Homeಅಂತರಾಷ್ಟ್ರೀಯಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಈಗ ನಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು.

- Advertisement -
- Advertisement -

ಬ್ರೆಜಿಲ್‌ನ ಜನತೆ ತಮ್ಮ ದೇಶದ ಅಧ್ಯಕ್ಷ ಬೊಲ್ಸೆನಾರೋ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಕಾಲದಲ್ಲಿ ಸರ್ಕಾರದ ನಿರ್ಲಕ್ಷ ಮತ್ತು ವೈಫಲ್ಯಗಳು ಬ್ರೆಜಿಲ್‌ ಜನರನ್ನು ಸಿಡಿದೇಳುವಂತೆ ಮಾಡಿದೆ.

ಬ್ರೆಜಿಲ್‌ ದೇಶದ 16 ನಗರಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ʼಬೊಲ್ಸೆನಾರೋ ಕೆಳಗಿಳಿಸಿʼ ʼಬೊಲ್ಸೆನಾರೋ ಪದಚ್ಯುತಗೊಳಿಸಿʼ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ಪ್ರತಿಭಟಿಸತೊಡಗಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ತಜ್ಞರ ಎಚ್ಚರಿಕೆಗಳನ್ನೆಲ್ಲ ಗಾಳಿಗೆ ತೂರಿ ನಿರ್ಲಕ್ಷ ವಹಿಸಿದ ಬೊಲ್ಸಾನಾರೋ ಈಗ ಜನಾಕ್ರೋಶಕ್ಕೆ ತುತ್ತಾಗಿದ್ದಾರೆ.

ಬೊಲ್ಸಾನಾರೋ ಅವರ ಜನಪ್ರಿಯತೆ ಕೊರೋನಾ ಸಾಂಕ್ರಾಮಿಕದ ಕಾಲದಲ್ಲಿ ತೀವ್ರವಾಗಿ ಕುಸಿತಕಂಡಿದೆ. ಇದುವರೆಗೆ ಬ್ರೆಜಿಲ್‌ ನಲ್ಲಿ 4,60,000 ಕ್ಕೂ ಹೆಚ್ಚು ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೊಲ್ಸೊನಾರೋ ಅವರ ಕೊರೋನಾ ಸೋಂಕಿನ ಬಗೆಗಿನ ತೀವ್ರ ನಿರ್ಲಕ್ಷ್ಯ, ಉಡಾಫೆಯ ಹೇಳಿಕೆ ಮತ್ತು ಕೊರೋನಾ ಲಸಿಕೆ ಬಗೆಗಿನ ಅಸಡ್ಡೆಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರ ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಗಳು ಇದುವರೆಗೆ ಕಟು ಶಬ್ಧಗಳಲ್ಲಿ ಎಚ್ಚರಿಸುತ್ತ ಬಂದಿವೆ. ಇದಾವುದನ್ನು ಲೆಕ್ಕಿಸದೇ ಬೊಲ್ಸೆನಾರೋ ತಮ್ಮ ಎಂದಿನ ಸುಳ್ಳು ಮತ್ತು ಉಡಾಫೆಯ ಹೇಳಿಕೆಗಳನ್ನು ಮುಂದುವರೆಸಿದ್ದರು. ಕಡ್ಡಾಯ ಮಾಸ್ಕ್‌ ಧರಿಸುವ ನಿಯಮಗಳನ್ನು ಬ್ರೆಜಿಲ್‌ ನಲ್ಲಿ ಬೊಲ್ಸೆನಾರೋ ಇತ್ತೀಚೆಗೆ ತೆಗೆದುಹಾಕಿದ್ದರು. ಬೊಲ್ಸೆನಾರೋ ಈ ನಡೆಯ ವಿರುದ್ಧ ಅಂತಾರಷ್ಟ್ರೀಯ ಸಮುದಾಯ ತೀವ್ರವಾದ ಆಕ್ಷೇಪಗಳನ್ನು ಹೊರಹಾಕಿತ್ತು. ಇದೀಗ ತಮ್ಮ ಅಧ್ಯಕ್ಷನ ನಡೆಯಿಂದ ಬೇಸತ್ತು ಬ್ರೆಜಿಲ್‌ ಜನತೆ ಬೀದಿಗಿಳಿದಿದ್ದಾರೆ.

