Homeಮುಖಪುಟಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

ಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

- Advertisement -
- Advertisement -

ಮೋದಿ ಸರ್ಕಾರಕ್ಕೆ ಏಳು ವರ್ಷವೋ, ಬಿಜೆಪಿ ಸರ್ಕಾರಕ್ಕೋ ಇಲ್ಲ ಎನ್‌ಡಿಎ ಸರ್ಕಾರಕ್ಕೋ? ಅಥವಾ ಸಂಘ ಪರಿವಾರದ ಹಿಡನ್ ಅಜೆಂಡಾ ಸ್ವತಂತ್ರ ಭಾರತದಲ್ಲಿ ಗರಿಷ್ಠ ಮಟ್ಟದಲ್ಲಿ ಕಾರ್ಯರೂಪಕ್ಕೆ ಇಳಿದ ಏಳು ವರ್ಷಗಳು ಎನ್ನುವುದೋ ಅಥವಾ ಅತಿ ವೇಗದಲ್ಲಿ ಬಂಡವಾಳಶಾಹಿಗಳ ಸಂಪತ್ತು ವೃದ್ಧಿ ಮತ್ತು ಅಷ್ಟೇ ಹಿಮ್ಮುಖ ವೇಗದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಎಂದು ಈ ಏಳು ವರ್ಷಗಳ ಅವಧಿಯನ್ನು ನೋಡುವುದೋ?

ಮೇಲಿನ ಎಲ್ಲದರ ಒಂದು ಕಲಸುಮೋಲೊಗರದ ಚಿತ್ರಣವೇ ನಿಜವಾದ ಸ್ಥಿತಿ. ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ತಂಡ ಬೆಂಗಳೂರಿನಲ್ಲಿ ಮಧ್ಯಪ್ರದೇಶದ ಆದಿವಾಸಿ ಗುಂಪೊಂದಕ್ಕೆ ನೆರವು ನೀಡುವ ಸಂದರ್ಭದಲ್ಲಿ, ಆ ಗುಂಪಿನ ಹಿರಿಯ ಸದಸ್ಯರೊಬ್ಬರು, ‘ಮೋದಿ ಇರುವವರೆಗೂ ಕೊರೋನಾ ಇರುತ್ತೆ’ ಎಂದು ಹೇಳಿದ್ದನ್ನು ಈ ಏಳು ವರ್ಷಗಳ ಆಡಳಿತದ ಪ್ರಬುದ್ಧ ವಿಮರ್ಶೆ ಎನ್ನಬಹುದು.

ಬ್ಯಾಂಕುಗಳ ಮುಂದೆ ತಮ್ಮದೇ ಹಣಕ್ಕಾಗಿ ನಿಂತ ಸರದಿ ಸಾಲುಗಳು ಈಗ ಆಸ್ಪತ್ರೆ ಮತ್ತು ಸ್ಮಶಾನಗಳ ಎದುರು ಕಾಣಿಸುತ್ತಿವೆ. ಇವೆರಡರ ನಡುವೆ ಕೆಲವೇ ಕೆಲವು ಅತಿ ಶ್ರೀಮಂತರು ಅಪರಿಮಿತ ಸಂಪತ್ತನ್ನು ಗುಡ್ಡ ಹಾಕಿದ್ದಾರೆ. ಬಿಜೆಪಿಯ ಪಾರ್ಟಿ ಫಂಡ್ ಕೂಡ ಭರ್ಜರಿ ಕಲೆಕ್ಷನ್ ಕಂಡಿದೆ, ಬಡವರು ಕಡು ಬಡವರಾಗಿದ್ದಾರೆ ಮತ್ತು ಮುಖ್ಯವಾಗಿ ಬಿಜೆಪಿ ಬೆಂಬಲಿಸುವ ವರ್ಗ ಎನ್ನಲಾದ ಮಧ್ಯಮವರ್ಗ ಈಗ ಸಂಕಷ್ಟಕ್ಕೆ ಸಿಲುಕುತ್ತಿದೆ.

ಎರಡು ವರ್ಷಗಳ ಹಿಂದೆ, 2019 ರ ಮೇ 30 ರಂದು ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಐದು ವರ್ಷಗಳ ಮೊದಲು, ಅವರು 2014 ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದ್ದು, ಆರ್ಥಿಕ ಸಮೃದ್ಧಿ, ಸಾಮಾಜಿಕ ಐಕ್ಯತೆ ಮತ್ತು ಸಮಗ್ರ ಅಭಿವೃದ್ಧಿಯ ಭರವಸೆ ನೀಡಿದ್ದರು. ಅವರ ಘೋಷಣೆಗಳು – “ಅಚ್ಚೆ ದಿನ್. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಒಂದು ಕೋಟಿ ಉದ್ಯೋಗಗಳು, ಕಪ್ಪುಹಣ ವಾಪಸ್‌ ತರುವುದು ಮತ್ತು ಎಲ್ಲರ ಅಕೌಂಟಿಗೆ 15 ಲಕ್ಷ ಹಣ ಇತ್ಯಾದಿ.

