ಬಂಗಾಳದಲ್ಲಿ ಯಾಸ್ ಚಂಡಮಾರುತದ ಕುರಿತು ಪ್ರಧಾನಿ ಮೋದಿ ಅವರ ಸಭೆಗೆ ಗೈರುಹಾಜರಾಗಿರುವುದನ್ನು ವಿವರಿಸುವಂತೆ ಪಶ್ಚಿಮ ಬಂಗಾಳದ ನಿವೃತ್ತ ಮುಖ್ಯ ಕಾರ್ಯದರ್ಶಿ ಅಲಪನ್ ಬಂಧೋಪಾಧ್ಯಾಯ ಅವರಿಗೆ ಕೇಂದ್ರ ಸರ್ಕಾರ ಶೋಕಾಸ್ ನೋಟಿಸ್ ನೀಡಿದೆ. ಕೇಂದ್ರವು ವಿಪತ್ತು ನಿರ್ವಹಣಾ ಕಾಯ್ದೆಯಡಿ ಈ ನೋಟಿಸ್ ನೀಡಿದ್ದು, ಸೋಮವಾರದೊಳಗೆ ಪ್ರತಿಕ್ರಿಯಿಸುವಂತೆ ಬಂದೋಪಾಧ್ಯಾಯ ಅವರನ್ನು ಕೇಳಿದೆ.
ಅಲಪನ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆಗೆ ಮೋದಿಯನ್ನು ಭೇಟಿ ಮಾಡಿ ಯಾಸ್ ಚಂಡಮಾರುತದಿಂದ ಉಂಟಾದ ಹಾನಿ ಕುರಿತಾಗಿ ವರದಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ ಕೇಂದ್ರವು ಕರೆದಿದ್ದ ಪುನರ್ ಪರಿಶೀಲಿನೆ ಸಭೆಗೆ ಅವರು ಗೈರಾಗಿದ್ದರು. ಇದರ ಬೆನ್ನಲ್ಲೆ ಅವರನ್ನು ಕೇಂದ್ರಕ್ಕೆ ವಾಪಾಸ್ ಕಳುಹಿಸಬೇಕು ಎಂದು ಕೇಂದ್ರವು ರಾಜ್ಯವನ್ನು ಕೇಳಿಕೊಂಡಿತ್ತು.
ಇದನ್ನೂ ಓದಿ: ಕೇಂದ್ರಕ್ಕೆ ಮುಖ್ಯ ಕಾರ್ಯದರ್ಶಿಯನ್ನು ಕಳುಹಿಸಲ್ಲ: ಮಮತಾ ಬ್ಯಾನರ್ಜಿ
ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು, ಮುಖ್ಯ ಕಾರ್ಯದರ್ಶಿಯನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರದ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಕೋರಿದ್ದರು. ಜೊತೆಗೆ ಅವರನ್ನು ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದಿಲ್ಲ ಎಂದು ತಿಳಿಸಿದ್ದರು. ಆದರೆ ಕೇಂದ್ರ ಸರ್ಕಾರವು ವರ್ಗಾವಣೆ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗೆ ಪ್ರತ್ಯುತ್ತರಿಸಿತ್ತು.
ಅಲಪನ್ ಅವರ ಸ್ಥಾನಕ್ಕೆ ಹೆ.ಕೆ. ದ್ವಿವೇದಿಯವರು ಪಶ್ಚಿಮ ಬಂಗಾಳದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ಸೋಮವಾರ ಬೆಳಗ್ಗೆ 10 ಗಂಟೆಯ ಒಳಗೆ ಪಶ್ಚಿಮ ಬಂಗಾಳದ ರಾಜ್ಯ ಸರ್ಕಾರದ ಸೇವೆಯಿಂದ ಬಿಡುಗಡೆಗೊಂಡು ಕೇಂದ್ರ ಸರ್ಕಾರದ ಸೇವೆಗೆ ವರದಿ ಮಾಡಿಕೊಳ್ಳಬೇಕಿದ್ದ ಅಲಪನ್ ಬಂದೋಪಾದ್ಯಾಯ್ ತಮ್ಮ ಉದ್ಯೋಗದಿಂದಲೇ ನಿವೃತ್ತಿಗೊಂಡಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬಂದೋಪಾದ್ಯಾಯ ಅವರನ್ನು ತಮ್ಮ ಮಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ.
ಇದನ್ನೂ ಓದಿ: ಸರ್ಕಾರದ ಹುದ್ದೆಗೆ ನಿವೃತ್ತಿ – ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್ ಬಂದೋಪಾದ್ಯಾಯ್


