Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

ಫ್ಯಾಕ್ಟ್‌ಚೆಕ್‌: ಸೋನಿಯಾ ಗಾಂಧಿಯ ಎಡಿಟೆಡ್‌‌ ಚಿತ್ರವನ್ನು ಹಂಚುತ್ತಿರುವ ಬಿಜೆಪಿ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಈ ಚಿತ್ರದಲ್ಲಿ ಸೊನಿಯಾ ಗಾಂಧಿ ಅವರ ಹಿಂದೆ ಇರುವ ಪುಸ್ತಕದ ಕಪಾಟಿನಲ್ಲಿ ‘ಪವಿತ್ರ ಬೈಬಲ್’, ಯೇಸುವಿನ ಪ್ರತಿಮೆ ಮತ್ತು ‘ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರವಾಗಿ ಪರಿವರ್ತಿಸುವುದು ಹೇಗೆ’ ಎಂಬ ಪುಸ್ತಕ ಇದೆ ಎಂದು ತೋರಿಸಲಾಗಿದೆ.

ಈ ಚಿತ್ರವನ್ನು ಟ್ವಿಟರ್‌‌ನಲ್ಲಿ @noconversion ಎಂಬ ಬಳಕೆದಾರ ಮೊದಲಿಗೆ ಟ್ವೀಟ್ ಮಾಡಿದ್ದರು. ಇದನ್ನು ಕೆಳಗೆ ನೋಡಬಹುದು.

ಇಷ್ಟೇ ಅಲ್ಲದೆ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಸುಮತಿ ವೆಂಕಟೇಶ್‌, ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಹಾಗೂ ಬಿಜೆಪಿ ಬೆಂಬಲಿಗ ರೇಣುಕಾ ಜೈನ್ ಎಂಬವರು ಕೂಡಾ ಈ ಚಿತ್ರವನ್ನು ಹಂಚಿಕೊಂಡಿದ್ದರು. ಆದರೆ ಅವರು ನಂತರ ಅದನ್ನು ಡಿಲಿಟ್ ಮಾಡಿದ್ದಾರೆ. ಅಲ್ಲದೆ  ಈ ಚಿತ್ರವು ಫೇಸ್‌ಬುಕ್‌ನಲ್ಲೂ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ಫೇಸ್‌ಬುಕ್‌ ಗುಂಪುಗಳಾದ ಒಂದು ಲಕ್ಷ ಫಾಲೋವರ್‌ಗಳು ಇರುವ ‘ಸುದರ್ಶನ್ ನ್ಯೂಸ್’ ಮತ್ತು ಮೂರು ಲಕ್ಷ ಫಾಲೋವರ್‌‌ಗಳಿರುವ ‘ಪಿಎಂಒ ಇಂಡಿಯಾ ನವದೆಹಲಿ’ ಈ ಚಿತ್ರವನ್ನು ಫೇಸ್‌‌ಬುಕ್‌ನಲ್ಲಿ ಮತ್ತಷ್ಟು ಹರಿದಾಡುವಂತೆ ಮಾಡಿದೆ.

ಮಾರ್ಫ್‌ ಮಾಡಿರುವ ಚಿತ್ರ

ಬಹಳ ಎಚ್ಚರಿಕೆಯಿಂದ ಗಮನಿಸಿದರೆ, ಈ ಚಿತ್ರದ ಎಡಭಾಗದಲ್ಲಿ ಟ್ವಿಟ್ಟರ್ ಹ್ಯಾಂಡಲ್‌ ಒಂದರ ಹೆಸರು @noconversion ವಾಟರ್‌ಮಾರ್ಕ್ ಇರುವುದನ್ನು ಕಾಣಬಹುದು. ಆದ್ದರಿಂದ ಇದು ಈ ಚಿತ್ರವು ಒರಿಜಿನಲ್‌ ಚಿತ್ರವಲ್ಲ, ಮಾರ್ಫ್ ಮಾಡಲಾಗಿದೆ ಎಂದು ಸೂಚಿಸುತ್ತದೆ.

ಇದನ್ನೂ ಓದಿ: ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ವೈರಲ್‌ ಚಿತ್ರವನ್ನು ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್‌ನ್ಯೂಸ್‌ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಡಿದೆ. ಆಗ 2020 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ಪೋಸ್ಟ್ ಮಾಡಿದ ವೀಡಿಯೊವೊಂದು ಸಿಕ್ಕಿದೆ. ವಿಡಿಯೊದಲ್ಲಿ ಸೋನಿಯಾ ಗಾಂಧಿ ಅವರು ರೈತರ ಆಂದೋಲನ ಮತ್ತು ಇಂಧನ ಬೆಲೆಗಳ ಏರಿಕೆ ಕುರಿತು ಕೇಂದ್ರವನ್ನು ಪ್ರಶ್ನಿಸಿದ್ದರು. ಈ ವಿಡಿಯೋವನ್ನು ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿದ್ದಾರೆ. ವಾಸ್ತವವಾಗಿ, ಆ ಪುಸ್ತಕದ ಕಪಾಟಿನ ಮುಂದೆ ಸೋನಿಯಾ ಗಾಂಧಿ ಮಾತನಾಡುತ್ತಿರುವ ಅನೇಕ ವೀಡಿಯೊಗಳನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಆಲ್ಟ್ ನ್ಯೂಸ್ ವೆಬ್‌ಸೈಟ್‌‌ ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್ ಅನ್ನು ವೈರಲ್ ಚಿತ್ರದೊಂದಿಗೆ ಹೋಲಿಸಿದೆ. ವೀಡಿಯೊದಲ್ಲಿ ಪುಸ್ತಕದ ಕಪಾಟಿನಲ್ಲಿ ‘ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರವಾಗಿ ಪರಿವರ್ತಿಸುವುದು ಹೇಗೆ’ ಮತ್ತು ‘ಹೋಲಿ ಬೈಬಲ್’ ಮತ್ತು ಯೇಸುವಿನ ಪ್ರತಿಮೆ ಇಲ್ಲದಿರುವುದನ್ನು ನಾವು ಗಮನಿಸಬಹುದಾಗಿದೆ. ಹಾಗಾಗಿ, ವೈರಲ್ ಚಿತ್ರವು ಮಾರ್ಫಿಂಗ್ ಮಾಡಿರುವ ಚಿತ್ರವಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಫ್ಯಾಸಿಸಂ ಸತ್ಯವನ್ನು ಭಯಪಡುತ್ತದೆ. ಸುಳ್ಳು ಅದರ ಬುನಾದಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...