Homeಕರೋನಾ ತಲ್ಲಣಲಾಕ್‌ಡೌನ್‌ ಸಂಕಷ್ಟ - ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

- Advertisement -
- Advertisement -

ಕೊರೊನಾ ಹೆಸರಲ್ಲಿ ಸರ್ಕಾರಗಳು ಹೇರಿರುವ ಲಾಕ್‌ಡೌನ್‌‌‌‌ ಪ್ರತಿಯೊಬ್ಬರನ್ನು ವಿಭಿನ್ನ ತೊಂದರೆಗಳಿಗೆ ಸಿಲುಕಿಸಿದೆ. ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಕೂಲಿ ಕೆಲಸಗಾರನಾದ 40 ವರ್ಷದ ದಿಲೀಪ್ ಯಾದವ್‌ ಅವರು ತನ್ನ ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮೀ ಸೈಕಲ್‌ ಪ್ರಯಾಣಿಸುವ ಸಂಕಷ್ಟಕ್ಕೆ ಲಾಕ್‌ಡೌನ್‌ ಅವರನ್ನು ದೂಡಿದೆ.

ದಿಲೀಪ್ ಅವರ ಐದು ವರ್ಷದ ಮಗ ವಿವೇಕ್‌ಗೆ ಥಲಸ್ಸೆಮಿಯಾ ಎಂಬ ಕಾಯಿಲೆ ಇದ್ದು, ಅದರ ಚಿಕಿತ್ಸೆಗಾಗಿ ರಕ್ತ ವರ್ಗಾವಣೆಯ ಅಗತ್ಯವಿರುತ್ತದೆ.

ದಿಲೀಪ್ ಪ್ರತಾಪುರ ಗ್ರಾಮದ ನಿವಾಸಿಯಾಗಿದ್ದು, ಅವರ ಮಗನ ರಕ್ತದ ಗುಂಪು A- ಆಗಿದೆ. ಇದು ಅಪರೂಪದ ರಕ್ತದ ಗುಂಪಾಗಿದ್ದು, ಅವರ ಜಿಲ್ಲೆಯಾದ ಗೊಡ್ಡಾದಲ್ಲಿ ಸಾರ್ವಕಾಲಿಕವಾಗಿ ಲಭ್ಯವಾಗುತ್ತಿಲ್ಲ. ಆದ್ದರಿಂದ, ಅವರು ತಮ್ಮ ಮಗನ ರಕ್ತದ ವರ್ಗಾವಣೆಗೆ ಇತರ ಜಿಲ್ಲೆಗಳಿಗೆ ಪ್ರಯಾಣಿಸಬೇಕಾಗುತ್ತದೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಮಾನವರ ಮೃತದೇಹಗಳನ್ನು ಕಿತ್ತು ತಿನ್ನುತ್ತಿರುವ ಬೀದಿ ನಾಯಿಗಳು

ಕಳೆದ ತಿಂಗಳು ಮೇ 25 ರಂದು ದಿಲೀಪ್‌ ಅವರು ತನ್ನ ಮಗನೊಂದಿಗೆ ಜಮ್ತರಾಕ್ಕೆ ಪ್ರಯಾಣ ಬೆಳೆಸಿ ಎರಡು ಯೂನಿಟ್‌ ರಕ್ತವನ್ನು ಪಡೆದು ಮೇ 31 ರಂದು ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ. ಏಪ್ರಿಲ್‌ನಲ್ಲಿಯೂ ಅವರು ಜಮ್ತರಾಕ್ಕೆ ಪ್ರಯಾಣ ಬೆಳೆಸಿದ್ದರು. ಅವರ ಬೈಸಿಕಲ್‌ನಲ್ಲಿ 200 ಕಿ.ಮೀ ದೂರವನ್ನು ಕ್ರಮಿಸಲು ಅವರಿಗೆ ಎರಡು ದಿನಗಳು ಬೇಕಾಗುತ್ತದೆ. ಲಾಕ್‌ಡೌನ್‌ ಕಾರಣಕ್ಕೆ ಸಾರ್ವಜನಿಕ ಸಾರಿಗೆಯನ್ನು ನಿರ್ಬಂಧಿಸಲಾಗಿದ್ದು, ಖಾಸಗಿ ಕ್ಯಾಬ್‌ ಅನ್ನು ಬಾಡಿಗೆಗೆ ಪಡೆಯಲು ಅವರು ಆರ್ಥಿಕವಾಗಿ ಶಕ್ತರಾಗಿಲ್ಲದ ಕಾರಣ ಸೈಕಲ್‌ನಲ್ಲೇ ಪ್ರಯಾಣಿಸಬೇಕಾಗುತ್ತದೆ.

