Homeಕರ್ನಾಟಕಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

- Advertisement -
- Advertisement -

2020ರ ಆಗಸ್ಟ್ ತಿಂಗಳಿನಲ್ಲಿ ರೈತರ ಮನೆಗಳಿಗೆ ನಿಗೂಢ ಮೂಲಗಳಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ಬರುತ್ತಿದ್ದ ವರದಿಯಾಗಿತ್ತು. ಅಪರಿಚಿತ ಮೂಲಗಳಿಂದ ಭಾರತಕ್ಕೆ ಪ್ರವೇಶಿಸುವ “ಅನುಮಾನಾಸ್ಪದ / ಅಪೇಕ್ಷಿಸದ ಬೀಜ ಪಾರ್ಸೆಲ್‌ಗಳ” ಬಗ್ಗೆ ಜಾಗರೂಕರಾಗಿರಿ. ಇದು ದೇಶದ ಜೀವವೈವಿಧ್ಯತೆಗೆ ಅಪಾಯಕಾರಿಯಾಗಿದೆ ಎಂದು ಕೇಂದ್ರವು ರಾಜ್ಯ ಸರ್ಕಾರಗಳು ಮತ್ತು ಬೀಜ ಉದ್ಯಮ ಮತ್ತು ಸಂಶೋಧನಾ ಸಂಸ್ಥೆಗಳನ್ನು ಎಚ್ಚರಿಸಿತ್ತು.

“ಕಳೆದ ಕೆಲವು ತಿಂಗಳುಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಅನುಮಾನಾಸ್ಪದ ಬೀಜ ಸಾಗಣೆಗಳು ವರದಿಯಾಗಿವೆ. ಅಮೆರಿಕ, ಕೆನಡಾ, ಯುಕೆ, ನ್ಯೂಜಿಲೆಂಡ್, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈ ರೀತಿಯ ಘಟನೆಗಳು ವರದಿಯಾಗಿವೆ” ಎಂದು ಕೃಷಿ ಸಚಿವಾಲಯ ಕಳೆದ ವರ್ಷ ತಿಳಿಸಿತ್ತು.

ಆಗಿನಿಂದ ವಾಟ್ಸಾಪ್‌ನಲ್ಲಿ “ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ರೈತರಿಗೆ ಬರುತ್ತಿವೆ. ಅವುಗಳನ್ನು ಹೊಲಕ್ಕೆ ಹಾಕಿದರೆ ಬೆಳೆಯೆಲ್ಲಾ ನಾಶವಾಗುತ್ತದೆ. ಭೂಮಿಯ ಫಲವತ್ತತೆ ಹಾಳಾಗುತ್ತದೆ. ಅವುಗಳಲ್ಲಿ ವೈರಸ್ ಸಹ ಇವೆ” ಎಂಬ ಫೇಕ್‌ ಸುದ್ದಿಯೊಂದು ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ನಿಖರ ತನಿಖೆ ನಡೆದಿಲ್ಲ ಮತ್ತು ಯಾವುದೇ ಆಧಾರಗಳು ಸಿಕ್ಕಿಲ್ಲ.

ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ್ ಸೂಗೂರರವರು ಜೂನ್ 1 ರಂದು “ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಿನಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಅನಾಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು” ಎಂದು ಪತ್ರಿಕಾ ಹೇಳಿಕೆ ನೀಡಿದ್ದು ಅದನ್ನು ಪ್ರಜಾವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಗಳು ವರದಿ ಮಾಡಿವೆ.

ಈ ರೀತಿ ಚೀನಾದಿಂದ ಬಿತ್ತನೆ ಬೀಜಗಳು ಪಾರ್ಸೆಲ್ ಬಂದಿದ್ದೆ ಆದರೆ ಅದು ನಮ್ಮ ದೇಶವನ್ನು ದೊಡ್ಡ ಅಪಾಯಕ್ಕೆ ದೂಡಲಿದೆ. ಈ ಕುರಿತು ತೀವ್ರ ತನಿಖೆ ನಡೆಸಿ ಅದರ ಮೂಲವನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಿಲ್ಲ ಏಕೆ? ಭಾರತ ಸರ್ಕಾರ ಇದರ ಬಗ್ಗೆ ಮಾತನಾಡಿಲ್ಲ. ಪತ್ರಿಕೆಗಳಲ್ಲಿ ಚರ್ಚೆಯಾಗುತ್ತಿಲ್ಲ. ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದರು ಎಂಬುದು ವಿವಾದಕ್ಕೆ ಕಾರಣವಾಗಿದೆ.

