Homeಮುಖಪುಟಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

- Advertisement -
- Advertisement -

6 ವರ್ಷದ ಪುಟ್ಟ ಹುಡುಗಿಯೊಬ್ಬಳು ವಿಡಿಯೋ ಮೂಲಕ ಪ್ರಧಾನಿ ಮೋದಿಯವರಲ್ಲಿ ಜೂಮ್‌ ಆನ್‌ಲೈನ್ ಕ್ಲಾಸ್‌ ಮತ್ತು ಹೋಮ್‌ ವರ್ಕ್‌ ಭಾರವನ್ನು ಕಡಿಮೆ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಮುದ್ದು ಭಾಷೆಯಲ್ಲಿ “ಮೋದಿ ಸಾಬ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸವನ್ನು ನೀಡಲಾಗುತ್ತದೆ. ಬೆಳಗ್ಗೆ ಆರು ಗಂಟೆಗೆ ಕ್ಲಾಸ್‌, ಏಳು ಗಂಟೆಗೆ ಕ್ಲಾಸ್‌ ಮತ್ತೆ ಮಧ್ಯಾಹ್ನ 2 ಗಂಟೆಯ ವರೆಗೆ ಜೂಮ್‌ ಕ್ಲಾಸ್. ದಿನವಿಡಿ ಹೋಮ್‌ ವರ್ಕ್‌. ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ ಮೋದಿ ಸಾಬ್‌? ಎಂದು ಬಾಲಕಿ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.

ಈ ವಿಡಿಯೋ ನೋಡಿದ ಅನೇಕರು ಆನಲೈನ್‌ ಶಿಕ್ಷಣ ಪದ್ಧತಿಯಿಂದ ಮಕ್ಕಳು ತಮ್ಮ ಬಾಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದು, ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ವರ್ಷದಿಂದ ಮಕ್ಕಳು ಶಾಲೆಯ ಮುಖವನ್ನೇ ನೋಡಿಲ್ಲ. ಒಂದು ವರ್ಷದ ಅವಧಿಯಲ್ಲಿ 6 ವರ್ಷದ ಎಳೆಯ ಮಕ್ಕಳಿಗೂ ಡಿಜಿಟಲ್‌ ಮೂಲಕವೇ ಪಾಠ ಮಾಡಲಾಗುತ್ತಿದೆ. ಆಡುತ್ತ ಕುಣಿಯುತ್ತ ಬೆಳೆಯ ಬೇಕಾದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಭಾರ ಹೆಗಲಮೇಲೆ ಬಿದ್ದಿದೆ. ಪೋಷಕರೂ ಅನೇಕ ತಿಂಗಳುಗಳಿಂದ ಮನೆಯಲ್ಲೇ ಇರುವುದರಿಂದ ಮಕ್ಕಳ ಚೇಷ್ಟೆ, ಕಿತಾಪತಿಗಳಿಂದ ತಪ್ಪಿಸಿಕೊಳ್ಳಲು ಹೆಚ್ಚು ಹೆಚ್ಚು ಆನಲೈನ್‌ ತರಗತಿಗಳನ್ನು ಅಟೆಂಡ್‌ ಮಾಡುವಂತೆ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ.

6 ವರ್ಷದ ಮಕ್ಕಳಿಗೂ ಹೋಮ್‌ ವರ್ಕ್‌ ನೀಡಲಾಗುತ್ತಿದೆ. ಇಂಗ್ಲೀಷ್‌, ಉರ್ದು, ಮ್ಯಾಥ್ಸ್‌, ಕಂಪ್ಯೂಟರ್‌, ಇವಿಎಸ್‌ ಬೆಳಗಿನಿಂದ ಸಂಜೆ ವರೆಗೆ ಝೂಮ್‌ ಕ್ಲಾಸ್. ಆಮೇಲೆ ಹೋಮ್‌ ವರ್ಕ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ? ಎಂದು ಪ್ರಧಾನಿಯವರಲ್ಲಿ ಕೇಳಿದ್ದಾಳೆ.

