Homeಕರ್ನಾಟಕಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

'ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿಯಂತಹ ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಈ ಸಮುದಾಯ ವಂಚಿತವಾಗುತ್ತಿದೆ.’

- Advertisement -
- Advertisement -

ಊರಾಚೆಯ ಸ್ಮಶಾನಗಳಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕಗಳಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಜೀವನ ನಡೆಸುವ ಅಲೆಮಾರಿ ಸಮುದಾಯಗಳು ಲಾಕ್‌ಡೌನ್‌ನಲ್ಲಿ ಕೆಲಸವಿಲ್ಲದೆ ಹಸಿವಿನಿಂದ ಕಂಗಾಲುತ್ತಿವೆ. ಕೊರೊನಾ ಲಾಕ್‌ಡೌನ್‌ನಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಗೌರವಾದ್ಯಕ್ಷ, ಡಾ.ಸಿ.ಎಸ್.ದ್ವಾರಕಾನಾಥ್ ಮುಖ್ಯಮಂತ್ರಿಗೆಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಸರ್ಕಾರದಿಂದ ಸಂಕಷ್ಟದಲ್ಲಿ ಸಿಲುಕಿರುವ, ಆಟೋ ಚಾಲಕರಿಗೆ, ವಾಹನ ಚಾಲಕರಿಗೆ, ಕಟ್ಟಡ ಕಾರ್ಮಿಕರಿಗೆ, ಕ್ಷೌರಿಕರು, ಮಡಿವಾಳರು, ನೇಕಾರರೇ ಮುಂತಾದ ಹಿಂದುಳಿದ ಸಮುದಾಯಗಳಿಗೆ ಹಾಗೂ ಹಲವಾರು ಕಾರ್ಮಿಕ  ವರ್ಗದ ಪ್ರತಿ ಕುಟುಂಬಕ್ಕೂ ನೆರವನ್ನು ಘೋಷಣೆ ಮಾಡಲಾಗಿದೆ.

ಆದರೆ, ಊರಾಚೆಯ ಸ್ಮಶಾನದಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕದಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಊರಾಚೆ ಬದುಕುವ ಅಲೆಮಾರಿಗಳ ಆಕ್ರಂದನವನ್ನು ಒಮ್ಮೆ ಗಮನಿಸಿ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಕುರಿತು 14 ಏಪ್ರಿಲ್ ಮತ್ತು ಮೇ 8 ರಂದು ಎರಡು ಬಾರಿ ಪತ್ರ ಬರೆದು ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

’ಈ ಸಮುದಾಯಗಳು ಯಾವ ಸರ್ಕಾರಿ  ಅಧಿಕಾರಿಗಳಿಗಾಗಲಿ ಅಥವಾ ಜನ ಪ್ರತಿನಿಧಿಗಳಿಗಾಗಲಿ ಸಾಮಾನ್ಯವಾಗಿ ಕಾಣಸಿಗುವುದಿಲ್ಲ. ನಮ್ಮ ಅಲೆಮಾರಿಗಳು ಊರೂರು ಅಲೆಯುತ್ತಾ ತಮ್ಮ ಕುಲ ಕಸುಬುಗಳಾದ ತೊಗಲು ಗೊಂಬೆಯಾಟ, ಬೀಗ ರಿಪೇರಿ, ಛತ್ರಿ ರಿಪೇರಿ, ಗಾರುಡಿ, ಕಸರತ್ತಿನ ಕಲೆ, ದೊಂಬರಾಟ, ನಾಟಿಮದ್ದು ಮಾರುವುದು, ಸೂಜಿದಾರ, ಪಿನ್ನು ಮಾರುವುದು, ಕೂದಲು ಆರಿಸುವುದು, ಹಚ್ಚೆ ಹಾಕುವುದು, ಪ್ಲಾಸ್ಟಿಕ್ ವಸ್ತುಗಳ ಮಾರಾಟ, ದೇವರ ಪೋಟೋ ಮಾರುವುದು, ಶಾಸ್ತ್ರ ಹೇಳುವುದು, ಮೋಡಿ ಆಟ ಇತ್ಯಾದಿ ಪ್ರದರ್ಶನ ಕಲೆಗಳ ಸೇವೆ ಮಾಡುತ್ತಾ ಗ್ರಾಮಾಂತರ ಪ್ರದೇಶಗಳಲ್ಲಿ ಅಲೆಮಾರಿ ಜೀವನ ನಡೆಸುತ್ತಿರುತ್ತಾರೆ’.

