Homeಮುಖಪುಟಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

ಮೋದಿ ಸರ್ಕಾರಕ್ಕೆ ಏಳು ವರ್ಷ: ಜನವಿರೋಧಿ ರಾಷ್ಟ್ರವಾದ ಮತ್ತು ಬಂಡವಾಳಶಾಹಿಯ ಮೆರವಣಿಗೆ

- Advertisement -
- Advertisement -

ಮೋದಿ ಸರ್ಕಾರಕ್ಕೆ ಏಳು ವರ್ಷವೋ, ಬಿಜೆಪಿ ಸರ್ಕಾರಕ್ಕೋ ಇಲ್ಲ ಎನ್‌ಡಿಎ ಸರ್ಕಾರಕ್ಕೋ? ಅಥವಾ ಸಂಘ ಪರಿವಾರದ ಹಿಡನ್ ಅಜೆಂಡಾ ಸ್ವತಂತ್ರ ಭಾರತದಲ್ಲಿ ಗರಿಷ್ಠ ಮಟ್ಟದಲ್ಲಿ ಕಾರ್ಯರೂಪಕ್ಕೆ ಇಳಿದ ಏಳು ವರ್ಷಗಳು ಎನ್ನುವುದೋ ಅಥವಾ ಅತಿ ವೇಗದಲ್ಲಿ ಬಂಡವಾಳಶಾಹಿಗಳ ಸಂಪತ್ತು ವೃದ್ಧಿ ಮತ್ತು ಅಷ್ಟೇ ಹಿಮ್ಮುಖ ವೇಗದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಎಂದು ಈ ಏಳು ವರ್ಷಗಳ ಅವಧಿಯನ್ನು ನೋಡುವುದೋ?

ಮೇಲಿನ ಎಲ್ಲದರ ಒಂದು ಕಲಸುಮೋಲೊಗರದ ಚಿತ್ರಣವೇ ನಿಜವಾದ ಸ್ಥಿತಿ. ಕರ್ನಾಟಕ ಕೋವಿಡ್ ವಾಲಂಟಿಯರ್ಸ್ ತಂಡ ಬೆಂಗಳೂರಿನಲ್ಲಿ ಮಧ್ಯಪ್ರದೇಶದ ಆದಿವಾಸಿ ಗುಂಪೊಂದಕ್ಕೆ ನೆರವು ನೀಡುವ ಸಂದರ್ಭದಲ್ಲಿ, ಆ ಗುಂಪಿನ ಹಿರಿಯ ಸದಸ್ಯರೊಬ್ಬರು, ‘ಮೋದಿ ಇರುವವರೆಗೂ ಕೊರೋನಾ ಇರುತ್ತೆ’ ಎಂದು ಹೇಳಿದ್ದನ್ನು ಈ ಏಳು ವರ್ಷಗಳ ಆಡಳಿತದ ಪ್ರಬುದ್ಧ ವಿಮರ್ಶೆ ಎನ್ನಬಹುದು.

ಬ್ಯಾಂಕುಗಳ ಮುಂದೆ ತಮ್ಮದೇ ಹಣಕ್ಕಾಗಿ ನಿಂತ ಸರದಿ ಸಾಲುಗಳು ಈಗ ಆಸ್ಪತ್ರೆ ಮತ್ತು ಸ್ಮಶಾನಗಳ ಎದುರು ಕಾಣಿಸುತ್ತಿವೆ. ಇವೆರಡರ ನಡುವೆ ಕೆಲವೇ ಕೆಲವು ಅತಿ ಶ್ರೀಮಂತರು ಅಪರಿಮಿತ ಸಂಪತ್ತನ್ನು ಗುಡ್ಡ ಹಾಕಿದ್ದಾರೆ. ಬಿಜೆಪಿಯ ಪಾರ್ಟಿ ಫಂಡ್ ಕೂಡ ಭರ್ಜರಿ ಕಲೆಕ್ಷನ್ ಕಂಡಿದೆ, ಬಡವರು ಕಡು ಬಡವರಾಗಿದ್ದಾರೆ ಮತ್ತು ಮುಖ್ಯವಾಗಿ ಬಿಜೆಪಿ ಬೆಂಬಲಿಸುವ ವರ್ಗ ಎನ್ನಲಾದ ಮಧ್ಯಮವರ್ಗ ಈಗ ಸಂಕಷ್ಟಕ್ಕೆ ಸಿಲುಕುತ್ತಿದೆ.

ಎರಡು ವರ್ಷಗಳ ಹಿಂದೆ, 2019 ರ ಮೇ 30 ರಂದು ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಐದು ವರ್ಷಗಳ ಮೊದಲು, ಅವರು 2014 ರ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದ್ದು, ಆರ್ಥಿಕ ಸಮೃದ್ಧಿ, ಸಾಮಾಜಿಕ ಐಕ್ಯತೆ ಮತ್ತು ಸಮಗ್ರ ಅಭಿವೃದ್ಧಿಯ ಭರವಸೆ ನೀಡಿದ್ದರು. ಅವರ ಘೋಷಣೆಗಳು – “ಅಚ್ಚೆ ದಿನ್. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಒಂದು ಕೋಟಿ ಉದ್ಯೋಗಗಳು, ಕಪ್ಪುಹಣ ವಾಪಸ್‌ ತರುವುದು ಮತ್ತು ಎಲ್ಲರ ಅಕೌಂಟಿಗೆ 15 ಲಕ್ಷ ಹಣ ಇತ್ಯಾದಿ.

