Homeಕರೋನಾ ತಲ್ಲಣಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ದೇಶದಲ್ಲಿ ಕೊರೋನಾ ಲಸಿಕೆಯ ಹಾಹಾಕಾರ ಮುಂದುವರೆದಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳ ಮುಂದೆ ಪ್ರತಿನಿತ್ಯ ಜನ ಸಂದಣಿ ಕಂಡು ಬರುತ್ತಿದೆ. ರಾಜ್ಯ ಸರ್ಕಾರಗಳು ಕೇಂದ್ರದಿಂದ ತಮಗೆ ನೀಡುತ್ತಿರುವ ಲಸಿಕೆ ಯಾವ ಮೂಲೆಗೂ ಸಾಲುವುದಿಲ್ಲ ಎಂದು ಹೇಳುತ್ತಿವೆ. ಕೆಲವು ಕಡೆಯಲ್ಲಿ ಕೋವಿಶೀಲ್ಡ್‌ ಲಸಿಕೆಯ ಎರಡನೇ ಡೋಸ್‌ ಬಹುತೇಕರಿಗೆ (45 ವರ್ಷ ಮೇಲ್ಪಟ್ಟವರಿಗೆ) ನೀಡಲು ಇದುವರೆಗೆ ರಾಜ್ಯ ಸರ್ಕಾರಗಳಿಂದ ಸಾಧ್ಯವಾಗಿಲ್ಲ. ಎಲ್ಲೆಲ್ಲೂ ಲಸಿಕಾ ಕೇಂದ್ರಗಳು ಬೆಳಗಿನ ಅವಧಿಯಲ್ಲಿಯೇ ನೋ ಸ್ಟಾಕ್‌ ಬೋರ್ಡ್‌ ಹಾಕಿಕೊಂಡು ಜನರನ್ನು ವಾಪಸ್‌ ಕಳುಹಿಸುತ್ತಿರುವ ಘಟನೆ ಕೂಡ ನಡೆದಿದೆ. ಆದರೆ ದೇಶದಲ್ಲಿನ ಕೋವಿಡ್‌ ಲಸಿಕೆ ಹಾಹಾಕಾರದ ನಡುವೆ ಖಾಸಗಿ ಆಸ್ಪತ್ರೆಗಳು ಎಗ್ಗಿಲ್ಲದಂತೆ ಲಸಿಕೆ ವ್ಯಾಪಾರವನ್ನು ಮುಂದುವರೆಸಿವೆ. 900 ರೂ. ಗಳಿಂದ 2000 ರೂಗಳ ಮೊತ್ತದಲ್ಲಿ ರಾಜಾರೋಷವಾಗಿ ಲಸಿಕೆಗಳ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.

ಜೊತೆಗೆ ಪ್ರತಿಷ್ಠಿತ ಐಷಾರಾಮಿ ಹೊಟೇಲ್‌ ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್‌ಗಳನ್ನು ಘೋಷಿಸುತ್ತಿವೆ. ಐಷಾರಾಮಿ ಹೊಟೇಲ್‌ ಗಳ ತಮ್ಮಲ್ಲಿನ ಬ್ರೇಕ್‌ ಫಾಸ್ಟ್‌, ಏಸಿ, ಮನರಂಜನೆ ಮುಂತಾದ ಸೌಲಭ್ಯಗಳ ಜೊತೆಗೆ ಕೊರೋನಾ ಲಸಿಕೆಗಳನ್ನು ನೀಡುವುದಾಗಿ ಹೇಳಿ ಗ್ರಾಹಕರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದವು. ಈ ಹೊಟೇಲ್‌ ಗಳ ಜೊತೆ ಖಾಸಗಿ ಆಸ್ಪತ್ರೆಗಳೂ ಶಾಮೀಲಾಗಿ ದೊಡ್ಡ ದೊಡ್ಡ ಹೊಟೇಲ್‌ ಗಳಲ್ಲಿ ತಂಗುವ ಗ್ರಾಹಕರಿಗೆ ತಮ್ಮ ವೈದ್ಯರು ಮತ್ತು ಸಿಬ್ಬಂದಿಯ ಮೂಲಕ ವಾಕ್ಸಿನೇಶನ್‌ ನಡೆಸುತ್ತಿದ್ದರು. ಈ ಕುರಿತು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಐಷಾರಾಮಿ ಹೊಟೇಲ್‌ ಗಳಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಲಸಿಕೆಗಳನ್ನು ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಆರೋಗ್ಯ ಇಲಾಖೆ, “ವಿಶ್ವದ ಅತಿದೊಡ್ಡ ವ್ಯಾಕ್ಸಿನ್‌ ಡ್ರೈವ್‌ ಭಾರತದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ರಾಜ್ಯ ಸರ್ಕಾರಗಳು ವ್ಯಾಕ್ಸಿನೇಷನ್‌ ಕುರಿತು ತೀವ್ರ ಎಚ್ಚರಿಕೆ ವಹಿಸಬೇಕು. ಕೆಲವು ಕಡೆ ವ್ಯಾಕ್ಸೀನೇಷನ್‌ ಪ್ರಕ್ರಿಯೆಯ ನಿಯಮಗಳು ಉಲ್ಲಂಘನೆಯಾಗುತ್ತಿರುವುದು ಕಂಡು ಬಂದಿದೆ. ವ್ಯಾಕ್ಸಿನೇಷನ್‌ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳು ಉಲ್ಳಂಘನೆಯಾಗದಂತೆ ನೋಡಿಕೊಂಡು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ಜನರಿಗೆ ಲಸಿಕೆಗಳನ್ನು ನೀಡಬೇಕೆಂದು” ಎಚ್ಚರಿಕೆ ನೀಡಿದೆ.

