Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

ಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

- Advertisement -
- Advertisement -

ಮಹಾರಾಷ್ಟ್ರದ ಅಹಮದನಗರ ಜಿಲ್ಲೆಯಲ್ಲಿ 2021ರ ಮೇ ತಿಂಗಳೊಂದರಲ್ಲಿಯೇ 8,000 ಮಕ್ಕಳಿಗೆ ಕೊರೋನಾ ಸೋಂಕು ತಗುಲಿದೆ. ಅಹಮದ್‌ ನಗರದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಕೋವಿಡ್‌ ಸೋಂಕು ಕೊರೋನಾ ಮೂರನೆಯ ಅಲೆ ನಿಧಾನಕ್ಕೆ ಆರಂಭವಾಗುತ್ತಿರುವ ಲಕ್ಷಣವನ್ನು ತೋರಿಸುತ್ತಿದೆ. ಮಹಾರಾಷ್ಟ್ರ ಸರ್ಕಾರವು ಈ ಬಗ್ಗೆ ಗಮನ ಹರಿಸಿದ್ದು ಕೊರೋನಾ ಮೂರನೇ ಅಲೆಯನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕರ್ನಾಟಕದಲ್ಲೂ ದಿನೇ ದಿನೇ 18 ವರ್ಷದೊಳಗಿನ ಮಕ್ಕಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಲಿದ್ದು, ರಾಜ್ಯ ಸರ್ಕಾರ ಸಂಭಾವ್ಯ ಕೋವಿಡ್‌ ಅಲೆಯನ್ನು ನಿಯಂತ್ರಿಸಿಲು ಅಗತ್ಯ ಕ್ರಮಕ್ಕೆ ಮುಂದಾಗಬೇಕು.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಈಗಾಗಲೇ ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಸ್ಥಾಪಿಸಿದ್ದು ಸದ್ಯ ಐದು ಕೋವಿಡ್‌ ಸೋಂಕಿತ ಮಕ್ಕಳಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾವು ಮಕ್ಕಳಿಗಾಗಿ ವಿಶೇಷ ಕೋವಿಡ್‌ ವಾರ್ಡ್‌ ಅನ್ನು ಆರಂಭಿಸಿದ್ದೇವೆ. ಕೋವಿಡ್‌ ಮೂರನೇ ಅಲೆ ಈಗಾಗಲೇ ಆರಂಭವಾಗಿದೆಯೇ ಅಥವಾ ಯಾವಾಗ ಅರಂಭವಾಗಬಹುದು ಎಂಬುದು ಇನ್ನೂ ತಿಳಿದಿಲ್ಲ. ಆದರೆ ನಾವು ಎಲ್ಲದಕ್ಕೂ ಸಿದ್ಧರಾಗಿದ್ದೇವೆ. ಮಕ್ಕಳ ವಿಶೇಷ ಕೋವಿಡ್‌ ವಾರ್ಡ್‌ಗಳು ಆಸ್ಪತ್ರೆಗಳ ರೀತಿಯಲ್ಲಿ ಇಲ್ಲ. ಬದಲಾಗಿ ಮಕ್ಕಳು ತಮ್ಮ ಸ್ಕೂಲ್‌ ಅಥವಾ ನರ್ಸರಿಯಲ್ಲಿ ಪಡೆಯುವ ಸೌಲಭ್ಯಗಳನ್ನು ವಿಶೇಷ ವಾರ್ಡ್‌ಗಳಲ್ಲಿ ಕಲ್ಪಿಸಲಾಗಿದೆ ಎಂದು ಸಾಂಗ್ಲಿ ನಗರ ಕಾರ್ಪೊರೇಟರ್‌ ಅಭಿಜಿತ್‌ ಬೋಂಸ್ಲೆ ತಿಳಿಸಿದ್ದಾರೆ.

ಅಹಮದನಗರ ಜಿಲ್ಲೆಯಲ್ಲಿ 8000 ಕ್ಕಿಂತ ಹೆಚ್ಚು ಮಕ್ಕಳು ಕೋವಿಡ್‌ ಸುಂಕಿಗೆ ತುತ್ತಾಗಿರುವುದು ಸರ್ಕಾರಕ್ಕೆ ಕೋವಿಡ್‌ ಮೂರನೇ ಅಲೆಯ ಎಚ್ಚರಿಕೆಗಂಟೆಯಾಗಿದೆ. ಜಿಲ್ಲಾಡಳಿತ ಈಗಾಗಲೇ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿಯನ್ನು ನೀಡಿದ್ದು ಎಚ್ಚರಿಕೆಯನ್ನು ನೀಡಿದೆ. ಜಿಲ್ಲೆಯಲ್ಲಿ ಮೇ ತಿಂಗಳಿನಲ್ಲಿ ಕೊರೋನಾ ಸೋಂಕಿಗೆ ತುತ್ತಾದವರಲ್ಲಿ 10% ದಷ್ಟು ಜನರು 18 ವರ್ಷದ ಮಕ್ಕಳಾಗಿರುವುದು ಕಳವಳಕಾರಿ ಸಂಗತಿಯಾಗಿದೆ.

