುರಗಿ ವಿಷಯವಷ್ಟೇ ಅಲ್ಲ, ರಾಜ್ಯದ ಬಹುಪಾಲು ಜಿಲ್ಲೆಗಳ ಹಳ್ಳಿಗಳಿಗೆ ಕೋವಿಡ್ ಎರಡನೇ ಅಲೆ ದಾಳಿ ಇಟ್ಟಿದೆ. ಹಳ್ಳಿಗಳಲ್ಲಿ ಸಂಭವಿಸುತ್ತಿರುವ ಸಾವುಗಳು ಕೋವಿಡ್ ಸಾವು ಎಂದು ಕೌಂಟ್ ಆಗುತ್ತಿಲ್ಲ. ಒಮ್ಮಿಂದೊಮ್ಮೇಲೆ ಒಂದು ಹಳ್ಳಿಯಲ್ಲಿ ಸಾವಿನ ಸಂಖ್ಯೆ ಏರತೊಡಗಿದರೆ, ಅದು ಕೋವಿಡ್ಡೋ ಅಥವಾ ಇನ್ನೊಂದೋ ಆಗಿರಲಿ, ಸರ್ಕಾರದ ಆರೋಗ್ಯ ವ್ಯವಸ್ಥೆ ಗಮನ ಹರಿಸಬೇಕಲ್ಲವೇ?

ಜನರೇ ಜಾಗೃತರಾಗಬೇಕು. ಈ ಕೊಳಕು ವ್ಯವಸ್ಥೆಯಿಂದ ಮೂರನೇ ಅಲೆಯೂ ಬರಲಿದೆ, ನಮ್ಮ ಮಕ್ಕಳನ್ನಾದರೂ ಕಾಪಾಡಿಕೊಳ್ಳೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ:ಲಾಕ್‌ಡೌನ್‌ನ ನೀರವ ಮೌನ ಮತ್ತು ಸಾಂಕ್ರಾಮಿಕದ ಶೋಕ ಗೀತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...