Homeಮುಖಪುಟಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಆನ್‌ಲೈನ್‌ ಕ್ಲಾಸ್‌ಗಳ ಭಾರ ಕಡಿಮೆ ಮಾಡುವಂತೆ ಪ್ರಧಾನಿಗೆ ಪುಟ್ಟ ಹುಡುಗಿಯ ಮನವಿ

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

- Advertisement -
- Advertisement -

6 ವರ್ಷದ ಪುಟ್ಟ ಹುಡುಗಿಯೊಬ್ಬಳು ವಿಡಿಯೋ ಮೂಲಕ ಪ್ರಧಾನಿ ಮೋದಿಯವರಲ್ಲಿ ಜೂಮ್‌ ಆನ್‌ಲೈನ್ ಕ್ಲಾಸ್‌ ಮತ್ತು ಹೋಮ್‌ ವರ್ಕ್‌ ಭಾರವನ್ನು ಕಡಿಮೆ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಜಮ್ಮು ಕಾಶ್ಮೀರದ 6 ವರ್ಷದ ಪುಟ್ಟ ಹುಡುಗಿಯ ವಿಡಿಯೋ ಮೇ 31 ರಂದು ವೈರಲ್‌ ಆಗಿದ್ದು, ಅನೇಕರು ಶಿಕ್ಷಣ ವ್ಯವಸ್ಥೆಯ ಕುರಿತಾಗಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ.

ವಿಡಿಯೋದಲ್ಲಿ ಪುಟ್ಟ ಹುಡುಗಿ ತನ್ನ ಮುದ್ದು ಭಾಷೆಯಲ್ಲಿ “ಮೋದಿ ಸಾಬ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸವನ್ನು ನೀಡಲಾಗುತ್ತದೆ. ಬೆಳಗ್ಗೆ ಆರು ಗಂಟೆಗೆ ಕ್ಲಾಸ್‌, ಏಳು ಗಂಟೆಗೆ ಕ್ಲಾಸ್‌ ಮತ್ತೆ ಮಧ್ಯಾಹ್ನ 2 ಗಂಟೆಯ ವರೆಗೆ ಜೂಮ್‌ ಕ್ಲಾಸ್. ದಿನವಿಡಿ ಹೋಮ್‌ ವರ್ಕ್‌. ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ ಮೋದಿ ಸಾಬ್‌? ಎಂದು ಬಾಲಕಿ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.

ಈ ವಿಡಿಯೋ ನೋಡಿದ ಅನೇಕರು ಆನಲೈನ್‌ ಶಿಕ್ಷಣ ಪದ್ಧತಿಯಿಂದ ಮಕ್ಕಳು ತಮ್ಮ ಬಾಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದು, ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಜಾರಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಒಂದು ವರ್ಷದಿಂದ ಮಕ್ಕಳು ಶಾಲೆಯ ಮುಖವನ್ನೇ ನೋಡಿಲ್ಲ. ಒಂದು ವರ್ಷದ ಅವಧಿಯಲ್ಲಿ 6 ವರ್ಷದ ಎಳೆಯ ಮಕ್ಕಳಿಗೂ ಡಿಜಿಟಲ್‌ ಮೂಲಕವೇ ಪಾಠ ಮಾಡಲಾಗುತ್ತಿದೆ. ಆಡುತ್ತ ಕುಣಿಯುತ್ತ ಬೆಳೆಯ ಬೇಕಾದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಭಾರ ಹೆಗಲಮೇಲೆ ಬಿದ್ದಿದೆ. ಪೋಷಕರೂ ಅನೇಕ ತಿಂಗಳುಗಳಿಂದ ಮನೆಯಲ್ಲೇ ಇರುವುದರಿಂದ ಮಕ್ಕಳ ಚೇಷ್ಟೆ, ಕಿತಾಪತಿಗಳಿಂದ ತಪ್ಪಿಸಿಕೊಳ್ಳಲು ಹೆಚ್ಚು ಹೆಚ್ಚು ಆನಲೈನ್‌ ತರಗತಿಗಳನ್ನು ಅಟೆಂಡ್‌ ಮಾಡುವಂತೆ ತಮ್ಮ ಮಕ್ಕಳ ಮೇಲೆ ಒತ್ತಡ ಹೇರುತ್ತಿದ್ದಾರೆ.

6 ವರ್ಷದ ಮಕ್ಕಳಿಗೂ ಹೋಮ್‌ ವರ್ಕ್‌ ನೀಡಲಾಗುತ್ತಿದೆ. ಇಂಗ್ಲೀಷ್‌, ಉರ್ದು, ಮ್ಯಾಥ್ಸ್‌, ಕಂಪ್ಯೂಟರ್‌, ಇವಿಎಸ್‌ ಬೆಳಗಿನಿಂದ ಸಂಜೆ ವರೆಗೆ ಝೂಮ್‌ ಕ್ಲಾಸ್. ಆಮೇಲೆ ಹೋಮ್‌ ವರ್ಕ್‌ ಚಿಕ್ಕ ಮಕ್ಕಳಿಗೆ ಯಾಕಿಷ್ಟು ಕೆಲಸ? ಎಂದು ಪ್ರಧಾನಿಯವರಲ್ಲಿ ಕೇಳಿದ್ದಾಳೆ.

