Homeಕರ್ನಾಟಕಕೊರೊನಾ ಪರಿಹಾರ: ರಂಗಕರ್ಮಿಗಳ ನಡುವೆ ತಾರತಮ್ಯಕ್ಕೆ ಕೆವಿಎಸ್‌ ಆಕ್ರೋಶ

ಕೊರೊನಾ ಪರಿಹಾರ: ರಂಗಕರ್ಮಿಗಳ ನಡುವೆ ತಾರತಮ್ಯಕ್ಕೆ ಕೆವಿಎಸ್‌ ಆಕ್ರೋಶ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡಲು ಸಿಎಂ ಯಡಿಯೂರಪ್ಪ ಅವರು 1,200 ಕೋಟಿ ರೂ ಪ್ಯಾಕೇಜ್‌ ಘೋಷಿಸಿದ್ದಾರೆ. ಇದರಲ್ಲಿ ರಂಗಕರ್ಮಿಗಳಿಗೂ ಪ್ರೋತ್ಸಾಹ ಧನ ಘೋಷಿಸಿದ್ದು, 35 ವರ್ಷ ಮೇಲ್ಪಟ್ಟ ರಂಗಕರ್ಮಿಗಳಿಗೆ ಮಾತ್ರ 3,000 ರೂ ನೀಡುವುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ರಂಗಕರ್ಮಿಗಳ ವಿಚಾರದಲ್ಲಿ ವಯಸ್ಸಿನ ಆಧಾರದ ಮೇಲೆ ತಾರತಮ್ಯ ಮಾಡುತ್ತಿದೆ ಎಂದು ರಂಗಕರ್ಮಿ, ಕೆವಿಎಸ್‌ ಮುಖಂಡ ಲಕ್ಷ್ಮಣ್ ಮಂಡಲಗೆರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಸರ್ಕಾರ ಕೊಡುವ ಸಣ್ಣ ಮೊತ್ತಕ್ಕೆ ಕಲಾವಿದರು ಅರ್ಜಿ ಸಲ್ಲಿಸಲು ಅರ್ಧ ಖರ್ಚಾಗುತ್ತದೆ. ಎರಡು ಮೂರು ವರ್ಷಗಳಿಂದ ಕೊರೊನಾ ನೆಪ ಹೇಳಿ ಇಲಾಖೆಗಳಿಗೆ, ಅಕಾಡೆಮಿಗಳಿಗೆ ಹಣವೇ ಬಿಡುಗಡೆ ಆಗಿಲ್ಲ. ಏನಿಲ್ಲಂದರೂ 200 – 300 ಕೋಟಿ ರೂ. ಹಣ ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ, ಸಾಹಿತ್ಯ ಪರಿಷತ್ತುಗಳಿಗೆ, ಇಲಾಖೆಗಳಿಗೆ ಬಿಡುಗಡೆ ಆಗಬೇಕಾದ ಹಣ ಎಲ್ಲಿ ಹೋಯಿತು?  ಕೊನೆ ಪಕ್ಷ ಕಲಾವಿದರ ಕಷ್ಟಕ್ಕಾದರು ಅ ಹಣ ಉಪಯೋಗ ಆಗುವುದು ಬೇಡವೇ?” ಎಂದು ರಾಜ್ಯ ಸರ್ಕಾರವನ್ನು ಪಶ್ನಿಸಿದ್ದಾರೆ.

“ರಂಗ ಚಟುವಟಿಕೆಗಳು ನಡೆಸಲು ಅವಕಾಶ ಇಲ್ಲದೆ, ಕಾರ್ಯಕ್ರಮಗಳು ಇಲ್ಲದೆ, ಒಂದಿಷ್ಟು ದುಡಿಮೆ ಇರುವ ಬೇಸಿಗೆ ಶಿಬಿರಗಳು ಇಲ್ಲ. ಸಣ್ಣ ಪುಟ್ಟ ರಂಗ ತಂಡಗಳಲ್ಲಿ ನಾಟಕ ತಯಾರು ಮಾಡಿಕೊಂಡು ಸುತ್ತಾಟ ಮಾಡುತ್ತ, ಸಂಕಷ್ಟಗಳನ್ನು ಎದುರಿಸುತ್ತ ರಂಗಭೂಮಿಯನ್ನೇ ನಂಬಿ ತಮ್ಮ ಬದುಕನ್ನಾಗಿಸಿಕೊಂಡ ಕಲಾವಿದರಿಗೆ ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಸಹಾಯಕ್ಕೆ ನಿಲ್ಲದಿರುವಂತಹ ದುಸ್ಥಿತಿ ಬಂದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

