Homeಮುಖಪುಟಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಆಡಳಿತಾಧಿಕಾರಿಯ ನಿರ್ಧಾರಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು #SaveLakshadweep ಅಭಿಯಾನವು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.

- Advertisement -
- Advertisement -

ಕೇರಳ ವಿಧಾನಸಭೆಯು ಸೋಮವಾರ ಲಕ್ಷದ್ವೀಪ ದ ಜನರನ್ನು ಬೆಂಬಲಿಸಿ ಉಭಯಪಕ್ಷೀಯ ನಿರ್ಣಯವನ್ನು ಅಂಗೀಕರಿಸಿತು. ಸ್ಥಳೀಯ ಭಾವನೆಗಳನ್ನು ಘಾಸಿಗೊಳಿಸಿ ಕೆಲವು ವಿವಾದಾತ್ಮಕ ಪ್ರಸ್ತಾಪಗಳನ್ನು ಮುಂದಿಡುತ್ತಿರುವ ಆಡಳಿತಾಧಿಕಾರಿ ಪ್ರಫುಲ್ ಕೆ ಪಟೇಲ್ ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿದೆ.

ಕೆಲವು ತಿದ್ದುಪಡಿಗಳನ್ನು ಮಂಡಿಸಿದರೂ, ಆಡಳಿತ ಪಕ್ಷದ ಶಾಸಕರೊಂದಿಗೆ ವಿರೋಧ ಪಕ್ಷದ ಶಾಸಕರು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಾರೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯಗಳನ್ನು ಮಂಡಿಸಿದ್ದು, ಲಕ್ಷದ್ವೀಪದ ಆಡಳಿತವು ತನ್ನ ಕೆಲವು ನಿರ್ಧಾರಗಳ ಮೂಲಕ ಸಂಘಪರಿವಾರದ ಕಾರ್ಯಸೂಚಿ ಮತ್ತು ಸಾಂಸ್ಥಿಕ ಹಿತಾಸಕ್ತಿಗಳನ್ನು ಹೇರುವ ಪ್ರಯತ್ನಗಳನ್ನು ನಿರ್ಣಯವು ಖಂಡಿಸಿದೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

“ಇದು ತೆಂಗಿನ ಮರಗಳ ಮೇಲೆ ಕೇಸರಿ ಬಣ್ಣವನ್ನು ಹಚ್ಚುವುದರೊಂದಿಗೆ ಪ್ರಾರಂಭವಾಯಿತು. ಅದು ಈಗ ದ್ವೀಪವಾಸಿಗಳ ಆವಾಸಸ್ಥಾನ, ಜೀವನ ಮತ್ತು ನೈಸರ್ಗಿಕ ಸಂಬಂಧಗಳನ್ನು ನಾಶಪಡಿಸುವ ಮಟ್ಟಿಗೆ ಬೆಳೆದಿದೆ. ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ದ್ವೀಪದಲ್ಲಿ ಹಾಕಿದ ಬ್ಯಾನರ್‌ಗಳನ್ನು ತೆಗೆದುಹಾಕಲಾಯಿತು ಮತ್ತು ಅದನ್ನು ಬರೆದವರನ್ನು ಲಕ್ಷದ್ವೀಪದಲ್ಲಿ ಬಂಧಿಸಲಾಗಿದೆ” ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ.

ಕಡಿಮೆ ಪ್ರಮಾಣದಲ್ಲಿ ಅಪರಾಧ ದಾಖಲಾಗುವ ಸ್ಥಳದಲ್ಲಿ ಗೂಂಡಾ ಕಾಯ್ದೆಯನ್ನು ತರುವ ನಿರ್ಧಾರವನ್ನು ಅವರು ಟೀಕಿಸಿದರು. “ದ್ವೀಪದ ಮೀನುಗಾರರು ತಮ್ಮ ದೋಣಿ ಮತ್ತು ಬಲೆಗಳನ್ನು ಸಂಗ್ರಹಿಸಲು ಬಳಸಿದ ಶೆಡ್‌ಗಳನ್ನು ನಾಶಪಡಿಸಲಾಯಿತು. ಗೋಹತ್ಯೆಯನ್ನು ನಿಷೇಧಿಸುವ ‘ಸಂಘ ಪರಿವಾರದ ಕಾರ್ಯಸೂಚಿಯನ್ನು’ ಜಾರಿಗೆ ತಂದರು. ಅಸ್ತಿತ್ವದಲ್ಲಿರುವ ಎಲ್ಲಾ ಪ್ರಜಾಪ್ರಭುತ್ವವನ್ನು ವ್ಯವಸ್ಥೆಯನ್ನಯನ್ನು ರದ್ದುಪಡಿಸಿದರು” ಎಂದು ಹೇಳಿದ್ದಾರೆ.

