Homeಕರೋನಾ ತಲ್ಲಣಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

- Advertisement -
- Advertisement -

ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆಯುತ್ತಿರುವ ವಿಡಿಯೋ ಒಂದು ಮೇ 30 ರ ಮಧ್ಯಾಹ್ನದ ಹೊತ್ತಿಗೆ ಇಂಟರ್‌ನೆಟ್‌ ನಲ್ಲಿ ಹರಿದಾಡಲು ಆರಂಭವಾಗಿದೆ. ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ರಪ್ತಿ ನದಿ ಸೇತುವೆಯ ಮೇಲೆ ನಡೆದಿದೆ ಎಂದು ಗುರುತಿಸಲಾಗಿದೆ.

ಮೇ 28 ರಂದು ನಗರದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಸೇತುವೆಯ ಸಮೀಪ ರಸ್ತೆಯಲ್ಲಿ ಕಾರು ನಿಲ್ಲಿಸಿ ನಿಂತಿದ್ದ ಸ್ಥಳೀಯರೊಬ್ಬರು ಯುವಕರು ದೇಹವನ್ನು ನದಿಗೆ ಎಸೆಯುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಮೇ ತಿಂಗಳ ಮಧ್ಯದಲ್ಲಿ ಉತ್ತರ ಪ್ರದೇಶದ ಗಂಗಾ ಸೇರಿದಂತೆ ಇತರ ನದಿಗಳಲ್ಲಿ ಮೃತ ದೇಹಗಳು ತೇಲಿ ಬರುತ್ತಿರುವ ಘಟನೆ ದೇಶಾದ್ಯಂತ ಜನರಲ್ಲಿ ಸಾಕಷ್ಟು ಆಕ್ರೋಶವನ್ನು ಹುಟ್ಟಿಹಾಕಿತ್ತು. ಗಂಗಾ ನದಿಯ ತಟದಲ್ಲಿ ಜನರು ಕೋವಿಡ್‌ ಸೋಂಕಿತರ ಅಂತ್ಯಕ್ರಿಯೆ ನಡೆಸುತ್ತಿರುವ ಮತ್ತು ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಘಟನೆಗಳು ದೇಶಾದ್ಯಂತ ಸಂಚಲನವನ್ನು ಉಂಟುಮಾಡಿತ್ತು. ನದಿಯಲ್ಲಿ ತೇಲಿ ಬರುತ್ತಿರುವ ಮೃತದೇಹಗಳ ಕಾರಣದಿಂದ ಸಾಕಷ್ಟು ಮುಜುಗರವನ್ನು ಎದುರಿಸಿದ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮೃತದೇಹಗಳನ್ನು ನದಿಗೆ ಎಸೆಯದಂತೆ ಜನರಲ್ಲಿ ಹಲವು ಬಾರಿ ಮನವಿಗಳನ್ನು ಕೂಡ ಮಾಡಿತ್ತು. ಜೊತೆಗೆ ಕಠಿಣ ಶಿಕ್ಷೆಯನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಈ ಎಲ್ಲ ಘಟನೆಗಳ ನಂತರವೂ ಉತ್ತರಪ್ರದೇಶದಲ್ಲಿ ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಅಮಾನವೀಯ ಕೃತ್ಯಗಳು ಮುಂದುವರೆಯುತ್ತಿರುವುದಕ್ಕೆ ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಸಾಕ್ಷಿ ನೀಡಿದೆ.

ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಪ್ರಕರಣಕ್ಕೆ ಸಂಬಂಧ ಸೋಂಕಿತರ ಕುಟುಂಬದ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ವಿಡಿಯೋದಲ್ಲಿ ಪಿಪಿಇ ಕಿಟ್‌ ಧರಿಸಿರುವ ವ್ಯಕ್ತಿಯೊಬ್ಬ ದೇಹವನ್ನು ಹಿಡಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ವ್ಯಕ್ತಿ ದೀರ್ಘಕಾಲದಿಂದ ದೇಹವನ್ನು ಬ್ಯಾಗ್‌ನಿಂದ ತೆಗೆಯಲು ಪ್ರಯತ್ನಿಸುತ್ತಿರುವಂತೆ ಸೆರೆಯಾಗಿರುವ ವಿಡಿಯೋ ದೃಶ್ಯಾವಳಿಯಲ್ಲಿ ಕಂಡುಬರುತ್ತಿದೆ.