“ನೊಂದ ಕಲಾವಿದರ ಕುಟುಂಬ ನಿರ್ವಹಣೆಗಾದರೂ ಸರ್ಕಾರ ಸಹಾಯ ಮಾಡಬಹುದು ಅಂದುಕೊಂಡರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಅಕಾಡೆಮಿ ಅಧ್ಯಕ್ಷರು, ಸದಸ್ಯರುಗಳು ಮತ್ತು ರಾಜ್ಯ ಸರ್ಕಾರ ಈ ಎಲ್ಲರೂ ಸೇರಿ ಕಲಾವಿದರ ವಯಸ್ಸಿನ ಆಧಾರದಲ್ಲಿ ಅರ್ಜಿ ಆಹ್ವಾನಿಸಿ ಅನ್ಯಾಯ ಮಾಡಿದೆ. 35 ವರ್ಷದೊಳಗಿನವರಿಗೆ, ಮಾಶಾಸನ ಪಡೆಯುವವರಿಗೆ ಹಾಗೂ ಧನಸಹಾಯ ಪಡೆಯುವ ಸಂಘ – ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂಬ ನಿಯಮಗಳಿವೆ…ಹಾಗಾದರೆ ಸರ್ಕಾರವು ಮಧ್ಯ ವಯಸ್ಸಿನ ಎಷ್ಟು ಕಲಾವಿದರಿಗೆ ಕೊಡತ್ತೀರಿ ಎನ್ನುವುದು ನನ್ನ ಪ್ರಶ್ನೆಯಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಕರ್ನಾಟಕದಲ್ಲಿ ರಂಗಭೂಮಿ ಇಷ್ಟೆಲ್ಲ ಕ್ರಿಯಾಶೀಲವಾಗಿ ಕೆಲಸ ಮಾಡಲು ಜೀವಂತವಾಗಿರುವುದಕ್ಕೆ ಈ 35 ವಯಸ್ಸಿನ ಒಳಗಿರುವ ಯುವ ರಂಗ ಕಲಾವಿದರು. ಬೇಸಿಗೆ ಶಿಬಿರಗಳಲ್ಲಿ, ದೊಡ್ಡ ದೊಡ್ಡ ರೆಪರ್ಟರಿಗಳಲ್ಲಿ, ಸಣ್ಣ ಸಣ್ಣ ರಂಗತಂಡಗಳಲ್ಲಿ ಕ್ರಿಯಾಶೀಲವಾಗಿ ಹೊಸ ಹೊಸ ಯೋಚನೆಗಳೊಂದಿಗೆ ನಾಟಕಗಳನ್ನು ನಿರ್ದೇಶಿಸಿ ನಟಿಸಿ, ಸಂಘಟಿಸುವುದರ ಮೂಲಕ  ಇಂದು ಯುವರಂಗ ಕಲಾವಿದರು ರಂಗಭೂಮಿಯನ್ನು, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿದ್ದಾರೆ ಮತ್ತು ರಂಗಭೂಮಿಯನ್ನೇ ಬದುಕನ್ನಾಗಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲಕ್ಷ್ಮಣ್ ಮಂಡಲಗೆರ

