Homeಮುಖಪುಟರಾಷ್ಟೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಜಸ್ಟಿಸ್‌ ಅರುಣ್‌ ಮಿಶ್ರಾ ನೇಮಕ

ರಾಷ್ಟೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಜಸ್ಟಿಸ್‌ ಅರುಣ್‌ ಮಿಶ್ರಾ ನೇಮಕ

ಎಸ್‌ಸಿ ಎಸ್ಟಿ ವರ್ಗದಿಂದ ಅಧ್ಯಕ್ಷ ಅಥವಾ ಸದಸ್ಯರು ಯಾಕಿಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ

- Advertisement -
- Advertisement -

ಸುಪ್ರೀಂ ಕೋರ್ಟ್‌ ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್‌ ಅರುಣ್‌ ಮಿಶ್ರಾ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜಸ್ಟಿಸ್‌ ಅರುಣ ಮಿಶ್ರಾ 2020ರ ಸೆಪ್ಟೆಂಬರ್‌ 3 ರಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಹುದ್ದೆಯಿಂದ ನಿವೃತ್ತರಾಗಿದ್ದರು.

ಜಸ್ಟಿಸ್‌ ಅರುಣ್‌ ಮಿಶ್ರಾ 2014 ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಈ ಹಿಂದೆ ಅವರು ರಾಜಸ್ಥಾನ ಮತ್ತು ಕಲ್ಕತ್ತಾ ಹೈಕೋರ್ಟ್‌ ಗಳ ಮುಖ್ಯನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು. ಜಸ್ಟಿಸ್‌ ಮಿಶ್ರಾ ಅವರ ಈಗಿನ ಹೊಸ ಹುದ್ದೆಯ ಅಧಿಕಾರಾವಧಿಯು 5 ವರ್ಷದ್ದಾಗಿದು 2026 ರಲ್ಲಿ ನಿವೃತ್ತರಾಗಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯ ಸಭೆಯ ಉಪಾಧ್ಯಕ್ಷ ಹರಿವಂಶ, ಲೋಕಸಭೆ ಸ್ಪೀಕರ್‌ ಓಮ್‌ ಬಿರ್ಲಾ ರಾಜ್ಯ ಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನೊಳಗೊಂಡ ಉನ್ನತ ಸಮಿತಿಯು ಅರುಣ್‌ ಮಿಶ್ರಾ ಅವರನ್ನು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಜಸ್ಟಿಸ್‌ ಅರುಣ್‌ ಮಿಶ್ರಾ ಆಯ್ಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು ಯಾರಾದರೂ ಎಸ್‌ಸಿ, ಎಸ್ಟಿ ಸಮುದಾಯದಿಂದ ಬಂದವರನ್ನು ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರನ್ನಾಗಿ ಮಾಡುವಂತೆ ಮನವಿ ಮಾಡಿದ್ದಾರೆ. ಅಥವಾ ಎಸ್‌ಸಿ ಸ್ಟಿ ಸಮುದಾಯದವರೊಬ್ಬರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸದಸ್ಯರನ್ನಾಗಿ ನೇಮಿಸುವಂತೆ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಮನವಿ ಮಾಡಿದ್ದಾರೆ. ದೇಶದಲ್ಲಿ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಇತ್ತೀಚಿನ ವರ್ಷಗಳಲ್ಲಿ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಆ ಸಂಬಂಧ ಹೆಚ್ಚು ಹೆಚ್ಚು ಪ್ರಕರಣಗಳು ಮಾನವ ಹಕ್ಕು ಆಯೋಗದ ಮುಂದೆ ಬರುತ್ತಿವೆ ಹಾಗಾಗಿ ಎಸ್‌ಸಿ ಎಸ್ಟಿ ಸಮುದಾಯದವರು ಆಯೋಗದಲ್ಲಿದ್ದರೆ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೂಲಗಳು ಹೇಳುವಂತೆ ಮಲ್ಲಿಕಾರ್ಜುನ ಖರ್ಗೆಯವರು ಸಮಿತಿಯ ಸಭೆಗೂ ಮೊದಲು ಪ್ರಧಾನಿಯವರಿಗೆ ಈ ಸಂಬಂಧ ಪತ್ರವನ್ನು ಬರೆದಿದ್ದಾರೆ. ನಿಯಮಾವಳಿಗಳಲ್ಲಿ ಅವಕಾಶವಿಲ್ಲ ಅಥವಾ ನಿಯಮಾವಳಿಗಳು ಎಸ್‌ಸಿ ಎಸ್ಟಿ ವರ್ಗದವರನ್ನು ಮಾನವ ಹಕ್ಕುಗಳ ಆಯೋಗಕ್ಕೆ ಸದಸ್ಯರನ್ನಾಗಿ ಆಯ್ಕೆ ಮಾಡಿ ಎಂದು ಹೇಳುವುದಿಲ್ಲ ಎಂಬ ಒಂದೇ ಕಾರಣಕ್ಕೆ ದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಎಸ್‌ಸಿ ಎಸ್ಟಿ ಸಮುದಾಯದವರೊಬ್ಬರನ್ನು ಆಯೋಗಕ್ಕೆ ಸದಸ್ಯರನ್ನಾಗಿ ಆಯ್ಕೆ ಮಾಡಿ ಎಂದು ಖರ್ಗೆಯವರು ತಮ್ಮ ಪತ್ರದಲ್ಲಿ ಸಮಿತಿಯ ಅಧ್ಯಕ್ಷರಾದ ಪ್ರಧಾನಿಯವರಲ್ಲಿ ಮನವಿ ಮಾಡಿದ್ದರು.

