Homeಕರೋನಾ ತಲ್ಲಣಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ದೇಶದಲ್ಲಿ ಕೊರೋನಾ ಲಸಿಕೆಯ ಹಾಹಾಕಾರ ಮುಂದುವರೆದಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳ ಮುಂದೆ ಪ್ರತಿನಿತ್ಯ ಜನ ಸಂದಣಿ ಕಂಡು ಬರುತ್ತಿದೆ. ರಾಜ್ಯ ಸರ್ಕಾರಗಳು ಕೇಂದ್ರದಿಂದ ತಮಗೆ ನೀಡುತ್ತಿರುವ ಲಸಿಕೆ ಯಾವ ಮೂಲೆಗೂ ಸಾಲುವುದಿಲ್ಲ ಎಂದು ಹೇಳುತ್ತಿವೆ. ಕೆಲವು ಕಡೆಯಲ್ಲಿ ಕೋವಿಶೀಲ್ಡ್‌ ಲಸಿಕೆಯ ಎರಡನೇ ಡೋಸ್‌ ಬಹುತೇಕರಿಗೆ (45 ವರ್ಷ ಮೇಲ್ಪಟ್ಟವರಿಗೆ) ನೀಡಲು ಇದುವರೆಗೆ ರಾಜ್ಯ ಸರ್ಕಾರಗಳಿಂದ ಸಾಧ್ಯವಾಗಿಲ್ಲ. ಎಲ್ಲೆಲ್ಲೂ ಲಸಿಕಾ ಕೇಂದ್ರಗಳು ಬೆಳಗಿನ ಅವಧಿಯಲ್ಲಿಯೇ ನೋ ಸ್ಟಾಕ್‌ ಬೋರ್ಡ್‌ ಹಾಕಿಕೊಂಡು ಜನರನ್ನು ವಾಪಸ್‌ ಕಳುಹಿಸುತ್ತಿರುವ ಘಟನೆ ಕೂಡ ನಡೆದಿದೆ. ಆದರೆ ದೇಶದಲ್ಲಿನ ಕೋವಿಡ್‌ ಲಸಿಕೆ ಹಾಹಾಕಾರದ ನಡುವೆ ಖಾಸಗಿ ಆಸ್ಪತ್ರೆಗಳು ಎಗ್ಗಿಲ್ಲದಂತೆ ಲಸಿಕೆ ವ್ಯಾಪಾರವನ್ನು ಮುಂದುವರೆಸಿವೆ. 900 ರೂ. ಗಳಿಂದ 2000 ರೂಗಳ ಮೊತ್ತದಲ್ಲಿ ರಾಜಾರೋಷವಾಗಿ ಲಸಿಕೆಗಳ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.

ಜೊತೆಗೆ ಪ್ರತಿಷ್ಠಿತ ಐಷಾರಾಮಿ ಹೊಟೇಲ್‌ ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್‌ಗಳನ್ನು ಘೋಷಿಸುತ್ತಿವೆ. ಐಷಾರಾಮಿ ಹೊಟೇಲ್‌ ಗಳ ತಮ್ಮಲ್ಲಿನ ಬ್ರೇಕ್‌ ಫಾಸ್ಟ್‌, ಏಸಿ, ಮನರಂಜನೆ ಮುಂತಾದ ಸೌಲಭ್ಯಗಳ ಜೊತೆಗೆ ಕೊರೋನಾ ಲಸಿಕೆಗಳನ್ನು ನೀಡುವುದಾಗಿ ಹೇಳಿ ಗ್ರಾಹಕರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದವು. ಈ ಹೊಟೇಲ್‌ ಗಳ ಜೊತೆ ಖಾಸಗಿ ಆಸ್ಪತ್ರೆಗಳೂ ಶಾಮೀಲಾಗಿ ದೊಡ್ಡ ದೊಡ್ಡ ಹೊಟೇಲ್‌ ಗಳಲ್ಲಿ ತಂಗುವ ಗ್ರಾಹಕರಿಗೆ ತಮ್ಮ ವೈದ್ಯರು ಮತ್ತು ಸಿಬ್ಬಂದಿಯ ಮೂಲಕ ವಾಕ್ಸಿನೇಶನ್‌ ನಡೆಸುತ್ತಿದ್ದರು. ಈ ಕುರಿತು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಐಷಾರಾಮಿ ಹೊಟೇಲ್‌ ಗಳಲ್ಲಿ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಲಸಿಕೆಗಳನ್ನು ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಆರೋಗ್ಯ ಇಲಾಖೆ, “ವಿಶ್ವದ ಅತಿದೊಡ್ಡ ವ್ಯಾಕ್ಸಿನ್‌ ಡ್ರೈವ್‌ ಭಾರತದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ರಾಜ್ಯ ಸರ್ಕಾರಗಳು ವ್ಯಾಕ್ಸಿನೇಷನ್‌ ಕುರಿತು ತೀವ್ರ ಎಚ್ಚರಿಕೆ ವಹಿಸಬೇಕು. ಕೆಲವು ಕಡೆ ವ್ಯಾಕ್ಸೀನೇಷನ್‌ ಪ್ರಕ್ರಿಯೆಯ ನಿಯಮಗಳು ಉಲ್ಲಂಘನೆಯಾಗುತ್ತಿರುವುದು ಕಂಡು ಬಂದಿದೆ. ವ್ಯಾಕ್ಸಿನೇಷನ್‌ ನಿಯಮಾವಳಿಗಳು ಮತ್ತು ಮಾರ್ಗಸೂಚಿಗಳು ಉಲ್ಳಂಘನೆಯಾಗದಂತೆ ನೋಡಿಕೊಂಡು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ಜನರಿಗೆ ಲಸಿಕೆಗಳನ್ನು ನೀಡಬೇಕೆಂದು” ಎಚ್ಚರಿಕೆ ನೀಡಿದೆ.