’ಹೀಗೆ ಅಲೆಮಾರಿಗಳಾಗಿರುವುದರಿಂದ ಇವರಿಗಾಗಲಿ, ಇವರ ಮಕ್ಕಳಿಗಾಗಲಿ ಶಿಕ್ಷಣವೆಂಬುದು ಮರೀಚಿಕೆಯಾಗಿದೆ‌. ಇವರಿಗೆ ರೇಷನ್ ಕಾರ್ಡ್ ಆಗಲಿ, ಆಧಾರ್ ಕಾರ್ಡ್ ಆಗಲಿ, ಗುರುತಿನ ಚೀಟಿಯಾಗಲಿ, ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ  ನೀಡುವ ಎಲ್ಲಾ  ನೆರವಿನಿಂದ ಅಪಾರವಾಗಿ ವಂಚಿತರಾಗುತ್ತಿದ್ದಾರೆ.
ಈ ಎಲ್ಲಾ ಕಾರಣಗಳಿಂದಾಗಿ ನಮ್ಮ ಅಲೆಮಾರಿಗಳಿಗೆ ಸರ್ಕಾರದಿಂದ ನೀಡುವ ಯಾವುದೇ ಹಣಕಾಸಿನ ನೆರವಾವಾಗಲಿ ಹಾಗೂ ಸರ್ಕಾರದಿಂದ ವಿತರಿಸಿದ ಪಡಿತರವಾಗಲಿ ಸಿಗದೆ ಏಲ್ಲಾ ಸೌಲಭ್ಯಗಳಿಂದ  ವಂಚಿತರಾಗಿದ್ದಾರೆ’ ಎಂದು ದ್ವಾರಕಾನಾಥ್ ತಿಳಿಸಿದ್ದಾರೆ.

’ಇಂತಹ ಸೌಲಭ್ಯ ವಂಚಿತ ಅಲೆಮಾರಿಗಳು ಹಸಿವಿನಿಂದ ನರಳುತ್ತಾ  ಅನ್ನಕ್ಕಾಗಿ  ಪರಿತಪಿಸುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ  ಅಲೆಮಾರಿಗಳ ಜೀವನ ತುಂಬಾ ದುಸ್ಥಿತಿಯಲ್ಲಿದೆ ಹಾಗೂ ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದು, ಅನೇಕ ಅಲೆಮಾರಿಗಳಿಗೆ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಕೊರೊನಾದಿಂದ ಸಾಯುವುದು ಒಂದು ಕಡೆಯಾದರೆ ಹಸಿವಿನಿಂದ ಕೆಲವೇ ದಿನಗಳಲ್ಲಿ ಅನೇಕರು ಸಾಯುವುದರಲ್ಲಿ ಯಾವುದೇ ಸಂಶಯವಿಲ್ಲ.
ರಾಜ್ಯದ ಕೆಲವು ಕಡೆ ಈ ಅಲೆಮಾರಿಗಳಿಗೆ ಸಂಘ ಸಂಸ್ಥೆಗಳು ಅಲ್ಪ ಸ್ವಲ್ಪ ಸಹಾಯ ಮಾಡಿರುವುದನ್ನು ಬಿಟ್ಟರೆ ಬೇರೆ  ಯಾವುದೇ ಜಿಲ್ಲಾಡಳಿತಗಳಾಗಲಿ, ತಾಲ್ಲೂಕು ಆಡಳಿತಗಳಾಗಲಿ ನೆರವು ನೀಡದೇ ಮೌನವಹಿಸಿವೆ’ ಎಂದು ಆರೋಪಿಸಲಾಗಿದೆ.

‌ಅಲೆಮಾರಿಗಳ ಅಭಿವೃದ್ಧಿಗಾಗಿಯೇ ಸ್ಥಾಪನೆಯಾದ ರಾಜ್ಯ ಪ.ಜಾತಿ, ಪ.ವರ್ಗದ ಅಲೆಮಾರಿ ಅಭಿವೃದ್ಧಿ ಕೋಶದಿಂದಾಗಲಿ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದಾಗಲಿ  ಯಾವುದೇ ನೆರವನ್ನೂ ಸಹ ಈವರೆಗೂ ನೀಡಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ.

1) ನಮ್ಮ ರಾಜ್ಯದಲ್ಲಿ ಇರುವ ಅಲೆಮಾರಿಗಳ ಪ್ರತಿ ಕುಟುಂಬಕ್ಕೂ ಸಹ 5,000 ರೂಪಾಯಿಗಳ ನೆರವಿನ ಹಣವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು.
2) ಸಂಪೂರ್ಣ ಅಡುಗೆ ಪದಾರ್ಥಗಳಿರುವ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಕೂಡಲೆ ವಿತರಿಸಬೇಕು ಎಂದು ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾ ಆಗ್ರಹಿಸಿದೆ.


ಇದನ್ನೂ ಓದಿ: ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...