Homeಕರ್ನಾಟಕಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

'ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿಯಂತಹ ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಈ ಸಮುದಾಯ ವಂಚಿತವಾಗುತ್ತಿದೆ.’

- Advertisement -
- Advertisement -

ಊರಾಚೆಯ ಸ್ಮಶಾನಗಳಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕಗಳಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಜೀವನ ನಡೆಸುವ ಅಲೆಮಾರಿ ಸಮುದಾಯಗಳು ಲಾಕ್‌ಡೌನ್‌ನಲ್ಲಿ ಕೆಲಸವಿಲ್ಲದೆ ಹಸಿವಿನಿಂದ ಕಂಗಾಲುತ್ತಿವೆ. ಕೊರೊನಾ ಲಾಕ್‌ಡೌನ್‌ನಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಗೌರವಾದ್ಯಕ್ಷ, ಡಾ.ಸಿ.ಎಸ್.ದ್ವಾರಕಾನಾಥ್ ಮುಖ್ಯಮಂತ್ರಿಗೆಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸರ್ಕಾರದಿಂದ ಸಂಕಷ್ಟದಲ್ಲಿ ಸಿಲುಕಿರುವ, ಆಟೋ ಚಾಲಕರಿಗೆ, ವಾಹನ ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ, ಕ್ಷೌರಿಕರು, ಮಡಿವಾಳರು, ನೇಕಾರರೇ ಮುಂತಾದ ಹಿಂದುಳಿದ ಸಮುದಾಯಗಳಿಗೆ ಹಾಗೂ ಹಲವಾರು ಕಾರ್ಮಿಕ  ವರ್ಗದ ಪ್ರತಿ ಕುಟುಂಬಕ್ಕೂ ನೆರವನ್ನು ಘೋಷಣೆ ಮಾಡಲಾಗಿದೆ.

ಆದರೆ, ಊರಾಚೆಯ ಸ್ಮಶಾನದಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕದಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಊರಾಚೆ ಬದುಕುವ ಅಲೆಮಾರಿಗಳ ಆಕ್ರಂದನವನ್ನು ಒಮ್ಮೆ ಗಮನಿಸಿ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಕುರಿತು 14 ಏಪ್ರಿಲ್ ಮತ್ತು ಮೇ 8 ರಂದು ಎರಡು ಬಾರಿ ಪತ್ರ ಬರೆದು ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

’ಈ ಸಮುದಾಯಗಳು ಯಾವ ಸರ್ಕಾರಿ  ಅಧಿಕಾರಿಗಳಿಗಾಗಲಿ ಅಥವಾ ಜನ ಪ್ರತಿನಿಧಿಗಳಿಗಾಗಲಿ ಸಾಮಾನ್ಯವಾಗಿ ಕಾಣಸಿಗುವುದಿಲ್ಲ. ನಮ್ಮ ಅಲೆಮಾರಿಗಳು ಊರೂರು ಅಲೆಯುತ್ತಾ ತಮ್ಮ ಕುಲ ಕಸುಬುಗಳಾದ ತೊಗಲು ಗೊಂಬೆಯಾಟ, ಬೀಗ ರಿಪೇರಿ, ಛತ್ರಿ ರಿಪೇರಿ, ಗಾರುಡಿ, ಕಸರತ್ತಿನ ಕಲೆ, ದೊಂಬರಾಟ, ನಾಟಿಮದ್ದು ಮಾರುವುದು, ಸೂಜಿದಾರ, ಪಿನ್ನು ಮಾರುವುದು, ಕೂದಲು ಆರಿಸುವುದು, ಹಚ್ಚೆ ಹಾಕುವುದು, ಪ್ಲಾಸ್ಟಿಕ್ ವಸ್ತುಗಳ ಮಾರಾಟ, ದೇವರ ಪೋಟೋ ಮಾರುವುದು, ಶಾಸ್ತ್ರ ಹೇಳುವುದು, ಮೋಡಿ ಆಟ ಇತ್ಯಾದಿ ಪ್ರದರ್ಶನ ಕಲೆಗಳ ಸೇವೆ ಮಾಡುತ್ತಾ ಗ್ರಾಮಾಂತರ ಪ್ರದೇಶಗಳಲ್ಲಿ ಅಲೆಮಾರಿ ಜೀವನ ನಡೆಸುತ್ತಿರುತ್ತಾರೆ’.

