Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

ಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

- Advertisement -
- Advertisement -

ಮಹಾರಾಷ್ಟ್ರದ ಅಹಮದನಗರ ಜಿಲ್ಲೆಯಲ್ಲಿ 2021ರ ಮೇ ತಿಂಗಳೊಂದರಲ್ಲಿಯೇ 8,000 ಮಕ್ಕಳಿಗೆ ಕೊರೋನಾ ಸೋಂಕು ತಗುಲಿದೆ. ಅಹಮದ್‌ ನಗರದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಕೋವಿಡ್‌ ಸೋಂಕು ಕೊರೋನಾ ಮೂರನೆಯ ಅಲೆ ನಿಧಾನಕ್ಕೆ ಆರಂಭವಾಗುತ್ತಿರುವ ಲಕ್ಷಣವನ್ನು ತೋರಿಸುತ್ತಿದೆ. ಮಹಾರಾಷ್ಟ್ರ ಸರ್ಕಾರವು ಈ ಬಗ್ಗೆ ಗಮನ ಹರಿಸಿದ್ದು ಕೊರೋನಾ ಮೂರನೇ ಅಲೆಯನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕರ್ನಾಟಕದಲ್ಲೂ ದಿನೇ ದಿನೇ 18 ವರ್ಷದೊಳಗಿನ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಲಿದ್ದು, ರಾಜ್ಯ ಸರ್ಕಾರ ಸಂಭಾವ್ಯ ಕೋವಿಡ್‌ ಅಲೆಯನ್ನು ನಿಯಂತ್ರಿಸಿಲು ಅಗತ್ಯ ಕ್ರಮಕ್ಕೆ ಮುಂದಾಗಬೇಕು.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಈಗಾಗಲೇ ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಸ್ಥಾಪಿಸಿದ್ದು ಸದ್ಯ ಐದು ಕೋವಿಡ್‌ ಸೋಂಕಿತ ಮಕ್ಕಳಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾವು ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಆರಂಭಿಸಿದ್ದೇವೆ. ಕೋವಿಡ್‌ ಮೂರನೇ ಅಲೆ ಈಗಾಗಲೇ ಆರಂಭವಾಗಿದೆಯೇ ಅಥವಾ ಯಾವಾಗ ಅರಂಭವಾಗಬಹುದು ಎಂಬುದು ಇನ್ನೂ ತಿಳಿದಿಲ್ಲ. ಆದರೆ ನಾವು ಎಲ್ಲದಕ್ಕೂ ಸಿದ್ಧರಾಗಿದ್ದೇವೆ. ಮಕ್ಕಳ ವಿಶೇಷ ಕೋವಿಡ್‌ ವಾರ್ಡ್‌ಗಳು ಆಸ್ಪತ್ರೆಗಳ ರೀತಿಯಲ್ಲಿ ಇಲ್ಲ. ಬದಲಾಗಿ ಮಕ್ಕಳು ತಮ್ಮ ಸ್ಕೂಲ್‌ ಅಥವಾ ನರ್ಸರಿಯಲ್ಲಿ ಪಡೆಯುವ ಸೌಲಭ್ಯಗಳನ್ನು ವಿಶೇಷ ವಾರ್ಡ್‌ಗಳಲ್ಲಿ ಕಲ್ಪಿಸಲಾಗಿದೆ ಎಂದು ಸಾಂಗ್ಲಿ ನಗರ ಕಾರ್ಪೊರೇಟರ್‌ ಅಭಿಜಿತ್‌ ಬೋಂಸ್ಲೆ ತಿಳಿಸಿದ್ದಾರೆ.

ಅಹಮದನಗರ ಜಿಲ್ಲೆಯಲ್ಲಿ 8000 ಕ್ಕಿಂತ ಹೆಚ್ಚು ಮಕ್ಕಳು ಕೋವಿಡ್‌ ಸುಂಕಿಗೆ ತುತ್ತಾಗಿರುವುದು ಸರ್ಕಾರಕ್ಕೆ ಕೋವಿಡ್‌ ಮೂರನೇ ಅಲೆಯ ಎಚ್ಚರಿಕೆಗಂಟೆಯಾಗಿದೆ. ಜಿಲ್ಲಾಡಳಿತ ಈಗಾಗಲೇ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿಯನ್ನು ನೀಡಿದ್ದು ಎಚ್ಚರಿಕೆಯನ್ನು ನೀಡಿದೆ. ಜಿಲ್ಲೆಯಲ್ಲಿ ಮೇ ತಿಂಗಳಿನಲ್ಲಿ ಕೊರೋನಾ ಸೋಂಕಿಗೆ ತುತ್ತಾದವರಲ್ಲಿ 10% ದಷ್ಟು ಜನರು 18 ವರ್ಷದ ಮಕ್ಕಳಾಗಿರುವುದು ಕಳವಳಕಾರಿ ಸಂಗತಿಯಾಗಿದೆ.

