Homeಕರೋನಾ ತಲ್ಲಣಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

- Advertisement -
- Advertisement -

ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆಯುತ್ತಿರುವ ವಿಡಿಯೋ ಒಂದು ಮೇ 30 ರ ಮಧ್ಯಾಹ್ನದ ಹೊತ್ತಿಗೆ ಇಂಟರ್‌ನೆಟ್‌ ನಲ್ಲಿ ಹರಿದಾಡಲು ಆರಂಭವಾಗಿದೆ. ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ರಪ್ತಿ ನದಿ ಸೇತುವೆಯ ಮೇಲೆ ನಡೆದಿದೆ ಎಂದು ಗುರುತಿಸಲಾಗಿದೆ.

ಮೇ 28 ರಂದು ನಗರದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಸೇತುವೆಯ ಸಮೀಪ ರಸ್ತೆಯಲ್ಲಿ ಕಾರು ನಿಲ್ಲಿಸಿ ನಿಂತಿದ್ದ ಸ್ಥಳೀಯರೊಬ್ಬರು ಯುವಕರು ದೇಹವನ್ನು ನದಿಗೆ ಎಸೆಯುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಮೇ ತಿಂಗಳ ಮಧ್ಯದಲ್ಲಿ ಉತ್ತರ ಪ್ರದೇಶದ ಗಂಗಾ ಸೇರಿದಂತೆ ಇತರ ನದಿಗಳಲ್ಲಿ ಮೃತ ದೇಹಗಳು ತೇಲಿ ಬರುತ್ತಿರುವ ಘಟನೆ ದೇಶಾದ್ಯಂತ ಜನರಲ್ಲಿ ಸಾಕಷ್ಟು ಆಕ್ರೋಶವನ್ನು ಹುಟ್ಟಿಹಾಕಿತ್ತು. ಗಂಗಾ ನದಿಯ ತಟದಲ್ಲಿ ಜನರು ಕೋವಿಡ್‌ ಸೋಂಕಿತರ ಅಂತ್ಯಕ್ರಿಯೆ ನಡೆಸುತ್ತಿರುವ ಮತ್ತು ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಘಟನೆಗಳು ದೇಶಾದ್ಯಂತ ಸಂಚಲನವನ್ನು ಉಂಟುಮಾಡಿತ್ತು. ನದಿಯಲ್ಲಿ ತೇಲಿ ಬರುತ್ತಿರುವ ಮೃತದೇಹಗಳ ಕಾರಣದಿಂದ ಸಾಕಷ್ಟು ಮುಜುಗರವನ್ನು ಎದುರಿಸಿದ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮೃತದೇಹಗಳನ್ನು ನದಿಗೆ ಎಸೆಯದಂತೆ ಜನರಲ್ಲಿ ಹಲವು ಬಾರಿ ಮನವಿಗಳನ್ನು ಕೂಡ ಮಾಡಿತ್ತು. ಜೊತೆಗೆ ಕಠಿಣ ಶಿಕ್ಷೆಯನ್ನು ವಿಧಿಸುವುದಾಗಿ ಎಚ್ಚರಿಸಿತ್ತು. ಈ ಎಲ್ಲ ಘಟನೆಗಳ ನಂತರವೂ ಉತ್ತರಪ್ರದೇಶದಲ್ಲಿ ಕೋವಿಡ್‌ ಸೋಂಕಿತರ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಅಮಾನವೀಯ ಕೃತ್ಯಗಳು ಮುಂದುವರೆಯುತ್ತಿರುವುದಕ್ಕೆ ವಿಡಿಯೋದಲ್ಲಿ ಸೆರೆಯಾಗಿರುವ ಘಟನೆ ಸಾಕ್ಷಿ ನೀಡಿದೆ.

ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಪ್ರಕರಣಕ್ಕೆ ಸಂಬಂಧ ಸೋಂಕಿತರ ಕುಟುಂಬದ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ವಿಡಿಯೋದಲ್ಲಿ ಪಿಪಿಇ ಕಿಟ್‌ ಧರಿಸಿರುವ ವ್ಯಕ್ತಿಯೊಬ್ಬ ದೇಹವನ್ನು ಹಿಡಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ವ್ಯಕ್ತಿ ದೀರ್ಘಕಾಲದಿಂದ ದೇಹವನ್ನು ಬ್ಯಾಗ್‌ನಿಂದ ತೆಗೆಯಲು ಪ್ರಯತ್ನಿಸುತ್ತಿರುವಂತೆ ಸೆರೆಯಾಗಿರುವ ವಿಡಿಯೋ ದೃಶ್ಯಾವಳಿಯಲ್ಲಿ ಕಂಡುಬರುತ್ತಿದೆ.

