Homeಕರ್ನಾಟಕಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

- Advertisement -
- Advertisement -

2020ರ ಆಗಸ್ಟ್ ತಿಂಗಳಿನಲ್ಲಿ ರೈತರ ಮನೆಗಳಿಗೆ ನಿಗೂಢ ಮೂಲಗಳಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ಬರುತ್ತಿದ್ದ ವರದಿಯಾಗಿತ್ತು. ಅಪರಿಚಿತ ಮೂಲಗಳಿಂದ ಭಾರತಕ್ಕೆ ಪ್ರವೇಶಿಸುವ “ಅನುಮಾನಾಸ್ಪದ / ಅಪೇಕ್ಷಿಸದ ಬೀಜ ಪಾರ್ಸೆಲ್‌ಗಳ” ಬಗ್ಗೆ ಜಾಗರೂಕರಾಗಿರಿ. ಇದು ದೇಶದ ಜೀವವೈವಿಧ್ಯತೆಗೆ ಅಪಾಯಕಾರಿಯಾಗಿದೆ ಎಂದು ಕೇಂದ್ರವು ರಾಜ್ಯ ಸರ್ಕಾರಗಳು ಮತ್ತು ಬೀಜ ಉದ್ಯಮ ಮತ್ತು ಸಂಶೋಧನಾ ಸಂಸ್ಥೆಗಳನ್ನು ಎಚ್ಚರಿಸಿತ್ತು.

“ಕಳೆದ ಕೆಲವು ತಿಂಗಳುಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಅನುಮಾನಾಸ್ಪದ ಬೀಜ ಸಾಗಣೆಗಳು ವರದಿಯಾಗಿವೆ. ಅಮೆರಿಕ, ಕೆನಡಾ, ಯುಕೆ, ನ್ಯೂಜಿಲೆಂಡ್, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈ ರೀತಿಯ ಘಟನೆಗಳು ವರದಿಯಾಗಿವೆ” ಎಂದು ಕೃಷಿ ಸಚಿವಾಲಯ ಕಳೆದ ವರ್ಷ ತಿಳಿಸಿತ್ತು.

ಆಗಿನಿಂದ ವಾಟ್ಸಾಪ್‌ನಲ್ಲಿ “ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ರೈತರಿಗೆ ಬರುತ್ತಿವೆ. ಅವುಗಳನ್ನು ಹೊಲಕ್ಕೆ ಹಾಕಿದರೆ ಬೆಳೆಯೆಲ್ಲಾ ನಾಶವಾಗುತ್ತದೆ. ಭೂಮಿಯ ಫಲವತ್ತತೆ ಹಾಳಾಗುತ್ತದೆ. ಅವುಗಳಲ್ಲಿ ವೈರಸ್ ಸಹ ಇವೆ” ಎಂಬ ಫೇಕ್‌ ಸುದ್ದಿಯೊಂದು ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ನಿಖರ ತನಿಖೆ ನಡೆದಿಲ್ಲ ಮತ್ತು ಯಾವುದೇ ಆಧಾರಗಳು ಸಿಕ್ಕಿಲ್ಲ.

ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ್ ಸೂಗೂರರವರು ಜೂನ್ 1 ರಂದು “ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಿನಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಅನಾಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು” ಎಂದು ಪತ್ರಿಕಾ ಹೇಳಿಕೆ ನೀಡಿದ್ದು ಅದನ್ನು ಪ್ರಜಾವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಗಳು ವರದಿ ಮಾಡಿವೆ.

ಈ ರೀತಿ ಚೀನಾದಿಂದ ಬಿತ್ತನೆ ಬೀಜಗಳು ಪಾರ್ಸೆಲ್ ಬಂದಿದ್ದೆ ಆದರೆ ಅದು ನಮ್ಮ ದೇಶವನ್ನು ದೊಡ್ಡ ಅಪಾಯಕ್ಕೆ ದೂಡಲಿದೆ. ಈ ಕುರಿತು ತೀವ್ರ ತನಿಖೆ ನಡೆಸಿ ಅದರ ಮೂಲವನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಿಲ್ಲ ಏಕೆ? ಭಾರತ ಸರ್ಕಾರ ಇದರ ಬಗ್ಗೆ ಮಾತನಾಡಿಲ್ಲ. ಪತ್ರಿಕೆಗಳಲ್ಲಿ ಚರ್ಚೆಯಾಗುತ್ತಿಲ್ಲ. ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದರು ಎಂಬುದು ವಿವಾದಕ್ಕೆ ಕಾರಣವಾಗಿದೆ.

“ರಾಜ್ಯದಲ್ಲಿ ಇಂತಹ ಬೀಜಗಳು ಬಂದಿರುವ ಬಗ್ಗೆ ವರದಿಯಾಗಿಲ್ಲ, ಮುನ್ನೆಚ್ಚರಿಕೆಯಾಗಿ ರೈತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇವೆ” ಎಂದು ಸಹ ಅದೇ ಅಧಿಕಾರಿ ಹೇಳಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಅವರಿಂದ ಸ್ಪಷ್ಟನೆ ಪಡೆಯಲು ಪ್ರಯತ್ನಿಸಿತು.

