Homeಕರೋನಾ ತಲ್ಲಣಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

- Advertisement -
- Advertisement -

ಆಕ್ಸಿಜನ್, ಜೀವರಕ್ಷಕ ಔಷಧಿಗಳ ಹಂಚಿಕೆಯಲ್ಲಿ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಅನ್ಯಾಯವೆಸಗಿತು. ಈಗ ಕೋವಿಡ್ ಲಸಿಕೆ ಹಂಚಿಕೆಯಲ್ಲೂ ತಾರತಮ್ಯ ಎಸಗುತ್ತಿದೆ. ಈ ಅನ್ಯಾಯಗಳನ್ನು ಖಂಡಿಸಿ ಭಾನುವಾರ ನಾಳೆ ಸಂಜೆ 5 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ #ಲಸಿಕೆಯಲ್ಲೂಮೋಸ ಎಂಬ ಟ್ವಿಟರ್ ಅಭಿಯಾನ ನಡೆಸಲಿದೆ ಎಂದು ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದರೆ ಸ್ವರ್ಗ‌ ಧರೆಗಿಳಿಯಲಿದೆ ಎಂದು ಹೇಳಿದ್ದರು. ಆದರೆ ಈಗ ಆಗುತ್ತಿರುವುದೇ ಬೇರೆ. ಅನ್ಯಾಯಗಳ ಕುರಿತು ಪ್ರಶ್ನೆ ಮಾಡುವ ಶಕ್ತಿಯೂ ರಾಜ್ಯ ನಾಯಕರಿಗಿಲ್ಲ. ಕನ್ನಡಿಗರು ಈಗಾಗಲೇ ನೊಂದಿದ್ದಾರೆ, ನರಳುತ್ತಿದ್ದಾರೆ. ನಮ್ಮ‌ ತಾಳ್ಮೆಯ ಪರೀಕ್ಷೆ ಮಾಡಬೇಡಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಕ್ಸಿಜನ್ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯವನ್ನು ನಾವು ಕಣ್ಣಾರೆ ನೋಡಿದ್ದೇವೆ. ಜೀವಾನಿಲ ಸಿಗದೆ ನೂರಾರು ಮಂದಿ ರಾಜ್ಯದಲ್ಲಿ ಮೃತಪಟ್ಟರು. ಕೊನೆಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಗಳ ಮಧ್ಯಪ್ರವೇಶದಿಂದಾಗಿ ಒಂದಷ್ಟು ಆಕ್ಸಿಜನ್ ಲಭಿಸಿತು. ಒಕ್ಕೂಟ ಸರ್ಕಾರ ನ್ಯಾಯಾಲಯಗಳ ಆದೇಶವನ್ನೂ ಸರಿಯಾಗಿ ಪಾಲಿಸುತ್ತಿಲ್ಲ. ಆದರೂ ಇದನ್ನು ಕೇಳುವವರು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್ ರೋಗಿಗಳಿಗೆ ಬಳಸಲಾಗುವ ರೆಮ್ಡಿಸಿವಿರ್ ಹಂಚಿಕೆಯಲ್ಲೂ ಗುಜರಾತ್, ಉತ್ತರಪ್ರದೇಶ ಇತ್ಯಾದಿ ರಾಜ್ಯಗಳಿಗೆ ಸಿಂಹಪಾಲು ನೀಡಿ ಕರ್ನಾಟಕವನ್ನು ವಂಚಿಸಲಾಯಿತು. ಈಗ ಬ್ಲಾಕ್ ಫಂಗಸ್ ರೋಗಿಗಳಿಗೆ ನೀಡಲಾಗುವ ಆಂಫೋಟೆರಿಸಿನ್ ಬಿ ಔಷಧಿ ಹಂಚಿಕೆಯಲ್ಲೂ ಅನ್ಯಾಯ ನಡೆಯುತ್ತಿದೆ. ಹಲವಾರು ಜಿಲ್ಲೆಗಳಿಗೆ ಈ ಔಷಧಿ ಸಿಗದೆ ರೋಗಿಗಳು ಸಾಯುತ್ತಿದ್ದಾರೆ. ಇದಕ್ಕೆ‌ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

