Homeಮುಖಪುಟರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

- Advertisement -
- Advertisement -

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ಶಾಸಕರು ಮತ್ತು ಸಂಸದರು ಪದೇ ಪದೇ ಕೋವಿಡ್ ಲಸಿಕೆ ವಿವಾದದಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಈಗ ಇದೆ ಸಾಲಿಗೆ ಬೆಂಗಳೂರಿನ ಸಿ.ವಿ.ರಾಮನ್ ನಗರ ಶಾಸಕ ಎಸ್.ರಘು, ಸರ್ಕಾರಿ ಲಸಿಕೆಯನ್ನು ಶಾಸಕರು ನೀಡುತ್ತಿರುವ ಉಚಿತ ಲಸಿಕೆ ಎಂದು ಸ್ವಂತ ಸ್ಥಳದಲ್ಲಿ ಲಸಿಕಾ ಅಭಿಯಾನ ನಡೆಸಿದ್ದಾರೆ.

ಬೆಂಗಳೂರಿನ ಭುವನೇಶ್ವರಿ ನಗರದ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ (PHC) ಮೇ 31 ರಂದು ನಡೆಯಬೇಕಿದ್ದ ವ್ಯಾಕ್ಸಿನೇಷನ್ ಡ್ರೈವ್ ಶಾಸಕರ ಆದೇಶದಂತೆ ರದ್ದುಗೊಳಿಸಲಾಗಿದೆ. ಸುಮಾರು 300 ಜನರಿಗೆ ಮುಂಜಾನೆ ಟೋಕನ್‌ಗಳನ್ನು ನೀಡಲಾಗಿತ್ತು. ಆರೋಗ್ಯ ಕೇಂದ್ರದಲ್ಲಿ ನಡೆಯಬೇಕಿದ್ದ ಲಸಿಕಾ ಅಭಿಯಾನವನ್ನು, ಬಿಜೆಪಿ ಶಾಸಕ ಎಸ್.ರಘು ಅವರ ಓಂ ಶಕ್ತಿ ಕಲ್ಯಾಣ ಮಂಟಪದಲ್ಲಿ ವ್ಯಾಕ್ಸಿನೇಷನ್ ಡ್ರೈವ್ ನಡೆಸಲಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಶಾಸಕರು ಉಚಿತ ವ್ಯಾಕ್ಸಿನೇಷನ್ ಡ್ರೈವ್ ಮಾಡುತ್ತಿದ್ದಾರೆ ಎಂದು ಪ್ರಚಾರ ಪಡಿಸುವ ಬ್ಯಾನರ್‌ನೊಂದಿಗೆ ಲಸಿಕೆ ನೀಡಲಾಗಿದೆ. ಜೊತೆಗೆ ಬಿಜೆಪಿಯ ಕಾರ್ಯಕರ್ತರು, ಶಾಸಕರ ಸ್ನೇಹಿತರು ಮತ್ತು ಕುಟುಂಬಗಳಿಗೆ ಮಾತ್ರ ಲಸಿಕೆ ನೀಡಿದರು ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಘಟನೆ ಬಗ್ಗೆ ಶಾಸಕ ರಘು, ಬಿಬಿಎಂಪಿ ಅಧಿಕಾರಿಗಳು ಪ್ರತಿಕ್ರಿಯೆ ನೀಡಿಲ್ಲ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾಗೆ ಔಷಧಿ ನೀಡಲು ನಾಟಿ ವೈದ್ಯ ನೆಲ್ಲೂರು ಆನಂದಯ್ಯಗೆ ಆಂಧ್ರ ಸರ್ಕಾರದ ಒಪ್ಪಿಗೆ

