Homeಮುಖಪುಟಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

- Advertisement -
- Advertisement -

6 ವರ್ಷದ ಪುಟ್ಟ ಹುಡುಗಿಯೊಬ್ಬಳು ವಿಡಿಯೋ ಮೂಲಕ ಪ್ರಧಾನಿ ಮೋದಿಯವರಲ್ಲಿ ಜೂಮ್‌ ಆನ್‌ಲೈನ್ ಕ್ಲಾಸ್‌ ಮತ್ತು ಹೋಮ್‌ ವರ್ಕ್‌ ಭಾರವನ್ನು ಕಡಿಮೆ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಮುದ್ದು ಭಾಷೆಯಲ್ಲಿ “ಮೋದಿ ಸಾಬ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸವನ್ನು ನೀಡಲಾಗುತ್ತದೆ. ಬೆಳಗ್ಗೆ ಆರು ಗಂಟೆಗೆ ಕ್ಲಾಸ್‌, ಏಳು ಗಂಟೆಗೆ ಕ್ಲಾಸ್‌ ಮತ್ತೆ ಮಧ್ಯಾಹ್ನ 2 ಗಂಟೆಯ ವರೆಗೆ ಜೂಮ್‌ ಕ್ಲಾಸ್. ದಿನವಿಡಿ ಹೋಮ್‌ ವರ್ಕ್‌. ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ ಮೋದಿ ಸಾಬ್‌? ಎಂದು ಬಾಲಕಿ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.

ಈ ವಿಡಿಯೋ ನೋಡಿದ ಅನೇಕರು ಆನಲೈನ್‌ ಶಿಕ್ಷಣ ಪದ್ಧತಿಯಿಂದ ಮಕ್ಕಳು ತಮ್ಮ ಬಾಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದು, ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ವರ್ಷದಿಂದ ಮಕ್ಕಳು ಶಾಲೆಯ ಮುಖವನ್ನೇ ನೋಡಿಲ್ಲ. ಒಂದು ವರ್ಷದ ಅವಧಿಯಲ್ಲಿ 6 ವರ್ಷದ ಎಳೆಯ ಮಕ್ಕಳಿಗೂ ಡಿಜಿಟಲ್‌ ಮೂಲಕವೇ ಪಾಠ ಮಾಡಲಾಗುತ್ತಿದೆ. ಆಡುತ್ತ ಕುಣಿಯುತ್ತ ಬೆಳೆಯ ಬೇಕಾದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಭಾರ ಹೆಗಲಮೇಲೆ ಬಿದ್ದಿದೆ. ಪೋಷಕರೂ ಅನೇಕ ತಿಂಗಳುಗಳಿಂದ ಮನೆಯಲ್ಲೇ ಇರುವುದರಿಂದ ಮಕ್ಕಳ ಚೇಷ್ಟೆ, ಕಿತಾಪತಿಗಳಿಂದ ತಪ್ಪಿಸಿಕೊಳ್ಳಲು ಹೆಚ್ಚು ಹೆಚ್ಚು ಆನಲೈನ್‌ ತರಗತಿಗಳನ್ನು ಅಟೆಂಡ್‌ ಮಾಡುವಂತೆ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ.

6 ವರ್ಷದ ಮಕ್ಕಳಿಗೂ ಹೋಮ್‌ ವರ್ಕ್‌ ನೀಡಲಾಗುತ್ತಿದೆ. ಇಂಗ್ಲೀಷ್‌, ಉರ್ದು, ಮ್ಯಾಥ್ಸ್‌, ಕಂಪ್ಯೂಟರ್‌, ಇವಿಎಸ್‌ ಬೆಳಗಿನಿಂದ ಸಂಜೆ ವರೆಗೆ ಝೂಮ್‌ ಕ್ಲಾಸ್. ಆಮೇಲೆ ಹೋಮ್‌ ವರ್ಕ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ? ಎಂದು ಪ್ರಧಾನಿಯವರಲ್ಲಿ ಕೇಳಿದ್ದಾಳೆ.