“ಇಲ್ಲಿಯವರೆಗೆ, ನಾನು ನನ್ನ ಬೈಸಿಕಲ್‌ನಲ್ಲಿ ನಾಲ್ಕು ಟ್ರಿಪ್‌ಗಳನ್ನು ಮಾಡಿದ್ದೇನೆ. ಕಳೆದ ವರ್ಷ ದುಮ್ಕಾ ಮತ್ತು ದಿಯೋಘರ್‌‌ಗೆ ಪ್ರಯಾಣಿಸಿದ್ದೆ. ಈ ವರ್ಷ ಎರಡು ಬಾರಿ ಜಮ್ತಾರಾಗೆ ಪ್ರಯಾಣಿಸಿದ್ದೇನೆ” ಎಂದು ದಿಲೀಪ್‌‌ ಹೇಳುತ್ತಾರೆ.

ಕೊರೊನಾಕ್ಕೂ ಮೊದಲು, ಬಾಲಕ ವಿವೇಕ್‌ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿ ಅವರಿಗೆ ಉಚಿತ ರಕ್ತವನ್ನು ನೀಡಲಾಗಿತ್ತು. ಆದರೆ ಲಾಕ್ಡೌನ್ ಕಾರಣ ನಾವು ಕಳೆದ ವರ್ಷ ಅಲ್ಲಿಂದ ಮರಳಬೇಕಾಯಿತು ಎಂದು ದಿಲೀಪ್‌ ಹೇಳುತ್ತಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

ಜಾರ್ಖಂಡ್‌ನ ಕೆಲವು ರಕ್ತದಾನ ಗುಂಪುಗಳ ಸಹಾಯದಿಂದ ಅವರು ತನ್ನ ಮಗನಿಗೆ ರಕ್ತವನ್ನು ವ್ಯವಸ್ಥೆ ಮಾಡುತ್ತಾರೆ. ಅಲ್ಲಿ A- ಗುಂಪಿನ ರಕ್ತ ಲಭ್ಯವಿದೆ ಎಂದು ತಿಳಿದ ನಂತರ, ಫೋನ್‌ನಲ್ಲಿ ಎಲ್ಲಾ ವ್ಯವಸ್ಥೆಯಾದ ನಂತರ ಅಲ್ಲಿಗೆ ಅವರು ಅಲ್ಲಿಗೆ ತೆರಳುತ್ತಾರೆ.

ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರ ಪ್ರಕಾರ, ಬಾಲಕ ವಿವೇಕ್‌ನ ಶಾಶ್ವತ ಚಿಕಿತ್ಸೆಗಾಗಿ ಆಪರೇಷನ್ ಮಾಡಬೇಕಾಗಿದ್ದು, ಇದು ಸುಮಾರು 10 ಲಕ್ಷ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ. ಆದರೆ ಕೂಲಿ ಕೆಲಸಗಾರರಾದ ದಿಲೀಪ್‌‌ ಈ ವೆಚ್ಚವನ್ನು ಭರಿಸಲು ಸಾಧ್ಯವಾಗಿಲ್ಲ.

ಇದಕ್ಕೂ ಮೊದಲು ಗೊಡ್ಡಾ ಸಂಸದ ನಿಶಿಕಾಂತ್ ದುಬೆ ಅವರ ಉಪಕ್ರಮದಲ್ಲಿ ವಿವೇಕ್ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು 3 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಿತ್ತು. ಆದರೆ ದಿಲೀಪ್‌ ಅವರಿಗೆ ಉಳಿದ ಹಣವನ್ನು ವ್ಯವಸ್ಥೆ ಮಾಡಲು ಸಾಧ್ಯವಾಗದ ಕಾರಣ ಮೊತ್ತವು ಸಿಗದಂತಾಗಿದೆ.

ಗೊಡ್ಡಾ ಸಿವಿಲ್ ಸರ್ಜನ್ ಎಸ್ಪಿ ಮಿಶ್ರಾ ಅವರನ್ನು TNIE ಪತ್ರಿಕೆಯು ಸಂಪರ್ಕಿಸಿದಾಗ, ದಿಲೀಪ್‌ ಅವರ ಸಂಕಟದ ಬಗ್ಗೆ ತಿಳಿದಿಲ್ಲ, ಅಗತ್ಯವಿದ್ದಾಗ ವಿವೇಕ್‌ಗೆ A- ರಕ್ತವನ್ನು ವ್ಯವಸ್ಥೆಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...