Homeಅಂತರಾಷ್ಟ್ರೀಯಬ್ರಿಟನ್‌ನಲ್ಲಿ ಕೊರೋನಾ ಇಳಿಮುಖ: ಜೂನ್ 1 ರಂದು ಶೂನ್ಯ ಸಾವಿನ ವರದಿ

ಬ್ರಿಟನ್‌ನಲ್ಲಿ ಕೊರೋನಾ ಇಳಿಮುಖ: ಜೂನ್ 1 ರಂದು ಶೂನ್ಯ ಸಾವಿನ ವರದಿ

- Advertisement -
- Advertisement -

ಕಳೆದು ಒಂದು ವರ್ಷದಿಂದ ಕೊರೋನಾ ಸಾಂಕ್ರಾಮಿಕವು ಯುರೋಪ್, ಅಮೆರಿಕಾ ಮತ್ತು ಬ್ರಿಟನ್‌ನಲ್ಲಿ ವ್ಯಾಪಕ ಸಾವುನೋವುಗಳಿಗೆ ಕಾರಣವಾಗಿತ್ತು. ಸದ್ಯ ಬ್ರಿಟನ್‌ ನಲ್ಲಿ ಕೊರೋನಾ ತೀವ್ರತೆ ಗಣನೀಯವಾಗಿ ಇಳಿಮುಖವಾಗಿದೆ.

ಕಳೆದ 28 ದಿನಗಳ ಅವಧಿಯಲ್ಲಿ ಜೂನ್ 1 ರ ಮಂಗಳವಾರದಂದು ಬ್ರಿಟನ್‌ನಲ್ಲಿ ಒಂದೇ ಒಂದು ಕೊರೋನಾ ಸೋಂಕಿತರ ಸಾವು ಸಂಭವಿಸಿಲ್ಲ. ಕೇವಲ 2,473 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕಳೆದ ಒಂದು ತಿಂಗಳಿನಿಂದ ಬ್ರಿಟನ್‌ ನಲ್ಲಿ ಕೋವಿಡ್‌ ಸೋಂಕು ಮತ್ತು ಸಾವಿನ ಪ್ರಮಾಣ ಇಳಿಮುಖವಾಗುತ್ತಿದ್ದು ಕೆಲವೇ ಕೆಲವು ಸಾವಿನ ಪ್ರಕರಣಗಳು ಮಾತ್ರ ವರದಿಯಾಗುತ್ತಿದೆ. ಇದಕ್ಕು ಹಿಂದಿನ ತಿಂಗಳುಗಳಿಗೆ ಮತ್ತು ಕಳೆದ 28 ದಿನಗಳಿಗೆ ಹೋಲಿಸಿದರೆ ಸೋಂಕಿನ ತೀವ್ರತೆ ಸಾಕಷ್ಟು ಇಳಿಮುಖವಾಗಿದೆ ಎಂದು ಬ್ರಿಟನ್‌ ಸರ್ಕಾರ ತಿಳಿಸಿದೆ.

ಕಳೆದ ವರ್ಷ ಮಾರ್ಚ್‌ 2020 ರ ಅವಧಿಯಲ್ಲಿ ಬ್ರಿಟನ್‌ ನಲ್ಲಿ ಕೊರೋನಾದಿಂದ ಯಾವುದೇ ಸಾವು ಸಂಭವಿಸಿರಲಿಲ್ಲ. ಅದಾದ ಮೇಲೆ 15 ತಿಂಗಳುಗಳ ಕಾಲ್‌ ಬ್ರಿಟನ್‌ ದೇಶದಲ್ಲಿ ಕೊರೋನಾ ಸೋಂಕು ಏರುತ್ತ ಇಳಿಯುತ್ತ ಸಾಗಿತ್ತು. ಕೆಲವು ತಿಂಗಳು ಬ್ರಿಟನ್‌ ನಲ್ಲಿ ಲಾಕ್‌ ಡೌನ್‌ ಕೂಡ ಹೇರಲಾಗಿತ್ತು. ಈಗ 15 ತಿಂಗಳ ನಂತರ ಬ್ರಿಟನ್‌ ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಅತ್ಯಂತ ಕನಿಷ್ಠ ಮಟ್ಟಕ್ಕೆ ಬಂದಿದೆ.

ಸಂಪೂರ್ಣ ಬ್ರಿಟನ್‌ ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಸೋಮವಾರ ದೇಶದಲ್ಲಿ ಯಾವುದೇ ಕೋವಿಡ್‌ ಸಂಬಂಧಿಸಿದ ಸಾವು ಸಂಭವಿಸಿಲ್ಲ. ವ್ಯಾಕ್ಸೀನ್‌ ಗಳು ಕೆಲಸ ಮಾಡುತ್ತಿರುವುದಕ್ಕೆ ಇದು ಸ್ಪಷ್ಟ ಉದಾಹರಣೆ ಎಂದು ಬ್ರಿಟನ್‌ ನ ಆರೋಗ್ಯ ಸಚಿವ ಮ್ಯಾಟ್ ಹ್ಯಾಂಕೊಕ್‌ ತಿಳಿಸಿದ್ದಾರೆ.

ಕೊರೋನಾ ಸೋಂಕು ಬ್ರಿಟನ್‌ ನಿಂದ ಇನ್ನೂ ನಿರ್ಮೂಲನೆಯಾಗಿಲ್ಲ ಎಂಬುದನ್ನು ಜನರು ಮರೆಯಬಾರದು. ಕೈತೊಳೆಯುತ್ತಿರುವ, ಮುಖ ತೊಳೆಯುತ್ತಿರುವ, ದೈಹಿಕ ಅಂತರದ ನಿಯಮಗಳನ್ನು ಮುಂದುವರೆಸಿ. ವ್ಯಾಕ್ಸೀನ್‌ ನ ಎರಡು ಡೋಸ್‌ ಗಳನ್ನು ಕಡ್ಡಾಯವಾಗಿ ಪಡೆಯಿರಿ ಎಂದು ಬ್ರಿಟನ್‌ ನ ಆರೋಗ್ಯ ಸಚಿವ ಮ್ಯಾಟ್‌ ಹ್ಯಾಂಕೊಕ್‌ ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಇದುವರೆಗೆ ಬ್ರಿಟನ್‌ನಲ್ಲಿ 1,27,782 ಜನರು ಕೋವಿಡ್‌ ನಿಂದ ಮೃತಪಟ್ಟಿದ್ದಾರೆ. ಬ್ರಿಟನ್‌ ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಜಗತ್ತಿನಲ್ಲಿ 5 ನೇ ಸ್ಥಾನದಲ್ಲಿದೆ ಎಂದು ಜಾನ್ಸ್‌ ಹಾಪಕಿನ್ಸ್‌ ವಿಶ್ವವಿದ್ಯಾಲಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ..


ಇದನ್ನೂ ಓದಿ: ಉಚಿತ ಸಾರ್ವತ್ರಿಕ ವ್ಯಾಕ್ಸಿನೇಷನ್‌ಗೆ ಕೇಂದ್ರವನ್ನು ಒತ್ತಾಯಿಸಿ ಕೇರಳ ವಿಧಾನಸಭೆ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...