ಪುಟ್ಟ ಬಾಲಕಿಯ ವೈರಲ್‌ ವಿಡಿಯೋ ಜಮ್ಮು ಕಾಶ್ಮೀರದ ಮನೋಜ್‌ ಸಿನ್ಹಾ ಅವರ ಗಮನಕ್ಕೂ ಬಂದಿದ್ದು 48 ಗಂಟೆಗಳಲ್ಲಿ ಸಮಗ್ರ ಡಿಜಿಟ್‌ ಶಿಕ್ಷಣ ನೀತಿಯೊಂದನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ. ಮಕ್ಕಳ ಬಾಲ್ಯ ದೇವರು ಕೊಟ್ಟ ಕೊಡುಗೆ. ಅವರ ದಿನಗಳು ಆದಷ್ಟು ಲವಲವಿಕೆಯಿಂದ ಕೂಡಿರಬೇಕು. ಆನ್‌ಲೈನ್‌ ತರಗತಿಗಳು ಮಕ್ಕಳಿಗೆ ಹೊರೆಯಾಗಬಾರದು ಎಂದು ಮನೋಜ್‌ ಸಿನ್ಹಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಟ್ಟ ಬಾಲಕಿಯ ಈ ವಿಡಿಯೋ ಅನೇಕ ದೊಡ್ಡ ಸಮಸ್ಯೆಗಳನ್ನು ತೆರಿದಿಟ್ಟಿದೆ. ಆನ್‌ಲೈನ್‌ ಶಿಕ್ಷಣ ಪದ್ಧತಿ ಎಳೆಯ ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಸರ್ಕಾರಗಳು ಅಧ್ಯಯನ ನಡೆಸಿದೆಯೇ? ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಡಿಜಿಟಲ್‌ ಶಿಕ್ಷಣ ನೀತಿಯ ಪರಿಣಾಮವೇನು? ದೇಶದಲ್ಲಿ ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಯಾಕಿಲ್ಲ? ಶಾಲೆಗಳನ್ನು ತೆರೆಯುವುದು ಯಾವಾಗ ಸಾಧ್ಯವಾಗಲಿದೆ? ಆನ್‌ಲೈನ್‌ ತರಗತಿಗಳು ಹೀಗೆ ಎಷ್ಟುಕಾಲ ಮುಂದುವರೆಯಲಿದೆ? ಎಂಬ ಪ್ರಶ್ನೆಗಳು ಸದ್ಯಕ್ಕೆ ದೇಶದ ಮುಂದೆ ಇದೆ.

ಮನೋವೈದ್ಯರು ಮತ್ತು ಮಕ್ಕಳ ತಜ್ಞರು ಹೇಳುವ ಪ್ರಕಾರ ಮನೆಯ ನಾಲ್ಕು ಗೋಡೆಗಳೊಳಗಿನ ವಾತಾವರಣ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಲ್ಲ. ಆದಷ್ಟು ಮಕ್ಕಳು ಗಾಳಿ ಬೆಳಕಿನ ಸ್ವಚ್ಛಂಧ ಪರಿಸರದಲ್ಲಿ ಬೆಳೆಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳು ಡಿಜಿಟಲ್‌ ಜಗತ್ತಿಗೆ ಅಡಿಕ್ಟ್‌ ಆಗುವುದರಿಂದ ಇನ್ನೇನು ಬೆಳವಣಿಗೆಯ ಹಂತದಲ್ಲಿರುವ ದೃಷ್ಟಿ, ಆಲಿಸುವ ಶಕ್ತಿಯ ಮೇಲೆ ಅಗಾಧ ಪರಿಣಾಮ ಬೀರಲಿದೆ. ಆನ್‌ಲೈನ್‌ ತರಗತಿಗಳು ಮತ್ತು ಡಿಜಿಟಲ್‌ ಶಿಕ್ಷಣ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಅಭಿಪ್ರಾಯ, ಮನೋಶಾಸ್ತ್ರಜ್ಞರ ಎಚ್ಚರಿಕೆಯ ನಡುವೆಯೂ ಶಾಲಾ ಆಡಳಿತ ಮಂಡಳಿಗಳು ಎಳೆಯ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಮಾನ ಶಿಕ್ಷಣ ಭಾರವನ್ನು ಹೊರಿಸುತ್ತಿರುವುದು ದೇಶಾದ್ಯಂತ ಕಂಡುಬಂದಿದೆ. ಶಾಲಾ ಶಿಕ್ಷಣ ಇಲಾಖೆಯು ಈ ಸಂಬಂಧ ಯಾವುದೇ ಸಮಗ್ರ ನೀತಿಯನ್ನು ರೂಪಿಸಲು ಮುಂದಾಗಿಲ್ಲ.

ಒಟ್ಟಿನಲ್ಲಿ ಆನ್‌ಲೈನ್‌ ತರಗತಿಗಳೆಂಬ ಅಜ್ಞಾತ ಪಂಜರಗಳಿಂದ ಮಕ್ಕಳು ಹೊರಬಂದು ಸ್ವಚ್ಛಂಧ ಆಕಾಶದಡಿಯಲ್ಲಿ ತಮ್ಮ ಬಾಲ್ಯಗಳನ್ನು ಕಳೆಯುವ ದಿನಗಳು ಸದ್ಯದಲ್ಲಿ ಬರುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಸರ್ಕಾರಗಳು ಮಕ್ಕಳಿಗೆ ಹೊರೆಯಾಗದಂತ ಡಿಜಿಟಲ್‌ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಬೇಕೆಂಬ ಒತ್ತಡ ದೇಶದ ವಿವಿಧ ಭಾಗಗಳಿಂದ ಕೇಳಿಬರುತ್ತಿದೆ.


ಇದನ್ನೂ ಓದಿ: ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...