Homeಮುಖಪುಟಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

- Advertisement -
- Advertisement -

ಕೊರೊನಾ ನಿರ್ವಹಣೆಯಲ್ಲಿ ಆಂಧ್ರಪ್ರದೇಶ ಸರ್ಕಾರವು ಸೋಮವಾರ ಮಹತ್ತರ ನಿರ್ಧಾರವನ್ನು ತೆಗೆದುಕೊಂಡಿದೆ. ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಗ್ರಾಮದ ನಾಟಿ ವೈದ್ಯ ಬೋನಿಗಿ ಆನಂದಯ್ಯ ಕೊರೊನಾಗೆ ಸಿದ್ಧಪಡಿಸಿದ ಗಿಡಮೂಲಿಕೆ ಔಷಧಿಗೆ ಸರ್ಕಾರದ ಒಪ್ಪಿಗೆ ಸೂಚಿಸಿದೆ,

ಆನಂದಯ್ಯ ನೀಡಿದ ಪಿ, ಎಲ್ ಮತ್ತು ಎಫ್ ವರ್ಗೀಕೃತ ಔಷಧಿಗಳನ್ನು ವಿತರಿಸುವುದಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆಯುರ್ವೇದ ವಿಜ್ಞಾನ ಕೇಂದ್ರ ಸಂಶೋಧನಾ ಮಂಡಳಿ (CCRAS) ಸಲ್ಲಿಸಿದ ಪ್ರಾಥಮಿಕ ಅಧ್ಯಯನ ವರದಿಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಕೊರೊನಾ ವೈರಸ್‌ಗೆ ನಾಟಿ ಔಷಧ ನೀಡುವ ಮೂಲಕ ನೆಲ್ಲೂರಿನ ಆನಂದಯ್ಯ ದೇಶದಲ್ಲಿ ಸಂಚಲನ ಸೃಷ್ಟಿಸಿ,  ಭಾರೀ ಚರ್ಚೆಗೆ ಕಾರಣವಾಗಿದ್ದರು. ಈಗ ಹಲವು ಪರೀಕ್ಷೆಗಳ ಬಳಿಕ ಕೆಲ ಷರತ್ತುಗಳೊಂದಿಗೆ ಆನಂದಯ್ಯ ಅವರ ನಾಟಿ ಔಷಧಿಗೆ ಒಪ್ಪಿಗೆ ದೊರೆತಿದೆ.

ಇದನ್ನೂ ಓದಿ: ದೇಶದ್ರೋಹ ಪ್ರಕರಣ: 2 ತೆಲುಗು ಸುದ್ದಿ ವಾಹಿನಿಗಳ ವಿರುದ್ಧದ ಕ್ರಮಕ್ಕೆ ಸುಪ್ರೀಂ ತಡೆ

ಇದರ ಜೊತೆಗೆ ಆನಂದಯ್ಯ ಅವರ ಕೆ ವರ್ಗದ ಅಡಿಯಲ್ಲಿ ಬರುವ ನಾಟಿ ಔಷಧಿಯಾದ ಕಣ್ಣಿಗೆ ಹಾಕುವ ಡ್ರಾಪ್‌ಗೆ ಅನುಮತಿ ದೊರೆತಿಲ್ಲ. ಏಕೆಂದರೆ ಕಣ್ಣಿಗೆ ಡ್ರಾಪ್ ಹಾಕುವ ವೈದ್ಯ ಪದ್ಧತಿಯ ಬಗ್ಗೆ ಸಂಶೋಧನಾ ವರದಿ ಬರಬೇಕಾಗಿದ್ದು, ಅದಕ್ಕೆ ಇನ್ನೂ 2 ರಿಂದ 3 ವಾರ ಸಮಯ ಬೇಕಾಗುತ್ತದೆ ಎಂದು ಹೇಳಿದೆ.

ಆನಂದಯ್ಯ ಅವರ ನಾಟಿ ಔಷಧಿಯನ್ನು ಬಳಸುವುದರಿಂದ ಯಾವುದೇ ಹಾನಿ ಇಲ್ಲ ಮತ್ತು ಈ ಔಷಧದಿಂದ ಕೋವಿಡ್‌ ಸೋಂಕು ಕಡಿಮೆ ಯಾಗುತ್ತದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು CCRAS ಹೇಳಿದೆ.

ಇನ್ನು ನೆಲ್ಲೂರಿನಲ್ಲಿ ಕೊರೊನಾ ನಿಯಮಾವಳಿಗಳನ್ನು ಅನುಸರಿಸಲು ಆದೇಶಿಸಲಾಗಿದೆ. ಕೊರೊನಾ ಸೋಂಕಿತರು ಸ್ವತಃ ಆನಂದಯ್ಯ ಅವರನ್ನು ಭೇಟಿಯಾಗಿ ಔಷಧ ಪಡೆಯಬೇಕಿಲ್ಲ. ಸೋಂಕಿತರ ಸಂಬಂಧಿಕರು  ಔಷಧ ತೆಗೆದುಕೊಂಡು ಹೋಗಬೇಕು ಎಂದು ಹೇಳಲಾಗಿದೆ.

ಈ ತಿಂಗಳ ಆರಂಭದಲ್ಲಿ ಸಾವಿರಾರು ಜನರು ಕೊರೊನಾಗೆ ಔಷಧಿ ತೆಗೆದುಕೊಳ್ಳಲು ಹಳ್ಳಿಗೆ ಸೇರಲು ಪ್ರಾರಂಭಿಸಿದ ನಂತರ ಆನಂದಯ್ಯ ಅವರ ನಾಟಿ ಔಷಧವು ಬಿಸಿ ಬಿಸಿ ಚರ್ಚೆಯ ವಿಷಯವಾಯಿತು. ಅವರ ಔಷಧಿಗಳ ಬಗ್ಗೆ ಮರುಪರಿಶೀಲನಾ ಅಧ್ಯಯನ ಮಾಡಲು ಸರ್ಕಾರವು ನಿರ್ಧರಿಸಿತ್ತು. ಔಷಧಿ ವಿತರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿತ್ತು.


ಇದನ್ನೂ ಓದಿ:  ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...