Homeಅಂತರಾಷ್ಟ್ರೀಯಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ಈಗ ನಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು.

- Advertisement -
- Advertisement -

ಬ್ರೆಜಿಲ್‌ನ ಜನತೆ ತಮ್ಮ ದೇಶದ ಅಧ್ಯಕ್ಷ ಬೊಲ್ಸೆನಾರೋ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಕೋವಿಡ್‌ ಸಾಂಕ್ರಾಮಿಕದ ಕಾಲದಲ್ಲಿ ಸರ್ಕಾರದ ನಿರ್ಲಕ್ಷ ಮತ್ತು ವೈಫಲ್ಯಗಳು ಬ್ರೆಜಿಲ್‌ ಜನರನ್ನು ಸಿಡಿದೇಳುವಂತೆ ಮಾಡಿದೆ.

ಬ್ರೆಜಿಲ್‌ ದೇಶದ 16 ನಗರಳಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ʼಬೊಲ್ಸೆನಾರೋ ಕೆಳಗಿಳಿಸಿʼ ʼಬೊಲ್ಸೆನಾರೋ ಪದಚ್ಯುತಗೊಳಿಸಿʼ ಎಂಬ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ಧ ಪ್ರತಿಭಟಿಸತೊಡಗಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ತಜ್ಞರ ಎಚ್ಚರಿಕೆಗಳನ್ನೆಲ್ಲ ಗಾಳಿಗೆ ತೂರಿ ನಿರ್ಲಕ್ಷ ವಹಿಸಿದ ಬೊಲ್ಸಾನಾರೋ ಈಗ ಜನಾಕ್ರೋಶಕ್ಕೆ ತುತ್ತಾಗಿದ್ದಾರೆ.

ಬೊಲ್ಸಾನಾರೋ ಅವರ ಜನಪ್ರಿಯತೆ ಕೊರೋನಾ ಸಾಂಕ್ರಾಮಿಕದ ಕಾಲದಲ್ಲಿ ತೀವ್ರವಾಗಿ ಕುಸಿತಕಂಡಿದೆ. ಇದುವರೆಗೆ ಬ್ರೆಜಿಲ್‌ ನಲ್ಲಿ 4,60,000 ಕ್ಕೂ ಹೆಚ್ಚು ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಬೊಲ್ಸೊನಾರೋ ಅವರ ಕೊರೋನಾ ಸೋಂಕಿನ ಬಗೆಗಿನ ತೀವ್ರ ನಿರ್ಲಕ್ಷ್ಯ, ಉಡಾಫೆಯ ಹೇಳಿಕೆ ಮತ್ತು ಕೊರೋನಾ ಲಸಿಕೆ ಬಗೆಗಿನ ಅಸಡ್ಡೆಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಇತರ ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಗಳು ಇದುವರೆಗೆ ಕಟು ಶಬ್ಧಗಳಲ್ಲಿ ಎಚ್ಚರಿಸುತ್ತ ಬಂದಿವೆ. ಇದಾವುದನ್ನು ಲೆಕ್ಕಿಸದೇ ಬೊಲ್ಸೆನಾರೋ ತಮ್ಮ ಎಂದಿನ ಸುಳ್ಳು ಮತ್ತು ಉಡಾಫೆಯ ಹೇಳಿಕೆಗಳನ್ನು ಮುಂದುವರೆಸಿದ್ದರು. ಕಡ್ಡಾಯ ಮಾಸ್ಕ್‌ ಧರಿಸುವ ನಿಯಮಗಳನ್ನು ಬ್ರೆಜಿಲ್‌ ನಲ್ಲಿ ಬೊಲ್ಸೆನಾರೋ ಇತ್ತೀಚೆಗೆ ತೆಗೆದುಹಾಕಿದ್ದರು. ಬೊಲ್ಸೆನಾರೋ ಈ ನಡೆಯ ವಿರುದ್ಧ ಅಂತಾರಷ್ಟ್ರೀಯ ಸಮುದಾಯ ತೀವ್ರವಾದ ಆಕ್ಷೇಪಗಳನ್ನು ಹೊರಹಾಕಿತ್ತು. ಇದೀಗ ತಮ್ಮ ಅಧ್ಯಕ್ಷನ ನಡೆಯಿಂದ ಬೇಸತ್ತು ಬ್ರೆಜಿಲ್‌ ಜನತೆ ಬೀದಿಗಿಳಿದಿದ್ದಾರೆ.

