Homeಮುಖಪುಟಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ಶೋಕಾಸ್‌ಗೆ ಸಂಬಂಧಿಸಿದ ಸಂಪೂರ್ಣ ಚರ್ಚೆಯು ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ರೂಲ್‌ 7 ( ಶಿಸ್ತುಪಾಲನೆ ಮತ್ತು ಮನವಿ) ರ ಅರ್ಥಾನ್ವಯದ ಮೇಲೆಯೇ ನಿಂತಿದೆ.

- Advertisement -
- Advertisement -

ಅಲಪಾನ್‌ ಬಂದೋಪಾದ್ಯಾಯ್‌ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿರುವ ಕೇಂದ್ರ ಸರ್ಕಾರದ ಆಶ್ಚರ್ಯಕರ ನಡೆ ಹಲವು ಚರ್ಚೆಗಳಿಗೆ ಅವಕಾಶ ಮಾಡಿಕೊಟ್ಟಿದೆ. ಪಶ್ಚಿಮ ಬಂಗಾಳ ರಾಜ್ಯಸರ್ಕಾರದ ಕರ್ತವ್ಯದಲ್ಲಿ ನಿಯೋಜಿತರಾಗಿರುವ 1987 ಬ್ಯಾಚ್‌ ನ IAS ಅಧಿಕಾರಿಯನ್ನು ಕೇಂದ್ರ ಏಕಾಏಕಿ ದೆಹಲಿಯ ಸಿಬ್ಬಂದಿ ಮತ್ತು ಸಾವರ್ಜನಿಕ ಕುಂದು ಕೊರತೆ ಇಲಾಖೆಗೆ ವರ್ಗಾವಣೆ ಮಾಡಿತ್ತು. ತಮ್ಮ ವರ್ಗಾವಣೆ ಆದೇಶಕ್ಕೆ ಮನ್ನಣೆ ಕೊಡದೇ ನಿವೃತ್ತಿ ತೆಗೆದುಕೊಂಡ ಅಲಪಾನ್‌ ಬಂದೋಪಾದ್ಯಾಯ್‌ ಅವರ ಮೇಲೆ ಕೇಂದ್ರ ಕ್ರಮ ಕೈಗೊಂಡಿದ್ದು ಅದರ ಭಾಗವಾಗಿ ಪಶ್ಚಿಮ ಬಂಗಾಳ ಮಾಜಿ ಮುಖ್ಯಕಾರ್ಯುದರ್ಶಿ ಬಂದೋಪಾದ್ಯಾಯ್‌ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿದೆ. ಹಾಗಾದರೆ ಬಂದೋಪಾದ್ಯಾಯ್‌ ಅವರಿಗೆ ಕೇಂದ್ರಕ್ಕೆ ಶೋಕಾಸ್‌ ನೀಡುವ ಅಧಿಕಾರವಿದೆಯೇ? ಕಾನೂನು ಈ ವಿಷಯದಲ್ಲಿ ಏನು ಹೇಳುತ್ತದೆ ಎಂಬುದನ್ನು ನಾವಿಲ್ಲಿ ವಿವರವಾಗಿ ಚರ್ಚಿಸಿದ್ದೇವೆ.

ಶೋಕಾಸ್‌ಗೆ ಸಂಬಂಧಿಸಿದ ಸಂಪೂರ್ಣ ಚರ್ಚೆಯು ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ರೂಲ್‌ 7 ( ಶಿಸ್ತುಪಾಲನೆ ಮತ್ತು ಮನವಿ) ರ ಅರ್ಥಾನ್ವಯದ ಮೇಲೆಯೇ ನಿಂತಿದೆ.

