Homeಚಳವಳಿದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರಗಳನ್ನು ತಡೆಗಟ್ಟಿ: ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಕೆ

- Advertisement -
- Advertisement -

ಕೋವಿಡ್‌ ಸಾಂಕ್ರಾಮಿಕದಿಂದಾಗಿ ಇಡೀ ಪ್ರಪಂಚವೇ ನಲುಗಿ ಹೋಗಿದೆ. ಲಕ್ಷಾಂತರ ಸಾವುಗಳು ಸಂಭವಿಸಿವೆ. ಅತಿ ದೊಡ್ಡ ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು ಭಾರತವು ಹೆಚ್ಚು ಹೊಡೆತ ತಿಂದಿದೆ. ಜೀವನದ ಅರ್ಥವೇನು? ಬದುಕಿನ ಮಹತ್ವವೇನು ಎಂಬುದನ್ನು ಕೋವಿಡ್ ಪಾಠ ಮಾಡಿ ಹೋಗಿದೆ. ಆದರೆ ಇದರಿಂದ ಪಾಠ ಕಲಿಯದ ಬಹಳಷ್ಟು ಮಂದಿ ತಮ್ಮ ಹಿಂದಿನ ವಿಕೃತಿ, ದರ್ಪ, ಸಣ್ಣತಣಗಳಲ್ಲಿಯೇ ಮುಳುಗಿದ್ದಾರೆ. ಹಾಗಾಗಿಯೇ ಕೋವಿಡ್ ಸಂದರ್ಭದಲ್ಲಿಯೂ ಸಹ ದಲಿತರ ಮೇಲೆ ದೌರ್ಜನ್ಯ ಮತ್ತು ಮಹಿಳೆಯರ ಮೇಲಿನ ಅತ್ಯಾಚಾರಗಳು ಎಗ್ಗಿಲ್ಲದೆ ನಡೆಯುತ್ತಿವೆ. ಇದನ್ನು ಖಂಡಿಸಿ ಇಂದು ದಲಿತ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ಸಂಘಟನೆಯು ರಾಜ್ಯಾದ್ಯಂತ ಹಕ್ಕೊತ್ತಾಯ ಸಲ್ಲಿಸಿದೆ.

ಬೆಳಗಾವಿಯ ರಾಮದುರ್ಗದಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ, ವಿಜಯಪುರದ ಕುದುರಿ ಸಾಲವಾಡಗಿಯಲ್ಲಿ ಇಬ್ಬರು ದಲಿತ ಯುವತಿಯರ ಅತ್ಯಾಚಾರ ಮತ್ತು ಕೊಲೆ,  ಸುರಪುರದ ಶಾಖಾಪುರ ಹೆಚ್.ಎಸ್ ನಲ್ಲಿ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ.

ಅದೇ ರೀತಿಯಲ್ಲಿ ಜಗಳೂರಿನ ಕಸವನಹಳ್ಳಿ ಯುವತಿಗೆ ಫೀಸ್ ಕಟ್ಟಿಲ್ಲವೆಂದು ಪ್ರಾಂಶುಪಾಲರಿಂದಲೇ ಜಾತಿ ನಿಂದನೆ ಮಾಡಿದ್ದಾರೆ. ಅವಮಾನ ತಾಳಲಾರದೆ ಯುವತಿ ಕಾಲೇಜಿನ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಚಿಕ್ಕಮಗಳೂರಿನ ಗೋಣಿಬೀಡುನಲ್ಲಿ ಪಿಎಸ್‌ಐ ಒಬ್ಬ ದಲಿತ ಯುವಕನಿಗೆ ಮೂತ್ರ ಕುಡಿಯುವಂತೆ ಮಾಡಿದ್ದಾನೆ.. ಈ ಎಲ್ಲಾ ದೌರ್ಜನ್ಯಗಳು ಕೇವಲ ಎರಡು ತಿಂಗಳ ಅವಧಿಯಲ್ಲಿ ಜರುಗಿವೆ.. ಈ ಅವಮಾನಗಳನ್ನು ಎಲ್ಲಿಯತನಕ ಸಹಿಸಿಕೊಳ್ಳಬೇಕು ಎಂದು ದಸಸಂ ಒಕ್ಕೂಟ ಪ್ರಶ್ನಿಸಿದೆ.

ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಮತ್ತು ಬಡಜನತೆಗೆ ಪ್ಯಾಕೇಜ್ ಜಾರಿಯಾಗಲಿ ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ದಸಸಂ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ರಾಜ್ಯಾದ್ಯಂತ ಪ್ರತಿಭಟನೆ ಮತ್ತು ಹಕ್ಕೊತ್ತಾಯ ಪತ್ರಗಳನ್ನು ಸಲ್ಲಿಸಲಾಗಿದೆ.

ದಲಿತರ ಮೇಲೆ ಹೆಚ್ಚುತ್ತಿರುವ ಜಾತಿ ದೌರ್ಜನ್ಯಗಳನ್ನು ಖಂಡಿಸಿ ಮತ್ತು
ಬಡವರೆಲ್ಲರಿಗೂ ಸಮಗ್ರ ದಿನಸಿ ಹಾಗೂ ಮಾಸಿಕ 5000 ರೂ ನೆರವು ಧನ ನೀಡಲೆಬೇಕೆಂದು ಆಗ್ರಹಿಸಿ ಇಂದು ವಿಜಯಪುರ, ಬಳ್ಳಾರಿ, ವಿಜಯನಗರ, ದಾವಣಗೆರೆ, ಮಂಡ್ಯ, ಚಿತ್ರದುರ್ಗ, ರಾಯಚೂರು, ಕೊಪ್ಪಳ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಪ್ರತಿಭಟನೆ ಮತ್ತು ಹಕ್ಕೊತ್ತಾಯ ಸಲ್ಲಿಕೆ ನಡೆದಿದೆ.

ಅದರ ಕೆಲವು ಫೋಟೊಗಳು ಇಲ್ಲಿವೆ.


ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 8,000 ಮಕ್ಕಳಿಗೆ ತಗುಲಿದ ಕೊರೋನಾ: ಕೋವಿಡ್‌ 3 ನೇ ಅಲೆಯ ಮುನ್ಸೂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...