Homeಅಂತರಾಷ್ಟ್ರೀಯಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಈಗ ನಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು.

- Advertisement -
- Advertisement -

ಬ್ರೆಜಿಲ್‌ನ ಜನತೆ ತಮ್ಮ ದೇಶದ ಅಧ್ಯಕ್ಷ ಬೊಲ್ಸೆನಾರೋ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಕಾಲದಲ್ಲಿ ಸರ್ಕಾರದ ನಿರ್ಲಕ್ಷ ಮತ್ತು ವೈಫಲ್ಯಗಳು ಬ್ರೆಜಿಲ್‌ ಜನರನ್ನು ಸಿಡಿದೇಳುವಂತೆ ಮಾಡಿದೆ.

ಬ್ರೆಜಿಲ್‌ ದೇಶದ 16 ನಗರಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ʼಬೊಲ್ಸೆನಾರೋ ಕೆಳಗಿಳಿಸಿʼ ʼಬೊಲ್ಸೆನಾರೋ ಪದಚ್ಯುತಗೊಳಿಸಿʼ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ಪ್ರತಿಭಟಿಸತೊಡಗಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ತಜ್ಞರ ಎಚ್ಚರಿಕೆಗಳನ್ನೆಲ್ಲ ಗಾಳಿಗೆ ತೂರಿ ನಿರ್ಲಕ್ಷ ವಹಿಸಿದ ಬೊಲ್ಸಾನಾರೋ ಈಗ ಜನಾಕ್ರೋಶಕ್ಕೆ ತುತ್ತಾಗಿದ್ದಾರೆ.

ಬೊಲ್ಸಾನಾರೋ ಅವರ ಜನಪ್ರಿಯತೆ ಕೊರೋನಾ ಸಾಂಕ್ರಾಮಿಕದ ಕಾಲದಲ್ಲಿ ತೀವ್ರವಾಗಿ ಕುಸಿತಕಂಡಿದೆ. ಇದುವರೆಗೆ ಬ್ರೆಜಿಲ್‌ ನಲ್ಲಿ 4,60,000 ಕ್ಕೂ ಹೆಚ್ಚು ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೊಲ್ಸೊನಾರೋ ಅವರ ಕೊರೋನಾ ಸೋಂಕಿನ ಬಗೆಗಿನ ತೀವ್ರ ನಿರ್ಲಕ್ಷ್ಯ, ಉಡಾಫೆಯ ಹೇಳಿಕೆ ಮತ್ತು ಕೊರೋನಾ ಲಸಿಕೆ ಬಗೆಗಿನ ಅಸಡ್ಡೆಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರ ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಗಳು ಇದುವರೆಗೆ ಕಟು ಶಬ್ಧಗಳಲ್ಲಿ ಎಚ್ಚರಿಸುತ್ತ ಬಂದಿವೆ. ಇದಾವುದನ್ನು ಲೆಕ್ಕಿಸದೇ ಬೊಲ್ಸೆನಾರೋ ತಮ್ಮ ಎಂದಿನ ಸುಳ್ಳು ಮತ್ತು ಉಡಾಫೆಯ ಹೇಳಿಕೆಗಳನ್ನು ಮುಂದುವರೆಸಿದ್ದರು. ಕಡ್ಡಾಯ ಮಾಸ್ಕ್‌ ಧರಿಸುವ ನಿಯಮಗಳನ್ನು ಬ್ರೆಜಿಲ್‌ ನಲ್ಲಿ ಬೊಲ್ಸೆನಾರೋ ಇತ್ತೀಚೆಗೆ ತೆಗೆದುಹಾಕಿದ್ದರು. ಬೊಲ್ಸೆನಾರೋ ಈ ನಡೆಯ ವಿರುದ್ಧ ಅಂತಾರಷ್ಟ್ರೀಯ ಸಮುದಾಯ ತೀವ್ರವಾದ ಆಕ್ಷೇಪಗಳನ್ನು ಹೊರಹಾಕಿತ್ತು. ಇದೀಗ ತಮ್ಮ ಅಧ್ಯಕ್ಷನ ನಡೆಯಿಂದ ಬೇಸತ್ತು ಬ್ರೆಜಿಲ್‌ ಜನತೆ ಬೀದಿಗಿಳಿದಿದ್ದಾರೆ.