ಕಳೆದ ಡಿಸೆಂಬರ್‌ ನಲ್ಲಿ ಮಾಜಿ ಸಿಜೆಐ ಹೆಚ್‌ ಎಲ್‌ ದತ್ತು ಅವರ ನಿವೃತಿಯ ನಂತರ 6 ತಿಂಗಳುಗಳಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಹುದ್ದೆ ಖಾಲಿಯಾಗಿಯೇ ಉಳಿದಿತ್ತು. ಜೊತೆಗೆ ಆಯೋಗದ ಸದಸ್ಯರ ಹುದ್ದೆಗಳು ದೀರ್ಘಾವಧಿಯಿಂದ ತೆರವಾಗಿಯೇ ಉಳಿದಿವೆ. ಹಿಂದೆ ಮಾರ್ಚ್‌ ನಲ್ಲಿ ಮಾಜಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಮತ್ತು ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಜಸ್ಟಿಸ್‌ ಪ್ರಫುಲ್ಲ ಪಂತ್‌ ರಾಷ್ಟ್ರೀಯ ಆಯೋಗದಲ್ಲಿ ಖಾಲಿಯಾಗಿಯೇ ಉಳಿದಿರುವ ಅಧ್ಯಕ್ಷ ಮತ್ತು ಸದಸ್ಯರ ಹುದ್ದೆ ಕುರಿತು ಸರ್ಕಾರವನ್ನು ಪ್ರಶ್ನೆ ಮಾಡಿದ್ದರು.

ರಾಜ್ಯ ಮಾನವ ಹಕ್ಕುಗಳ ಆಯೋಗಗಳೂ ಕೂಡ ಸದಸ್ಯರು ಮತ್ತು ಅಧ್ಯಕ್ಷರಿಲ್ಲದೇ ಸ್ಥಗಿತ ಗೊಂಡಿವೆ. ಈ ವಿಷಯವನ್ನು ಜಸ್ಟಿಸ್‌ ಪ್ರಫುಲ್ಲ ಪಂತ್‌ ಅತ್ಯಂತ ಕಳವಳಕಾರಿ ಅಂಶ ಎಂದು ಮಾರ್ಚ್‌ ನಲ್ಲಿ ಹೇಳಿಕೆ ನೀಡಿದ್ದರು. ಅನೇಕ ರಾಜ್ಯಗಳಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗಳು ಅಧ್ಯಕ್ಷರು ಮತ್ತು ಅಗತ್ಯ ಸಂಖ್ಯೆಯ ಸದಸ್ಯರಿಲ್ಲದೇ ಕಾರ್ಯಾಚರಣೆಯನ್ನು ನಿಲ್ಲಿಸಿವೆ. ಉದಾಹರಣೆಗೆ ಮಹರಾಷ್ಟ್ರದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ 2018 ರಿಂದ ಈಚೆಗೆ ಪೂರ್ಣಾವಧಿಯ ಅಧ್ಯಕ್ಷರ ನೇಮಕವಾಗಿಲ್ಲ. ಇದರಿಂದಾಗಿ ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಹೆಚ್ಚು ಹೆಚ್ಚು ಪ್ರಕರಣಗಳು ಹೈಕೋರ್ಟ್‌ ಮೆಟ್ಟಿಲೇರವಂತಾಗಿದೆ. ಮಹರಾಷ್ಟ್ರದ ರಾಜ್ಯ ಮಾನವ ಹಕ್ಕು ಆಯೋಗದಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ಕೊರತೆಯಿಂದ ಕಳೆದ ವರ್ಷ ಕೋವಿಡ್‌ ಮೊದಲ ಅಲೆಯ ಸಮಯದಲ್ಲಿ ವಲಸೆ ಕಾರ್ಮಿಕರ ಸಮಸ್ಯೆಯು ಉದ್ಭವಿಸಿತು. ಮಹರಾಷ್ಟ್ರವಲ್ಲದೇ ಇನ್ನೂ ಅನೇಕ ರಾಜ್ಯಗಳಲ್ಲಿ ಸದಸ್ಯರ ಮತ್ತು ಅಧ್ಯಕ್ಷರ ಅನುಪಸ್ಥಿತಿಯಿಂದ ಮಾನವಹಕ್ಕು ಆಯೋಗದ ಕಾರ್ಯಾಚರಣೆಗೆ ಹಿನ್ನಡೆಯಾಗಿದೆ.


ಇದನ್ನೂ ಓದಿ: ದೇವೇಗೌಡರು ಪ್ರಧಾನಿಯಾಗಿ 25 ವ‍ರ್ಷದ ಸಂದರ್ಭದಲ್ಲಿ ಒಕ್ಕೂಟ ವ್ಯವಸ್ಥೆಯ ಸ್ಥಿತಿಗತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...