Homeಮುಖಪುಟಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

- Advertisement -
- Advertisement -

20, ಮೇ 2021ರಂದು ಯುಜಿಸಿ ಒಂದು ಸುತ್ತೋಲೆ ಹೊರಡಿಸಿ ‘ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಶೇ. 40% ಪ್ರಮಾಣದಲ್ಲಿ ಆನ್ ಲೈನ್ ತರಗತಿಗಳನ್ನು ತೆಗೆದುಕೊಳ್ಳಬೇಕು ಮತ್ತು ಇದರ ಜೊತೆಗೆ ಈಗಾಗಲೇ ಇರುವ ಸ್ವಯಂ ಎನ್ನುವ ಆನ್ ಲೈನ್ ವೇದಿಕೆ ಮೂಲಕವೂ ವಾರಕ್ಕೆ ಹಲವು ಗಂಟೆಗಳ ಕಾಲ ಪಾಠ ಮಾಡಬೇಕು’ ಎಂದು ಆದೇಶ ಹೊರಡಿಸಿದೆ. ಬಹುಶಃ ಪದವಿ, ವಿವಿಗಳಲ್ಲಿ ಬೋಧಿಸುತ್ತಿರುವ ಪ್ರಾಧ್ಯಾಪಕರು ಇದನ್ನು ಗಮನಿಸಿದಂತಿಲ್ಲ, ಗಮನಿಸಿಯೂ ಈಗಾಗಲೇ ಒಂದು ವರ್ಷದಿಂದ ಆನ್ ಲೈನ್ ಕ್ಲಾಸ್ ಮಾಡುತ್ತಿದ್ದೇವೆ, ಇದನ್ನು ಮುಂದುವರಿಸಿದರಾಯಿತು ಎನ್ನುವ ಭಾವದಲ್ಲಿರಬಹುದು. ಇನ್ನುಳಿದಂತೆ ಇದರ ಅಪಾಯದ ಅರಿವಿರುವವರು ಏನೂ ಮಾಡಲಾಗದೆ ಅಸಹಾಯಕತೆಯಲ್ಲಿದ್ದಾರೆ.

 

ಈಗ ಆನ್ ಲೈನ್ ನ ಸಾಧಕ-ಬಾಧಕಗಳ ಚರ್ಚೆ ಸದ್ಯಕ್ಕೆ ಪಕ್ಕಕ್ಕೆ ಇಡೋಣ. ಈ ಆನ್ ಲೈನ್ ಕ್ಲಾಸ್ ಗಳ ಸಾಧ್ಯತೆ ಕುರಿತು ಪರಿಶೀಲಿಸೋಣ..

2018-19ರ ಅಧಿಕೃತ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 993 ವಿಶ್ವವಿದ್ಯಾಲಯಗಳು, 39,000 ಕಾಲೇಜುಗಳು, 3.73 ಕೋಟಿ ವಿದ್ಯಾರ್ಥಿಗಳು ಮತ್ತು 14.13 ಲಕ್ಷ ಪ್ರಾಧ್ಯಾಪಕರಿದ್ದಾರೆ.

ಈಗ ಆನಲೈನ್ ತರಗತಿಗಳು ಮತ್ತು ಮುಂದಿನ ಶಿಕ್ಷಣಕ್ರಮ್ಕೆ ಸಂಬಂಧಪಟ್ಟಂತೆ ಯುಜಿಸಿಯ ಮುಂದೆ ಕೆಲವು ಮೂಲಭೂತ ಪ್ರಶ್ನೆಗಳಿವೆ. ಈ ಪ್ರಶ್ನೆಗಳಿಗೆ ಉತ್ತರ ದೊರೆಯದೇ ಹೊಸ ಶಿಕ್ಷಣ ಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

1. ಕೇಂದ್ರ ಸರಕಾರವು ಶಿಕ್ಷಣಕ್ಕೆ ಜಿಡಿಪಿಯ 1.9% ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 6.2% ಪ್ರಮಾಣದಲ್ಲಿ, ರಾಜ್ಯ ಸರಕಾರಗಳು ಜಿಡಿಪಿಯ 3.2 % ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 11% ಪ್ರಮಾಣದಲ್ಲಿ ಹಣವನ್ನು ಮೀಸಲಿಡುತ್ತಿವೆ. ಈ ಮೊತ್ತದಿಂದ ಆನ್ ಲೈನ್ ತರಗತಿಗೆ ಶೇ. 10% ಪ್ರಮಾಣದಲ್ಲಿ ಮಾತ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಾದ್ಯ. ಮಿಕ್ಕ 85% ಸೌಲಭ್ಯವನ್ನು ಯಾರು ಪೂರೈಸುತ್ತಾರೆ?