ಪುಟ್ಟ ಬಾಲಕಿಯ ವೈರಲ್‌ ವಿಡಿಯೋ ಜಮ್ಮು ಕಾಶ್ಮೀರದ ಮನೋಜ್‌ ಸಿನ್ಹಾ ಅವರ ಗಮನಕ್ಕೂ ಬಂದಿದ್ದು 48 ಗಂಟೆಗಳಲ್ಲಿ ಸಮಗ್ರ ಡಿಜಿಟ್‌ ಶಿಕ್ಷಣ ನೀತಿಯೊಂದನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ. ಮಕ್ಕಳ ಬಾಲ್ಯ ದೇವರು ಕೊಟ್ಟ ಕೊಡುಗೆ. ಅವರ ದಿನಗಳು ಆದಷ್ಟು ಲವಲವಿಕೆಯಿಂದ ಕೂಡಿರಬೇಕು. ಆನ್‌ಲೈನ್‌ ತರಗತಿಗಳು ಮಕ್ಕಳಿಗೆ ಹೊರೆಯಾಗಬಾರದು ಎಂದು ಮನೋಜ್‌ ಸಿನ್ಹಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಟ್ಟ ಬಾಲಕಿಯ ಈ ವಿಡಿಯೋ ಅನೇಕ ದೊಡ್ಡ ಸಮಸ್ಯೆಗಳನ್ನು ತೆರಿದಿಟ್ಟಿದೆ. ಆನ್‌ಲೈನ್‌ ಶಿಕ್ಷಣ ಪದ್ಧತಿ ಎಳೆಯ ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಸರ್ಕಾರಗಳು ಅಧ್ಯಯನ ನಡೆಸಿದೆಯೇ? ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಡಿಜಿಟಲ್‌ ಶಿಕ್ಷಣ ನೀತಿಯ ಪರಿಣಾಮವೇನು? ದೇಶದಲ್ಲಿ ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಯಾಕಿಲ್ಲ? ಶಾಲೆಗಳನ್ನು ತೆರೆಯುವುದು ಯಾವಾಗ ಸಾಧ್ಯವಾಗಲಿದೆ? ಆನ್‌ಲೈನ್‌ ತರಗತಿಗಳು ಹೀಗೆ ಎಷ್ಟುಕಾಲ ಮುಂದುವರೆಯಲಿದೆ? ಎಂಬ ಪ್ರಶ್ನೆಗಳು ಸದ್ಯಕ್ಕೆ ದೇಶದ ಮುಂದೆ ಇದೆ.

ಮನೋವೈದ್ಯರು ಮತ್ತು ಮಕ್ಕಳ ತಜ್ಞರು ಹೇಳುವ ಪ್ರಕಾರ ಮನೆಯ ನಾಲ್ಕು ಗೋಡೆಗಳೊಳಗಿನ ವಾತಾವರಣ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಲ್ಲ. ಆದಷ್ಟು ಮಕ್ಕಳು ಗಾಳಿ ಬೆಳಕಿನ ಸ್ವಚ್ಛಂಧ ಪರಿಸರದಲ್ಲಿ ಬೆಳೆಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳು ಡಿಜಿಟಲ್‌ ಜಗತ್ತಿಗೆ ಅಡಿಕ್ಟ್‌ ಆಗುವುದರಿಂದ ಇನ್ನೇನು ಬೆಳವಣಿಗೆಯ ಹಂತದಲ್ಲಿರುವ ದೃಷ್ಟಿ, ಆಲಿಸುವ ಶಕ್ತಿಯ ಮೇಲೆ ಅಗಾಧ ಪರಿಣಾಮ ಬೀರಲಿದೆ. ಆನ್‌ಲೈನ್‌ ತರಗತಿಗಳು ಮತ್ತು ಡಿಜಿಟಲ್‌ ಶಿಕ್ಷಣ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಅಭಿಪ್ರಾಯ, ಮನೋಶಾಸ್ತ್ರಜ್ಞರ ಎಚ್ಚರಿಕೆಯ ನಡುವೆಯೂ ಶಾಲಾ ಆಡಳಿತ ಮಂಡಳಿಗಳು ಎಳೆಯ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಮಾನ ಶಿಕ್ಷಣ ಭಾರವನ್ನು ಹೊರಿಸುತ್ತಿರುವುದು ದೇಶಾದ್ಯಂತ ಕಂಡುಬಂದಿದೆ. ಶಾಲಾ ಶಿಕ್ಷಣ ಇಲಾಖೆಯು ಈ ಸಂಬಂಧ ಯಾವುದೇ ಸಮಗ್ರ ನೀತಿಯನ್ನು ರೂಪಿಸಲು ಮುಂದಾಗಿಲ್ಲ.

ಒಟ್ಟಿನಲ್ಲಿ ಆನ್‌ಲೈನ್‌ ತರಗತಿಗಳೆಂಬ ಅಜ್ಞಾತ ಪಂಜರಗಳಿಂದ ಮಕ್ಕಳು ಹೊರಬಂದು ಸ್ವಚ್ಛಂಧ ಆಕಾಶದಡಿಯಲ್ಲಿ ತಮ್ಮ ಬಾಲ್ಯಗಳನ್ನು ಕಳೆಯುವ ದಿನಗಳು ಸದ್ಯದಲ್ಲಿ ಬರುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಸರ್ಕಾರಗಳು ಮಕ್ಕಳಿಗೆ ಹೊರೆಯಾಗದಂತ ಡಿಜಿಟಲ್‌ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಬೇಕೆಂಬ ಒತ್ತಡ ದೇಶದ ವಿವಿಧ ಭಾಗಗಳಿಂದ ಕೇಳಿಬರುತ್ತಿದೆ.


ಇದನ್ನೂ ಓದಿ: ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...