ಆದರೆ ಈಗ ಇವೆಲ್ಲವೂ ಜುಮ್ಲಾ ಎಂದು ದೃಢಪಟ್ಟಿದೆ. ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳ ನೆರವಿನಿಂದ ಅಸ್ತಿತ್ವದಲ್ಲಿಯೇ ಇಲ್ಲದ ಗುಜರಾತ್ ಮಾಡೆಲ್ ಎಂಬ ಮರಿಚೀಕೆಯನ್ನು ಬಿತ್ತಿ ಯುವಜನತೆ ಮತ್ತು ಮಧ್ಯಮವರ್ಗವನ್ನು ದಾರಿ ತಪ್ಪಿಸುತ್ತ ಬರಲಾಗಿತು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಈಗ ಬಹುತೇಕ ಜನರು ಭ್ರಮನಿರಸನ ಹೊಂದಿದ್ದಾರೆ ಮತ್ತು ಸಿನಿಕರಾಗಿದ್ದಾರೆ. ಆದರೂ ಈ ಏಳು ವರ್ಷಗಳಲ್ಲಿ ಸೃಷ್ಟಿಯಾದ ಭಕ್ತಗಣ ಎಂಬ ವಿಕ್ಷಿಪ್ತ ಪ್ರಭೇಧವೊಂದು ಅಂಧಾನುಕರಣೆಯಲ್ಲಿ ತೊಡಗಿದೆ. ಈ ಪ್ರಭೇದಕ್ಕೆ ಬೆಂಬಲವಾಗಿ ವಿಷಯವಸ್ತು ಒದಗಿಸಲು ಗೋದಿ ಮೀಡಿಯಾ ಎಂಬ ವಿಕೃತ ಪ್ರಭೇಧವೊಂದೂ ಜನ್ಮ ತಾಳಿದೆ. ಲೋಕಸಭೆಯಲ್ಲಿ ಆರಾಮದಾಯಕ ಬಹುಮತದ ಬೆಂಬಲವಿದೆ ಮತ್ತು ಹಲವಾರು ರಾಜ್ಯ ಸರ್ಕಾರಗಳು ಬಿಜೆಪಿಯ ನಿಯಂತ್ರಣದಲ್ಲಿವೆ. (ಇತ್ತೀಚಿನ ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಮೋದಿ-ಶಾಗಳ ಗರ್ವಭಂಗ ಮಾಡಿದೆ).

ಮೊದಲ ಬಾರಿಗೆ, 2014ರಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು ಸುಮಾರು ಶೇ. 38 ಮತಗಳನ್ನು ಪಡೆದಿವೆ, ಅದು 2019ರಲ್ಲಿ ಸುಮಾರು ಶೇ. 43ಕ್ಕೆ ಏರಿದೆ. ಮತ ಚಲಾಯಿಸಿದವರಲ್ಲಿ ಹೆಚ್ಚಿನವರು ಇನ್ನೂ ಬಿಜೆಪಿಯನ್ನು ವಿರೋಧಿಸಿದ್ದಾರೆ ಎಂದು ಇದು ತೋರಿಸಿದರೂ, ಪ್ರಜಾಪ್ರಭುತ್ವದ ನಿಯಮಗಳ ಪ್ರಕಾರ ಬಿಜೆಪಿಯೇ ವಿಜಯಶಾಲಿ ಹೌದು.

ಮೋದಿಯ ಆಡಳಿತದ ಎರಡು ನಿರ್ಣಾಯಕ ಲಕ್ಷಣಗಳು ಒಂದು ನವ-ಉದಾರವಾದಿ ಸಿದ್ಧಾಂತ. ಇದು ಅಂಬಾನಿ-ಅದಾನಿ ತರಹದವರಿಗೆ ಎಲ್ಲ ನೆರವು ನೀಡುವ ಪಾಲಿಸಿ. ಎರಡನೆಯದು ಭಾರತವು ಹಿಂದೂ ರಾಷ್ಟ್ರ ಅಥವಾ ಕೇವಲ ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆ. ಈ ಎರಡೂ ಸಿದ್ದಾಂತಗಳು ಕೈ ಜೋಡಿಸಿವೆ. ಹೀಗಾಗಿ ಇಲ್ಲಿ ಅಕ್ರಮ ಸಂಪತ್ತು ಮತ್ತು ಜನವಿರೋಧಿ ರಾಷ್ಟ್ರವಾದದ ನಡುವೆ ಸಹಜವಾಗಿಯೇ ಹೊಂದಾಣಿಕೆಯಾಗಿದೆ. ಈ ಏಳು ವರ್ಷಗಳಲ್ಲಿ ಈ ಎರಡರ ನಡುವಿನ ಪ್ರೀತಿ-ಪ್ರೇಮ, ಕೊಡುಕೊಳ್ಳುವಿಕೆ ತುಂಬ ಆಪ್ತವಾಗಿದೆ. ಇವತ್ತು ದೇಶದ ಎದುರು ಈ ಮೈತ್ರಿಯೇ ದುಸ್ವಪ್ನವಾಗಿದೆ. ಮೋದಿ ಎಂಬ ಕೃತಕ ಸೃಷ್ಟಿತ ಇಮೇಜ್ ಅನ್ನು ಬಳಸಿಕೊಂಡು ಈ ಶಕ್ತಿಗಳು ತಮ್ಮ ತಮ್ಮ ಹಿಡೆನ್ ಅಜೆಂಡಾ ಜಾರಿ ಮಾಡುತ್ತಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...