Homeಮುಖಪುಟಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

- Advertisement -
- Advertisement -

ಮೀರತ್‌ನಲ್ಲಿರುವ ಸರ್ಕಾರಿ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯವು ರಾಮದೇವ್, ಯೋಗಿ ಆದಿತ್ಯನಾಥರನ್ನು ದಾರ್ಶನಿಕರು ಎಂದು ಈಗಾಗಲೇ ತನ್ನ ಪಠ್ಯಕ್ರಮದಲ್ಲಿ ಸೇರಿಸಿದ್ದು, ಉಳಿದ ವಿವಿಗಳು ಶೀಘ್ರದಲ್ಲೇ ಅನುಸರಿಸುವ ಸಾಧ್ಯತೆಯಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಉತ್ತರ ಪ್ರದೇಶ ಕೋವಿಡ್ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಈಗಾಗಲೇ ಟೀಕೆ ಎದುರಿಸಿದ್ದಾರೆ. ಅಲೋಪತಿ ವೈದ್ಯ ಪದ್ದತಿಯನ್ನು ಅವಹೇಳನ ಮಾಡಿದ ಕಾರಣಕ್ಕಾಗಿ ಬಾಬಾ ರಾಮ್‌ದೇವ್‌ ದೊಡ್ಡ ವಿರೋಧ ಎದುರಿಸಿದ್ದಾರೆ. ಆದರೆ ಈ ಇಬ್ಬರನ್ನು ಹೀರೋ ಮಾಡಲು ಬಿಜೆಪಿ ಹೊರಟಿದೆಯೇ? ಕೋವಿಡ್‌ಗಿಂತ ಮುಂದಿನ ವರ್ಷದ ಉತ್ತರಪ್ರದೇಶದ ಚುನಾವಣೆಯೇ ಬಿಜೆಪಿಗೆ ಆದ್ಯತೆಯಾಗಿದೆಯೇ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನ ಕುರಿತು ಉತ್ತರ ಪ್ರದೇಶದ ರಾಜ್ಯ ಸಮಿತಿಯು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯೋಗ ಗುರು ಬಾಬಾ ರಾಮದೇವ್ ಅವರು ಬರೆದ ಪುಸ್ತಕಗಳನ್ನು ರಾಜ್ಯದಾದ್ಯಂತದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಅವುಗಳ ಅಂಗಸಂಸ್ಥೆ ಕಾಲೇಜುಗಳಲ್ಲಿ ತತ್ವಶಾಸ್ತ್ರ ಕೋರ್ಸ್ ಅಡಿಯಲ್ಲಿ ಈ ಎರಡು ಪುಸ್ತಕಗಳನ್ನು ಶಿಫಾರಸು ಮಾಡಲಾಗಿದೆ.

ಉತ್ತರಪ್ರದೇಶದ ಸರ್ಕಾರದ ಅಧೀನದಲ್ಲಿ ಇರುವ ಮೀರತ್‌ನ ಚೌಧರಿ ಚರಣ್ ಸಿಂಗ್ ವಿಶ್ವವಿದ್ಯಾಲಯ (ಸಿಸಿಎಸ್‌ಯು) ಈಗಾಗಲೇ ತನ್ನ ಪಠ್ಯಕ್ರಮದಲ್ಲಿ ಪುಸ್ತಕಗಳನ್ನು ಸಂಯೋಜಿಸಿದೆ. ಇದರಲ್ಲಿ ‘ದಾರ್ಶನಿಕರಾದ’ ಬಾಬಾ ಮತ್ತು ಯೋಗಿ ಅವರ ಬಗ್ಗೆಯೇ ಪುಸ್ತಕಗಳಿವೆ, ಅವರು ಬರೆದ ಪುಸ್ತಕಗಳೇ ಪಠ್ಯವಾಗಿವೆ ಮತ್ತು ಕೆಲವು ಕಡೆ ಪಾಠಗಳೂ ಇವೆ.
ಆದಿತ್ಯನಾಥ್ ಅವರ ಹತ್ಯೋಗ ಕಾ ಸ್ವರೂಪ್ ವಾ ಸಾಧನಾ ಮತ್ತು ಬಾಬಾ ರಾಮದೇವ್ ಅವರ ಯೋಗ ಸಾಧನಾ ವಾ ಯೋಗ ಚಿಕಿತ್ಸಾ ರಹಸ್ಯ ಈಗ ವಿಶ್ವವಿದ್ಯಾಲಯದ ಎರಡನೇ ಸೆಮಿಸ್ಟರ್ ಪದವಿಪೂರ್ವ ತತ್ವಶಾಸ್ತ್ರ ಪಠ್ಯಕ್ರಮದ ಭಾಗವಾಗಿವೆ!

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿಂತಕ ಬಂಜಗೆರೆ ಜಯಪ್ರಕಾಶ್, ‘ಈ ಹೊಸ ಶಿಕ್ಷಣ ನೀತಿ ಎಂಬುದೇ ಒಂದು ಅಜೆಂಡಾ. ಈ ನೀತಿ ಜಾರಿ ತಂದಿರುವುದೇ ದೇಶಪ್ರೇಮ, ರಾಷ್ಟ್ರವಾದದ ಹೆಸರಿನಲ್ಲಿ ಜನರನ್ನು ಒಡೆಯುವ ಭಾಗವಾಗಿಯೇ. ಯೋಗಿ, ರಾಮದೇವ್ ಫಿಲಾಸಫಿ ಪಠ್ಯಗಳಲ್ಲಿ ಬಂದಿರುವುದು ಹೊಸ ಶಿಕ್ಷಣ ನೀತಿಯ ಹುನ್ನಾರಗಳಿಗೆ ಮೊದಲ ಸಾಕ್ಷಿಯಂತಿದೆ. ‘ಮುಂದಿನ ದಿನಗಳಲ್ಲಿ ಗೋಮೂತ್ರ ಸೇವನೆ, ಸೆಗಣಿ ಸ್ನಾನ ಕೂಡ ವಿಜ್ಞಾನ ಮತ್ತು ವೈದ್ಯಕೀಯ ಪಠ್ಯಗಳಲ್ಲಿ ಬಂದರೂ ಬರಬಹುದು’ ಎಂದರು.

ಶೈಕ್ಷಣಿಕ, ಸಾಹಿತ್ಯಿಕ ಮೌಲ್ಯವಂತೆ!

ಹೆಸರಿಸಲು ಇಚ್ಛಿಸದ ಪಠ್ಯಕ್ರಮ ಅಭಿವೃದ್ಧಿ ಸಮಿತಿಯ ಸದಸ್ಯರೊಬ್ಬರು, ಈ ಪುಸ್ತಕಗಳನ್ನು ಅವುಗಳ “ಉನ್ನತ ಸಾಹಿತ್ಯಿಕ ಮೌಲ್ಯ”ದ ಕಾರಣಕ್ಕೆ ಆಯ್ಕೆ ಮಾಡಲಾಗಿದೆ ಎಂದು ದಿ ಪ್ರಿಂಟ್‌ಗೆ ಹೇಳಿದ್ದಾರೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...