’ಹೀಗೆ ಅಲೆಮಾರಿಗಳಾಗಿರುವುದರಿಂದ ಇವರಿಗಾಗಲಿ, ಇವರ ಮಕ್ಕಳಿಗಾಗಲಿ ಶಿಕ್ಷಣವೆಂಬುದು ಮರೀಚಿಕೆಯಾಗಿದೆ‌. ಇವರಿಗೆ ರೇಷನ್ ಕಾರ್ಡ್ ಆಗಲಿ, ಆಧಾರ್ ಕಾರ್ಡ್ ಆಗಲಿ, ಗುರುತಿನ ಚೀಟಿಯಾಗಲಿ, ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಅಪಾರವಾಗಿ ವಂಚಿತರಾಗುತ್ತಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ನಮ್ಮ ಅಲೆಮಾರಿಗಳಿಗೆ ಸರ್ಕಾರದಿಂದ ನೀಡುವ ಯಾವುದೇ ಹಣಕಾಸಿನ ನೆರವಾವಾಗಲಿ ಹಾಗೂ ಸರ್ಕಾರದಿಂದ ವಿತರಿಸಿದ ಪಡಿತರವಾಗಲಿ ಸಿಗದೆ ಏಲ್ಲಾ ಸೌಲಭ್ಯಗಳಿಂದ  ವಂಚಿತರಾಗಿದ್ದಾರೆ’ ಎಂದು ದ್ವಾರಕಾನಾಥ್ ತಿಳಿಸಿದ್ದಾರೆ.

’ಇಂತಹ ಸೌಲಭ್ಯ ವಂಚಿತ ಅಲೆಮಾರಿಗಳು ಹಸಿವಿನಿಂದ ನರಳುತ್ತಾ  ಅನ್ನಕ್ಕಾಗಿ  ಪರಿತಪಿಸುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ  ಅಲೆಮಾರಿಗಳ ಜೀವನ ತುಂಬಾ ದುಸ್ಥಿತಿಯಲ್ಲಿದೆ ಹಾಗೂ ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದು, ಅನೇಕ ಅಲೆಮಾರಿಗಳಿಗೆ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಕೊರೊನಾದಿಂದ ಸಾಯುವುದು ಒಂದು ಕಡೆಯಾದರೆ ಹಸಿವಿನಿಂದ ಕೆಲವೇ ದಿನಗಳಲ್ಲಿ ಅನೇಕರು ಸಾಯುವುದರಲ್ಲಿ ಯಾವುದೇ ಸಂಶಯವಿಲ್ಲ.
ರಾಜ್ಯದ ಕೆಲವು ಕಡೆ ಈ ಅಲೆಮಾರಿಗಳಿಗೆ ಸಂಘ ಸಂಸ್ಥೆಗಳು ಅಲ್ಪ ಸ್ವಲ್ಪ ಸಹಾಯ ಮಾಡಿರುವುದನ್ನು ಬಿಟ್ಟರೆ ಬೇರೆ  ಯಾವುದೇ ಜಿಲ್ಲಾಡಳಿತಗಳಾಗಲಿ, ತಾಲ್ಲೂಕು ಆಡಳಿತಗಳಾಗಲಿ ನೆರವು ನೀಡದೇ ಮೌನವಹಿಸಿವೆ’ ಎಂದು ಆರೋಪಿಸಲಾಗಿದೆ.

‌ಅಲೆಮಾರಿಗಳ ಅಭಿವೃದ್ಧಿಗಾಗಿಯೇ ಸ್ಥಾಪನೆಯಾದ ರಾಜ್ಯ ಪ.ಜಾತಿ, ಪ.ವರ್ಗದ ಅಲೆಮಾರಿ ಅಭಿವೃದ್ಧಿ ಕೋಶದಿಂದಾಗಲಿ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದಾಗಲಿ  ಯಾವುದೇ ನೆರವನ್ನೂ ಸಹ ಈವರೆಗೂ ನೀಡಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

1) ನಮ್ಮ ರಾಜ್ಯದಲ್ಲಿ ಇರುವ ಅಲೆಮಾರಿಗಳ ಪ್ರತಿ ಕುಟುಂಬಕ್ಕೂ ಸಹ 5,000 ರೂಪಾಯಿಗಳ ನೆರವಿನ ಹಣವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು.
2) ಸಂಪೂರ್ಣ ಅಡುಗೆ ಪದಾರ್ಥಗಳಿರುವ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಕೂಡಲೆ ವಿತರಿಸಬೇಕು ಎಂದು ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾ ಆಗ್ರಹಿಸಿದೆ.


ಇದನ್ನೂ ಓದಿ: ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...