Homeಮುಖಪುಟವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

- Advertisement -
- Advertisement -

ಕೊರೊನಾ ಸಾವುಗಳು ಹೆಚ್ಚಾಗುತ್ತಿರುವಂತೆಯೇ ವೈದ್ಯರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ. ಗುವಾಹಟಿಯಿಂದ 140 ಕಿಲೋಮೀಟರ್ ದೂರದಲ್ಲಿರುವ ಅಸ್ಸಾಂನ ಹೊಜೈನಲ್ಲಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಆಮ್ಲಜನಕದ ಕೊರತೆಯಿಂದಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತ ರೋಗಿಯ ಸಂಬಂಧಿಕರು, ವೈದ್ಯರ ಮೇಲೆ ಲೋಹದ ಕಸದ ಡಬ್ಬಿ ಮತ್ತು ಇಟ್ಟಿಗೆಗಳಿಂದ ಮನ ಬಂದಂತೆ ಥಳಿಸಿದ್ದಾರೆ. ಮೃತನ ಸಂಬಂಧಿಕರ ಜೊತೆಗೆ ವೈದ್ಯರ ಮೇಲೆ ಸ್ಥಳೀಯರು ಹಲ್ಲೆ ಮಾಡಿದ್ದಾರೆ. ವೈದ್ಯರ ಮೇಲಿನ ಮಾರಣಾಂತಿಕ ಹಲ್ಲೆಯ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಘಟನೆಯಲ್ಲಿ ಮುಖ್ಯ ಆರೋಪಿಗಳು ಸೇರಿದಂತೆ 24 ಜನರನ್ನು ಬಂಧಿಸಲಾಗಿದೆ.

ಹೊಜೈನಲ್ಲಿರುವ ಉದಾಲಿ ಮಾಡೆಲ್ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಡಾ. ಸೆಯೇಜ್ ಕುಮಾರ್ ಸೇನಾಪತಿ ಕರ್ತವ್ಯದಲ್ಲಿದ್ದರು. ಪಿಪಾಲ್ ಪುಖುರಿ ಗ್ರಾಮದ ನಿವಾಸಿ ಗಿಯಾಜ್ ಉದ್ದೀನ್ ಎಂಬ ರೋಗಿಯು ಕೊರೊನಾ ಸಂಬಂಧಿತ ತೊಂದರೆಗಳಿಂದಾಗಿ ಮಂಗಳವಾರ ಮೃತಪಟ್ಟಿದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿಗೂ ಲಸಿಕೆಗೂ ಮುಗಿಯದ ನಂಟು, ಮತ್ತೆ ವಿವಾದದಲ್ಲಿ ಬಿಜೆಪಿ ಶಾಸಕ

 

“ರೋಗಿಯ ಸ್ಥಿತಿ ಗಂಭೀರವಾಗಿದೆ ಮತ್ತು ಬೆಳಿಗ್ಗೆಯಿಂದ ಮೂತ್ರ ವಿಸರ್ಜಿಸಿಲ್ಲ ಎಂದು ನನಗೆ ಅಟೆಂಡರ್‌ ತಿಳಿಸಿದರು. ನಾನು ಕೋಣೆಗೆ ಹೋಗಿ ರೋಗಿಯನ್ನು ಪರೀಕ್ಷಿಸಿದೆ. ಆತ ಮೃತಪಟ್ಟಿದ್ದಾನೆ ತಿಳಿಯಿತು. ನಾನು ಸುದ್ದಿ ತಿಳಿಸುತ್ತಿದ್ದಂತೆ, ಮೃತನ ಸಂಬಂಧಿ ನನ್ನನ್ನು ನಿಂದಿಸಲು ಪ್ರಾರಂಭಿಸಿದರು” ಎಂದು ಡಾ.ಸೇನಾಪತಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೊರೊನಾ ಸೋಂಕಿತ ರೋಗಿಯ ಸಾವಿನಿಂದ ಬೇಸತ್ತ ಜನಸಮೂಹವು ಆಸ್ಪತ್ರೆಯ ಮೇಲೆ ದಾಳಿ ಮಾಡಿತು. ಹೆಚ್ಚಿನ ವೈದ್ಯಕೀಯ ಅಧಿಕಾರಿಗಳು ಇವರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ, ಡಾ. ಸೇನಾಪತಿ ತನ್ನನ್ನು ಕೋಣೆ ಒಳಗೆ ಸೇರಿಕೊಂಡಿದ್ದರು, ಆದರೆ ಜನರ ಗುಂಪು ಕೊಠಡಿಗೆ ನುಗ್ಗಿ ತೀವ್ರವಾಗಿ ಹಲ್ಲೆ ಮಾಡಿದೆ ಎಂದು ವರದಿಯಾಗಿದೆ.

