Homeಮುಖಪುಟ"ನನ್ನನ್ನು ಈ ರೀತಿ ಅವಮಾನಿಸಬೇಡಿ": ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

“ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

- Advertisement -
- Advertisement -

ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಭೆಯೊಂದರ ಕುರಿತಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ “ನನ್ನನ್ನು ಈ ರೀತಿ ಅವಮಾನಿಸಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಕಚೇರಿ “ನಕಲಿ, ಏಕಪಕ್ಷೀಯ, ಪಕ್ಷಪಾತದ ಸುದ್ದಿ”ಯನ್ನು ಮಾಧ್ಯಮಗಳಿಗೆ ಒದಗಿಸಿದೆ ಎಂದು ಅವರು ಅಪಾದಿಸಿದ್ದಾರೆ.

“ನನ್ನನ್ನು ಈ ರೀತಿ ಅವಮಾನಿಸಬೇಡಿ. ನಮಗೆ ಭರ್ಜರಿ ಗೆಲುವು ಸಿಕ್ಕಿದೆ, ಅದಕ್ಕಾಗಿಯೇ ನೀವು ಈ ರೀತಿ ವರ್ತಿಸುತ್ತಿದ್ದೀರಾ? ನೀವು ಎಲ್ಲವನ್ನೂ ಪ್ರಯತ್ನಿಸಿದ್ದೀರಿ ಮತ್ತು ಸೋತಿದ್ದೀರಿ. ಪ್ರತಿದಿನ ನಮ್ಮೊಂದಿಗೆ ಯಾಕೆ ಜಗಳವಾಡುತ್ತಿದ್ದೀರಿ?” ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ ಅವರು, ವಿಷಯ, ಇಶ್ಯೂಗಳ ಕುರಿತು ನೇರವಾಗಿ ಸಂವಹನ ಮಾಡಿ ಎಂದು ಸಲಹೆ ನೀಡಿದರು.

ಕೇಂದ್ರವು ತನ್ನ ಉನ್ನತ ಅಧಿಕಾರಿಯನ್ನು ದೆಹಲಿಗೆ ಮರಳುವಂತೆ ಆದೇಶಿಸಿದ್ದು ಮಮತಾ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಮಮತಾ ಅವರು ಪ್ರಧಾನಿ ನೇತೃತ್ವದ ಸಭೆಗೆ ಗೈರು ಹಾಜರಾಗಿದ್ದಾರೆ ಮತ್ತು ಅವರ ಖಾಲಿ ಸ್ಥಾನವನ್ನು ತೋರಿಸುವ ಫೋಟೋಗಳನ್ನು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪ್ಲಾಂಟ್ ಮಾಡಿದೆ ಎಂದು ಕೆಲವು ಮೂಲಗಳು ತಿಳಿಸಿವೆ.

ಮಮತಾ ಪ್ರಧಾನಿ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ 15 ನಿಮಿಷಗಳ ತ್ವರಿತ ಸಂವಾದ ನಡೆಸಿದರು ಮತ್ತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮೊದಲೇ ಘೋಷಿಸಿದ್ದಂತೆ ಚಂಡಮಾರುತ ಪೀಡಿತ ಕರಾವಳಿಯ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮದ ಕಾರಣಕ್ಕಾಗಿ ಮುಖ್ಯಮಂತ್ರಿ ಅವರು ಹೊರಡುವ ಮೊದಲು ಪ್ರಧಾನಮಂತ್ರಿಯ ಅನುಮತಿಯನ್ನು ಕೇಳಿದರು ಎಂದು ಬಂಗಾಳ ಸರ್ಕಾರದ ಮೂಲಗಳು ತಿಳಿಸಿವೆ.

“ನಾನು ಚಂಡಮಾರುತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಯೋಜನೆಗಳನ್ನು ರೂಪಿಸಿದ್ದೆ. ಯಾಸ್ ಚಂಡಮಾರುತದಿಂದ ಉಂಟಾದ ಹಾನಿಯನ್ನು ನೋಡಲು ನಾನು ಸಾಗರ್ ಮತ್ತು ದಿಘಾಕ್ಕೆ ಪ್ರಯಾಣಿಸಬೇಕಾಗಿತ್ತು. ನನ್ನ ಎಲ್ಲಾ ಯೋಜನೆಗಳನ್ನು ಸಿದ್ಧಪಡಿಸಲಾಗಿತ್ತು. ನಂತರ ಇದ್ದಕ್ಕಿದ್ದಂತೆ ಚಂಡಮಾರುತದ ನಂತರದ ಪರಿಸ್ಥಿತಿಯನ್ನು ನಿರ್ಣಯಿಸಲು ಬಂಗಾಳಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ ಎಂಬ ಕರೆ ಬಂದಿತು’ ಎಂದು ಮಮತಾ ಬ್ಯಾನರ್ಜಿ ಹೇಳಿದರು.

‘ರಾಜಕೀಯ ವೈರತ್ವ ಸಾಧಿಸಲು ಮಾತ್ರ ಪ್ರಧಾನಮಂತ್ರಿ ಸಭೆ ಕರೆದಿದ್ದಾರೆ. ಅವರ ಬಿಜೆಪಿಯನ್ನು ಒಳಗೊಂಡಿರುವ ಪ್ರತಿಪಕ್ಷಗಳನ್ನು ಆಹ್ವಾನಿಸಿದ್ದಾರೆ ಮತ್ತು ಗವರ್ನರ್ ಜಗದೀಪ್ ಧಂಕರ್ ಅವರನ್ನೂ ಕರೆದಿದ್ದಾರೆ. ಇತ್ತೀಚೆಗೆ ಅವರು ಗುಜರಾತ್ ಮತ್ತು ಒಡಿಶಾದಲ್ಲಿ ನಡೆಸಿದ ಚಂಡಮಾರುತ ಪರಿಶೀಲನಾ ಸಭೆಗಳಲ್ಲಿ ಹೀಗೆ ವರ್ತಿಸಿರಲಿಲ್ಲ’ ಎಂದು ಮಮತಾ ದೂರಿದ್ದಾರೆ.

ಪ್ರಧಾನಿ ಮತ್ತು ರಾಜ್ಯಪಾಲರನ್ನು 30 ನಿಮಿಷಗಳ ಕಾಲ ಕಾಯುವಂತೆ ಮಾಡಿದೆ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ಅಲ್ಲಗಳೆದಿರುವ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ತಾನೇ 20 ನಿಮಿಷಗಳ ಕಾಲ ಕಾಯಬೇಕಾಗಿತು ಎಂದಿದ್ದಾರೆ.

“ಪಿಎಂ-ಸಿಎಂ ಸಭೆ ನಡೆಯಬೇಕಿದ್ದ ಸ್ಥಳವನ್ನು ತಲುಪುವ ಹೊತ್ತಿಗೆ, ಸ್ವಲ್ಪ ಸಮಯದ ಹಿಂದೆ ಪ್ರಧಾನಿ ಅಲ್ಲಿಗೆ ಆಗಮಿಸಿದ್ದರು ಮತ್ತು ಸಭೆ ನಡೆಯುತ್ತಿದೆ ಎಂದು ಅಧಿಕಾರಿಗಳು ನಮಗೆ ಹೇಳಿದರು.. ಹೊರಗೆ ಕಾಯಲು ನಮ್ಮನ್ನು ಕೇಳಲಾಯಿತು, ಸಭೆ ನಡೆಯುತ್ತಿರುವುದರಿಂದ ಈ ಸಮಯದಲ್ಲಿ ಯಾವುದೇ ಪ್ರವೇಶವಿಲ್ಲ ಎಂದರು. ನಾವು ಸ್ವಲ್ಪ ಸಮಯ ತಾಳ್ಮೆಯಿಂದ ಕಾಯುತ್ತಿದ್ದೆವು. ನಂತರ, ನಾವು ಮತ್ತೆ ಕೇಳಿದಾಗ, ಮುಂದಿನ ಒಂದು ಗಂಟೆಯವರೆಗೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲ ಎಂದು ನಮಗೆ ತಿಳಿಸಲಾಯಿತು” ಎಂದು ಅವರು ಹೇಳಿದರು.
“ಆಗ ಸಭೆ ಕಾನ್ಫರೆನ್ಸ್ ಹಾಲ್‌ಗೆ ಸ್ಥಳಾಂತರಗೊಂಡಿದೆ ಎಂದು ಯಾರೋ ಹೇಳಿದರು, ಆದ್ದರಿಂದ ಮುಖ್ಯ ಕಾರ್ಯದರ್ಶಿ ಮತ್ತು ನಾನು ಅಲ್ಲಿಗೆ ಹೋಗಲು ನಿರ್ಧರಿಸಿದೆವು. ನಾವು ಅಲ್ಲಿಗೆ ತಲುಪಿದಾಗ, ಪ್ರಧಾನಿ ಗೌರವಾನ್ವಿತ ರಾಜ್ಯಪಾಲರು, ಕೇಂದ್ರ ಮುಖಂಡರು ಮತ್ತು ಕೆಲವು ವಿಪಕ್ಷ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದರು’ ಎಂದು ಮಮತಾ ದೂರಿದ್ದಾರೆ.