ಜಿಲ್ಲಾಡಳಿತವು ಮಕ್ಕಳ ತಜ್ಞರೊಂದಿಗೆ ಈ ಸಬಂಧ ಚರ್ಚೆಯನ್ನು ನಡೆಸಿದೆ. ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳುವಂತೆ ಸಂಬಂಧಿಸಿದ ಆಸ್ಪತ್ರೆಗೆ ತಿಳಿಸಲಾಗಿದೆ. 2021 ರ ಮೇ ತಿಂಗಳೊಂದರಲ್ಲೇ ಜಿಲ್ಲೆಯ 8000 ಮಕ್ಕಳಲ್ಲಿ ಕೊರೋನಾ ಸೋಂಕು ಧೃಢಪಟ್ಟಿರುವುದು ಮುಂದೆ ಬರಲಿರುವ ವಿಪತ್ತಿನ ಮುನ್ಸೂಚನೆಯಂತಿದೆ ಎಂದು ಅಹ್ಮದ್‌ನಗರ ಜಿಲ್ಲಾಧಿಕಾರಿ ರಾಜೇಂದ್ರ ಬೋಸ್ಲೆ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಎರಡನೇಯ ಅಲೆಯ ಸಂದರ್ಭದಲ್ಲಿ ಮಹರಾಷ್ಟ್ರದಲ್ಲಿ ಆಸ್ಪತ್ರೆಗಳ ಬೆಡ್‌ಗಳ ಕೊರತೆ ಮತ್ತು ಆಕ್ಸಿಜನ್‌ ಕೊರತೆ ವ್ಯಾಪಕವಾಗಿ ತಲೆದೋರಿತು. ಮೂರನೇ ಅಲೆಯ ಸಂದರ್ಭದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಹಿಂದೆ ಸಂಭವಿಸಿದ ದುರಂತ ಮರುಕಳಿಸದಂತೆ ನೋಡಿಕೊಳ್ಳಬೇಕಿದೆ ಎಂದು ಶಾಸಕ ಸಂಗ್ರಾಮ್‌ ಜಗದೀಪ್‌ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಈ ಸಂದರ್ಭದಲ್ಲಿ ಯಾವುದೇ ರಿಸ್ಕ್‌ ತೆಗೆದುಕೊಳ್ಳಲು ಸಿದ್ಧವಿಲ್ಲ. ಜುಲೈ ಕೊನೇ ವಾರ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಮಹರಾಷ್ಟ್ರದಲ್ಲಿ ಕೋವಿಡ್‌ ಮೂರನೇ ಅಲೆಯು ಕಾಣಸಿಕೊಳ್ಳುವ ಲಕ್ಷಣವಿದ್ದು ಎರಡು ತಿಂಗಳ ಅವಧಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ತಿಳಿಸಿದೆ.

ಭಾರತದಲ್ಲಿ ಕೊರೋನಾ ಎರಡನೆ ಅಲೆಯು ಆರಂಭವಾದ ಮೊದಲ ರಾಜ್ಯ ಮಹಾರಾಷ್ಟ್ರ. ಫೆಭ್ರವರಿ ಕೊನೆಯಲ್ಲಿ ಆರಂಭವಾದ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೇ ಸಾವಿರಾರು ಸೋಂಕಿತರು ತೊಂದರೆಗೆ ಒಳಗಾಗಿದ್ದರು. ಆಕ್ಸಿಜನ್‌, ಅಗತ್ಯ ಔಷಧಿಗಳ ಕೊರತೆ ಮಹರಾಷ್ಟ್ರದಲ್ಲಿ ಕೊರೋನಾ ಎರಡನೇ ಅಲೆಯ ದುರಂತಕ್ಕೆ ಕಾರಣವಾಗಿತ್ತು.

ಕೇಂದ್ರಸರ್ಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ ವಿಜಯರಾಘವನ್‌ ಅವರು ಜೂನ್‌ ತಿಂಗಳಿನ ಆರಂಭ ಅಥವಾ ಮಧ್ಯದ ವೇಳೆಗೆ ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗುವ ಲಕ್ಷಣಗಳಿವೆ ಎಂದು ಸರ್ಕಾರಕ್ಕೆ ಮತ್ತು ದೇಶಕ್ಕೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.


ಇದನ್ನೂ ಓದಿ: ಗ್ರಾಮೀಣ ಭಾಗದ ಆಸ್ಪತ್ರೆಗಳ ಅವ್ಯಸ್ಥೆಯನ್ನು ತೆರೆದಿಟ್ಟ ಕೊರೋನಾ ಸಾಂಕ್ರಾಮಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...