ಆದರೆ ಈಗ ಇವೆಲ್ಲವೂ ಜುಮ್ಲಾ ಎಂದು ದೃಢಪಟ್ಟಿದೆ. ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳ ನೆರವಿನಿಂದ ಅಸ್ತಿತ್ವದಲ್ಲಿಯೇ ಇಲ್ಲದ ಗುಜರಾತ್ ಮಾಡೆಲ್ ಎಂಬ ಮರಿಚೀಕೆಯನ್ನು ಬಿತ್ತಿ ಯುವಜನತೆ ಮತ್ತು ಮಧ್ಯಮವರ್ಗವನ್ನು ದಾರಿ ತಪ್ಪಿಸುತ್ತ ಬರಲಾಗಿತು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಈಗ ಬಹುತೇಕ ಜನರು ಭ್ರಮನಿರಸನ ಹೊಂದಿದ್ದಾರೆ ಮತ್ತು ಸಿನಿಕರಾಗಿದ್ದಾರೆ. ಆದರೂ ಈ ಏಳು ವರ್ಷಗಳಲ್ಲಿ ಸೃಷ್ಟಿಯಾದ ಭಕ್ತಗಣ ಎಂಬ ವಿಕ್ಷಿಪ್ತ ಪ್ರಭೇಧವೊಂದು ಅಂಧಾನುಕರಣೆಯಲ್ಲಿ ತೊಡಗಿದೆ. ಈ ಪ್ರಭೇದಕ್ಕೆ ಬೆಂಬಲವಾಗಿ ವಿಷಯವಸ್ತು ಒದಗಿಸಲು ಗೋದಿ ಮೀಡಿಯಾ ಎಂಬ ವಿಕೃತ ಪ್ರಭೇಧವೊಂದೂ ಜನ್ಮ ತಾಳಿದೆ. ಲೋಕಸಭೆಯಲ್ಲಿ ಆರಾಮದಾಯಕ ಬಹುಮತದ ಬೆಂಬಲವಿದೆ ಮತ್ತು ಹಲವಾರು ರಾಜ್ಯ ಸರ್ಕಾರಗಳು ಬಿಜೆಪಿಯ ನಿಯಂತ್ರಣದಲ್ಲಿವೆ. (ಇತ್ತೀಚಿನ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಮೋದಿ-ಶಾಗಳ ಗರ್ವಭಂಗ ಮಾಡಿದೆ).

ಮೊದಲ ಬಾರಿಗೆ, 2014ರಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸುಮಾರು ಶೇ. 38 ಮತಗಳನ್ನು ಪಡೆದಿವೆ, ಅದು 2019ರಲ್ಲಿ ಸುಮಾರು ಶೇ. 43ಕ್ಕೆ ಏರಿದೆ. ಮತ ಚಲಾಯಿಸಿದವರಲ್ಲಿ ಹೆಚ್ಚಿನವರು ಇನ್ನೂ ಬಿಜೆಪಿಯನ್ನು ವಿರೋಧಿಸಿದ್ದಾರೆ ಎಂದು ಇದು ತೋರಿಸಿದರೂ, ಪ್ರಜಾಪ್ರಭುತ್ವದ ನಿಯಮಗಳ ಪ್ರಕಾರ ಬಿಜೆಪಿಯೇ ವಿಜಯಶಾಲಿ ಹೌದು.

ಮೋದಿಯ ಆಡಳಿತದ ಎರಡು ನಿರ್ಣಾಯಕ ಲಕ್ಷಣಗಳು ಒಂದು ನವ-ಉದಾರವಾದಿ ಸಿದ್ಧಾಂತ. ಇದು ಅಂಬಾನಿ-ಅದಾನಿ ತರಹದವರಿಗೆ ಎಲ್ಲ ನೆರವು ನೀಡುವ ಪಾಲಿಸಿ. ಎರಡನೆಯದು ಭಾರತವು ಹಿಂದೂ ರಾಷ್ಟ್ರ ಅಥವಾ ಕೇವಲ ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆ. ಈ ಎರಡೂ ಸಿದ್ದಾಂತಗಳು ಕೈ ಜೋಡಿಸಿವೆ. ಹೀಗಾಗಿ ಇಲ್ಲಿ ಅಕ್ರಮ ಸಂಪತ್ತು ಮತ್ತು ಜನವಿರೋಧಿ ರಾಷ್ಟ್ರವಾದದ ನಡುವೆ ಸಹಜವಾಗಿಯೇ ಹೊಂದಾಣಿಕೆಯಾಗಿದೆ. ಈ ಏಳು ವರ್ಷಗಳಲ್ಲಿ ಈ ಎರಡರ ನಡುವಿನ ಪ್ರೀತಿ-ಪ್ರೇಮ, ಕೊಡುಕೊಳ್ಳುವಿಕೆ ತುಂಬ ಆಪ್ತವಾಗಿದೆ. ಇವತ್ತು ದೇಶದ ಎದುರು ಈ ಮೈತ್ರಿಯೇ ದುಸ್ವಪ್ನವಾಗಿದೆ. ಮೋದಿ ಎಂಬ ಕೃತಕ ಸೃಷ್ಟಿತ ಇಮೇಜ್ ಅನ್ನು ಬಳಸಿಕೊಂಡು ಈ ಶಕ್ತಿಗಳು ತಮ್ಮ ತಮ್ಮ ಹಿಡೆನ್ ಅಜೆಂಡಾ ಜಾರಿ ಮಾಡುತ್ತಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...