Homeಮುಖಪುಟಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

ಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

- Advertisement -
- Advertisement -

ಡಿಜಿಟಲ್‌ ಮಾಧ್ಯಮಗಳಿಗೆ ಪರಿಚಯಿಸಿದ ಹೊಸ ಮಾಹಿತಿ ತಂತ್ರಜ್ಞಾನ ನಿಯಮವನ್ನು ತಡೆ ಹಿಡಿಯದಿದ್ದರೆ ಟ್ವಿಟರ್‌ ಕಂಪೆನಿಯು ಆ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಸೋಮವಾರ ತಿಳಿಸಿದೆ.

ಟ್ವಿಟರ್‌ ನಿಯಮಗಳನ್ನು ಪಾಲಿಸಲಿಲ್ಲ ಎಂದು ಆರೋಪಿಸಿ ಅಮಿತ್ ಆಚಾರ್ಯ ಎಂಬ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಅಲ್ಲಿಸಿದ್ದರು. ನ್ಯಾಯಮೂರ್ತಿ ರೇಖಾ ಪಲ್ಲಿ ಅವರು ತಮ್ಮ ನಿಲುವುಗಳನ್ನು ತಿಳಿಸುವಂತೆ ಕೇಂದ್ರ ಸರ್ಕಾರ ಮತ್ತು ಸೋಷಿಯಲ್ ಮೀಡಿಯಾ ವೇದಿಕೆಯಾದ ಟ್ವಿಟರ್‌ಗೆ ನೋಟಿಸ್ ಜಾರಿಮಾಡಿದ್ದಾರೆ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ತಾನು ನಿಯಮಗಳನ್ನು ಪಾಲಿಸಿದ್ದು, ಸ್ಥಳೀಯ ಅಧಿಕಾರಿಯನ್ನು ನೇಮಿಸಿದ್ದೇನೆ ಎಂದು ನ್ಯಾಯಾಲಯದ ಮುಂದೆ ಟ್ವಿಟರ್‌ ಹೇಳಿದೆ. ಆದರೆ ಕೇಂದ್ರ ಸರ್ಕಾರವು ಟ್ವಿಟರ್‌ನ ಈ ಪ್ರತಿಪಾದನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಸ್ಥಾಯಿ ಸಲಹೆಗಾರ ರಿಪುದಮನ್ ಸಿಂಗ್ ಭರದ್ವಾಜ್ ಅವರು ಟ್ವಿಟರ್ ನಿಯಮಗಳನ್ನು ಪಾಲಿಸಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಹೊಸ ನಿಯಮಗಳನ್ನು ತಡೆಹಿಡಿಯಲಾಗದಿದ್ದರೆ ಟ್ವಿಟರ್‌ ನಿಯಮಗಳನ್ನು ಅನುಸರಿಸಬೇಕು” ಎಂದು ನ್ಯಾಯಾಲಯವು ಹೇಳಿದೆ.

ವಕೀಲ ಆಕಾಶ್ ವಾಜಪೇಯಿ ಮತ್ತು ಮನೀಶ್ ಕುಮಾರ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, ಅಮಿತ್‌ ಆಚಾರ್ಯ ಅವರು ಒಂದೆರಡು ಟ್ವೀಟ್‌ಗಳ ವಿರುದ್ಧ ನಾವು ದೂರು ನೀಡಲು ಪ್ರಯತ್ನಿಸಿದೆವು. ಆಗ ನಮಗೆ ಟ್ವಿಟರ್‌ ಹೊಸ ನಿಯಮವನ್ನು ಪಾಲಿಸದ ಆರೋಪ ಕೇಳಿ ಬಂದಿದೆ ಎಂದು ಹೇಳಿದ್ದಾರೆ.

ಹೊಸ ಐಟಿ ನಿಯಮಗಳು ಫೆಬ್ರವರಿ 25 ರಿಂದ ಜಾರಿಗೆ ಬಂದವು ಮತ್ತು ಅವುಗಳನ್ನು ಅನುಸರಿಸಲು ಕೇಂದ್ರವು ಟ್ವಿಟರ್ ಸೇರಿದಂತೆ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಿಗೆ ಮೂರು ತಿಂಗಳು ಕಾಲಾವಕಾಶ ನೀಡಿತ್ತು. ಮೇ 25 ರಂದು ಮೂರು ತಿಂಗಳ ಅವಧಿ ಮುಗಿದಿದೆ. ಆದರೆ ಟ್ವಿಟ್ಟರ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಟ್ವೀಟ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ಎದುರಿಸಲು ಯಾವುದೇ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಲಿಲ್ಲ ಎಂದು ಅಮಿತ್‌ ಆಚಾರ್ಯ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ವಿಳಂಬ ಮಾಡದೆ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸುವಂತೆ ಟ್ವಿಟರ್‌ಗೆ ನಿರ್ದೇಶನ ನೀಡುವಂತೆ ಅವರು ಮನವಿಯಲ್ಲಿ ಕೋರಿದ್ದು, ಜೊತೆಗೆ ಐಟಿ ನಿಯಮಗಳನ್ನು ಪಾಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆಯು ಕೋರಿದ್ದಾರೆ.

ಟ್ವಿಟರ್ ಇತ್ತೀಚೆಗೆ ಭಾರತದ ನಿಯಮಕ್ಕೆ ಬದ್ಧವಾಗಿದ್ದೇವೆ ಎಂದು ಹೇಳಿತ್ತು, ಆದರೆ ಹೊಸ ಐಟಿ ನಿಯಮಗಳು ಮತ್ತು ನಿಬಂಧನೆಗಳನ್ನು ಅದು ಟೀಕಿಸಿದ್ದು, “ಭಾರತವು ಮುಕ್ತ ಸಾರ್ವಜನಿಕ ಅಭಿವ್ಯಕ್ತಿಯನ್ನು ತಡೆಯುತ್ತಿದೆ” ಎಂದು ಹೇಳಿತ್ತು. ಆದರೆ ಟ್ವಿಟರ್‌ನ ಈ ಮಾತಿಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರವು ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದೆ.

‘ಸೂಚಿಸಿದ’ ಸಂದೇಶದ ಮೂಲವನ್ನು ಗುರುತಿಸುವ ಮತ್ತು ಕುಂದುಕೊರತೆಯ ಪರಿಶೀಲಿಸುವ ಅಧಿಕಾರಿಗಳನ್ನು ನೇಮಿಸಲು ಹೇಳುವ ಹೊಸ ಡಿಜಿಟಲ್ ನಿಯಮಗಳನ್ನು ಅನುಸರಿಸಲು ಟ್ವಿಟರ್ ನಿರಾಕರಿಸಿದೆ ಎಂದು ಕೇಂದ್ರ ಆರೋಪಿಸಿದೆ.

ಹೊಸ ಡಿಜಿಟಲ್ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪೆನಿಗಳಾದ ಫೇಸ್‌ಬುಕ್, ವಾಟ್ಸಾಪ್ ಮತ್ತು ಟ್ವಿಟರ್‌ಗಳನ್ನು ‘ಸೂಚಿಸಿದ’ ಸಂದೇಶದ ಮೂಲವನ್ನು 36 ಗಂಟೆಗಳಲ್ಲಿ ಗುರುತಿಸುವುದು ಮತ್ತು ಹೆಚ್ಚುವರಿ ಕ್ರಮಗಳನ್ನು ತಗೆದುಕೊಳ್ಳುವುದು ಮಾಡಬೇಕಾಗುತ್ತದೆ. ಮುಖ್ಯ ಪಾಲನೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಎಂದು ನಿಯಮವು ಹೇಳುತ್ತದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...