Homeಮುಖಪುಟದೀದಿ V/s ಮೋದಿ: ಬಿಜೆಪಿಯಿಂದ ಟಿಎಂಸಿಗೆ ಮತ್ತೆ ವಾಪಸಾಗಲು ಬಯಸುತ್ತಿರುವ ನಾಯಕರು

ದೀದಿ V/s ಮೋದಿ: ಬಿಜೆಪಿಯಿಂದ ಟಿಎಂಸಿಗೆ ಮತ್ತೆ ವಾಪಸಾಗಲು ಬಯಸುತ್ತಿರುವ ನಾಯಕರು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮುನ್ನ ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದ ನಾಯಕರು ಈಗ ಮತ್ತೆ ಟಿಎಂಸಿಗೆ ವಾಪಾಸ್‌ ಆಗುತ್ತಿದ್ದಾರೆ. ಇದರಿಂದ ಬಂಗಾಳದಲ್ಲಿ ದೀದಿ V/s ಮೋದಿ ಎಂಬ ಆಟಕ್ಕೆ ಮತ್ತಷ್ಟು ಕಳೆ ಬಂದಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಚುನಾವಣೆಗೆ ಮೊದಲು ಎದುರಿಸಿದ ದೊಡ್ಡ ಸವಾಲು ಎಂದರೆ, ತಮ್ಮ ಪಕ್ಷದ ನಾಯಕರು ಬಿಜೆಪಿಗೆ ಭಾರಿ ಪ್ರಮಾಣದಲ್ಲಿ ಪಕ್ಷಾಂತರವಾದದ್ದು. ನಿರಂತರವಾಗಿ ನಡೆದ ಈ ಪ್ರಕ್ರಿಯೆಯಿಂದ ಬಂಗಾಳದಲ್ಲಿ ಟಿಎಂಸಿಗೆ ಮತ್ತೆ ಅಧಿಕಾರ ಸಿಗುವುದಿಲ್ಲ ಎಂದು ಬಿಜೆಪಿ ಪ್ರಚಾರಪಡಿಸಿತ್ತು.

ಆದರೆ, ಮೇ 2 ರಂದು ಬಂದ ಫಲಿತಾಂಶದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಭರ್ಜರಿ ಬಹುಮತ ದೊರಕಿ, ಸರ್ಕಾರ ರಚಿಸಿದರು. ತೃಣಮೂಲ ಕಾಂಗ್ರೆಸ್ 292 ವಿಧಾನಸಭಾ ಸ್ಥಾನಗಳಲ್ಲಿ 213 ಸ್ಥಾನಗಳು ಮತ್ತು  ಬಿಜೆಪಿ 77 ಸ್ಥಾನಗಳನ್ನು ಗಳಿಸಿದೆ.

ಈಗ, ಬಂಗಾಳದಲ್ಲಿ ರಿವರ್ಸ್ ಮೈಗ್ರೇಶನ್ ಹೊಸ ಪ್ರವೃತ್ತಿಯಾಗಿದ್ದು, ಬಿಜೆಪಿಯಿಂದ ತೃಣಮೂಲ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡುವವರು ಹೆಚ್ಚಾಗಿದ್ದು, ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ಪಕ್ಷಕ್ಕೆ ಮರು ಪ್ರವೇಶ ಕೋರಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಉದಾಹರಣೆಗೆ, ಮಾಜಿ ಶಾಸಕ ಸೋನಾಲಿ ಗುಹಾ, ಮಾರ್ಚ್‌ನಲ್ಲಿ ತೃಣಮೂಲವನ್ನು ತೊರೆದ ನಂತರ “ನೀರಿನಿಂದ ಹೊರ ಬಂದ ಮೀನು ನಾನು” ಎಂದು ಹೇಳಿದ್ದರು. “ಮತ್ತೊಮ್ಮೆ ಟಿಎಂಸಿ ಧ್ವಜವನ್ನು ಹಿಡಿಯಲು ಬಯಸುತ್ತೇನೆ” ಎಂದು ಫುಟ್ಬಾಲ್ ಆಟಗಾರ, ರಾಜಕಾರಣಿ ದೀಪೇಂದು ಬಿಸ್ವಾಸ್, ಮಮತಾ ಬ್ಯಾನರ್ಜಿಗೆ ಪತ್ರ ಬರೆದಿದ್ದಾರೆ. ಇನ್ನೂ ಪಿಟಿಐ ವರದಿಯ ಪ್ರಕಾರ ಅಂತಹ ಇತರ ಹೆಸರುಗಳಲ್ಲಿ ಸರಳಾ ಮುರ್ಮೂ ಮತ್ತು ಅಮಲ್ ಆಚಾರ್ಯ ಕೂಡ ಸೇರಿದ್ದಾರೆ. ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಮಂತ್ರಿಯಾಗಿದ್ದ ರಾಜೀಬ್ ಬ್ಯಾನರ್ಜಿ ಕೂಡ ಪಕ್ಷಕ್ಕೆ ವಾಪಸ್ ಬರುವುದಾಗಿ ಹೇಳಿದ್ದಾರೆ.