ಶನಿವಾರವಷ್ಟೇ ಶಾಸಕ ರವಿ ಸುಬ್ರಮಣ್ಯ ಇದೇ ರೀತಿಯ ವಿವಾದಕ್ಕೆ ಸಿಲುಕಿದ್ದರು, ಅಲ್ಲಿ ಅವರು ಲಸಿಕೆಗಳನ್ನು ನಿರ್ಬಂಧಿಸಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ 72 ಮತ್ತು 65 ವರ್ಷದ ಪೋಷಕರಿಗೆ ಲಸಿಕೆ ಟೋಕನ್ ಸಂಗ್ರಹಿಸಲು ಬೆಳಿಗ್ಗೆ 7 ಗಂಟೆಗೆ ಆರೋಗ್ಯ ಕೇಂದ್ರಕ್ಕೆ ತೇರಳಿದ್ದ ಸ್ಥಳೀಯ ನಿವಾಸಿ ಮಂಜು ಹೇಳೂವಂತೆ, ’ಟೋಕನ್ ಪ್ರಕಾರ ಬೆಳಿಗ್ಗೆ 9: 45 ಕ್ಕೆ ಪೋಷಕರನ್ನು ಕರೆತರಲು ತಿಳಿಸಲಾಗಿತ್ತು. ನಾವು ನಿಗದಿತ ಸಮಯಕ್ಕಿಂತ ಮುಂಚೆಯೇ ಅಲ್ಲಿಗೆ ತಲುಪಿದ್ದೇವು.  ಆದರೆ ನಾವು ಅಲ್ಲಿಗೆ ಹೋದಾಗ ಬೆಳಿಗ್ಗೆ 10: 15 ಕ್ಕೆ ಇಲ್ಲಿ ಲಸಿಕೆ ನೀಡುವುದಿಲ್ಲ ಆದರೆ ಎಲ್ಲರೂ ಕಲ್ಯಾಣ ಮಂಟಪಕ್ಕೆ ಹೋಗಬೇಕು ಎಂದು ತಿಳಿಸಿದರು’ ಎಂದರು.

’ಕಲ್ಯಾಣ ಮಂಟಪದ ಬಳಿ ನೂರಾರು ಜನರು ದೈಹಿಕ ಅಂತರ ಕಾಯ್ದುಕೊಳ್ಳದೆ ನಿಂತಿದ್ದರು. ನಾನು ನನ್ನ ತಂದೆ-ತಾಯಿಯನ್ನು ಇಷ್ಟು ದಿನ ಹೊರಗೆ ಕಳುಹಿಸಿಲ್ಲ. ಇಲ್ಲಿನ ಜನಸಂದಣಿ ನೋಡಿ ಭಯವಾಯಿತು. ಅವರಿಗಾಗಿ ನಾನು 45 ನಿಮಿಷಗಳ ಕಾಲ ಸರದಿಯಲ್ಲಿ ಕಾಯುತ್ತಿದ್ದೆ. ಆದರೆ, ಅಲ್ಲೂ ಕೂಡ ಶಾಸಕರು ಬಂದು ಲಸಿಕಾ ಅಭಿಯಾನ ಉದ್ಘಾಟಿಸಬೇಕು ಎಂದು ತಿಳಿಸಿದರು. ಇವು ಸರ್ಕಾರದ ಲಸಿಕೆಗಳು, ಇವುಗಳನ್ನು ಅವರು ಹೇಗೆ ತಮ್ಮ ಜನರಿಗೆ ಮಾತ್ರ ನೀಡಲು ಸಾಧ್ಯ…? ನನ್ನ ಹೆತ್ತವರಿಗೆ ಯಾವಾಗ ಲಸಿಕೆ ದೊರೆಯುತ್ತದೋ ನನಗೆ ತಿಳಿದಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬ ನಿವಾಸಿ ಜಗದೀಶ್, “ಶಾಸಕರು ವ್ಯಾಕ್ಸಿನೇಷನ್ ಕೇಂದ್ರವನ್ನು ತಮ್ಮ ಸ್ವಂತ ಆಸ್ತಿಗೆ ಸ್ಥಳಾಂತರಿಸಿದ್ದಾರೆ. ಆದರೆ, ನಿಯಮಗಳ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಬೇಕು. ಆರೋಗ್ಯ ಕೇಂದ್ರಗಳಿಗೆ ನೀಡಬೇಕಾದ ಸರ್ಕಾರಿ ಲಸಿಕೆಗಳನ್ನು ಉಚಿತವಾಗಿ ನೀಡುತ್ತಿದ್ದೇನೆ ಎಂದು ಹೇಳಿಕೊಂಡು ಬಿಜೆಪಿ ಶಾಸಕ ತಮ್ಮ ಫೋಟೋದೊಂದಿಗೆ ಬ್ಯಾನರ್ ಹಾಕಿದ್ದಾರೆ. ಜೊತೆಗೆ ಅವರು ತಮ್ಮ ಪಕ್ಷದ ಜನರಿಗೆ ಲಸಿಕೆಗಳನ್ನು ತೆಗೆದುಕೊಳ್ಳಲು ಮಾತ್ರ ಅವಕಾಶ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.


 

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...