Homeಅಂತರಾಷ್ಟ್ರೀಯಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

ಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

- Advertisement -
- Advertisement -

ಭಾರತ ಮತ್ತು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ರೂಪಾಂತರಿ ಕೊರೋನಾ ವೈರೈಸ್‌ ಈಗ ವಿಯೆಟ್ನಾಂ ದೇಶದಲ್ಲೂ ಕಾಣಿಸಿಕೊಂಡಿದೆ. ಈ ಮಾದರಿಯ ವೈರಸ್‌ಗಳು ಗಾಳಿಯಲ್ಲಿ ಅತಿ ಶೀಘ್ರವಾಗಿ ಹರಡಬಲ್ಲದು ಎಂದು ವಿಯೆಟ್ನಾಂ ತನ್ನ ಸಂಶೋಧನೆಯ ಮೂಲಕ ತಿಳಿಸಿದೆ. ಗಂಟಲ ದ್ರವದಲ್ಲಿ ಸೇರಿರುವ ಹೊಸ ರೂಪಾಂತರಿ ವೈರಸ್‌ ಶೀಘ್ರವಾಗಿ ಸುತ್ತಲಿನ ವಾತಾವರಣಕ್ಕೆ ಹರಡುವ ಶಕ್ತಿ ಹೊಂದಿದೆ ಎಂದು ಹೇಳಿದೆ.

ವಿಯೆಟ್ನಾಂ ದೇಶದಲ್ಲಿ ಇದುವರೆಗೆ 6800 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 47 ಜನರು ಈ ವೈರಸ್‌ ಗೆ ಬಲಿಯಾಗಿದ್ದಾರೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ. ವಿಯೆಟ್ನಾಂ ನಲ್ಲಿ ಇದು ವರೆಗೆ 10 ಲಕ್ಷ ಜನರಿಗೆ ಕೋವಿಡ್‌ ವ್ಯಾಕ್ಸಿನ್‌ ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಬ್ರಿಟನ್‌ ಮತ್ತು ಭಾರತದಲ್ಲಿ ರೂಪಾಂತರಗೊಂಡ ಹೊಸ ಕೋರೋನಾ ವೈರಸ್‌ ತಳಿ ವಿಯೆಟ್ನಾಂ ನಲ್ಲಿ ತೀವ್ರವಾಗಿ ಹರಡುತ್ತಿದೆ ಇದೆ ಎಂದು ವಿಯೆಟ್ನಾಂ ಆರೋಗ್ಯ ಸಚಿವಾಲಯ ತಿಳಿಸಿದೆ. ಕೊರೋನಾ ಎರಡನೇಯ ಅಲೆಯ ಸಂದರ್ಭದಲ್ಲಿ ವಿಯೆಟ್ನಾಂ ನ ಅರ್ಧದಷ್ಟು ಭಾಗಕ್ಕೆ ಕೊರೋನಾ ವೈರಸ್‌ ಹರಡಿದೆ. ಹನೋಯಿ ಮತ್ತು ಹೋ ಚಿನ್‌ ಮಿನ್ಹ್‌ ನಂತಹ ಕೈಗಾರಿಕಾ ನಗರಗಳಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ ತೀವ್ರವಾಗಿ ಹರಡುತ್ತಿದೆ. ಕೊರೋನಾ ಸೋಂಕಿನ ಹರಡುವಿಕೆ ಕಳೆದ ವರ್ಷಕ್ಕಿಂತ ಈ ವರ್ಷ ತೀವ್ರವಾಗಿದೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ.

ನಾವು ಭಾರತ ಮತ್ತು ಬ್ರಿಟನ್‌ ನಲ್ಲಿ ಮೊತ್ತ ಮೊದಲಿಗೆ ಕಾಣಿಸಿಕೊಂಡ ಕೊರೋನಾ ಹೊಸ ರೂಪಾಂತರಿಯನ್ನು ವಿಯಾಟ್ನಾಂ ನಲ್ಲಿಯೂ ಪತ್ತೆ ಹಚ್ಚಿದ್ದೇವೆ. ಗಂಟಲುದ್ರವದಲ್ಲಿ ಸೇರಿರುವ ಈ ಹೊಸ ತಳಿ ವೈರಸ್‌ಗಳು ಅತ್ಯಂತ ಶೀಘ್ರವಾಗಿ ಮತ್ತು ತೀವ್ರ ಸ್ವರೂಪದಲ್ಲಿ ಗಾಳಿಯ ಮೂಲಕ ಸುತ್ತಲಿನ ಪರಿಸರಕ್ಕೆ ಹರಡುತ್ತಿರುವುದನ್ನು ಕಂಡುಕೊಂಡಿದ್ದೇವೆ ಎಂದು ವಿಯೆಟ್ನಾಂ ಆರೋಗ್ಯ ಸಚಿವ ನುಗುಯೆನ್‌ ಥಾನ್‌ ಲಾಂಗ್‌ ಶನಿವಾರ ಅಲ್ಲಿನ ಮಾಧ್ಯಮಗಳಿಗೆ ತಿಳಿಸಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವಿಯೆಟ್ನಾಂನ ವಿಜ್ಞಾನಿಗಳು ಇತ್ತೀಚೆಗೆ ಪರೀಕ್ಷಿಸಲಾದ 32 ಜನರಲ್ಲಿ 4 ಜನರಲ್ಲಿ ಹೊಸ ರೂಪಾಂತರಿ ಕೊರೋನಾ ವೈರಸ್‌ ಅಂಶಗಳು ಕಂಡುಬಂದಿವೆ ಎಂದು ತಿಳಿಸಿದೆ.
ವಿಯೇಟ್ನಾಂ ಆರೋಗ್ಯ ಮಂತ್ರಿ ಶನಿವಾರ ಮೇ 29 ರಂದು ಹೊಸ ತಳಿಯನ್ನು ಘೋಷಿಸುವ ಮೊದಲು ಇದುವರೆಗೆ ಏಳು ಮಾದರಿಯ ಕೊರೋನಾ ರೂಪಾಂತರಿ ತಳಿಗಳು ವಿಯೆಟ್ನಾಂ ನಲ್ಲಿ ಕಂಡುಬಂದಿದ್ದವು ಎಂದು ಹೇಳಲಾಗಿದೆ.

