Homeಅಂತರಾಷ್ಟ್ರೀಯಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

ಜನಸಂಖ್ಯಾ ನೀತಿಯಲ್ಲಿ ಮತ್ತೆ ಬದಲಾವಣೆ ತಂದ ಚೀನಾ ಕಮ್ಯುನಿಸ್ಟ್‌‌ ಪಕ್ಷ!

- Advertisement -
- Advertisement -

ಚೀನಾ ಸರ್ಕಾರವು ತನ್ನ ಮಹತ್ವದ ನೀತಿ ಬದಲಾವಣೆಯೊಂದರಲ್ಲಿ, ತನ್ನ ದೀರ್ಘಾವಧಿಯ ಎರಡು ಮಕ್ಕಳ ನೀತಿಯಲ್ಲಿ ಬದಲಾವಣೆ ಮಾಡಿದೆ. ಇದರೊಂದಿಗೆ ಚೀನಾದ ದಂಪತಿಗಳಿಗೆ ಮೂರು ಮಕ್ಕಳನ್ನು ಹೊಂದಲು ಅವಕಾಶ ಮಾಡಿಕೊಟ್ಟಿದೆ. ಕ್ಸಿ ಜಿನ್‌ಪಿಂಗ್ ನೇತೃತ್ವದ ಚೀನಾ ಕಮ್ಯುನಿಸ್ಟ್ ಪಕ್ಷದ ಪೊಲಿಟ್‌ಬ್ಯುರೊ ಈ ನಿರ್ಧಾರ ಕೈಗೊಂಡಿದೆ.

“ದಂಪತಿಗಳು ಮೂರು ಮಕ್ಕಳನ್ನು ಹೊಂದಬಹುದು” ಎಂದು ರಾಜ್ಯ ಮಾಧ್ಯಮ ಕ್ಸಿನ್ಹುವಾ ಸೋಮವಾರ ವರದಿ ಮಾಡಿದೆ.

ಜನನ ಪ್ರಮಾಣದಲ್ಲಿ ಆತಂಕಕಾರಿ ಕುಸಿತ ಮತ್ತು ಐವತ್ತಕ್ಕಿಂತ ಹೆಚ್ಚಿನ ವಯಸ್ಸಿನ ಜನಸಂಖ್ಯೆಯ ಹೆಚ್ಚಳದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚೀನಾದ ಫಲವತ್ತತೆ ದರವು ಪ್ರಸ್ತುತ 1.3 ರಷ್ಟಿದೆ. ಮುದುಕರ ಜನಸಂಖ್ಯೆ ಹೆಚ್ಚುತ್ತಿರುವ ಕಾರಣಕ್ಕೆ 2015 ರಲ್ಲಿ ಚೀನಾ ಸರ್ಕಾರವು ತನ್ನ ಜನಸಂಖ್ಯಾ ನೀತಿಯನ್ನು ಒಂದು ಮಗುವಿನಿಂದ ಎರಡು ಮಗುವಾಗಿ ಬದಲಾಯಿಸಿತ್ತು.

ಇದನ್ನೂ ಓದಿ: ಕಪ್ಪು ಫಂಗಸ್‌‌ ಬಗ್ಗೆ ಕೇಂದ್ರಕ್ಕೆ 3 ಪ್ರಶ್ನೆಗಳನ್ನು ಕೇಳಿದ ರಾಹುಲ್ ಗಾಂಧಿ

“ಈ ನೀತಿ ಹಳೆಯದಾಗಿದೆ. ಚೀನಾಕ್ಕೆ ಬೇಕಾಗಿರುವುದು ಮತ್ತೊಂದು ರಾಜ್ಯ ನೀತಿಯಲ್ಲ, ಬದಲಿಗೆ ಉತ್ತಮವಾದ ಸಮಾಜವಾಗಿದೆ” ಎಂದು ಕ್ಯಾಲಿಫೋರ್ನಿಯಾ ಇರ್ವಿನ್ ವಿಶ್ವವಿದ್ಯಾಲಯದ ಪ್ರೊಫೆಸರ್ ವಾಂಗ್ ಫೆಂಗ್ ಹೇಳಿದ್ದಾರೆ.

ಚೀನಾದ ಈ ಹೊಸ ನೀತಿಯ ಬಗ್ಗೆ ಕೆಲವರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. “ಈ ನೀತಿಯಿಂದ ಅಧಿಕಾರಿಗಳು ನಿರೀಕ್ಷಿಸಿದಷ್ಟು ಸಾಧನೆ ಇರದೆ ಇರಬಹುದು. ಈ ದಿನಗಳಲ್ಲಿ ಮಗುವನ್ನು ಬೆಳೆಸುವುದು ತುಂಬಾ ದುಬಾರಿಯಾಗಿದ್ದು, ಚೀನಾದಲ್ಲಿ ವಸತಿ ಅಗ್ಗವಾಗಿಲ್ಲ” ಎಂದು ಗುವಾಂಗ್‌‌ಸೂದಲ್ಲಿನ ಸ್ವತಂತ್ರ ಜನಸಂಖ್ಯಾಶಾಸ್ತ್ರಜ್ಞ ಹಿ ಯಾಫು ಹೇಳಿದ್ದಾರೆ.

ಆದಾಗ್ಯೂ, ಹಾಂಗ್ ಕಾಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಪ್ರೊಫೆಸರ್ ಸ್ಟುವರ್ಟ್ ಗೀಟೆಲ್-ಬ್ಯಾಟನ್ ಈ ಕ್ರಮವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಯೋಗಿ ಸರ್ಕಾರದ ವಿರುದ್ಧ ಜನಾಕ್ರೋಶ: ಕೋವಿಡ್ ಬಿಕ್ಕಟ್ಟಿನಲ್ಲಿ ಮುಂದಿನ ಚುನಾವಣೆಯ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...