ರೂಲ್‌ 7 IAS ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಮತ್ತು ವಿಚಾರಣೆ ನಡೆಸುವ ಅಧಿಕಾರ ಯಾರಿಗೆ ಇದೆ ಎಂದು ಹೇಳುತ್ತದೆ. ಐಎಎಸ್‌ ಅಧಿಕಾರಿಯು ರಾಜ್ಯ ಸರ್ಕಾರದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಂದರ್ಭದಲ್ಲಿ ಆ ಅಧಿಕಾರಿಯ ಮೇಲೆ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಮಾತ್ರ ಇದೆ ಎಂದು ಆಲ್‌ ಇಂಡಿಯಾ ಸರ್ವಿಸಸ್‌ ರೂಲ್ಸ್‌, 1969 ರ 7 ನೇ ನಿಯಮವು ಸ್ಪಷ್ಟವಾಗಿ ಹೇಳುತ್ತದೆ. ಜೊತೆಗೆ ರಾಜ್ಯ ಸರ್ಕಾರದ ನಿಯೋಜನೆಯಲ್ಲಿರುವ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವ ಅಥವಾ ದಂಡ ವಿಧಿಸುವಾಗ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಒಪ್ಪಿಗೆ ಸೂಚಿಸಬೇಕು. ರಾಜ್ಯ ಸರ್ಕಾರದ ಸಮ್ಮತಿಯ ಆಧಾರದ ಮೇಲೆ ಕೇಂದ್ರ ಐಎಎಸ್‌ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬಹುದು ಎಂದು ಈ ನಿಯಮಾವಳಿಯು ಹೇಳುತ್ತದೆ.

ಈ ಹಿಂದಿನ ಪ್ರಕರಣಗಳಲ್ಲಿ ನ್ಯಾಯಾಯಗಳು ಏನು ಹೇಳಿವೆ?

ಇತಿಹಾಸದಲ್ಲಿ ಹಿಂದೆ ನಡೆದಿರುವ ಘಟನೆಗಳಲ್ಲಿ ಬಹುತೇಕ ನ್ಯಾಯಾಲಯಗಳು ರಾಜ್ಯ ಸರ್ಕಾರಕ್ಕೆ ತನ್ನ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೆಲವು ಪ್ರಕರಣಗಳಲ್ಲಿ ನ್ಯಾಯಧೀಶರಲ್ಲೇ ಈ ಕುರಿತು ಭಿನ್ನಾಭಿಪ್ರಾಯಗಳಿವೆ. ಕೆಲವು ನ್ಯಾಯಾಧೀಶರು ಕೇಂದ್ರಕ್ಕೆ ಐಎಎಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವಿದೆಯೆಂದು ಹೇಳಿದರೆ ಕೆಲವು ನ್ಯಾಯಾಲಯಗಳು ರಾಜ್ಯ ಸರ್ಕಾರಗಳಿಗೆ ಈ ಸಂಬಂಧ ಕ್ರಮ ಕೈಗೊಳ್ಳಲು ಅಧಿಕಾರವಿದೆಯೆಂದು ಹೇಳಿದ್ದಾರೆ.

ಮದ್ರಾಸ್‌ ಹೈಕೋರ್ಟ್‌ 2013 ರಲ್ಲಿ ʼಪ್ರಮೋದ್‌ ಕುಮಾರ್‌ Vs ಭಾರತ ಸರ್ಕಾರʼ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಯ ಮೇಲೆ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಮಾತ್ರ ಇದೆ ಎಂದು ಹೇಳಿದೆ. ನ್ಯಾಯಾಲಯವು ಮುಂದುವರೆದು ರಾಜ್ಯ ಸರ್ಕಾರದ ಕರ್ತವ್ಯದಲ್ಲಿರುವ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳ ಮೇಲೆ ಕೇಂದ್ರವು ಸ್ವಯಂ ಪ್ರೇರಿತಯ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ.