ಈ ಹಿಂದೆ ವಿಯೆಟ್ನಾಂ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜಗತ್ತಿನಾದ್ಯಂತ ಮೆಚ್ಚುಗೆಗಳು ಕೇಳಿ ಬಂದಿದ್ದವು. ಸೋಂಕಿತರ ಪತ್ತೆ ಮತ್ತು ಮಾಸ್‌ ಕ್ವಾರಂಟೈನ್‌ನಿಂದಾಗಿ ವಿಯೆಟ್ನಾಂ ನಲ್ಲಿ ಸೋಕಿಂಗೆ ತುತ್ತಾಗುವವರ ಶೇಕಡಾ ಪ್ರಮಾಣ ಅತ್ಯಂತ ಕಡಿಮೆಯಾಗಿತ್ತು.

ಹೊಸ ಮಾದರಿಯ ಕೊರೋನಾ ರೂಪಾಂತರಿ ತಳಿ ಮತ್ತು ಕೊರೋನಾ ಎರಡನೆ ಅಲೆಯು ವಿಯೆಟ್ನಾಂ ಸರ್ಕಾರ ಮತ್ತು ಜನರಲ್ಲಿ ಭೀತಿಯನ್ನು ಹುಟ್ಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಲ್ಲಿನ ಸರ್ಕಾರ ಜನರ ಓಡಾಟದ ಮೇಲೆ ನಿರ್ಭಂದವನ್ನು ಹೇರಿದ್ದು ಹೊಟೇಲ್‌, ರೆಸ್ಟೋರೆಂಟ್, ಶಾಲಾ ಕಾಲೇಜು ಮತ್ತು ಇತರ ವಾಣಿಜ್ಯ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಅಲ್ಲಿನ ಸರ್ಕಾರ ನಿಷೇಧಿಸಿದೆ.

ವಿಯೆಟ್ನಾಂ ಸರಿಸುಮಾರು 9.7 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಇವರಲ್ಲಿ 10 ಲಕ್ಷ ಜನರಿಗೆ ಕೊರೋನಾ ಲಸಿಕೆಯನ್ನು ನೀಡಲಾಗಿದೆ. ಈ ದೇಶದ ಅಂತ್ಯಕ್ಕೆ ಕೊರೋನಾ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸುವ ಗುರಿಯನ್ನು ಅಲ್ಲಿನ ಸರ್ಕಾರ ಇಟ್ಟುಕೊಂಡಿದೆ.

ವಿಯೆಟ್ನಾಂ ಸರ್ಕಾರ ಉದ್ಯಮಿಗಳು ಮತ್ತು ಇತರ ಶ್ರೀಮಂತರಲ್ಲಿ ಕೊರೋನಾ ನಿರ್ವಹಣೆಗೆ ತಮ್ಮ ಕೊಡುಗೆಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದೆ.

ವಿಯೆಟ್ನಾಂ ಗೆ ಅತ್ಯಂತ ಸಮೀಪದಲ್ಲಿರುವ ಥಾಯ್ಲೆಂಡ್‌ ನಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ಗಳು ಕಾಣಿಸಿಕೊಂಡಿವೆ. ಥಾಯ್ಲೆಂಡ್‌ ಸರ್ಕಾರ ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಹೊಸ ತಳಿಯ ವೈರಸ್ ಅನ್ನು ಮಾಧ್ಯಮಗಳು ʼಥಾಯ್‌ ವೇರಿಯೆಂಟ್‌ʼ ಎಂದು ಬಿಂಬಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದೆ. ಈ ರೀತಿಯ ಆಧಾರ ರಹಿತವಾದ ಸುದ್ದಿ ಅಪಪ್ರಚಾರಗಳನ್ನು ನಿಲ್ಲಿಸುವಂತೆ ಮಾಧ್ಯಮಗಳಲ್ಲಿ ಥಾಯ್ಲೆಂಡ್‌ ಸರ್ಕಾರ ಮನವಿಯನ್ನು ಮಾಡಿಕೊಂಡಿದೆ.

ಚರ್ಚೆಯಾಗುತ್ತಿರುವ ಹೊಸ ಕೊರೋನಾ ರೂಪಾಂತರಿ ತಳಿ ಮೊಟ್ಟಮೊದಲ ಬಾರಿಗೆ ಥಾಯ್ಲೆಂಡಿನಲ್ಲಿ 33 ವರ್ಷದ ಈಜಿಪ್ಟ್‌ ದೇಶದ ಪ್ರವಾಸಿಯೊಬ್ಬರಲ್ಲಿ ಕಾಣಿಸಿಕೊಂಡಿತ್ತು. ನಂತರ ಬ್ರಿಟನ್‌ ನಲ್ಲಿ ಈ ಹೊಸ ರೂಪಾಂತರಿ ಕೊರೋನಾ ವೈರಸ್‌ ಸಂಬಂಧಿಸಿದ 109 ಪ್ರಕರಣಗಳು ವರದಿಯಾಗಿವೆ ಎಂದು ಬ್ರಿಟನ್‌ ದೇಶದ ಅಧಿಕಾರಿಗಳು ತಿಳಿಸಿವೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...