Homeಮುಖಪುಟಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

ಹೊಸ ಐಟಿ ನಿಯಮ ತಡೆ ಹಿಡಿಯದಿದ್ದರೆ ಟ್ವಿಟರ್‌‌ ಅದನ್ನು ಪಾಲಿಸಬೇಕು: ದೆಹಲಿ ಹೈಕೋರ್ಟ್

- Advertisement -
- Advertisement -

ಡಿಜಿಟಲ್‌ ಮಾಧ್ಯಮಗಳಿಗೆ ಪರಿಚಯಿಸಿದ ಹೊಸ ಮಾಹಿತಿ ತಂತ್ರಜ್ಞಾನ ನಿಯಮವನ್ನು ತಡೆ ಹಿಡಿಯದಿದ್ದರೆ ಟ್ವಿಟರ್‌ ಕಂಪೆನಿಯು ಆ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಸೋಮವಾರ ತಿಳಿಸಿದೆ.

ಟ್ವಿಟರ್‌ ನಿಯಮಗಳನ್ನು ಪಾಲಿಸಲಿಲ್ಲ ಎಂದು ಆರೋಪಿಸಿ ಅಮಿತ್ ಆಚಾರ್ಯ ಎಂಬ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಅಲ್ಲಿಸಿದ್ದರು. ನ್ಯಾಯಮೂರ್ತಿ ರೇಖಾ ಪಲ್ಲಿ ಅವರು ತಮ್ಮ ನಿಲುವುಗಳನ್ನು ತಿಳಿಸುವಂತೆ ಕೇಂದ್ರ ಸರ್ಕಾರ ಮತ್ತು ಸೋಷಿಯಲ್ ಮೀಡಿಯಾ ವೇದಿಕೆಯಾದ ಟ್ವಿಟರ್‌ಗೆ ನೋಟಿಸ್ ಜಾರಿಮಾಡಿದ್ದಾರೆ.

ಇದನ್ನೂ ಓದಿ: ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ತಾನು ನಿಯಮಗಳನ್ನು ಪಾಲಿಸಿದ್ದು, ಸ್ಥಳೀಯ ಅಧಿಕಾರಿಯನ್ನು ನೇಮಿಸಿದ್ದೇನೆ ಎಂದು ನ್ಯಾಯಾಲಯದ ಮುಂದೆ ಟ್ವಿಟರ್‌ ಹೇಳಿದೆ. ಆದರೆ ಕೇಂದ್ರ ಸರ್ಕಾರವು ಟ್ವಿಟರ್‌ನ ಈ ಪ್ರತಿಪಾದನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಸ್ಥಾಯಿ ಸಲಹೆಗಾರ ರಿಪುದಮನ್ ಸಿಂಗ್ ಭರದ್ವಾಜ್ ಅವರು ಟ್ವಿಟರ್ ನಿಯಮಗಳನ್ನು ಪಾಲಿಸಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಹೊಸ ನಿಯಮಗಳನ್ನು ತಡೆಹಿಡಿಯಲಾಗದಿದ್ದರೆ ಟ್ವಿಟರ್‌ ನಿಯಮಗಳನ್ನು ಅನುಸರಿಸಬೇಕು” ಎಂದು ನ್ಯಾಯಾಲಯವು ಹೇಳಿದೆ.

ವಕೀಲ ಆಕಾಶ್ ವಾಜಪೇಯಿ ಮತ್ತು ಮನೀಶ್ ಕುಮಾರ್ ಅವರ ಮೂಲಕ ಸಲ್ಲಿಸಿದ ಮನವಿಯಲ್ಲಿ, ಅಮಿತ್‌ ಆಚಾರ್ಯ ಅವರು ಒಂದೆರಡು ಟ್ವೀಟ್‌ಗಳ ವಿರುದ್ಧ ನಾವು ದೂರು ನೀಡಲು ಪ್ರಯತ್ನಿಸಿದೆವು. ಆಗ ನಮಗೆ ಟ್ವಿಟರ್‌ ಹೊಸ ನಿಯಮವನ್ನು ಪಾಲಿಸದ ಆರೋಪ ಕೇಳಿ ಬಂದಿದೆ ಎಂದು ಹೇಳಿದ್ದಾರೆ.