“ಆದರೆ ಈ ಕಲಾವಿದರನ್ನು ಸರ್ಕಾರಗಳು ಕಡೆಗಣಿಸುತ್ತಿರುವುದು ವಿಷಾದನೀಯ. ಸರ್ಕಾರದ ಅಡಿಯಲ್ಲಿ ನಡೆಯುವ ರಂಗಭೂಮಿಯ ದೊಡ್ಡ ರೆಪರ್ಟರಿಗಳು ಎನಿಸಿಕೊಂಡಿರುವ ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು ಹೇಳುತ್ತಾರೆ. ಅಂತವರನ್ನೇ ಆಯ್ಕೆ ಮಾಡಿ ರಂಗಾಯಣಗಳಿಗೆ ದುಡಿಸಿಕೊಳ್ಳುತ್ತಾರೆ. ಆಗ ಮಾತ್ರ ಯುವ ಕಲಾವಿದರು ಬೇಕು, ಕೊರೊನಾ ಪರಿಹಾರ ನೀಡುವ ಸಮಯದಲ್ಲಿ ಬೇಡ ಎನ್ನುತ್ತಾರೆ…ಇದ್ಯಾವ ಸೀಮೆ ನ್ಯಾಯ, ಈ ನಿರ್ಧಾರ ಸರಿಯಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

“ರಾಜ್ಯದ ಯುವ ರಂಗಕಲಾವಿದರು ಬೀದಿಗಿಳಿಯುವ ಮುಂಚೆ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ, ಆರ್ಥಿಕ ನೆರವನ್ನು 10,000  (ಹತ್ತು ಸಾವಿರ)ರೂ. ಗೆ ಏರಿಸಿ. 10 ವರ್ಷಗಳ ಕಲಾಸೇವೆಯನ್ನು 5 ವರ್ಷಕ್ಕೆ ಇಳಿಸಿ. ಕಲಾವಿದರಿಗೆ ಪರಿಹಾರ ಅಲ್ಲ, ಗೌರವಧನವಾಗಿ ಹಣವನ್ನು ತಲುಪುವಂತೆ ಮಾಡಬೇಕು ಜೊತೆಗೆ ಆನ್‌ಲೈನ್ ಮೂಲಕ ಅರ್ಜಿ ಹಾಕುವ ಕೊನೆಯ ದಿನಾಂಕವನ್ನು ಮುಂದೂಡಬೇಕು” ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

“ಕಲಾವಿದರಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಲು ಆಗಲಿಲ್ಲ ಎಂದರೂ, ಜಿಲ್ಲಾ ಕಛೇರಿಗಳಲ್ಲಿ ಕಲಾವಿದರ ಮಾಹಿತಿ ಇರುತ್ತದೆ. ಅಲ್ಲಿ ಕಲಾವಿದರನ್ನು ಗುರುತಿಸಿ ದಾಖಲಾತಿಯನ್ನು ಪಡೆದು ಜಿಲ್ಲಾ ಕಛೇರಿ ಆಫೀಸ್‌ನಲ್ಲಿರುವ ಕಂಪ್ಯೂಟರ್  ಮೂಲಕವಾದರು ಅರ್ಜಿ ಹಾಕಿಸಿ ಎಲ್ಲಾ ಕಲಾವಿದರಿಗೆ ಆರ್ಥಿಕ ನೆರವು ಸಿಗಬೇಕು” ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಕಲೆಗೆ ಜಾತಿ,ಮತ, ಧರ್ಮ, ವಯಸ್ಸು ಇಲ್ಲ. ಕಲೆ ಎನ್ನುವುದು ಪ್ರತಿಯೊಬ್ಬರಲ್ಲೂ ಅಡಗಿರುವ ಪ್ರತಿಭೆಯಾಗಿದೆ. ಈ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವುದು, ನಿದ್ದೆಯಲ್ಲಿರುವ ಅಧಿಕಾರ ವ್ಯವಸ್ಥೆಯನ್ನು  ಎಚ್ಚರಿಸಿ ಮುನ್ನಡೆಸುವಂತೆ ಮಾಡುವುದು ಈ ಕಲೆಯ ಕೆಲಸವಾಗಿದೆ. ಯುವ ಕಲಾವಿದರನ್ನು ನೀವು ನಿರ್ಲಕ್ಷ್ಯ ಮಾಡಿದರೆ ಮುಂದೆ ಯುವ ರಂಗ ಕರ್ಮಿಗಳ ಮೂಲಕ ಸರ್ಕಾರ ಸಾಕಷ್ಟು ಪ್ರತಿರೋಧಗಳನ್ನು ಎದುರಿಸಬೇಕಾಗುತ್ತದೆ” ಎಂದು ಲಕ್ಷ್ಮಣ್ ಮಂಡಲಗೇರಾ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...