ಜಿಲ್ಲಾಡಳಿತವು ಮಕ್ಕಳ ತಜ್ಞರೊಂದಿಗೆ ಈ ಸಬಂಧ ಚರ್ಚೆಯನ್ನು ನಡೆಸಿದೆ. ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳುವಂತೆ ಸಂಬಂಧಿಸಿದ ಆಸ್ಪತ್ರೆಗೆ ತಿಳಿಸಲಾಗಿದೆ. 2021 ರ ಮೇ ತಿಂಗಳೊಂದರಲ್ಲೇ ಜಿಲ್ಲೆಯ 8000 ಮಕ್ಕಳಲ್ಲಿ ಕೊರೋನಾ ಸೋಂಕು ಧೃಢಪಟ್ಟಿರುವುದು ಮುಂದೆ ಬರಲಿರುವ ವಿಪತ್ತಿನ ಮುನ್ಸೂಚನೆಯಂತಿದೆ ಎಂದು ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಬೋಸ್ಲೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಎರಡನೇಯ ಅಲೆಯ ಸಂದರ್ಭದಲ್ಲಿ ಮಹರಾಷ್ಟ್ರದಲ್ಲಿ ಆಸ್ಪತ್ರೆಗಳ ಬೆಡ್‌ಗಳ ಕೊರತೆ ಮತ್ತು ಆಕ್ಸಿಜನ್‌ ಕೊರತೆ ವ್ಯಾಪಕವಾಗಿ ತಲೆದೋರಿತು. ಮೂರನೇ ಅಲೆಯ ಸಂದರ್ಭದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಹಿಂದೆ ಸಂಭವಿಸಿದ ದುರಂತ ಮರುಕಳಿಸದಂತೆ ನೋಡಿಕೊಳ್ಳಬೇಕಿದೆ ಎಂದು ಶಾಸಕ ಸಂಗ್ರಾಮ್‌ ಜಗದೀಪ್‌ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಈ ಸಂದರ್ಭದಲ್ಲಿ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಸಿದ್ಧವಿಲ್ಲ. ಜುಲೈ ಕೊನೇ ವಾರ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಮಹರಾಷ್ಟ್ರದಲ್ಲಿ ಕೋವಿಡ್‌ ಮೂರನೇ ಅಲೆಯು ಕಾಣಸಿಕೊಳ್ಳುವ ಲಕ್ಷಣವಿದ್ದು ಎರಡು ತಿಂಗಳ ಅವಧಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ತಿಳಿಸಿದೆ.

ಭಾರತದಲ್ಲಿ ಕೊರೋನಾ ಎರಡನೆ ಅಲೆಯು ಆರಂಭವಾದ ಮೊದಲ ರಾಜ್ಯ ಮಹಾರಾಷ್ಟ್ರ. ಫೆಭ್ರವರಿ ಕೊನೆಯಲ್ಲಿ ಆರಂಭವಾದ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೇ ಸಾವಿರಾರು ಸೋಂಕಿತರು ತೊಂದರೆಗೆ ಒಳಗಾಗಿದ್ದರು. ಆಕ್ಸಿಜನ್‌, ಅಗತ್ಯ ಔಷಧಿಗಳ ಕೊರತೆ ಮಹರಾಷ್ಟ್ರದಲ್ಲಿ ಕೊರೋನಾ ಎರಡನೇ ಅಲೆಯ ದುರಂತಕ್ಕೆ ಕಾರಣವಾಗಿತ್ತು.

ಕೇಂದ್ರಸರ್ಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ ವಿಜಯರಾಘವನ್‌ ಅವರು ಜೂನ್‌ ತಿಂಗಳಿನ ಆರಂಭ ಅಥವಾ ಮಧ್ಯದ ವೇಳೆಗೆ ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗುವ ಲಕ್ಷಣಗಳಿವೆ ಎಂದು ಸರ್ಕಾರಕ್ಕೆ ಮತ್ತು ದೇಶಕ್ಕೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.


ಇದನ್ನೂ ಓದಿ: ಗ್ರಾಮೀಣ ಭಾಗದ ಆಸ್ಪತ್ರೆಗಳ ಅವ್ಯಸ್ಥೆಯನ್ನು ತೆರೆದಿಟ್ಟ ಕೊರೋನಾ ಸಾಂಕ್ರಾಮಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...