Homeಕರೋನಾ ತಲ್ಲಣಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ದೇಶದಲ್ಲಿ ಕೊರೋನಾ ಲಸಿಕೆಯ ಹಾಹಾಕಾರ ಮುಂದುವರೆದಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳ ಮುಂದೆ ಪ್ರತಿನಿತ್ಯ ಜನ ಸಂದಣಿ ಕಂಡು ಬರುತ್ತಿದೆ. ರಾಜ್ಯ ಸರ್ಕಾರಗಳು ಕೇಂದ್ರದಿಂದ ತಮಗೆ ನೀಡುತ್ತಿರುವ ಲಸಿಕೆ ಯಾವ ಮೂಲೆಗೂ ಸಾಲುವುದಿಲ್ಲ ಎಂದು ಹೇಳುತ್ತಿವೆ. ಕೆಲವು ಕಡೆಯಲ್ಲಿ ಕೋವಿಶೀಲ್ಡ್‌ ಲಸಿಕೆಯ ಎರಡನೇ ಡೋಸ್‌ ಬಹುತೇಕರಿಗೆ (45 ವರ್ಷ ಮೇಲ್ಪಟ್ಟವರಿಗೆ) ನೀಡಲು ಇದುವರೆಗೆ ರಾಜ್ಯ ಸರ್ಕಾರಗಳಿಂದ ಸಾಧ್ಯವಾಗಿಲ್ಲ. ಎಲ್ಲೆಲ್ಲೂ ಲಸಿಕಾ ಕೇಂದ್ರಗಳು ಬೆಳಗಿನ ಅವಧಿಯಲ್ಲಿಯೇ ನೋ ಸ್ಟಾಕ್‌ ಬೋರ್ಡ್‌ ಹಾಕಿಕೊಂಡು ಜನರನ್ನು ವಾಪಸ್‌ ಕಳುಹಿಸುತ್ತಿರುವ ಘಟನೆ ಕೂಡ ನಡೆದಿದೆ. ಆದರೆ ದೇಶದಲ್ಲಿನ ಕೋವಿಡ್‌ ಲಸಿಕೆ ಹಾಹಾಕಾರದ ನಡುವೆ ಖಾಸಗಿ ಆಸ್ಪತ್ರೆಗಳು ಎಗ್ಗಿಲ್ಲದಂತೆ ಲಸಿಕೆ ವ್ಯಾಪಾರವನ್ನು ಮುಂದುವರೆಸಿವೆ. 900 ರೂ. ಗಳಿಂದ 2000 ರೂಗಳ ಮೊತ್ತದಲ್ಲಿ ರಾಜಾರೋಷವಾಗಿ ಲಸಿಕೆಗಳ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.

ಜೊತೆಗೆ ಪ್ರತಿಷ್ಠಿತ ಐಷಾರಾಮಿ ಹೊಟೇಲ್‌ ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್‌ಗಳನ್ನು ಘೋಷಿಸುತ್ತಿವೆ. ಐಷಾರಾಮಿ ಹೊಟೇಲ್‌ ಗಳ ತಮ್ಮಲ್ಲಿನ ಬ್ರೇಕ್‌ ಫಾಸ್ಟ್‌, ಏಸಿ, ಮನರಂಜನೆ ಮುಂತಾದ ಸೌಲಭ್ಯಗಳ ಜೊತೆಗೆ ಕೊರೋನಾ ಲಸಿಕೆಗಳನ್ನು ನೀಡುವುದಾಗಿ ಹೇಳಿ ಗ್ರಾಹಕರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದವು. ಈ ಹೊಟೇಲ್‌ ಗಳ ಜೊತೆ ಖಾಸಗಿ ಆಸ್ಪತ್ರೆಗಳೂ ಶಾಮೀಲಾಗಿ ದೊಡ್ಡ ದೊಡ್ಡ ಹೊಟೇಲ್‌ ಗಳಲ್ಲಿ ತಂಗುವ ಗ್ರಾಹಕರಿಗೆ ತಮ್ಮ ವೈದ್ಯರು ಮತ್ತು ಸಿಬ್ಬಂದಿಯ ಮೂಲಕ ವಾಕ್ಸಿನೇಶನ್‌ ನಡೆಸುತ್ತಿದ್ದರು. ಈ ಕುರಿತು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಐಷಾರಾಮಿ ಹೊಟೇಲ್‌ ಗಳಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಲಸಿಕೆಗಳನ್ನು ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಆರೋಗ್ಯ ಇಲಾಖೆ, “ವಿಶ್ವದ ಅತಿದೊಡ್ಡ ವ್ಯಾಕ್ಸಿನ್‌ ಡ್ರೈವ್‌ ಭಾರತದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ರಾಜ್ಯ ಸರ್ಕಾರಗಳು ವ್ಯಾಕ್ಸಿನೇಷನ್‌ ಕುರಿತು ತೀವ್ರ ಎಚ್ಚರಿಕೆ ವಹಿಸಬೇಕು. ಕೆಲವು ಕಡೆ ವ್ಯಾಕ್ಸೀನೇಷನ್‌ ಪ್ರಕ್ರಿಯೆಯ ನಿಯಮಗಳು ಉಲ್ಲಂಘನೆಯಾಗುತ್ತಿರುವುದು ಕಂಡು ಬಂದಿದೆ. ವ್ಯಾಕ್ಸಿನೇಷನ್‌ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳು ಉಲ್ಳಂಘನೆಯಾಗದಂತೆ ನೋಡಿಕೊಂಡು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ಜನರಿಗೆ ಲಸಿಕೆಗಳನ್ನು ನೀಡಬೇಕೆಂದು” ಎಚ್ಚರಿಕೆ ನೀಡಿದೆ.