ಹೊಸ ಐಟಿ ನಿಯಮಗಳು ಫೆಬ್ರವರಿ 25 ರಿಂದ ಜಾರಿಗೆ ಬಂದವು ಮತ್ತು ಅವುಗಳನ್ನು ಅನುಸರಿಸಲು ಕೇಂದ್ರವು ಟ್ವಿಟರ್ ಸೇರಿದಂತೆ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಿಗೆ ಮೂರು ತಿಂಗಳು ಕಾಲಾವಕಾಶ ನೀಡಿತ್ತು. ಮೇ 25 ರಂದು ಮೂರು ತಿಂಗಳ ಅವಧಿ ಮುಗಿದಿದೆ. ಆದರೆ ಟ್ವಿಟ್ಟರ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿನ ಟ್ವೀಟ್‌ಗಳಿಗೆ ಸಂಬಂಧಿಸಿದ ದೂರುಗಳನ್ನು ಎದುರಿಸಲು ಯಾವುದೇ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಲಿಲ್ಲ ಎಂದು ಅಮಿತ್‌ ಆಚಾರ್ಯ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ವಿಳಂಬ ಮಾಡದೆ ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸುವಂತೆ ಟ್ವಿಟರ್‌ಗೆ ನಿರ್ದೇಶನ ನೀಡುವಂತೆ ಅವರು ಮನವಿಯಲ್ಲಿ ಕೋರಿದ್ದು, ಜೊತೆಗೆ ಐಟಿ ನಿಯಮಗಳನ್ನು ಪಾಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆಯು ಕೋರಿದ್ದಾರೆ.

ಟ್ವಿಟರ್ ಇತ್ತೀಚೆಗೆ ಭಾರತದ ನಿಯಮಕ್ಕೆ ಬದ್ಧವಾಗಿದ್ದೇವೆ ಎಂದು ಹೇಳಿತ್ತು, ಆದರೆ ಹೊಸ ಐಟಿ ನಿಯಮಗಳು ಮತ್ತು ನಿಬಂಧನೆಗಳನ್ನು ಅದು ಟೀಕಿಸಿದ್ದು, “ಭಾರತವು ಮುಕ್ತ ಸಾರ್ವಜನಿಕ ಅಭಿವ್ಯಕ್ತಿಯನ್ನು ತಡೆಯುತ್ತಿದೆ” ಎಂದು ಹೇಳಿತ್ತು. ಆದರೆ ಟ್ವಿಟರ್‌ನ ಈ ಮಾತಿಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರವು ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದೆ.

‘ಸೂಚಿಸಿದ’ ಸಂದೇಶದ ಮೂಲವನ್ನು ಗುರುತಿಸುವ ಮತ್ತು ಕುಂದುಕೊರತೆಯ ಪರಿಶೀಲಿಸುವ ಅಧಿಕಾರಿಗಳನ್ನು ನೇಮಿಸಲು ಹೇಳುವ ಹೊಸ ಡಿಜಿಟಲ್ ನಿಯಮಗಳನ್ನು ಅನುಸರಿಸಲು ಟ್ವಿಟರ್ ನಿರಾಕರಿಸಿದೆ ಎಂದು ಕೇಂದ್ರ ಆರೋಪಿಸಿದೆ.

ಹೊಸ ಡಿಜಿಟಲ್ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪೆನಿಗಳಾದ ಫೇಸ್‌ಬುಕ್, ವಾಟ್ಸಾಪ್ ಮತ್ತು ಟ್ವಿಟರ್‌ಗಳನ್ನು ‘ಸೂಚಿಸಿದ’ ಸಂದೇಶದ ಮೂಲವನ್ನು 36 ಗಂಟೆಗಳಲ್ಲಿ ಗುರುತಿಸುವುದು ಮತ್ತು ಹೆಚ್ಚುವರಿ ಕ್ರಮಗಳನ್ನು ತಗೆದುಕೊಳ್ಳುವುದು ಮಾಡಬೇಕಾಗುತ್ತದೆ. ಮುಖ್ಯ ಪಾಲನೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಸ್ಥಳೀಯ ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಎಂದು ನಿಯಮವು ಹೇಳುತ್ತದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...