ಮದ್ರಾಸ್‌ ಉಚ್ಛನ್ಯಾಯಾಲಯವು ಈ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ , 1969 ನಿಯಮ ಏಳರ ಅರ್ಥಾನ್ವಯವನ್ನು ಮಾಡಿದ್ದು ಇಲ್ಲಿರುವ ಅಕ್ಷರಗಳನ್ನು ವಿಶಾಲವಾದ ದೃಷ್ಟಿಕೋನದಲ್ಲಿ ಅನ್ವಯಿಸಬೇಕೆಂದು ಹೇಳಿದೆ. ಜೊತೆಗೆ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳು ವಿಶೇಷವಾದ ಸೌಲಭ್ಯಗಳನ್ನು ಹೊಂದಿದ್ದಾರೆ. ಅವರು ಕೇಂದ್ರ ಸರ್ಕಾರದ ಅಧೀನ ಇಲಾಖೆಯಲ್ಲಿ ಕೆಲಸ ಮಾಡುವಾಗ ಕೇಂದ್ರದ ಉದ್ಯೋಗಿಗಳಾಗಿರುತ್ತಾರೆ. ರಾಜ್ಯ ಸರ್ಕಾರದ ಕರ್ತವ್ಯದಲ್ಲಿ ಇರುವಾಗ ರಾಜ್ಯ ಸರ್ಕಾರದ ಉದ್ಯೋಗಿಗಳಾಗಿರುತ್ತಾರೆ ಎಂದು ಮದ್ರಾಸ್‌ ಹೈಕೋರ್ಟ್‌ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ.

ಇದೇ ಭಾವನೆಯು ಗುವಾಹಟಿ ಮತ್ತು ಹೈದರಾಬಾದ್‌ ಸೆಂಟ್ರಲ್‌ ಅಡ್ಮಿನಿಸ್ಟರೇಟಿವ್‌ ಟ್ರಿಬ್ಯುನಲ್‌ ಗಳು ವ್ಯಕ್ತಪಡಿಸಿವೆ. ಒಮ್ಮೆ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಯು ರಾಜ್ಯಗಳ ಸೇವೆಗೆ ನೇಮಕಗೊಂಡ ಮೇಲೆ ಅವರು ರಾಜ್ಯ ಸರ್ಕಾರದ ಉದ್ಯೋಗಿಗಳಾಗುತ್ತಾರೆ, ಅವರು ಆಲ್ ಇಂಡಿಯಾ ಸರ್ವಿಸ್‌ ರೂಲ್ಸ್‌, 1969 ರ ನಿಯಮ 7 ಅಡಿಯಲ್ಲಿ ಬರುವುದಿಲ್ಲ. ಶಿಸ್ತು ಕ್ರಮ ಮತ್ತು ಮನವಿಯ ಅವಕಾಶ ವಿರುವ ನಿಯಮ 7 ರಾಜ್ಯ ಸರ್ಕಾರದ ಸೇವೆಯಲ್ಲಿರುವ ಅಧಿಕಾರಿಗಳಿಗೆ ಅನ್ವಯವಾಗುವುದಿಲ್ಲ ಎಂದು ಹೇಳಿ ಕೇಂದ್ರ ಸರ್ಕಾರದ ದೂರನ್ನು ವಜಾ ಮಾಡಿತ್ತು.

ಈ ಮೇಲಿನ ಆದೇಶಗಳಿಗೆ ವ್ಯತಿರಿಕ್ತವಾಗಿ ಗುಜರಾತ್‌ ಹೈಕೋರ್ಟ್‌ 2007 ರ ʼಪ್ರೇಮ್‌ಶಂಕರ್‌ ವಿ ಭಟ್‌ Vs ಗುಜರಾತ್‌ ರಾಜ್ಯʼ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಮಾತ್ರ ಐಎಎಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಮತ್ತು ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರ ಇದೆ. ರಾಜ್ಯ ಸರ್ಕಾರಗಳಿಗೆ IAS ಅಧಿಕಾರಿಗಳ ವಿಷಯದಲ್ಲಿ ಕ್ರಮ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಆದೇಶ ನೀಡಿದೆ. ಈ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ಅಧಿಕಾರಿಗಳು ಕೇಂದ್ರ ಸರ್ಕಾರದಿಂದ ಉದ್ಯೋಗಕ್ಕೆ ಆಯ್ಕೆಯಾದವರಾಗಿದ್ದಾರೆ. ಅಧಿಕಾರಿಗಳ ನೇಮಕ, ಪ್ರೊಬೆಶನರಿ, ಭತ್ಯೆ, ವರ್ಗಾವಣೆ, ರಜೆ ಮತ್ತು ಇತರ ಸೌಲಭ್ಯ, ಸಂಬಳ, ನಿವೃತ್ತಿ, ಗೌಪ್ಯತೆ , ಸೇವಾವಧಿಯ ವಿಸ್ತರಣೆ, ಕೆಲಸದಿಂದ ವಜಾ ಎಲ್ಲವೂ ಕೂಡ ಕೇಂದ್ರ ಸರ್ಕಾರದ ಅಧೀನದಲ್ಲೆ ಬರುತ್ತವೆ ಎಂದು ಗುಜರಾತ್‌ ಹೈಕೋರ್ಟ್‌ ಸ್ಪಷ್ಟಪಡಿಸಿದೆ.