“ಉದ್ರಿಕ್ತ ಗುಂಪು ಆಸ್ಪತ್ರೆಯನ್ನು ದರೋಡೆ ಮಾಡಿದರು, ನಾವು (ಸಿಬ್ಬಂದಿ) ಸುರಕ್ಷತೆಗಾಗಿ ಓಡಿದೆವು. ನಾನು ಒಂದು ಕೊಠಡಿಗೆ ಸೇರಿಕೊಂಡು ಬಚಾವಾಗಲು ಪ್ರಯತ್ನಿಸಿದೆ. ಆದರೆ, ಅವರು ನನ್ನನ್ನು ಕಂಡು ನನ್ನ ಮೇಲೆ ಹಲ್ಲೆ ನಡೆಸಿದರು. ಅವರು ನನ್ನ ಚಿನ್ನದ ಸರ, ನನ್ನ ಉಂಗುರ ಮತ್ತು ನನ್ನ ಮೊಬೈಲ್ ಕಸಿದುಕೊಂಡರು. ಅವರು 30 ಜನರಿದ್ದರು” ಎಂದು ಡಾ.ಸೇನಾಪತಿ ಹೇಳಿದ್ದಾರೆ.

ವೈದ್ಯರ ಮೇಲಿನ ಹಲ್ಲೆ ವ್ಯಾಪಕ ಖಂಡನೆಗೆ ಕಾರಣವಾಗಿದ್ದು, ಈ ಘಟನೆಯನ್ನು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಜೆ.ಜಯಲಾಲ್ ಖಂಡಿಸಿದ್ದಾರೆ. ಅಸ್ಸಾಂ ವೈದ್ಯಕೀಯ ಸೇವೆಗಳ ಸಂಘದ (ಎಎಂಎಸ್ಎ) ಅಸ್ಸಾಂ ಅಧ್ಯಾಯದ ಸದಸ್ಯರು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸರ್ಕಾರಿ ಎಲ್ಲಾ ವೈದ್ಯಕೀಯ ಸೌಲಭ್ಯಗಳಲ್ಲಿ ಅವರು ಇಂದು ಹೊರರೋಗಿ ವಿಭಾಗ (ಒಪಿಡಿ) ಸೇವೆಗಳನ್ನು ಬಹಿಷ್ಕರಿಸಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ದಾಳಿಯ ಬಗ್ಗೆ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವಂತೆ ಅಸ್ಸಾಂನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿ.ಪಿ.ಸಿಂಗ್‌ಗೆ ನಿರ್ದೇಶನ ನೀಡಿದ್ದಾರೆ., ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಬಂಧಿಸಲಾಗಿದೆ.

ಭಾರತೀಯ ವೈದ್ಯಕೀಯ ಸಂಘಟನೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ. ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ತಡೆಯಲು ಕಠಿಣ ಮತ್ತು ಪರಿಣಾಮಕಾರಿ ಕಾಯ್ದೆ ಜಾರಿಗೆ ತರಬೇಕು ಎಂದು ಗೃಹ ಸಚಿವ ಅಮಿತ್ ಶಾ ಅವರಲ್ಲಿ ಮನವಿ ಮಾಡಿದೆ.


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...