ಕೇಂದ್ರ ಆರೋಗ್ಯ ಮಾರ್ಗಸೂಚಿಯ ಅನ್ವಯ ಇನ್ನು ಮುಂದೆ ಖಾಸಗಿ ಹೊಟೇಲ್‌ಗಳಲ್ಲಿ ಲಸಿಕೆಗಳನ್ನು ನೀಡಲು ಸಾಧ್ಯವಿಲ್ಲ. ಕೇಂದ್ರ ಆರೋಗ್ಯ ಇಲಾಖೆಯು ಸರ್ಕಾರಿ ಮತ್ತು ಪರವಾನಗಿಯನ್ನು ಹೊಂದಿದ ಖಾಸಗಿ ವ್ಯಾಕ್ಸಿನೇಷನ್‌ ಸೆಂಟರ್‌ಗಳು, ಇತರ ಕಚೇರಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಿಗಳು ಕೆಲಸ ನಿರ್ವಹಿಸುವ ಸ್ಥಳಗಳು, ವೃದ್ಧರು ಮತ್ತು ಅಂಗವಿಕಲರಿಗಾಗಿ ವಸತಿ ಸಮುಚ್ಛಯಗಳ ಸಮೀಪ ಅಥವಾ ಹೌಸಿಂಗ್‌ ಸೊಸೈಟಿಗಳಲ್ಲಿ, ಸಮುದಾಯ ಭವನಗಳು, ಪಂಚಾಯತ ಭವನಗಳು, ಶಾಲೆ-ಕಾಲೇಜುಗಳು ಮತ್ತು ವೃದ್ಧಾಶ್ರಮಗಳಲ್ಲಿ ಮಾತ್ರ ತಾತ್ಕಾಲಿಕವಾಗಿ ವ್ಯಾಕ್ಸಿನೇಷನ್‌ ಸೌಲಭ್ಯಗಳನ್ನು ಕಲ್ಪಿಸಬಹುದಾಗಿದೆ ಎಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಸೂಚಿಸಿದೆ.

ದೆಹಲಿ ಉಪಮುಖ್ಯ ಮಂತ್ರಿ ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರವನ್ನು ವ್ಯಾಕ್ಸಿನೇಷನ್‌ ವಿಚಾರವಾಗಿ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳಿಗೆ ಅಗತ್ಯವಾದ ವ್ಯಾಕ್ಸಿನ್‌ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳು ಹೇಗೆ ವ್ಯಾಕ್ಸಿನ್‌ ಗಳನ್ನು ನೀಡುತ್ತಿವೆ ? ಕೇಂದ್ರದ ಬಳಿ ವ್ಯಾಕ್ಸಿನ್‌ ಪೂರೈಕೆ ಇಲ್ಲವೆಂದಾದರೆ ಖಾಸಗಿಯವರಿಗೆ ವ್ಯಾಕ್ಸಿನ್‌ ಎಲ್ಲಿಂದ ಸರಬರಾಜಾಗುತ್ತಿದೆ ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ. ವ್ಯಾಕ್ಸಿನ್‌ ಕೊರತೆಯಿಂದಾಗಿ 18-44 ವಯಸ್ಸಿನ ಸಮುದಾಯಕ್ಕೆ ವ್ಯಾಕ್ಸಿನ್‌ ನೀಡುವ ಯೋಜನೆಯನ್ನು ತಾತ್ಕಾಲಿಕವಾಗಿ ಕೈಬಿಡುವಂತಾಗಿದೆ. ದೆಹಲಿ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನ್‌ ನೀಡಲು ಪ್ರಯತ್ನಿಸುತ್ತಿದೆ. ನಡುವೆ ಖಾಸಗಿಯವರು 1000 ರೂಪಾಯಿಗಳಿಗೆ ಒಂದು ಡೋಸ್‌ ವ್ಯಾಕ್ಸಿನ್‌ ಮಾರಿಕೊಳ್ಳುತ್ತಿದ್ದಾರೆ ಎಂದು ಮನಿಶ್‌ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ದೇಶದ ದೊಡ್ಡ ಹೊಟೇಲುಗಳು “ಲಸಿಕೆ ಪ್ಯಾಕೇಜ್” ಆರಂಭಿಸಿದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಆರಂಭ ಆದ ಬೆನ್ನಿಗೇ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿ, ಇಂತಹದಕ್ಕೆಲ್ಲ ಅವಕಾಶ ಇಲ್ಲ ಎಂದಿದೆ. ಆರೋಗ್ಯದ ವಿಷಯದಲ್ಲೇ “ಕಾರ್ಪೋರೇಟ್” ಶಕ್ತಿಗಳು ಇಷ್ಟು ಆಡಬಲ್ಲವೆಂದಾದರೆ ನಾಳೆ ಕೃಷಿ “ಕಾರ್ಪೋರೇಟೀಕರಣ” ಆಗೋದಿಲ್ಲ ಅಂತ ಯಾವ ಬಾಯಲ್ಲಿ ಹೇಳ್ತೀರಿ? ಎಂದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಪಶ್ನಿಸಿದ್ದಾರೆ.

ಆರೋಗ್ಯ ಇಲಾಖೆಯು 2021 ಡಿಸೆಂಬರ್‌ ವೇಳೆಗೆ 108 ಕೋಟಿ ಭಾರತೀಯರಿಗೆ 216 ಕೋಟಿ ಡೋಸ್‌ ಕೋವಿಡ್‌ ವ್ಯಾಕ್ಸಿನ್‌ ನೀಡುವ ಗುರಿಯನ್ನು ಹಾಕಿಕೊಂಡಿದೆ. ಇದುವರೆಗೆ 20 ಕೋಟಿ ವ್ಯಾಕ್ಸಿನ್‌ ಡೋಸ್‌ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಕುಂಟುತ್ತ ಸಾಗುತ್ತಿರುವ ವ್ಯಾಕ್ಸಿನೇಷನ್‌ ಪ್ರಕ್ರಿಯೆಯನ್ನು ಗಮನಿಸಿದರೆ ಕೆಂದ್ರ ಸರ್ಕಾರ ಹೇಳಿರುವಂತೆ 2021 ಡಿಸೆಂಬರ್‌ ವೇಳಗೆ ವ್ಯಾಕ್ಸಿನೇಷನ್‌ ಪ್ರಕ್ರಿಯೆ ಅಂತ್ಯವಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ನಡುವೆ ಕೋವಿಡ್‌ ಮೂರನೆಯ ಅಲೆಯ ಭೀತಿಯೂ ಹೆಚ್ಚುತ್ತಿರುವುದರಿಂದ ಖಾಸಗಿ ಆಸ್ಪತ್ರೆಗಳು ಲಸಿಗೆಗಳ ಕೊರತೆಯನ್ನೇ ಬಂಡವಾಳ ಮಾಡಿಕೊಂಡು ವಿವಿಧ ಪ್ಯಾಕೇಜ್‌ ಗಳನ್ನು ವಿವಿಧ ಆಕರ್ಷಕ ಆಫರ್‌ ಗಳ ಜಾಹೀರಾತನ್ನು ನೀಡುತ್ತಿವೆ. ಕೇಂದ್ರ ಸರ್ಕಾರ ಹೊಟೇಲ್‌ ಗಳಲ್ಲಿ ಕೋವಿಡ್‌ ಲಸಿಕೆ ನೀಡುವುದನ್ನು ನಿಷೇಧಿಸಿರುವುದನ್ನು ರಾಜ್ಯಗಳು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ತರುತ್ತವೆ ಎಂಬುದನ್ನು ಕಾದುನೋಡಬೇಕು. ಸದ್ಯಕ್ಕೆ ಲಸಿಕೆಯ ಪೂರೈಕೆ ಮತ್ತು ಖಾಸಗಿಯವರ ಲಸಿಕೆ ದಂದೆಗೆ ಸರ್ಕಾರ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.


ಇದನ್ನೂ ಓದಿ; ಕನಿಷ್ಠ ಪ್ರಾಣಹಾನಿಯೊಂದಿಗೆ ಚಂಡಮಾರುತಗಳನ್ನು ಎದುರಿಸಿದ್ದೇವೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...