Homeಕರ್ನಾಟಕಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

- Advertisement -
- Advertisement -

ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದು, ನಾನು ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ಬಂದಾಗಿನಿಂದಲೂ ನನ್ನನ್ನು ಟಾರ್ಗೆಟ್‌ ಮಾಡಲಾಗುತ್ತಿದೆ. ನನ್ನ ಮೇಲೆ ಅನಗತ್ಯವಾಗಿ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸೋಮವಾರ ಆರೋಪಿಸಿದ್ದಾರೆ.

ಪ್ರತಾಪ್‌ಸಿಂಹ ಅವರು ಜಿಲ್ಲಾಧಿಕಾರಿ ಸಿಂಧೂರಿ ಅವರು ಕರ್ತವ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ಲೆಕ್ಕಪತ್ರ, ಅಂಕಿಅಂಶಗಳನ್ನು ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರದಿಂದ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಬಂದಿರುವ 41 ಕೋಟಿ ರೂ. ಅನುದಾನದಲ್ಲಿ ಯಾವುದಕ್ಕಾಗಿ ಎಷ್ಟೆಲ್ಲಾ ಖರ್ಚು ವೆಚ್ಚವಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್

ರಾಜ್ಯದಲ್ಲಿಯೇ ಅತಿಹೆಚ್ಚು ಜನರಿಗೆ ಲಸಿಕೆ ಹಾಕಲಾಗಿರುವ ಜಿಲ್ಲೆ ಮೈಸೂರು. ಇತರ ಜಿಲ್ಲೆಗೆ ಹೋಲಿಸಿದರೆ ಮರಣ ಪ್ರಮಾಣ ಮೈಸೂರಿನಲ್ಲಿ ಕಡಿಮೆ ಇದೆ. ಟೆಸ್ಟಿಂಗ್‌ನಲ್ಲಿ ರಾಜ್ಯ ನೀಡಿದ ಗುರಿಯಲ್ಲಿ ಶೇ. 150ರ ಷ್ಟು ಪೂರೈಸಲಾಗಿದೆ. 2020 ರಲ್ಲೇ ಗಣಕೀಕೃತ ಬೆಡ್‌ ವ್ಯವಸ್ಥೆಯನ್ನು ಮೈಸೂರು ಜಿಲ್ಲೆ ಪ್ರಾರಂಭಿಸಿದ್ದರಿಂದ ಎರಡನೇ ಅಲೆ ಬಂದಾಗ ಸಾಕಷ್ಟು ನೆರವಾಯಿತು. ರಾಜ್ಯಕ್ಕೆ ಮಾದರಿಯಾಗುವಂತೆ ‘ಕೋವಿಡ್‌ ಮಿತ್ರ’ ತೆರೆಯಲಾಗಿದೆ. ಇದರಿಂದ 30 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ವೈದ್ಯಕೀಯ ಸಲಹೆ ಸಹಕಾರ ದೊರೆತಿದೆ ಎಂದು ವಿವರಿಸಿದ್ದಾರೆ.

ವಿಪತ್ತು ಪರಿಹಾರ ನಿಧಿಯಡಿ ಮಾಡಲಾಗಿರುವ ಎಲ್ಲಾ ಖರ್ಚುಗಳನ್ನು ಸಿಎಜಿ ಸರಿಯಾದ ಸಮಯದಲ್ಲಿ ಲೆಕ್ಕ ಪರಿಶೋಧನೆಗೆ ಒಳಪಡಿಸುತ್ತದೆ. ಎಲ್ಲವೂ ಸರಕಾರದ ಮಾರ್ಗಸೂಚಿಯಂತೆ ನಡೆದಿದೆ. ಆದರೆ, ನನ್ನ ವಿರುದ್ದ ಪುರಾವೆಗಳಿಲ್ಲ ಆರೋಪಗಳನ್ನು ಮಾಡಲಾಗುತ್ತಿದೆ. ಇದಕೆಲ್ಲಾ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಕೊರೊನಾ ನಿಯಂತ್ರಣಕ್ಕಾಗಿ ನನ್ನ ಸಂಪೂರ್ಣ ಶಕ್ತಿಯನ್ನು ವ್ಯಯಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ: ಸುಮಲತಾ ಅಂಬರೀಶ್ ವಿರುದ್ಧ ಪ್ರತಾಪ್ ಸಿಂಹ ಹೇಳಿಕೆ ವೈರಲ್

ಕೊರೊನಾ ಸಾಂಕ್ರಮಿಕವನ್ನು ನಮ್ಮನ್ನು ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಅತಿ ಹೆಚ್ಚು ಶ್ರಮವಹಿಸಿ ಕೆಲಸ ಮಾಡಬೇಕು. ಆದರೆ, ಇಂತಹ ಸಂದರ್ಭದಲ್ಲಿಯೂ ನನ್ನ ಮೇಲೆ ಸುಳ್ಳುಗಳನ್ನು ಹೊರಿಸಲಾಗುತ್ತಿದೆ. ನನ್ನ ವಿರುದ್ದ ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇಂತಹ ಆರೋಪಗಳಿಂದಾಗಿ ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಿ, ಆತ್ಮವಿಶ್ವಾಸ ಕುಂದುವಂತೆ ಮಾಡಬಹುದು. ಜನರಿಗೆ ಜಿಲ್ಲಾಡಳಿತ ಭರವಸೆ ನೀಡುವ ಕೆಲಸ ಮಾಡಲಿದೆ. ಕೊರೊನಾ ನಿಯಂತ್ರಿಸಲು ಜಿಲ್ಲಾಡಳಿತವು 24 ಗಂಟೆ ಅವಿರತ ಶ್ರಮ ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರತಾಪ್ ಸಿಂಹ ಪೇಟೆ ರೌಡಿ ತರ ಮಾತನಾಡುತ್ತಾರೆ; ಪ್ರತಿಕ್ರಿಯೆಗೆ ಅರ್ಹರಲ್ಲ: ಸಂಸದೆ ಸುಮಲತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...