Homeಕರೋನಾ ತಲ್ಲಣಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕೊರೋನಾದಿಂದ ಚೇತರಿಸಿಕೊಂಡ ಮಹಿಳೆಗೆ ಆಸ್ಪತ್ರೆಯು ವಾಹನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ 25 ಕಿ.ಮೀ ಕಾಲ್ನಡಿಗೆಯಲ್ಲಿ ಮನೆಗೆ ಹೊರಟ ಮಹಿಳೆಯನ್ನು ಹಿಂಬಾಲಿಸಿದ ಯುವಕರು ಅತ್ಯಾಚಾರಗೈದಿದ್ದಾರೆ..

- Advertisement -
- Advertisement -

ಕೋವಿಡ್ ಮನುಷ್ಯರನ್ನು ಮಾನವೀಯಗೊಳಿಸಬೇಕಿತ್ತು. ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿ ದಾರಿಯಲ್ಲಿ ನಡೆಯಲು ದೊಡ್ಡ ಪಾಠವಾಗಬೇಕಿತ್ತು. ಆದರೆ ಈ ಸಮಾಜ ಅದಕ್ಕೆ ತದ್ವಿರುದ್ಧವಾಗಿಯೇ ವರ್ತಿಸುತ್ತಿದೆ. ಕೋವಿಡ್ ಸಾಂಕ್ರಾಮಿಕದಿಂದ ಜಗತ್ತೆ ತತ್ತರಿಸಿದ್ದರು ಸಹ ಕೆಲವರು ತಮ್ಮ ವಿಕೃತತೆಯನ್ನು ಮುಂದುವರೆಸಿರುವುದು ಈ ಘಟನೆ ಸಾಕ್ಷಿಯಾಗಿದೆ. ಕೊರೋನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಮರಳುತ್ತಿದ್ದ ಮಹಿಳೆಯನ್ನು ಯುವಕರ ಗುಂಪು ಬೆನ್ನತ್ತಿ ಸಾಮೂಹಿಕವಾಗಿ ಅತ್ಯಾಚಾರಗೈದ ಬರ್ಬರ ಘಟನೆ ಅಸ್ಸಾಂನ ಚರೈದಿಯೋ ಜಿಲ್ಲೆಯಲ್ಲಿ 29 ಮೇ ಶನಿವಾರ ಸಂಜೆ ಏಳುಗಂಟೆ ಹೊತ್ತಿಗೆ ನಡೆದಿದೆ.

ಬೊರ್ಹಾತ್ ನಾಗರಮತಿ ಪ್ರದೇಶದ ಚಹ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಐಸೊಲೇಶನ್ ನಲ್ಲಿದ್ದ ಸಂತ್ರಸ್ತೆ, ಆಕೆಯ ಪತಿ ಮತ್ತು ಮಗಳು ಆರೋಗ್ಯ ಬಿಗಡಾಯಿಸಿದ ಪರಿಣಾಮ ಸಾಪೇಕಾತಿ ಮಾಡೆಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯಿಂದ ಗುಣಮುಖರಾದ ಮಹಿಳೆಯ ಪತಿ ಮೇ 27 ಗುರುವಾರದಂದು ಆಸ್ಪತ್ರೆಯಿಂದ ಮರಳಿದ್ದರು. ಶನಿವಾರ ಏಪ್ರಿಲ್ 29 ರಂದು ಮಹಿಳೆ ಮತ್ತು ಮಗಳು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾದರು.

ವ್ಯವಸ್ಥೆಯ ಕ್ರೌರ್ಯವೋ ಅಥವಾ ಮಹಿಳೆಯ ದುರಾದೃಷ್ಟವೋ ಅಸ್ಸಾಂ ನಲ್ಲಿ ಕೊರೋನಾ ಕರ್ಪ್ಯೂ ಜಾರಿಯಿರುವ ಕಾರಣ ಆಸ್ಪತ್ರೆಯಿಂದ ಮಹಿಳೆ ಮತ್ತು ಆಕೆಯ ಮಗಳಿಗೆ ಮನೆಗೆ ಮರಳಲು ಯಾವುದೇ ವಾಹನ ವ್ಯವಸ್ಥೆ ಇರಲಿಲ್ಲ. ಮಹಿಳೆ ಆಸ್ಪತ್ರೆಯವರ ಬಳಿ ತನ್ನ ಮನೆ ಆಸ್ಪತ್ರೆಯಿಂದ 25 ಕಿಲೋ ಮೀಟರ್ ದೂರವಿದೆ. ದಯವಿಟ್ಟು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆದರೆ ಆಸ್ಪತ್ರೆಯವರು ಮಹಿಳೆ ಮನವಿಗೆ ಸ್ಪಂದಿಸದೇ ಅಮಾನವೀಯವಾಗಿ ವರ್ತಿಸಿದರು. ತನ್ನ ಮನೆಗೆ ತೆರಳಲು ಬೇರೆ ಗತಿಯಿಲ್ಲದ ಮಹಿಳೆ ತನ್ನ ಮಗಳ ಜೊತೆ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮಹಿಳೆಯ ಬೆನ್ನತ್ತಿ ಆಕೆಯ ಮಗಳ ಮುಂದೆಯೇ ಬರ್ಬರವಾಗಿ ಅತ್ಯಾಚಾರಗೈದಿದ್ದಾರೆ.