“ಇದು ಸಭೆಯ ಉದ್ದೇಶಕ್ಕೆ ವಿರುದ್ಧವಾಗಿತ್ತು. ಇದು ಕೇವಲ ಪ್ರಧಾನಿ-ಸಿಎಂ ಸಭೆ ಮಾತ್ರ ಎಂದು ಭಾವಿಸಲಾಗಿತ್ತು. ಆದ್ದರಿಂದ, ನಾವು ನಮ್ಮ ವರದಿಯನ್ನು ಪ್ರಧಾನಮಂತ್ರಿಗೆ ಸಲ್ಲಿಸಲು ನಿರ್ಧರಿಸಿದೆವು ಮತ್ತು ನಂತರ ಪ್ರಧಾನ ಮಂತ್ರಿಯ ಅನುಮತಿಯೊಂದಿಗೆ ನಾವು ದಿಘಾಗೆ ಹೋದೆವು. ನಾನು ಮೂರು ಬಾರಿ ಪ್ರಧಾನಮಂತ್ರಿಯ ಅನುಮತಿಯನ್ನು ಕೋರಿದೆ” ಎಂದು ಅವರು ಹೇಳಿದರು.

“ಪ್ರಧಾನಮಂತ್ರಿ ತಮ್ಮ ಅಹಂಕಾರವನ್ನು ಶಮನಗೊಳಿಸಿದರೆ ಅವರ ಪಾದಗಳನ್ನು ಮುಟ್ಟಲು ಸಿದ್ಧ’ ಎಂದು ಮಮತಾ ಹೇಳಿದರು. ಏಕೆಂದರೆ ಬಂಗಾಳದ ಜನರಿಗೆ ಉತ್ತಮವಾದದ್ದನ್ನು ನೀಡಲು ಬಯಸಿದ್ದೇನೆ ಎಂದ ಅವರು, ಮುಖ್ಯ ಕಾರ್ಯದರ್ಶಿ ವರ್ಗಾವಣೆ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸಿದರು ಮತ್ತು ಇದನ್ನು ದೇಶಾದ್ಯಂತದ ಅಧಿಕಾರಿಗಳಿಗೆ ಮಾಡಿದ ಅವಮಾನ ಎಂದು ಕರೆದರು.

ಏಪ್ರಿಲ್-ಮೇ ವಿಧಾನಸಭಾ ಚುನಾವಣೆಯ ನಂತರ ಶುಕ್ರವಾರ ನಡೆದ ಪ್ರಧಾನ ಮಂತ್ರಿ ಮೋದಿ ಮತ್ತು ಮಮತಾ ಬ್ಯಾನರ್ಜಿ ನಡುವೆ ನಡೆದ ಮೊದಲ ಮುಖಾಮುಖಿಯಾಗಿದೆ.


ಇದನ್ನೂ ಓದಿ: ಎನ್‌ಟಿಆರ್‌ 98 ನೇ ಜನ್ಮದಿನ ಮತ್ತು ಕಮರುತ್ತಿರುವ ತೆಲಗು ದೇಶಂ ಪಕ್ಷದ ಮರುಸಂಘಟನೆಯ ಕನಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...