ಈ ಘಟನೆಯಲ್ಲಿ ಕಾಣಿಸಿರುವ ಮೃತ ದೇಹ ಸಿದ್ಧಾರ್ಥ ನಗರ ನಿವಾಸಿಯದಾಗಿದ್ದು ಅವರು ಮೇ 25 ರಂದು ಕೋವಿಡ್‌ ಸೋಂಕಿನಿಂದ ಬಲರಾಮಪುರ ಆಸ್ಪತ್ರೆಗೆ ದಾಖಲಾಗಿದ್ದರು. 3 ದಿನಗಳ ನಂತರ ಅಂದರೆ ಮೇ 28 ರಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಕೋವಿಡ್‌ ನಿಂದ ಮೃತಪಟ್ಟ ಕಾರಣ ಅವರ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆದಿರುವುದು ತಿಳಿದುಬಂದಿದೆ ಬಲರಾಮಪುರ ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ ಸಿದ್ದಾರ್ಥ್‌ ನಗರದ ವ್ಯಕ್ತಿಯೊಬ್ಬರು ಕಳೆದ ಮಂಗಳವಾರ ಕೋವಿಡ್‌ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ದಿನಗಳ ನಂತರ ಅಂದರೆ ಮೇ 28 ರ ವೇಳೆಗೆ ರೋಗಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾವಳಿಗಳ ಪ್ರಕಾರ ಮೃತಪಟ್ಟ ವ್ಯಕ್ತಿಯ ದೇಹವನ್ನು ಅವರ ಕುಟುಂಬಸ್ಥರಿಗೆ ನೀಡಲಾಗಿದೆ. ಅವರ ಕುಟುಂಬಸ್ಥರು ಮೃತದೇಹವನ್ನು ನದಿಗೆ ಎಸೆದಿದ್ದಾರೆ. ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬಲರಾಮಪುರ ಜಿಲ್ಲೆ ಮುಖ್ಯ ಆರೋಗ್ಯಾಧಿಕಾರಿ ವಿ.ಬಿ. ಸಿಂಗ್‌ ತಿಳಿಸಿದ್ದಾರೆ.

ಮೃತದೇಹವನ್ನು ಕುಟುಂಬಸ್ಥರಿಗೆ ಮರಳಿ ನೀಡಲಾಗಿದೆ. ಆದ್ದರಿಂದ ಮೃತ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ಕಾಯ್ದೆ ಮತ್ತು ಎಪಿಡೆಮಿಕ್‌ ಖಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಲರಾಮಪುರ ಜಿಲ್ಲಾ ಪೊಲೀಸ್‌ ಅಧಿಕಾರಿ ಹೇಮಂತ್‌ ಕುಟಿಯಾಲ್‌ ತಿಳಿಸಿದ್ದಾರೆ.

ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ತಪ್ಪಾಗಿ ನೀಡುತ್ತಿದೆ ಎಂಬ ಆರೋಪ ಈಗಾಗಲೇ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಗಂಗಾ ನದಿಯಲ್ಲಿ ಮೃತದೇಹಗಳು ತೇಲಿ ಬರುತ್ತಿರುವ ಘಟನೆಗಳು ಬೆಳಕಿಗೆ ಬಂದಿದ್ದವು. ಈಗ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ನದಿಗೆ ಎಸೆಯುತ್ತಿರುವ ಘಟನೆಯ ಈ ದೃಶ್ಯಾವಳಿ ಉತ್ತರ ಪ್ರದೇಶದ ಕೊರೋನಾ ಕಾಲದ ಕರುಣಾ ಜನಕ ಕಥೆಗಳನ್ನು, ಕೋವಿಡ್‌ ಸೋಂಕಿನಿಂದ ಜನರು ಎದುರಿಸುತ್ತಿರುವ ಅಮಾನವೀಯ ವ್ಯಥೆಗಳನ್ನು ನಮ್ಮ ಮುಂದೆ ತೆರೆದಿಟ್ಟಿದೆ.


ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...