ಶನಿವಾರ, ಮೇ 29 ರ ಸಂಜೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡಿದ ಸಂತ್ರಸ್ತೆಯ ಮಗಳು ಹತ್ತಿರದ ಗ್ರಾಮಸ್ಥರಿಗೆ ವಿಷಯವನ್ನು ತಿಳಿಸಿದ್ದಾಳೆ. ಗ್ರಾಮಸ್ಥರು ಪೊಲೀಸರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.

ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಪೊಲೀಸರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಮಹಿಳೆಯು ಚಿಂತಾಜನಕ ಸ್ಥಿತಿಯನ್ನು ತಲುಪಿದ್ದರು. ಸದ್ಯ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಚರೈದಿಯೋ ಜಿಲ್ಲಾ ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರವಾದ ಶೋಧ ನಡೆಸಿದ್ದಾರೆ. ಈ ನಡುವೆ ಸ್ಥಳೀಯ ಶಾಸಕ ಧರ್ಮೇಶ್ವರ್ ಕೋನ್ವಾರ್ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಬರ್ಬರ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಂತ ಪರಿಸ್ಥಿತಿಯಲ್ಲೂ ಮಹಿಳೆಯ ಮನವಿಗೆ ಸ್ಪಂದಿಸದೇ ಆ್ಯಂಬುಲೆನ್ಸ್ ಅಥವಾ ಯಾವುದೇ ವಾಹನ ವ್ಯವಸ್ಥೆ ಕಲ್ಪಿಸದ ಆಸ್ಪತ್ರೆಯ ಅಮಾನವೀಯ ಕ್ರೌರ್ಯವೇ ಘಟನೆಗೆ ಕಾರಣವೆಂದು ದೂರಿದ್ದಾರೆ. ಜೊತೆಗೆ ಆಸ್ಪತ್ರೆ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೇಶಾದ್ಯಂತ ಜನರು ಕೊರೋನಾ ಸಾಂಕ್ರಾಮಿಕದಿಂದ ಸಾವು ನೋವಿನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬಸ್ಥರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ನಡುವೆ ಕನಿಷ್ಟ ಅಂತಃಕರಣವಿಲ್ಲದ ವ್ಯವಸ್ಥೆ ತನ್ನ ಅಮಾನವೀಯ ಕ್ರೌರ್ಯದಿಂದ ಮಹಿಳೆಯನ್ನು ಇಂತಹ ದುಸ್ಥಿತಿಗೆ ದೂಡಿದೆ. ವ್ಯವಸ್ಥೆಯ ಕ್ರೌರ್ಯದ ನಡುವೆ ಮನುಷ್ಯನ ನೀಚತನ ಸೇರಿ ನಡೆಯುವ ಹೇಯ ಅಮಾನವೀಯ ಕೃತ್ಯಕ್ಕೆ ಅಸ್ಸಾಂ ನ ಮಹಿಳೆ ಒಳಗಾಗಿದ್ದಾರೆ. ಇಂತಹ ನೀಚ ಕೃತ್ಯಕ್ಕೆ ಮುಂದಾದ ಆರೋಪಿಗಳನ್ನು ಬಂಧಿಸಬೇಕು. ವ್ಯವಸ್ಥೆಯ ಕ್ರೌರ್ಯವನ್ನು ನಿಲ್ಲಿಸಲು ಸರ್ಕಾರಗಳು ಮುಂದಾಗಿ ಒಂದಷ್ಟು ಮಾನವೀಯ ಅಂತಃಕರಣದಿಂದ ಜನರ ಜೀವದ ರಕ್ಷಣೆಗೆ ಮುಂದಾಗ ಬೇಕಿದೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...