ಕೇಂದ್ರ ಆರೋಗ್ಯ ಮಾರ್ಗಸೂಚಿಯ ಅನ್ವಯ ಇನ್ನು ಮುಂದೆ ಖಾಸಗಿ ಹೊಟೇಲ್‌ಗಳಲ್ಲಿ ಲಸಿಕೆಗಳನ್ನು ನೀಡಲು ಸಾಧ್ಯವಿಲ್ಲ. ಕೇಂದ್ರ ಆರೋಗ್ಯ ಇಲಾಖೆಯು ಸರ್ಕಾರಿ ಮತ್ತು ಪರವಾನಗಿಯನ್ನು ಹೊಂದಿದ ಖಾಸಗಿ ವ್ಯಾಕ್ಸಿನೇಷನ್‌ ಸೆಂಟರ್‌ಗಳು, ಇತರ ಕಚೇರಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಕೆಲಸ ನಿರ್ವಹಿಸುವ ಸ್ಥಳಗಳು, ವೃದ್ಧರು ಮತ್ತು ಅಂಗವಿಕಲರಿಗಾಗಿ ವಸತಿ ಸಮುಚ್ಛಯಗಳ ಸಮೀಪ ಅಥವಾ ಹೌಸಿಂಗ್‌ ಸೊಸೈಟಿಗಳಲ್ಲಿ, ಸಮುದಾಯ ಭವನಗಳು, ಪಂಚಾಯತ ಭವನಗಳು, ಶಾಲೆ-ಕಾಲೇಜುಗಳು ಮತ್ತು ವೃದ್ಧಾಶ್ರಮಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ವ್ಯಾಕ್ಸಿನೇಷನ್‌ ಸೌಲಭ್ಯಗಳನ್ನು ಕಲ್ಪಿಸಬಹುದಾಗಿದೆ ಎಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಸೂಚಿಸಿದೆ.

ದೆಹಲಿ ಉಪಮುಖ್ಯ ಮಂತ್ರಿ ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರವನ್ನು ವ್ಯಾಕ್ಸಿನೇಷನ್‌ ವಿಚಾರವಾಗಿ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಗೆ ಅಗತ್ಯವಾದ ವ್ಯಾಕ್ಸಿನ್‌ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಹೇಗೆ ವ್ಯಾಕ್ಸಿನ್‌ ಗಳನ್ನು ನೀಡುತ್ತಿವೆ ? ಕೇಂದ್ರದ ಬಳಿ ವ್ಯಾಕ್ಸಿನ್‌ ಪೂರೈಕೆ ಇಲ್ಲವೆಂದಾದರೆ ಖಾಸಗಿಯವರಿಗೆ ವ್ಯಾಕ್ಸಿನ್‌ ಎಲ್ಲಿಂದ ಸರಬರಾಜಾಗುತ್ತಿದೆ ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ. ವ್ಯಾಕ್ಸಿನ್‌ ಕೊರತೆಯಿಂದಾಗಿ 18-44 ವಯಸ್ಸಿನ ಸಮುದಾಯಕ್ಕೆ ವ್ಯಾಕ್ಸಿನ್‌ ನೀಡುವ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಡುವಂತಾಗಿದೆ. ದೆಹಲಿ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನ್‌ ನೀಡಲು ಪ್ರಯತ್ನಿಸುತ್ತಿದೆ. ನಡುವೆ ಖಾಸಗಿಯವರು 1000 ರೂಪಾಯಿಗಳಿಗೆ ಒಂದು ಡೋಸ್‌ ವ್ಯಾಕ್ಸಿನ್‌ ಮಾರಿಕೊಳ್ಳುತ್ತಿದ್ದಾರೆ ಎಂದು ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ದೇಶದ ದೊಡ್ಡ ಹೊಟೇಲುಗಳು “ಲಸಿಕೆ ಪ್ಯಾಕೇಜ್” ಆರಂಭಿಸಿದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಆರಂಭ ಆದ ಬೆನ್ನಿಗೇ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿ, ಇಂತಹದಕ್ಕೆಲ್ಲ ಅವಕಾಶ ಇಲ್ಲ ಎಂದಿದೆ. ಆರೋಗ್ಯದ ವಿಷಯದಲ್ಲೇ “ಕಾರ್ಪೋರೇಟ್” ಶಕ್ತಿಗಳು ಇಷ್ಟು ಆಡಬಲ್ಲವೆಂದಾದರೆ ನಾಳೆ ಕೃಷಿ “ಕಾರ್ಪೋರೇಟೀಕರಣ” ಆಗೋದಿಲ್ಲ ಅಂತ ಯಾವ ಬಾಯಲ್ಲಿ ಹೇಳ್ತೀರಿ? ಎಂದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಪಶ್ನಿಸಿದ್ದಾರೆ.

ಆರೋಗ್ಯ ಇಲಾಖೆಯು 2021 ಡಿಸೆಂಬರ್‌ ವೇಳೆಗೆ 108 ಕೋಟಿ ಭಾರತೀಯರಿಗೆ 216 ಕೋಟಿ ಡೋಸ್‌ ಕೋವಿಡ್‌ ವ್ಯಾಕ್ಸಿನ್‌ ನೀಡುವ ಗುರಿಯನ್ನು ಹಾಕಿಕೊಂಡಿದೆ. ಇದುವರೆಗೆ 20 ಕೋಟಿ ವ್ಯಾಕ್ಸಿನ್‌ ಡೋಸ್‌ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಕುಂಟುತ್ತ ಸಾಗುತ್ತಿರುವ ವ್ಯಾಕ್ಸಿನೇಷನ್‌ ಪ್ರಕ್ರಿಯೆಯನ್ನು ಗಮನಿಸಿದರೆ ಕೆಂದ್ರ ಸರ್ಕಾರ ಹೇಳಿರುವಂತೆ 2021 ಡಿಸೆಂಬರ್‌ ವೇಳಗೆ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಅಂತ್ಯವಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ನಡುವೆ ಕೋವಿಡ್‌ ಮೂರನೆಯ ಅಲೆಯ ಭೀತಿಯೂ ಹೆಚ್ಚುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳು ಲಸಿಗೆಗಳ ಕೊರತೆಯನ್ನೇ ಬಂಡವಾಳ ಮಾಡಿಕೊಂಡು ವಿವಿಧ ಪ್ಯಾಕೇಜ್‌ ಗಳನ್ನು ವಿವಿಧ ಆಕರ್ಷಕ ಆಫರ್‌ ಗಳ ಜಾಹೀರಾತನ್ನು ನೀಡುತ್ತಿವೆ. ಕೇಂದ್ರ ಸರ್ಕಾರ ಹೊಟೇಲ್‌ ಗಳಲ್ಲಿ ಕೋವಿಡ್‌ ಲಸಿಕೆ ನೀಡುವುದನ್ನು ನಿಷೇಧಿಸಿರುವುದನ್ನು ರಾಜ್ಯಗಳು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ತರುತ್ತವೆ ಎಂಬುದನ್ನು ಕಾದುನೋಡಬೇಕು. ಸದ್ಯಕ್ಕೆ ಲಸಿಕೆಯ ಪೂರೈಕೆ ಮತ್ತು ಖಾಸಗಿಯವರ ಲಸಿಕೆ ದಂದೆಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.


ಇದನ್ನೂ ಓದಿ; ಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...