Homeಕರ್ನಾಟಕಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ..

- Advertisement -
- Advertisement -

ಬಲೂನ್ ಸೇರಿದಂತೆ ವಿವಧ ವಸ್ತುಗಳನ್ನು ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್‌ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳು ಈಗ ದಿಕ್ಕುಕಾಣದೇ ನೆಲೆಗಾಗಿ ಅಲೆಯುತ್ತಿದ್ದಾರೆ. ಹತ್ತಾರು ಮಕ್ಕಳನ್ನು ಕಟ್ಟಿಕೊಂಡು ಎಲ್ಲದರೂ ಉಳಿದುಕೊಳ್ಳಲು ಜಾಗ ಸಿಗುತ್ತದೆಯೇ ಎಂದು ಜಾತಕ ಪಕ್ಷಿಗಳಂತೆ ಹುಡುಕಾಡುತ್ತಿದ್ದಾರೆ.

ಮಧ್ಯಪ್ರದೇಶದಿಂದ ವಲಸೆ ಕಾರ್ಮಿಕರಾಗಿ ಬಂದ ಈ ಕುಟುಂಬಗಳು ಹಲವಾರು ವರ್ಷಗಳಿಂದ ಮೆಟ್ರೋ ಪಿಲ್ಲರ್‌ ಕೆಳಗೆ ಟೆಂಟ್‌ ಹಾಕಿಕೊಂಡು ಬದುಕುತ್ತಿದ್ದವು. ಬಲೂನ್ ಸೇರಿದಂತೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದರು. ಕೊರೊನಾ ಸಮಯಕ್ಕೆ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ದೂಕಲ್ಪಟ್ಟಿದ್ದರು. ನಂತರ ಕೆಸಿವಿಟಿ ಜನಸಹಾಯ ವತಿಯಿಂದ ಅವರಿಗೆ ರೇಷನ್ ಕಿಟ್ ನೀಡಿ, ಆರೋಗ್ಯ ತಪಾಸಣೆ ಮಾಡಲು ಮುಂದಾಗಿದ್ದರು. ಆದರೆ ಕಳೆದ 5-6 ದಿನಗಳ ಹಿಂದೆ ಪೊಲೀಸರು ನಮ್ಮನ್ನು ಏಕಾಏಕಿ ಎತ್ತಂಗಡಿ ಮಾಡಿದರು ಎಂದು ಆ ಬಡ ಕುಟುಂಬಗಳು ದೂರಿವೆ.

ಆ ಕುಟುಂಬಗಳು ಸದ್ಯಕ್ಕೆ ವೆಸ್ಟ್‌ ಆಫ್ ಕಾರ್ಡ್‌ ರೋಡ್‌ನಲ್ಲಿರುವ ದೋಬಿ ಘಾಟ್ ಸಿಗ್ನಲ್‌ನಲ್ಲಿ ಕಾಮಗಾರಿ ನಡೆಯುತ್ತಿರುವ ಫ್ಲೈ ಓವರ್‌ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ.. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ ಎಂದು ಆ ಕಾರ್ಮಿಕರು ಗೋಳು ತೋಡಿಕೊಂಡಿದ್ದಾರೆ.

ಈ ಲಾಕ್‌ಡೌನ್, ಕೊರೊನಾ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಆಹಾರದ ಕಿಟ್‌ಗಳನ್ನು ಕೊಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗಂಡಸರನ್ನು ಜೈಲಿಗೆ ಹಾಕುತ್ತೇವೆ

ನಾವು 15 ವರ್ಷದಿಂದ ಟೋಲ್‌ಗೇಟ್‌ನಲ್ಲಿ ಬದುಕುತ್ತಿದ್ದೇವೆ. ನಮ್ಮ ಕುಟುಂಬಗಳ ಕೆಲವು ಮಕ್ಕಳು ಡಾನ್‌ ಬಾಸ್ಕೊ ಸೇರಿದಂತೆ ವಿವಿದೆಡೆ ಶಿಕ್ಷಣ ಪಡೆಯುತ್ತಿದ್ದಾರೆ.  ಹಾಗೆಯೇ ಟೋಲ್‌ಗೇಟ್‌ ಸುತ್ತಮುತ್ತಲ ಶಾಲೆಗಳಿಗೆ ನಮ್ಮ ಮಕ್ಕಳನ್ನು ಸೇರಿಸಿದ್ದೇವೆ. ಈಗ ಏಕಾಏಕಿ ನಮ್ಮನ್ನು ಎತ್ತಂಗಡಿ ಮಾಡಿದ್ದಾರೆ. ಇಲ್ಲಿ ನಮಗೆ ಕುಡಿಯುವ ನೀರು, ಶೌಚಾಲಯ ಏನೂ ಇಲ್ಲ. ಪೊಲೀಸರು ಬಂದು ಮಕ್ಕಳನ್ನು ಬಾಲಾಶ್ರಮಕ್ಕೆ, ಮಹಿಳೆಯರನ್ನು ಅನಾಥಶ್ರಮಕ್ಕೆ ಸೇರಿಸುತ್ತೇವೆ, ಗಂಡಸರನ್ನು ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ನಮ್ಮಲ್ಲಿ ಕೆಲವರು ಹೆದರಿ ಊರಿಗೆ ಹೋಗಿದ್ದಾರೆ. ನಮಗೆ ಹೋಗಲು ಸಾಧ್ಯವಿಲ್ಲ ಎಂದು ಅಲ್ಲಿನಿ ನಿವಾಸಿ ಸುಮೇರ್ ಅಳಲು ತೋಡಿಕೊಂಡಿದ್ದಾರೆ.

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ ಮಹಿಳೆಯರು ಮನವಿ ಮಾಡಿದ್ದಾರೆ.

ಕೂಡಲೇ ಬಿಬಿಎಂಪಿ ಅಧಿಕಾರಿಗಳು ಇತ್ತ ಗಮನಹರಿಸಿ ಈ ಬಡ ಕುಟುಂಬಗಳನ್ನು ರಕ್ಷಿಸಬೇಕಾಗಿದೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...