ಬೇರೆ ಬೇರೆ ನ್ಯಾಯಾಲಯಗಳ ಬೇರೆ ಬೇರೆ ಆದೇಶಗಳ ನಡುವೆ ಹೆಚ್ಚಿನ ನ್ಯಾಯಶಾಸ್ತ್ರಜ್ಞರ ಮತ್ತು ನ್ಯಾಯಾಧೀಶರ ಅಭಿಪ್ರಾಯ ರಾಜ್ಯ ಸರ್ಕಾರದ ಕರ್ತವ್ಯಕ್ಕೆ ನಿಯುಕ್ತಿಗೊಂಡ ಅಧಿಕಾರಿಗಳು ರಾಜ್ಯದ ಅಧೀನದಲ್ಲಿ ಬರುತ್ತಾರೆ ಎಂಬ ಕಡೆಯೇ ವಾಲುತ್ತದೆ.

IAS ಅಧಿಕಾರಿಯ ನಿವೃತ್ತಿಯ ನಂತರ ಕೇಂದ್ರ ಸರ್ಕಾರ ವಿಚಾರಣೆ ನಡೆಸಬಹುದೇ?

ಬಂದೋಪಾದ್ಯಾಯ್‌ ಅವರ ಪ್ರಕರಣವು ಅವರ ನಿವೃತ್ತಿಯಿಂದಾಗಿ ಇನ್ನಷ್ಟು ಕಗ್ಗಂಟಾಗಿ ಪರಿಣಮಿಸಿದೆ. ಮೇ 31 ರಂದು ಬಂದೋಪಾದ್ಯಾಯ ತಮ್ಮ ಆಲ್‌ ಇಂಡಿಯಾ ಸರ್ವಿಸ್‌ ಅಡಿಯ ಉದ್ಯೋಗದಿಂದ ನಿವೃತ್ತರಾಗಿದ್ದಾರೆ. ಹಾಗಾದರೆ ನಿವೃತ್ತಿಯ ನಂತರ ಕೇಂದ್ರ ಸರ್ಕಾರವು ಬಂದೋಪಾದ್ಯಾಯ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಬಹುದೇ?