ಈ ಘಟನೆಯಲ್ಲಿ ಕಾಣಿಸಿರುವ ಮೃತ ದೇಹ ಸಿದ್ಧಾರ್ಥ ನಗರ ನಿವಾಸಿಯದಾಗಿದ್ದು ಅವರು ಮೇ 25 ರಂದು ಕೋವಿಡ್‌ ಸೋಂಕಿನಿಂದ ಬಲರಾಮಪುರ ಆಸ್ಪತ್ರೆಗೆ ದಾಖಲಾಗಿದ್ದರು. 3 ದಿನಗಳ ನಂತರ ಅಂದರೆ ಮೇ 28 ರಂದು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಕೋವಿಡ್‌ ನಿಂದ ಮೃತಪಟ್ಟ ಕಾರಣ ಅವರ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆದಿರುವುದು ತಿಳಿದುಬಂದಿದೆ ಬಲರಾಮಪುರ ಪೊಲೀಸರು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ ಸಿದ್ದಾರ್ಥ್‌ ನಗರದ ವ್ಯಕ್ತಿಯೊಬ್ಬರು ಕಳೆದ ಮಂಗಳವಾರ ಕೋವಿಡ್‌ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮೂರು ದಿನಗಳ ನಂತರ ಅಂದರೆ ಮೇ 28 ರ ವೇಳೆಗೆ ರೋಗಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾವಳಿಗಳ ಪ್ರಕಾರ ಮೃತಪಟ್ಟ ವ್ಯಕ್ತಿಯ ದೇಹವನ್ನು ಅವರ ಕುಟುಂಬಸ್ಥರಿಗೆ ನೀಡಲಾಗಿದೆ. ಅವರ ಕುಟುಂಬಸ್ಥರು ಮೃತದೇಹವನ್ನು ನದಿಗೆ ಎಸೆದಿದ್ದಾರೆ. ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬಲರಾಮಪುರ ಜಿಲ್ಲೆ ಮುಖ್ಯ ಆರೋಗ್ಯಾಧಿಕಾರಿ ವಿ.ಬಿ. ಸಿಂಗ್‌ ತಿಳಿಸಿದ್ದಾರೆ.

ಮೃತದೇಹವನ್ನು ಕುಟುಂಬಸ್ಥರಿಗೆ ಮರಳಿ ನೀಡಲಾಗಿದೆ. ಆದ್ದರಿಂದ ಮೃತ ವ್ಯಕ್ತಿಯ ಕುಟುಂಬಸ್ಥರ ವಿರುದ್ಧ ಡಿಸಾಸ್ಟರ್‌ ಮ್ಯಾನೇಜ್‌ಮೆಂಟ್‌ ಕಾಯ್ದೆ ಮತ್ತು ಎಪಿಡೆಮಿಕ್‌ ಖಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬಲರಾಮಪುರ ಜಿಲ್ಲಾ ಪೊಲೀಸ್‌ ಅಧಿಕಾರಿ ಹೇಮಂತ್‌ ಕುಟಿಯಾಲ್‌ ತಿಳಿಸಿದ್ದಾರೆ.

ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ತಪ್ಪಾಗಿ ನೀಡುತ್ತಿದೆ ಎಂಬ ಆರೋಪ ಈಗಾಗಲೇ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಗಂಗಾ ನದಿಯಲ್ಲಿ ಮೃತದೇಹಗಳು ತೇಲಿ ಬರುತ್ತಿರುವ ಘಟನೆಗಳು ಬೆಳಕಿಗೆ ಬಂದಿದ್ದವು. ಈಗ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ನದಿಗೆ ಎಸೆಯುತ್ತಿರುವ ಘಟನೆಯ ಈ ದೃಶ್ಯಾವಳಿ ಉತ್ತರ ಪ್ರದೇಶದ ಕೊರೋನಾ ಕಾಲದ ಕರುಣಾ ಜನಕ ಕಥೆಗಳನ್ನು, ಕೋವಿಡ್‌ ಸೋಂಕಿನಿಂದ ಜನರು ಎದುರಿಸುತ್ತಿರುವ ಅಮಾನವೀಯ ವ್ಯಥೆಗಳನ್ನು ನಮ್ಮ ಮುಂದೆ ತೆರೆದಿಟ್ಟಿದೆ.


ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...