Homeಮುಖಪುಟಉತ್ತರ ಪ್ರದೇಶದಲ್ಲಿ ಮೃತದೇಹಗಳಿಗೆ ಸಿಗದ ಗೌರವ, ಕಸದ ವಾಹನದಲ್ಲಿ ಸ್ಮಶಾನಕ್ಕೆ ರವಾನೆ

ಉತ್ತರ ಪ್ರದೇಶದಲ್ಲಿ ಮೃತದೇಹಗಳಿಗೆ ಸಿಗದ ಗೌರವ, ಕಸದ ವಾಹನದಲ್ಲಿ ಸ್ಮಶಾನಕ್ಕೆ ರವಾನೆ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಕೊರೊನಾ ಸಾವುಗಳ ಸಂಖ್ಯೆಯಲ್ಲಿ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ ಎಂಬ ವಿಚಾರ ಸಾಕಷ್ಟು ಚರ್ಚೆಗೆ ಈಡು ಮಾಡಿದೆ. ಇವುಗಳ ಮಧ್ಯೆಯೇ ಮೃತದೇಹಗಳಿಗೆ ಕನಿಷ್ಠ ಗೌರವ ಕೂಡ ದೊರಕುತ್ತಿಲ್ಲ ಎಂಬುದು ಹಲವು ವಿಡಿಯೊ ದೃಶ್ಯಗಳು ಸ್ಪಷ್ಟಪಡಿಸುತ್ತಿವೆ.

ಕಳೆದ ಎರಡು ದಿನಗಳ ಹಿಂದಷ್ಟೇ ಕೋವಿಡ್‌ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಇಬ್ಬರು ಯುವಕರು ನದಿಗೆ ಎಸೆಯುತ್ತಿರುವ ವಿಡಿಯೋ ಒಂದು ಮೇ 30 ರ ಮಧ್ಯಾಹ್ನದ ಹೊತ್ತಿಗೆ ಇಂಟರ್‌ನೆಟ್‌ ನಲ್ಲಿ ಹರಿದಾಡಲು ಆರಂಭವಾಗಿತ್ತು. ಈಗ ಮೃತದೇಹವನ್ನು ಕನಿಷ್ಠ ಗೌರವ ನೀಡದೇ ಕಸದ ವಾಹನಕ್ಕೆ ಎಸೆಯುತ್ತಿರುವ ವಿಡಿಯೊ ವೈರಲ್ ಆಗಿದೆ.

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ವಿಡಿಯೊ ದೃಶ್ಯ ಇದಾಗಿದೆ. ಇದರಲ್ಲಿ ಇಬ್ಬರು ಸ್ಥಳೀಯ ಪೊಲೀಸ್ ಘಟಕದ ಸದಸ್ಯರು, 50 ವರ್ಷದ ವ್ಯಕ್ತಿಯ ಮೃತದೇಹದ ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ರವಾನಿಸಬೇಕಾದರೆ,  ಶವವನ್ನು ಕಸದ ಟ್ರಕ್‌ಗೆ ಎಸೆಯುತ್ತಿರುವ ದೃಶ್ಯಗಳಿವೆ.

ಲಕ್ನೋದಿಂದ 250 ಕಿ.ಮೀ ದೂರದಲ್ಲಿರುವ ಮಹೋಬಾದ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಕುರಿತು ಆಕ್ರೋಶ ವ್ಯಕ್ತವಾದ ನಂತರ, ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ಮಹೋಬಾದ ಹಿರಿಯ ಪೊಲೀಸ್ ಅಧಿಕಾರಿ ಆರ್.ಕೆ.ಗೌತಮ್ ತನಿಖೆಗೆ ಆದೇಶಿಸಿದ್ದು, 24 ಗಂಟೆಗಳ ಒಳಗೆ ಪ್ರಕರಣದ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚನೆ ನೀಡಿದ್ದಾರೆ.

ಆಸ್ಪತ್ರೆಯ ಶವಾಗಾರದ ಬಳಿ ಪೊಲೀಸರು ಆ ವ್ಯಕ್ತಿಯ ದೇಹವನ್ನು ಕಪ್ಪು ಬಣ್ಣದ ಕವರ್‌ನಲ್ಲಿ ಸುತ್ತಿದ್ದ ಮೃತದೇಹವನ್ನು, ಹಿರಿಯ ಪೋಲೀಸ್ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ಕಸದ ವಾಹನಕ್ಕೆ ಎಸೆಯುತ್ತಾರೆ. ಈ ದೃಶ್ಯಗಳನ್ನು ಮೊಬೈಲ್ ಫೋನ್‌ನಲ್ಲಿ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.

ಮೃತ 50 ವರ್ಷದ ವ್ಯಕ್ತಿ ದೆಹಲಿಯಲ್ಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ತನ್ನ ಗ್ರಾಮಕ್ಕೆ ಮರಳಿದ್ದರು. ’ಹಲವು ರೋಗಲಕ್ಷಣಗಳಿದ್ದ ಅವರನ್ನು ಆಸ್ಪತ್ರೆಗೂ ಸೇರಿಸಲು ಕರೆ ತಂದಿದ್ದರು. ಆದರೆ, ಚಿಕಿತ್ಸೆ ಪಡೆಯುವ ಮೊದಲೇ ಅವರು ನಿಧನರಾದರು’ ಎಂದು ಆ ಮೃತರ ಮಗ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತ, ಸ್ಥಳೀಯ ಆಡಳಿತದ ಮೂಲಗಳು ಮೃತ ವ್ಯಕ್ತಿಯ ಕುಟುಂಬವನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸಿವೆ. ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ತೆಗೆದುಕೊಳ್ಳಲು ಕುಟುಂಬ ನಿರಾಕರಿಸಿತ್ತು. ನಂತರ ಮೃತನ ಮಗನೇ ಕಸದ ವಾಹನಕ್ಕೆ ಮೃತದೇಹವನ್ನು ಸಾಗಿಸಲು ವ್ಯವಸ್ಥೆ ಮಾಡಿದ್ದಾನೆ ತಿಳಿಸಿವೆ.

ಮೇ ತಿಂಗಳ ಮಧ್ಯದಲ್ಲಿ ಉತ್ತರ ಪ್ರದೇಶದ ಗಂಗಾ ಸೇರಿದಂತೆ ಇತರ ನದಿಗಳಲ್ಲಿ ಮೃತ ದೇಹಗಳು ತೇಲಿ ಬರುತ್ತಿರುವ ಘಟನೆಗಳು ನಡೆಯುತ್ತಿವೆ. ಮೃತದೇಹಗಳಿಗೆ ಸರಿಯಾದ ಗೌರವ ಕೂಡ ದೊರಕುತ್ತಿಲ್ಲ. ಆದರೆ, ಸರ್ಕಾರ ಮಾತ್ರ ರಾಜ್ಯದಲ್ಲಿಯ ಕೊರೊನಾ ಪ್ರಕರಣ ಮತ್ತು ಸಾವುಗಳ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಹಲವು ವರದಿಗಳು ತಿಳಿಸಿವೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೊರೊನಾಗೆ ಬಲಿಯಾಗುತ್ತಿರುವವರ ನಿಜವಾದ ಪ್ರಮಾಣವೆಷ್ಟು? ಭಾರತವನ್ನೇ ಬೆಚ್ಚಿ ಬೀಳಿಸುವಂತಿದೆ ಈ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...