“ಆಡಳಿತವು ಚುನಾವಣೆಗೆ ಸಂಬಂಧಿಸಿದ ವಿಲಕ್ಷಣ ಆದೇಶವನ್ನೂ ಹೊರತಂದಿದ್ದಾರೆ. ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳಿರುವವರು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿಯಮ ನಮ್ಮ ದೇಶದಲ್ಲಿ ಎಲ್ಲೂ ಇಲ್ಲ. ದ್ವೀಪದಲ್ಲಿ ಅದನ್ನೂ ಕಾರ್ಯಗತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಪರಿಣಾಮವಾಗಿ, ಬಹುಪಾಲು ದ್ವೀಪವಾಸಿಗಳು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ” ಎಂದು ಸಿಎಂ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಸಂಪೂರ್ಣ ಗೋಹತ್ಯೆ ತಡೆಗೆ ಕೇಂದ್ರ ಸರ್ಕಾರದ ಪ್ರಸ್ತಾಪ

ಕೇರಳ ಮತ್ತು ಲಕ್ಷದ್ವೀಪ ದ್ವೀಪಗಳ ನಡುವಿನ ಐತಿಹಾಸಿಕ ಸುದೀರ್ಘ ಸಂಬಂಧವನ್ನು ಮುರಿಯಲು ಆಡಳಿತಾಧಿಕಾರಿ ಮಾಡುತ್ತಿರುವ ಪ್ರಯತ್ನಗಳನ್ನು ಅವರು ಬಲವಾಗಿ ಖಂಡಿಸಿದರು.

“ಇಂದು ಲಕ್ಷದ್ವೀಪದಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಸಂಘ ಪರಿವಾರದ ಕಾರ್ಯಸೂಚಿಯ ಪ್ರಾಯೋಗಿಕ ಪ್ರಯೋಗಾಲಯನ್ನಾಗಿ ಮಾಡುತ್ತಿರುವುದನ್ನು ಗಮನಿಸಬೇಕು. ಅವರು ಜನರ ಸಂಸ್ಕೃತಿ, ಭಾಷೆ, ಜೀವನ ವಿಧಾನ ಮತ್ತು ಆಹಾರವನ್ನು ತಮಗೆ ತಕ್ಕಂತೆ ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಪಿಣರಾಯಿ ಹೇಳಿದ್ದಾರೆ.

ಪ್ರತಿಪಕ್ಷದ ನಾಯಕ ವಿ.ಡಿ.ಸತೀಸನ್ ಮಾತನಾಡಿ, “ನಾವು ಯಾವ ಆಹಾರವನ್ನು ಸೇವಿಸಬಹುದು ಎಂಬುದನ್ನು ಅವರು ನಿರ್ಧರಿಸುವುದು ಸೊಕ್ಕಿನ ನಿಲುವಾಗಿದೆ. ದ್ವೀಪಗಳು ಮತ್ತು ಬೇಪೋರ್ ನಡುವಿನ ಸರಕು ಸಾಗಣೆಯನ್ನು ಮಂಗಳೂರಿಗೆ ವರ್ಗಾಯಿಸಲು ಅವರು ಏಕಪಕ್ಷೀಯವಾಗಿ ನಿರ್ಧರಿಸಿದ್ದಾರೆ. ಇದುವರೆಗೂ ಮದ್ಯ ನಿಶೇಧ ಇದ್ದ ಸ್ಥಳದಲ್ಲಿ ಮದ್ಯಕ್ಕೆ ಅನುಮತಿಲಾಗಿದೆ. ಈ ನಿರ್ಧಾರಗಳು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ತತ್ವಗಳನ್ನು ಬದಿಗಿಟ್ಟು ಏನು ಬೇಕಾದರೂ ಮಾಡಬಹುದು ಎಂದು ಭಾವಿಸುವ ಆಡಳಿತದ ದುರಹಂಕಾರವನ್ನು ಸೂಚಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಕೆಲವು ವಾರಗಳಲ್ಲಿ ಲಕ್ಷದ್ವೀಪದಲ್ಲಿ ಪ್ರತಿಭಟನೆಗಳು ಎದ್ದಿದ್ದು, ಸಾಮಾಜಿಕ ಜಾಲತಾಣದಲ್ಲೂ ಇದು ಪ್ರತಿಧ್ವನಿಸಿದೆ. ಆಡಳಿತಾಧಿಕಾರಿಯ ನಿರ್ಧಾರಗಳ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಗಳೆದ್ದಿದ್ದು #SaveLakshadweep ಅಭಿಯಾನವು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.

ಇದನ್ನೂ ಓದಿ: ಲಕ್ಷದ್ವೀಪದಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಂಗಾಳದಲ್ಲಿ ಮುಂದೆಂದೂ ಸ್ವತಂತ್ರದ ಕಿಚ್ಚು ಏಳಲಾರದು ಎಂದು ಖಂದಿರವಾಗಿ ಹೇಳುವೆ.

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...