2. ಈ ನಿರ್ಧಾರಕ್ಕೆ ಬರುವುದಕ್ಕಿಂತ ಮೊದಲು ಇದರ ಹಕ್ಕುದಾರರಾದ ವಿದ್ಯಾರ್ಥಿಗಳ ಸಂಘಟನೆಗಳು, ಪೋಷಕರು, ಪ್ರಾಧ್ಯಾಪಕ ಸಂಘಟನೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೀರಾ? ಅವರ ಅಭಿಪ್ರಾಯ ಸಂಗ್ರಹಿಸಿದ್ದೀರಾ? ಹೌದು ಎಂದಾದರೆ ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಯುಜಿಸಿಯು ಪ್ರಕಟಿಸಬೇಕು.

3. ಗ್ರಾಮೀಣ ಬಾಗದಲ್ಲಿ ಕನಿಷ್ಠ 18 ತಾಸುಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಒದಗಿಸುವಿರಾ? Hardware and software ಸೌಲಭ್ಯಗಳಿವೆಯೇ?

4. ವ್ಯಾಸಂಗ ಮಾಡುತ್ತಿರುವ 3.73 ಕೋಟಿ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಇದೆಯೇ? ಇದರ ದತ್ತಾಂಶ ಸಂಗ್ರಹಿಸಿದ್ದೀರಾ?

5. ಪ್ರತಿ ಗ್ರಾಮ, ಹೋಬಳಿಗೆ 4ಜಿ ನೆಟ್ ವರ್ಕ್ ಸಂಪರ್ಕ ಸತತವಾಗಿ ಯಾವುದೇ ಅಡೆತಡೆಗಳಿಲ್ಲದೆ ದೊರಕುವುದೇ? ಇದನ್ನು ಖಾತ್ರಿ ಪಡಿಸಿಕೊಂಡಿದ್ದೀರಾ?

6. ಎಲ್ಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಗಳಿವೆಯೇ? ಆನ್ ಲೈನ್ ಸಂಪರ್ಕ ಮತ್ತು ತಂತ್ರಜ್ಞಾನದ ಪೂರೈಕೆ ಸಮರ್ಪವಾಗಿದೆಯೇ?

7. ಆನ್ ಲೈನ್ ಕ್ಲಾಸ್ ಗಳಿಗೆ ಅಗತ್ಯವಾದ ‘ ವ್ಯಾಸಂಗ ಕ್ರಮ'(pedagogy) ಎಲ್ಲಿದೆ? Study materials ಎಲ್ಲಿದೆ? ಈ ಕುರಿತು ತಜ್ಞರ ಸಮಿತಿ ರಚಿಸಲಾಗಿದೆಯೇ?

8. ಪ್ರಾಧ್ಯಾಪಕರಿಗೆ ಆನ್ ಲೈನ್ ಭೋದನೆಗೆ ಅಗತ್ಯವಾದ ತರಬೇತಿ ದೊರಕಿದೆಯೇ?

9. ಮುಖ್ಯವಾಗಿ ಈ ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಶೀಘ್ರದಲ್ಲೇ ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸಲು ಬೇಕಾದ ಕಾಲಮಿತಿಯನ್ನು ಸ್ಪಷ್ಟಪಡಿಸಬೇಕಿದೆ. ಮತ್ತು ಈ ಶೇ. 40% ಆನ್ ಲೈನ್ ನಿರಂತರವಾಗಿರುತ್ತದೆ ಎನ್ನುವುದು ನಿಮ್ಮ ನಿರ್ಧಾರವಾದರೆ ಅದಕ್ಕೆ ಸೂಕ್ತ ಸೌಲಭ್ಯಗಳು ಎಲ್ಲಿವೆ ಎಂಬುದನ್ನು ಯುಜಿಸಿಯೇ ಹೇಳಬೇಕು.

ಇನ್ನೂ ಹತ್ತಾರು ಪ್ರಶ್ನೆಗಳಿವೆ. ಈ ಎಲ್ಲದಕ್ಕೂ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಸೂಕ್ತ ರೀತಿಯಲ್ಲಿ ಉತ್ತರಿಸಬೇಕು.

ಮುಖ್ಯವಾಗಿ ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಗಳು, ಪೋಷಕರು, ಶಿಕ್ಷಣ ತಜ್ಞರು ಯುಜಿಸಿಯ ಹೊಸ ಮಾರ್ಗಸೂಚಿಯಿಂದ ಗೊಂದಲಕ್ಕೀಡಾಗಿದ್ದಾರೆ. ನಿಧಾನಕ್ಕೆ ಕೊರೋನಾ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕತ್ತಲಾವರಿಸುವಂತೆ ಮಾಡುತ್ತಿದೆ.


ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...