ಸರ್ ಚೀನಾ ಬಿತ್ತನೆ ಬೀಜಗಳ ಮಾಹಿತಿಯ ಮೂಲ ಯಾವುದು? ಸರ್ಕಾರದಿಂದ ಈ ಕುರಿತು ಆದೇಶ ಬಂದಿದೆಯೇ ಎಂದು ಡಾ. ರತೇಂದ್ರನಾಥ್ ಸೂಗೂರರವರನ್ನು ಪ್ರಶ್ನಿಸಿದೆವು. “ಮೊದಲಿಗೆ ಆದೇಶವಿದೆ ಎಂದರು. ಅದರ ಪ್ರತಿ ಕಳಿಸಿ ಎಂದಾಕ್ಷಣ, ಅದು ವ್ಯಾಟ್ಸಾಪ್‌ನಲ್ಲಿ ಬಂದೈತ್ರಿ, ಆಮ್ಯಾಲ ಅದನ್ನ ಕಳಿಸ್ತೀನಿ” ಎಂದರು.

ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶ್ ಅವರನ್ನು ನಾನುಗೌರಿ. ಕಾಂ ಸಂಪರ್ಕಿಸಿ, ಇಲಾಖೆಯಿಂದ ಇಂತಹ ಆದೇಶವಿದೆಯೇ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಅವರು, ‘ಸದ್ಯಕ್ಕೆ ಅಂತಹ ಆದೇಶವೇ ಇಲ್ಲ. ಅದೂ ವ್ಯಾಟ್ಸಾಪ್ ಮೂಲಕ ಇಂತಹ ಆದೇಶ ಹೊರಡಿಸಲೂ ಆಗದು. ಕಳೆದ ವರ್ಷ ಕೇಂದ್ರ ಸರ್ಕಾರದ ಕೃಷಿ ಇಲಾಖೆ ಹೊರಡಿಸಿದ ಒಂದು ಸುತ್ತೋಲೆ ಪ್ರಕಾರ, ಅನಾಮಿಕ ವಿಳಾಸದಿಂದ ಬಂದ ಬಿತ್ತನೆ ಬೀಜಗಳನ್ನು ರೈತರು ಬಳಸಬಾರದು ಎಂಬ ಸೂಚನೆಯಿದೆ. ಅದರಲ್ಲಿ ಚೀನಾ ದೇಶದ ಪ್ರಸ್ತಾಪವಿಲ್ಲ. ಆದರೆ ಅಂತಹ ಬೀಜಗಳ ಪಾರ್ಸೆಲ್ ಬಂದಿರುವುದನ್ನು ನಾನು ಮತ್ತು ನನ್ನ ಸಹಮಿತ್ರ ಅಧಿಕಾರಿಗಳು ಇಲ್ಲಿವರೆಗೆ ಕಂಡೇ ಇಲ್ಲ’ ಎಂದರು.

ಈ ಕುರಿತು ಸಂಪೂರ್ಣ ವಿವರ ಪಡೆಯಲು, ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ವೆಂಕಟರಮಣರೆಡ್ಡಿಯವರನ್ನು ಸಂಪರ್ಕಿಸಿದಾಗ  ‘ಸದ್ಯಕ್ಕೆ ಅಂತಹ ಯಾವ ಆದೇಶವೂ ಇಲ್ಲ. ವ್ಯಾಟ್ಸಾಪ್ ಮೂಲಕ ಅಂತಹ ಆದೇಶವನ್ನೂ ಇಲಾಖೆ ನೀಡುವುದಿಲ್ಲ. 2020ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು, ಅನಾಮಧೇಯ ವಿಳಾಸಗಳಿಂದ ಬರುವ ಬಿತ್ತನೆ ಬೀಜಗಳ ಬಗ್ಗೆ ಎಚ್ಚರವಿರಲಿ ಎಂಬ ಸುತ್ತೋಲೆ ಹೊರಡಿಸಿತ್ತು. ಈಗೇನೂ ಅಂಥಾದ್ದಿಲ್ಲ. ಕಲಬುರಗಿ ಅಧಿಕಾರಿ ಹೀಗೇಕೆ ಮಾಡಿದರು ಎಂಬುದನ್ನು ವಿಚಾರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ಕಳಿಸಿದ ಕಳೆದ ವರ್ಷದ ಆದೇಶದ ಪ್ರತಿ

ಇಂತಹ ವಿಚಾರಗಳಲ್ಲಿ ಕೃಷಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಮತ್ತು ಅನಗತ್ಯ ಗೊಂದಲ ಉಂಟು ಮಾಡಬಾರದು. ಈ ರೀತಿ ಬಿತ್ತನೆ ಬೀಜಗಳು ಬರುತ್ತಿದ್ದರೆ ಅದರ ಮೂಲ ಪತ್ತೆ ಹಚ್ಚುವುದು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡದಲ್ಲ. ಹಾಗಾಗಿ ಅದು ನಿಜವಾಗಿದ್ದರೆ ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅನಗತ್ಯ ಭಯ ಮೂಡಿಸದೆ ಸ್ಪಷ್ಟನೆ ನೀಡಬೇಕು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಳ್ಳಾರಿಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಅವರು 2021ರ ಜೂನ್ 2ರಂದು ಪ್ರಕಟಣೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...