ಸುಪ್ರಿಂ ಕೋರ್ಟ್‌ 1971 ರಲ್ಲಿ IAS ಅಧಿಕಾರಿಗಳ ನಿವೃತ್ತಿಯ ನಂತರ ಅವರ ವಿರುದ್ಧ ವಿಚಾರಣೆಗಳನ್ನು ನಡೆಸುವ ಕುರಿತು ತನ್ನ ಆದೇಶದಲ್ಲಿ ಸ್ಪಷ್ಟತೆಯನ್ನು ನೀಡಿದೆ. 1971 ರಲ್ಲಿ ʼಪಿ.ಆರ್‌ ನಾಯಕ್‌ Vs ಭಾರತ ಸರ್ಕಾರʼ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಇಂಡಿಯನ್‌ ಸಿವಿಲ್‌ ಸರ್ವಿಸ್‌ ನ ಸದಸ್ಯರ ನಿವೃತ್ತಿಯ ನಂತರದಲ್ಲಿ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ಬೇರೆ ಉದ್ಯೋಗಿಗಳನ್ನು ನಿವೃತ್ತಿಯ ನಂತರವೂ ಇಲಾಖಾ ವಿಚಾರಣೆಗೆ ಒಳಪಡಿಸಬಹುದು ಎಂಬ ಸ್ಪಷ್ಟ ಆದೇಶವನ್ನು ನೀಡಿದೆ.
2014 ರಲ್ಲಿ ಸುಪ್ರೀಂ ಕೋರ್ಟ್‌ ದೇವ್‌ ಪ್ರಕಾಶ್‌ Vs ಉತ್ತರ ಪ್ರದೇಶ ಕೊ ಆಪರೇಟಿವ್‌ ಸಂಸ್ಥೆ ಪ್ರಕರಣದಲ್ಲಿ IAS ಅಧಿಕಾರಿಯ ನಿವೃತ್ತಿಯ ನಂತರ ಅವರ ವಿರುದ್ಧವಿರುವ ಇಲಾಖಾ ವಿಚಾರಣೆಯನ್ನು ಮುಂದುವರಿಸಬಾರದು. ನಿಯಮಗಳ ಪ್ರಕಾರ ವಿಚಾರಣೆಯನ್ನು ನಡೆಸಲು ಅವಕಾಶವಿಲ್ಲದಿದ್ದಾಗ ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಯು ನಿವೃತ್ತಿಯ ನಂತರದಲ್ಲಿ ವಿಚಾರಣೆಯನ್ನು ಮುಂದುವರೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್‌ ಈ ಪ್ರಕರಣದಲ್ಲಿ ಹೇಳಿದೆ.

ಬಂದೋಪಾದ್ಯಾಯ್‌ ಅವರ ಪ್ರಕರಣದಲ್ಲಿ ಆಲ್‌ ಇಂಡಿಯಾ ಸರ್ವಿಸ್‌ ರೂಲ್ಸ್‌ 1983 ರ ನಿಯಮಾವಳಿಗಳು IAS ಅಧಿಕಾರಿಯು ನಿವೃತ್ತನಾಗಿ ನಾಲ್ಕು ವರ್ಷಗಳ ಅವಧಿಯ ವರೆಗೆ ಇಲಾಖಾ ವಿಚಾರಣೆಗೆ ಅವಕಾಶವನ್ನು ಕಲ್ಪಿಸುತ್ತದೆ. ಆದರೆ ರಾಜ್ಯ ಸರ್ಕಾರದ ಸೇವೆಯಲ್ಲಿರುವ IAS ಅಧಿಕಾರಿಯ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸುವ ಅಧಿಕಾರ ಯಾರಿಗಿದೆಯೆಂದು ಈ ನಿಯಮಾವಳಿಗಳು ಎಲ್ಲೂ ಸ್ಪಷ್ಟವಾಗಿ ಹೇಳುವುದಿಲ್ಲ.

ಒಂದು ವೇಳೆ ಬಂದೋಪಾದ್ಯಾಯ್‌ ಅವರ ವಿರುದ್ಧ ಇಲಾಖಾ ತನಿಖೆಯನ್ನು ನಡೆಸುವುದೇ ಆದರೆ ಅವರ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸುವ ಅಧಿಕಾರ ಯಾರಿಗಿದೆ? ಕೇಂದ್ರ ಸರ್ಕಾರಕ್ಕೋ ? ಅಥವಾ ರಾಜ್ಯ ಸರ್ಕಾರಕ್ಕೋ?

ದೇಶದಲ್ಲಿ ಇದುವರೆಗೆ ಈ ಸಮಸ್ಯೆ ಉದ್ಭವವಾಗಿಲ್ಲ. ಈ ಹೊಸ ಸಮಸ್ಯೆಗೆ ಹೈ ಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ ಗಳು ಮಾತ್ರ ಸಮರ್ಪಕ ಉತ್ತರವನ್ನು ನೀಡಲು ಸಾಧ್ಯ.


ಇದನ್ನೂ ಓದಿ: ಸರ್ಕಾರದ ಹುದ್ದೆಗೆ ನಿವೃತ್ತಿ – ಸಿಎಂ ಮಮತಾ ಬ್ಯಾನರ್ಜಿಯವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡ ಅಲಪಾನ್‌ ಬಂದೋಪಾದ್ಯಾಯ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...