ಈಗ ಬ್ರೆಜಿಲ್ ಜನತೆ ತಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು. ಇದರ ಹೊರತಾಗಿ ನಮಗೆ ಬೇರೆ ದಾರಿಯಿಲ್ಲ. ಇವರೆಡರಲ್ಲಿ ಉತ್ತಮವಾಗಿರುವುದನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಪ್ರತಿಭಟಸದೆ ಮನೆಯಲ್ಲಿದ್ದರೂ ಸೋಂಕಿನಿಂದ ಸಾಯುತ್ತೇವೆ. ಹಾಗಾಗಿ ಬೊಲ್ಸೆನಾರೋ ವಿರುದ್ಧ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾನಿರತರು ಕಿಡಿಕಾರಿದ್ದಾರೆ.

ಬೊಲ್ಸೆನಾರೋ ವಿರುದ್ಧ ಬ್ರೆಜಿಲ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನೇತೃತ್ವವನ್ನು ಅಲ್ಲಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು , ಕಾರ್ಮಿಕ ಸಂಘಟನೆಗಳು ವಹಿಸಿಕೊಂಡಿವೆ. ಮೇ 29 ಶನಿವಾರ ಬ್ರೆಝಿಲ್‌ ರಾಜಧಾನಿ ಬ್ರೆಝೆಲಿಯಾ ಮತ್ತು ರಿಯೋ ಡಿ ಜನೈರೋ ದಲ್ಲಿ ನಡೆದ ಪ್ರತಿಭಟನೆಗಳು ಅತ್ಯಂತ ಶಾಂತವಾಗಿದ್ದವು. ಆದರೆ ದೇಶದ ಈಶಾನ್ಯ ಭಾಗದ ನಗರಗಳಾದ ರೆಸಿಫೆ ಮುಂತಾದ ಕಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಮುಂದಾಗಿರುವ ಬೊಲ್ಸೆನಾರೋ ಸರ್ಕಾರ ಪ್ರತಿಭಟನಾಕಾರರ ಮೇಲೆ ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಸಿಡಿಸಿದೆ.

ಬ್ರೆಝಿಲ್‌ ನ ಅತಿದೊಡ್ಡ ನಗರ ಸಾವೋ ಪೋಲೋ ದ ಬೀದಿಗಳು ಈಗ ಸಾವಿರಾರು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಸಾವಿರಾರು ಮಾಸ್ಕ್‌ ಧರಿಸಿದ ಪ್ರತಿಭಟನಾಕಾರರು ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಬೃಹತ್‌ ಬಲೂನುಗಳನ್ನು ಪ್ರತಿಭಟನಾಕಾರರು ಆಗಸದಲ್ಲಿ ಹಾರಿ ಬಿಟ್ಟಿದ್ಧಾರೆ.

ಕೋವಿಡ್‌ ಕುರಿತಾಗಿ ಉಡಾಫೆಯ ಹೇಳಿಕೆ ನೀಡುತ್ತ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸದೆ ಲಕ್ಷಾಂತರ ಅಮೆರಿಕ್ಕನ್ನರ ಸಾವಿಗೆ ಕಾರಣರಾದ ಡೊನಾಲ್ಡ್‌ ಟ್ರಂಪ್‌ ಅವರನ್ನು ಅಮೆರಿಕಾದ ಜನರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಟ್ರಂಪ್‌ ಅವರ ಆತ್ಮೀಯ ಸ್ನೇಹಿತರೆಂದು ಹೇಳಲಾಗುವ ಬೊಲ್ಸೆನಾರೋ ವಿರುದ್ಧವೂ ಬ್ರೆಝಿಲ್‌ ನಾಗರಿಕರಲ್ಲಿ ಈಗ ಆಕ್ರೋಶ ಭುಗಿಲೆದ್ದಿದೆ. ಟ್ರಂಪ್‌ ಮತ್ತು ಬೊಲ್ಸೆನಾರೋ ಇಬ್ಬರೂ ತೋವ್ರ ಬಲಪಂಥೀಯವಾದಿ ನಾಯಕರು ಎಂಬುದು ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಚಾರ. ಇನ್ನು ಭಾರತದಲ್ಲಿಯೂ ಇದೇ ಪರಿಸ್ಥಿತಿ ಏರ್ಪಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಾ ಸಾಗಿದೆ.


ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...