“ನಾಯಕರು ಮಾತ್ರವಲ್ಲ, 7 ರಿಂದ 8 ಮಂದಿ ವಿಜೇತ ಶಾಸಕರು ಮತ್ತು ಬಿಜೆಪಿಯ 3 ರಿಂದ 4 ಮಂದಿ ಹಾಲಿ ಸಂಸದರು ತೃಣಮೂಲ ಕಾಂಗ್ರೆಸ್ ಸೇರಲು ಇಚ್ಛೆ ವ್ಯಕ್ತಪಡಿಸಿದ್ದಾರೆ” ಎಂದು ತೃಣಮೂಲ ವಕ್ತಾರ ಕುನಾಲ್ ಘೋಷ್ ತಿಳಿಸಿದ್ದಾರೆ. ಆದರೆ, ಪಕ್ಷದ ನಾಯಕತ್ವವು ಈ ಬಗ್ಗೆ ಯಾವ ನಿರ್ಧಾರ ತೆಗೆದುಕೊಂಡಿದೆ ಎಂಬ ಬಗ್ಗೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

“ಆದರೆ ನಾವು ಪಕ್ಷದ ಕಾರ್ಯಕರ್ತರ ಭಾವನೆಗಳನ್ನು ಗೌರವಿಸಬೇಕಾಗಿದೆ. ಈ ನಾಯಕರು ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಪಕ್ಷವನ್ನು ತೊರೆದಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಮಮತಾ ಬ್ಯಾನರ್ಜಿ ಅವರ ನಾಯಕತ್ವದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಟಿಎಂಸಿಗೆ ಹಿಂದಿರುಗುವವರಲ್ಲಿ ಮತ್ತೆ ಕೇಳಿಬಂದಿರುವ ದೊಡ್ಡ ಹೆಸರು ಮುಕುಲ್ ರಾಯ್. ತೃಣಮೂಲ ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಸೇರ್ಪಡೆಗೊಂಡ ಮೊದಲ ನಾಯಕರಾದ ಮುಕುಲ್ ರಾಯ್‌. ಅವರ ಮಗ ಈಗ ಬಿಜೆಪಿಯನ್ನು ಟೀಕಿಸಿ ಫೇಸ್‌ಬುಕ್ ಪೋಸ್ಟ್ ಮಾಡಿದ್ದಾರೆ. ಈ ಕುರಿತು ಹಿರಿಯ ನಾಯಕ ಮುಕುಲ್ ರಾಯ್‌  ಒಂದು ಮಾತನ್ನೂ ಹೇಳಿಲ್ಲ.

ಒಟ್ಟಾರೆ, ವಿಧಾನಸಭಾ ಚುನಾವಣೆಯಲ್ಲಿ ದೀದಿ V/s ಮೋದಿ ಎಂಬುದು ಜನಪ್ರಿಯವಾಗಿತ್ತು. ಟಿಎಂಸಿಯನ್ನು ಸೋಲಿಸಲು ಬಿಜೆಪಿ ಎಲ್ಲಾ ಪ್ರಯತ್ನಗಳನ್ನು ನಡೆಸಿತ್ತು. ಸುವೇಂದು ಅಧಿಕಾರಿ, ಮುಕುಲ್ ರಾಯ್ ಸೇರಿದಂತೆ ಹಲವು ನಾಯಕರು ಟಿಎಂಸಿ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈಗ ಬಿಜೆಪಿ ಬಿಟ್ಟು ಟಿಎಂಸಿಗೆ ಸೇರಲು ಬಯಸುತ್ತಿದ್ದಾರೆ.


ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...