ಈಗ ಬ್ರೆಜಿಲ್ ಜನತೆ ತಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು. ಇದರ ಹೊರತಾಗಿ ನಮಗೆ ಬೇರೆ ದಾರಿಯಿಲ್ಲ. ಇವರೆಡರಲ್ಲಿ ಉತ್ತಮವಾಗಿರುವುದನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಪ್ರತಿಭಟಸದೆ ಮನೆಯಲ್ಲಿದ್ದರೂ ಸೋಂಕಿನಿಂದ ಸಾಯುತ್ತೇವೆ. ಹಾಗಾಗಿ ಬೊಲ್ಸೆನಾರೋ ವಿರುದ್ಧ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾನಿರತರು ಕಿಡಿಕಾರಿದ್ದಾರೆ.

ಬೊಲ್ಸೆನಾರೋ ವಿರುದ್ಧ ಬ್ರೆಜಿಲ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನೇತೃತ್ವವನ್ನು ಅಲ್ಲಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು , ಕಾರ್ಮಿಕ ಸಂಘಟನೆಗಳು ವಹಿಸಿಕೊಂಡಿವೆ. ಮೇ 29 ಶನಿವಾರ ಬ್ರೆಝಿಲ್‌ ರಾಜಧಾನಿ ಬ್ರೆಝೆಲಿಯಾ ಮತ್ತು ರಿಯೋ ಡಿ ಜನೈರೋ ದಲ್ಲಿ ನಡೆದ ಪ್ರತಿಭಟನೆಗಳು ಅತ್ಯಂತ ಶಾಂತವಾಗಿದ್ದವು. ಆದರೆ ದೇಶದ ಈಶಾನ್ಯ ಭಾಗದ ನಗರಗಳಾದ ರೆಸಿಫೆ ಮುಂತಾದ ಕಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಮುಂದಾಗಿರುವ ಬೊಲ್ಸೆನಾರೋ ಸರ್ಕಾರ ಪ್ರತಿಭಟನಾಕಾರರ ಮೇಲೆ ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಸಿಡಿಸಿದೆ.

ಬ್ರೆಝಿಲ್‌ ನ ಅತಿದೊಡ್ಡ ನಗರ ಸಾವೋ ಪೋಲೋ ದ ಬೀದಿಗಳು ಈಗ ಸಾವಿರಾರು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಸಾವಿರಾರು ಮಾಸ್ಕ್‌ ಧರಿಸಿದ ಪ್ರತಿಭಟನಾಕಾರರು ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಬೃಹತ್‌ ಬಲೂನುಗಳನ್ನು ಪ್ರತಿಭಟನಾಕಾರರು ಆಗಸದಲ್ಲಿ ಹಾರಿ ಬಿಟ್ಟಿದ್ಧಾರೆ.

ಕೋವಿಡ್‌ ಕುರಿತಾಗಿ ಉಡಾಫೆಯ ಹೇಳಿಕೆ ನೀಡುತ್ತ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸದೆ ಲಕ್ಷಾಂತರ ಅಮೆರಿಕ್ಕನ್ನರ ಸಾವಿಗೆ ಕಾರಣರಾದ ಡೊನಾಲ್ಡ್‌ ಟ್ರಂಪ್‌ ಅವರನ್ನು ಅಮೆರಿಕಾದ ಜನರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಟ್ರಂಪ್‌ ಅವರ ಆತ್ಮೀಯ ಸ್ನೇಹಿತರೆಂದು ಹೇಳಲಾಗುವ ಬೊಲ್ಸೆನಾರೋ ವಿರುದ್ಧವೂ ಬ್ರೆಝಿಲ್‌ ನಾಗರಿಕರಲ್ಲಿ ಈಗ ಆಕ್ರೋಶ ಭುಗಿಲೆದ್ದಿದೆ. ಟ್ರಂಪ್‌ ಮತ್ತು ಬೊಲ್ಸೆನಾರೋ ಇಬ್ಬರೂ ತೋವ್ರ ಬಲಪಂಥೀಯವಾದಿ ನಾಯಕರು ಎಂಬುದು ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಚಾರ. ಇನ್ನು ಭಾರತದಲ್ಲಿಯೂ ಇದೇ ಪರಿಸ್ಥಿತಿ ಏರ್ಪಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಾ ಸಾಗಿದೆ.


ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...