ಕೇಂದ್ರ ಆರೋಗ್ಯ ಮಾರ್ಗಸೂಚಿಯ ಅನ್ವಯ ಇನ್ನು ಮುಂದೆ ಖಾಸಗಿ ಹೊಟೇಲ್‌ಗಳಲ್ಲಿ ಲಸಿಕೆಗಳನ್ನು ನೀಡಲು ಸಾಧ್ಯವಿಲ್ಲ. ಕೇಂದ್ರ ಆರೋಗ್ಯ ಇಲಾಖೆಯು ಸರ್ಕಾರಿ ಮತ್ತು ಪರವಾನಗಿಯನ್ನು ಹೊಂದಿದ ಖಾಸಗಿ ವ್ಯಾಕ್ಸಿನೇಷನ್‌ ಸೆಂಟರ್‌ಗಳು, ಇತರ ಕಚೇರಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಕೆಲಸ ನಿರ್ವಹಿಸುವ ಸ್ಥಳಗಳು, ವೃದ್ಧರು ಮತ್ತು ಅಂಗವಿಕಲರಿಗಾಗಿ ವಸತಿ ಸಮುಚ್ಛಯಗಳ ಸಮೀಪ ಅಥವಾ ಹೌಸಿಂಗ್‌ ಸೊಸೈಟಿಗಳಲ್ಲಿ, ಸಮುದಾಯ ಭವನಗಳು, ಪಂಚಾಯತ ಭವನಗಳು, ಶಾಲೆ-ಕಾಲೇಜುಗಳು ಮತ್ತು ವೃದ್ಧಾಶ್ರಮಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ವ್ಯಾಕ್ಸಿನೇಷನ್‌ ಸೌಲಭ್ಯಗಳನ್ನು ಕಲ್ಪಿಸಬಹುದಾಗಿದೆ ಎಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಸೂಚಿಸಿದೆ.

ದೆಹಲಿ ಉಪಮುಖ್ಯ ಮಂತ್ರಿ ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರವನ್ನು ವ್ಯಾಕ್ಸಿನೇಷನ್‌ ವಿಚಾರವಾಗಿ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಗೆ ಅಗತ್ಯವಾದ ವ್ಯಾಕ್ಸಿನ್‌ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಹೇಗೆ ವ್ಯಾಕ್ಸಿನ್‌ ಗಳನ್ನು ನೀಡುತ್ತಿವೆ ? ಕೇಂದ್ರದ ಬಳಿ ವ್ಯಾಕ್ಸಿನ್‌ ಪೂರೈಕೆ ಇಲ್ಲವೆಂದಾದರೆ ಖಾಸಗಿಯವರಿಗೆ ವ್ಯಾಕ್ಸಿನ್‌ ಎಲ್ಲಿಂದ ಸರಬರಾಜಾಗುತ್ತಿದೆ ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ. ವ್ಯಾಕ್ಸಿನ್‌ ಕೊರತೆಯಿಂದಾಗಿ 18-44 ವಯಸ್ಸಿನ ಸಮುದಾಯಕ್ಕೆ ವ್ಯಾಕ್ಸಿನ್‌ ನೀಡುವ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಡುವಂತಾಗಿದೆ. ದೆಹಲಿ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನ್‌ ನೀಡಲು ಪ್ರಯತ್ನಿಸುತ್ತಿದೆ. ನಡುವೆ ಖಾಸಗಿಯವರು 1000 ರೂಪಾಯಿಗಳಿಗೆ ಒಂದು ಡೋಸ್‌ ವ್ಯಾಕ್ಸಿನ್‌ ಮಾರಿಕೊಳ್ಳುತ್ತಿದ್ದಾರೆ ಎಂದು ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ದೇಶದ ದೊಡ್ಡ ಹೊಟೇಲುಗಳು “ಲಸಿಕೆ ಪ್ಯಾಕೇಜ್” ಆರಂಭಿಸಿದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಆರಂಭ ಆದ ಬೆನ್ನಿಗೇ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿ, ಇಂತಹದಕ್ಕೆಲ್ಲ ಅವಕಾಶ ಇಲ್ಲ ಎಂದಿದೆ. ಆರೋಗ್ಯದ ವಿಷಯದಲ್ಲೇ “ಕಾರ್ಪೋರೇಟ್” ಶಕ್ತಿಗಳು ಇಷ್ಟು ಆಡಬಲ್ಲವೆಂದಾದರೆ ನಾಳೆ ಕೃಷಿ “ಕಾರ್ಪೋರೇಟೀಕರಣ” ಆಗೋದಿಲ್ಲ ಅಂತ ಯಾವ ಬಾಯಲ್ಲಿ ಹೇಳ್ತೀರಿ? ಎಂದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಪಶ್ನಿಸಿದ್ದಾರೆ.

ಆರೋಗ್ಯ ಇಲಾಖೆಯು 2021 ಡಿಸೆಂಬರ್‌ ವೇಳೆಗೆ 108 ಕೋಟಿ ಭಾರತೀಯರಿಗೆ 216 ಕೋಟಿ ಡೋಸ್‌ ಕೋವಿಡ್‌ ವ್ಯಾಕ್ಸಿನ್‌ ನೀಡುವ ಗುರಿಯನ್ನು ಹಾಕಿಕೊಂಡಿದೆ. ಇದುವರೆಗೆ 20 ಕೋಟಿ ವ್ಯಾಕ್ಸಿನ್‌ ಡೋಸ್‌ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಕುಂಟುತ್ತ ಸಾಗುತ್ತಿರುವ ವ್ಯಾಕ್ಸಿನೇಷನ್‌ ಪ್ರಕ್ರಿಯೆಯನ್ನು ಗಮನಿಸಿದರೆ ಕೆಂದ್ರ ಸರ್ಕಾರ ಹೇಳಿರುವಂತೆ 2021 ಡಿಸೆಂಬರ್‌ ವೇಳಗೆ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಅಂತ್ಯವಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ನಡುವೆ ಕೋವಿಡ್‌ ಮೂರನೆಯ ಅಲೆಯ ಭೀತಿಯೂ ಹೆಚ್ಚುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳು ಲಸಿಗೆಗಳ ಕೊರತೆಯನ್ನೇ ಬಂಡವಾಳ ಮಾಡಿಕೊಂಡು ವಿವಿಧ ಪ್ಯಾಕೇಜ್‌ ಗಳನ್ನು ವಿವಿಧ ಆಕರ್ಷಕ ಆಫರ್‌ ಗಳ ಜಾಹೀರಾತನ್ನು ನೀಡುತ್ತಿವೆ. ಕೇಂದ್ರ ಸರ್ಕಾರ ಹೊಟೇಲ್‌ ಗಳಲ್ಲಿ ಕೋವಿಡ್‌ ಲಸಿಕೆ ನೀಡುವುದನ್ನು ನಿಷೇಧಿಸಿರುವುದನ್ನು ರಾಜ್ಯಗಳು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ತರುತ್ತವೆ ಎಂಬುದನ್ನು ಕಾದುನೋಡಬೇಕು. ಸದ್ಯಕ್ಕೆ ಲಸಿಕೆಯ ಪೂರೈಕೆ ಮತ್ತು ಖಾಸಗಿಯವರ ಲಸಿಕೆ ದಂದೆಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.


ಇದನ್ನೂ ಓದಿ; ಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...