ಈಗ ಬ್ರೆಜಿಲ್ ಜನತೆ ತಮ್ಮ ಮುಂದೆ ಇರುವುದು ಎರಡೇ ಆಯ್ಕೆ. ಒಂದು ಕೊರೋನಾ ಸೋಂಕಿನಿಂದ ಮರಣವನ್ನಪ್ಪುವುದು. ಇನ್ನೊಂದು ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಅಧ್ಯಕ್ಷ ಜೈರ್‌ ಬೊಲ್ಸನಾರೋ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು. ಇದರ ಹೊರತಾಗಿ ನಮಗೆ ಬೇರೆ ದಾರಿಯಿಲ್ಲ. ಇವರೆಡರಲ್ಲಿ ಉತ್ತಮವಾಗಿರುವುದನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಪ್ರತಿಭಟಸದೆ ಮನೆಯಲ್ಲಿದ್ದರೂ ಸೋಂಕಿನಿಂದ ಸಾಯುತ್ತೇವೆ. ಹಾಗಾಗಿ ಬೊಲ್ಸೆನಾರೋ ವಿರುದ್ಧ ಪ್ರತಿಭಟನೆಗೆ ಇಳಿದಿದ್ದೇವೆ ಎಂದು ಪ್ರತಿಭಟನಾನಿರತರು ಕಿಡಿಕಾರಿದ್ದಾರೆ.

ಬೊಲ್ಸೆನಾರೋ ವಿರುದ್ಧ ಬ್ರೆಜಿಲ್‌ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನೇತೃತ್ವವನ್ನು ಅಲ್ಲಿನ ವಿರೋಧ ಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು , ಕಾರ್ಮಿಕ ಸಂಘಟನೆಗಳು ವಹಿಸಿಕೊಂಡಿವೆ. ಮೇ 29 ಶನಿವಾರ ಬ್ರೆಝಿಲ್‌ ರಾಜಧಾನಿ ಬ್ರೆಝೆಲಿಯಾ ಮತ್ತು ರಿಯೋ ಡಿ ಜನೈರೋ ದಲ್ಲಿ ನಡೆದ ಪ್ರತಿಭಟನೆಗಳು ಅತ್ಯಂತ ಶಾಂತವಾಗಿದ್ದವು. ಆದರೆ ದೇಶದ ಈಶಾನ್ಯ ಭಾಗದ ನಗರಗಳಾದ ರೆಸಿಫೆ ಮುಂತಾದ ಕಡೆ ಪ್ರತಿಭಟನೆಗಳು ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿವೆ. ಪ್ರತಿಭಟನೆಗಳನ್ನು ಹತ್ತಿಕ್ಕಲು ಮುಂದಾಗಿರುವ ಬೊಲ್ಸೆನಾರೋ ಸರ್ಕಾರ ಪ್ರತಿಭಟನಾಕಾರರ ಮೇಲೆ ಅಶ್ರವಾಯು ಮತ್ತು ಜಲ ಫಿರಂಗಿಗಳನ್ನು ಸಿಡಿಸಿದೆ.

ಬ್ರೆಝಿಲ್‌ ನ ಅತಿದೊಡ್ಡ ನಗರ ಸಾವೋ ಪೋಲೋ ದ ಬೀದಿಗಳು ಈಗ ಸಾವಿರಾರು ಪ್ರತಿಭಟನಾಕಾರರಿಂದ ತುಂಬಿಹೋಗಿದೆ. ಸಾವಿರಾರು ಮಾಸ್ಕ್‌ ಧರಿಸಿದ ಪ್ರತಿಭಟನಾಕಾರರು ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಬೊಲ್ಸೆನಾರೋ ಅವರನ್ನು ಹಾವಿನಂತೆ ಚಿತ್ರಿಸಿದ ಬೃಹತ್‌ ಬಲೂನುಗಳನ್ನು ಪ್ರತಿಭಟನಾಕಾರರು ಆಗಸದಲ್ಲಿ ಹಾರಿ ಬಿಟ್ಟಿದ್ಧಾರೆ.

ಕೋವಿಡ್‌ ಕುರಿತಾಗಿ ಉಡಾಫೆಯ ಹೇಳಿಕೆ ನೀಡುತ್ತ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸದೆ ಲಕ್ಷಾಂತರ ಅಮೆರಿಕ್ಕನ್ನರ ಸಾವಿಗೆ ಕಾರಣರಾದ ಡೊನಾಲ್ಡ್‌ ಟ್ರಂಪ್‌ ಅವರನ್ನು ಅಮೆರಿಕಾದ ಜನರು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಟ್ರಂಪ್‌ ಅವರ ಆತ್ಮೀಯ ಸ್ನೇಹಿತರೆಂದು ಹೇಳಲಾಗುವ ಬೊಲ್ಸೆನಾರೋ ವಿರುದ್ಧವೂ ಬ್ರೆಝಿಲ್‌ ನಾಗರಿಕರಲ್ಲಿ ಈಗ ಆಕ್ರೋಶ ಭುಗಿಲೆದ್ದಿದೆ. ಟ್ರಂಪ್‌ ಮತ್ತು ಬೊಲ್ಸೆನಾರೋ ಇಬ್ಬರೂ ತೋವ್ರ ಬಲಪಂಥೀಯವಾದಿ ನಾಯಕರು ಎಂಬುದು ಇಲ್ಲಿ ಗಮನಿಸಬೇಕಾದ ಇನ್ನೊಂದು ಮುಖ್ಯ ವಿಚಾರ. ಇನ್ನು ಭಾರತದಲ್ಲಿಯೂ ಇದೇ ಪರಿಸ್ಥಿತಿ ಏರ್ಪಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನೇ ದಿನೇ ಕುಸಿಯುತ್ತಾ ಸಾಗಿದೆ.


ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...