ಪುಟ್ಟ ಬಾಲಕಿಯ ವೈರಲ್‌ ವಿಡಿಯೋ ಜಮ್ಮು ಕಾಶ್ಮೀರದ ಮನೋಜ್‌ ಸಿನ್ಹಾ ಅವರ ಗಮನಕ್ಕೂ ಬಂದಿದ್ದು 48 ಗಂಟೆಗಳಲ್ಲಿ ಸಮಗ್ರ ಡಿಜಿಟ್‌ ಶಿಕ್ಷಣ ನೀತಿಯೊಂದನ್ನು ರೂಪಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ. ಮಕ್ಕಳ ಬಾಲ್ಯ ದೇವರು ಕೊಟ್ಟ ಕೊಡುಗೆ. ಅವರ ದಿನಗಳು ಆದಷ್ಟು ಲವಲವಿಕೆಯಿಂದ ಕೂಡಿರಬೇಕು. ಆನ್‌ಲೈನ್‌ ತರಗತಿಗಳು ಮಕ್ಕಳಿಗೆ ಹೊರೆಯಾಗಬಾರದು ಎಂದು ಮನೋಜ್‌ ಸಿನ್ಹಾ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪುಟ್ಟ ಬಾಲಕಿಯ ಈ ವಿಡಿಯೋ ಅನೇಕ ದೊಡ್ಡ ಸಮಸ್ಯೆಗಳನ್ನು ತೆರಿದಿಟ್ಟಿದೆ. ಆನ್‌ಲೈನ್‌ ಶಿಕ್ಷಣ ಪದ್ಧತಿ ಎಳೆಯ ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಸರ್ಕಾರಗಳು ಅಧ್ಯಯನ ನಡೆಸಿದೆಯೇ? ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಡಿಜಿಟಲ್‌ ಶಿಕ್ಷಣ ನೀತಿಯ ಪರಿಣಾಮವೇನು? ದೇಶದಲ್ಲಿ ಸಮರ್ಪಕವಾದ ಡಿಜಿಟಲ್‌ ಶಿಕ್ಷಣ ನೀತಿ ಯಾಕಿಲ್ಲ? ಶಾಲೆಗಳನ್ನು ತೆರೆಯುವುದು ಯಾವಾಗ ಸಾಧ್ಯವಾಗಲಿದೆ? ಆನ್‌ಲೈನ್‌ ತರಗತಿಗಳು ಹೀಗೆ ಎಷ್ಟುಕಾಲ ಮುಂದುವರೆಯಲಿದೆ? ಎಂಬ ಪ್ರಶ್ನೆಗಳು ಸದ್ಯಕ್ಕೆ ದೇಶದ ಮುಂದೆ ಇದೆ.

ಮನೋವೈದ್ಯರು ಮತ್ತು ಮಕ್ಕಳ ತಜ್ಞರು ಹೇಳುವ ಪ್ರಕಾರ ಮನೆಯ ನಾಲ್ಕು ಗೋಡೆಗಳೊಳಗಿನ ವಾತಾವರಣ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಲ್ಲ. ಆದಷ್ಟು ಮಕ್ಕಳು ಗಾಳಿ ಬೆಳಕಿನ ಸ್ವಚ್ಛಂಧ ಪರಿಸರದಲ್ಲಿ ಬೆಳೆಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳು ಡಿಜಿಟಲ್‌ ಜಗತ್ತಿಗೆ ಅಡಿಕ್ಟ್‌ ಆಗುವುದರಿಂದ ಇನ್ನೇನು ಬೆಳವಣಿಗೆಯ ಹಂತದಲ್ಲಿರುವ ದೃಷ್ಟಿ, ಆಲಿಸುವ ಶಕ್ತಿಯ ಮೇಲೆ ಅಗಾಧ ಪರಿಣಾಮ ಬೀರಲಿದೆ. ಆನ್‌ಲೈನ್‌ ತರಗತಿಗಳು ಮತ್ತು ಡಿಜಿಟಲ್‌ ಶಿಕ್ಷಣ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಜ್ಞರ ಅಭಿಪ್ರಾಯ, ಮನೋಶಾಸ್ತ್ರಜ್ಞರ ಎಚ್ಚರಿಕೆಯ ನಡುವೆಯೂ ಶಾಲಾ ಆಡಳಿತ ಮಂಡಳಿಗಳು ಎಳೆಯ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲರಿಗೂ ಸಮಾನ ಶಿಕ್ಷಣ ಭಾರವನ್ನು ಹೊರಿಸುತ್ತಿರುವುದು ದೇಶಾದ್ಯಂತ ಕಂಡುಬಂದಿದೆ. ಶಾಲಾ ಶಿಕ್ಷಣ ಇಲಾಖೆಯು ಈ ಸಂಬಂಧ ಯಾವುದೇ ಸಮಗ್ರ ನೀತಿಯನ್ನು ರೂಪಿಸಲು ಮುಂದಾಗಿಲ್ಲ.

ಒಟ್ಟಿನಲ್ಲಿ ಆನ್‌ಲೈನ್‌ ತರಗತಿಗಳೆಂಬ ಅಜ್ಞಾತ ಪಂಜರಗಳಿಂದ ಮಕ್ಕಳು ಹೊರಬಂದು ಸ್ವಚ್ಛಂಧ ಆಕಾಶದಡಿಯಲ್ಲಿ ತಮ್ಮ ಬಾಲ್ಯಗಳನ್ನು ಕಳೆಯುವ ದಿನಗಳು ಸದ್ಯದಲ್ಲಿ ಬರುವ ಸಾಧ್ಯತೆಗಳು ಕಾಣಿಸುತ್ತಿಲ್ಲ. ಸರ್ಕಾರಗಳು ಮಕ್ಕಳಿಗೆ ಹೊರೆಯಾಗದಂತ ಡಿಜಿಟಲ್‌ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಬೇಕೆಂಬ ಒತ್ತಡ ದೇಶದ ವಿವಿಧ ಭಾಗಗಳಿಂದ ಕೇಳಿಬರುತ್ತಿದೆ.


ಇದನ್ನೂ ಓದಿ: ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...