ಮೇ.25ರ ಅಂತ್ಯಕ್ಕೆ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಶೇ.6.7ರಷ್ಟು ಕೋವಿಡ್ ಲಸಿಕೆ ಹಂಚಿಕೆ ಮಾಡಿದೆ. ಅದೇ ಸಂದರ್ಭದಲ್ಲಿ ಗುಜರಾತ್ ಗೆ ಶೇ. 7.91ರಷ್ಟು, ಉತ್ತರ ಪ್ರದೇಶಕ್ಕೆ 8.29ರಷ್ಟು ಲಸಿಕೆ ನೀಡಿದೆ. ಈ ತಾರತಮ್ಯ ಯಾಕೆ? ವ್ಯಾಕ್ಸಿನ್ ಹಂಚಿಕೆಯಲ್ಲಿ ಈ ಮಲತಾಯಿ ಧೋರಣೆ ಯಾಕೆ? ಒಕ್ಕೂಟ ಸರ್ಕಾರಕ್ಕೆ ಎಲ್ಲರ ಜೀವವೂ ಮುಖ್ಯವಲ್ಲವೇ ಎಂದು ಕಿಡಿಕಾರಿದ್ದಾರೆ.

ಮೇ.1 ರ ನಂತರ ರಾಜ್ಯ ಸರ್ಕಾರಗಳಿಗೂ ನೇರವಾಗಿ ಲಸಿಕೆ ಕೊಂಡುಕೊಳ್ಳುವ ಅವಕಾಶವನ್ನು ಒಕ್ಕೂಟ ಸರ್ಕಾರ ನೀಡಿದ ನಂತರ ಒಟ್ಟು ಮೂರು ಕೋಟಿ ಲಸಿಕೆಗಳಿಗೆ ಬೇಡಿಕೆ ನೀಡಲಾಗಿದೆ, ಹಣವನ್ನೂ ತೆಗೆದಿರಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಕೈ ಸೇರಿರುವುದು ಕೇವಲ 14 ಲಕ್ಷ ಲಸಿಕೆ ಮಾತ್ರ.‌ ರಾಜ್ಯಕ್ಕೆ ಬರಬೇಕಾದ ಲಸಿಕೆಯನ್ನು ತಡೆಯುತ್ತಿರುವ ಕಾಣದ ಕೈಗಳು ಯಾವುವು ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಲಸಿಕೆಗಳಿಗೆ ಇದ್ದ 100 ರೂಪಾಯಿ ಸೇವಾಶುಲ್ಕವನ್ನು ರಾಜ್ಯ‌ ಸರ್ಕಾರ 300 ರುಪಾಯಿಗಳಿಗೆ ಹೆಚ್ಚಿಸಿದೆ. ಖಾಸಗಿ ಆಸ್ಪತ್ರೆಗಳ ಲಾಬಿಗೆ ರಾಜ್ಯ ಸರ್ಕಾರ ಮಣಿದಿರುವುದು ಸ್ಪಷ್ಟವಾಗಿದೆ. ಖಾಸಗಿ ಆಸ್ಪತ್ರೆಗಳು ಮನಸಿಗೆ ಬಂದ ದರಕ್ಕೆ ಲಸಿಕೆಯನ್ನು ನೀಡುತ್ತಿತ್ತು, ಲಸಿಕೆ ಹೆಸರಲ್ಲಿ ಹಗಲು ದರೋಡೆಯೇ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೋವಿಡ್ ಮೂರನೇ ಅಲೆ ಬರುವುದರೊಳಗೆ ರಾಜ್ಯದ ಎಲ್ಲ ನಾಗರಿಕರಿಗೂ ಲಸಿಕೆ ನೀಡಬೇಕಾಗಿರುವುದು ರಾಜ್ಯ ಮತ್ತು ಒಕ್ಕೂಟ‌ ಸರ್ಕಾರದ ಹೊಣೆಗಾರಿಕೆಯಾಗಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಮೂರನೇ ಅಲೆಯಲ್ಲೂ ಅಮಾಯಕ ಜನರು ಸಾವಿಗೀಡಾಗುವ ಸಂಭವವಿದೆ. ಜನರ ಸಿಟ್ಟು ರಟ್ಟೆಗೆ ಬರುವ ಮುನ್ನ‌ ಸರ್ಕಾರಗಳು ಎಚ್ಚೆತ್ತು ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...