“ರಾಜ್ಯದಲ್ಲಿ ಇಂತಹ ಬೀಜಗಳು ಬಂದಿರುವ ಬಗ್ಗೆ ವರದಿಯಾಗಿಲ್ಲ, ಮುನ್ನೆಚ್ಚರಿಕೆಯಾಗಿ ರೈತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇವೆ” ಎಂದು ಸಹ ಅದೇ ಅಧಿಕಾರಿ ಹೇಳಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಅವರಿಂದ ಸ್ಪಷ್ಟನೆ ಪಡೆಯಲು ಪ್ರಯತ್ನಿಸಿತು.

ಸರ್ ಚೀನಾ ಬಿತ್ತನೆ ಬೀಜಗಳ ಮಾಹಿತಿಯ ಮೂಲ ಯಾವುದು? ಸರ್ಕಾರದಿಂದ ಈ ಕುರಿತು ಆದೇಶ ಬಂದಿದೆಯೇ ಎಂದು ಡಾ. ರತೇಂದ್ರನಾಥ್ ಸೂಗೂರರವರನ್ನು ಪ್ರಶ್ನಿಸಿದೆವು. “ಮೊದಲಿಗೆ ಆದೇಶವಿದೆ ಎಂದರು. ಅದರ ಪ್ರತಿ ಕಳಿಸಿ ಎಂದಾಕ್ಷಣ, ಅದು ವ್ಯಾಟ್ಸಾಪ್‌ನಲ್ಲಿ ಬಂದೈತ್ರಿ, ಆಮ್ಯಾಲ ಅದನ್ನ ಕಳಿಸ್ತೀನಿ” ಎಂದರು.

ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶ್ ಅವರನ್ನು ನಾನುಗೌರಿ. ಕಾಂ ಸಂಪರ್ಕಿಸಿ, ಇಲಾಖೆಯಿಂದ ಇಂತಹ ಆದೇಶವಿದೆಯೇ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಅವರು, ‘ಸದ್ಯಕ್ಕೆ ಅಂತಹ ಆದೇಶವೇ ಇಲ್ಲ. ಅದೂ ವ್ಯಾಟ್ಸಾಪ್ ಮೂಲಕ ಇಂತಹ ಆದೇಶ ಹೊರಡಿಸಲೂ ಆಗದು. ಕಳೆದ ವರ್ಷ ಕೇಂದ್ರ ಸರ್ಕಾರದ ಕೃಷಿ ಇಲಾಖೆ ಹೊರಡಿಸಿದ ಒಂದು ಸುತ್ತೋಲೆ ಪ್ರಕಾರ, ಅನಾಮಿಕ ವಿಳಾಸದಿಂದ ಬಂದ ಬಿತ್ತನೆ ಬೀಜಗಳನ್ನು ರೈತರು ಬಳಸಬಾರದು ಎಂಬ ಸೂಚನೆಯಿದೆ. ಅದರಲ್ಲಿ ಚೀನಾ ದೇಶದ ಪ್ರಸ್ತಾಪವಿಲ್ಲ. ಆದರೆ ಅಂತಹ ಬೀಜಗಳ ಪಾರ್ಸೆಲ್ ಬಂದಿರುವುದನ್ನು ನಾನು ಮತ್ತು ನನ್ನ ಸಹಮಿತ್ರ ಅಧಿಕಾರಿಗಳು ಇಲ್ಲಿವರೆಗೆ ಕಂಡೇ ಇಲ್ಲ’ ಎಂದರು.

ಈ ಕುರಿತು ಸಂಪೂರ್ಣ ವಿವರ ಪಡೆಯಲು, ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ವೆಂಕಟರಮಣರೆಡ್ಡಿಯವರನ್ನು ಸಂಪರ್ಕಿಸಿದಾಗ  ‘ಸದ್ಯಕ್ಕೆ ಅಂತಹ ಯಾವ ಆದೇಶವೂ ಇಲ್ಲ. ವ್ಯಾಟ್ಸಾಪ್ ಮೂಲಕ ಅಂತಹ ಆದೇಶವನ್ನೂ ಇಲಾಖೆ ನೀಡುವುದಿಲ್ಲ. 2020ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು, ಅನಾಮಧೇಯ ವಿಳಾಸಗಳಿಂದ ಬರುವ ಬಿತ್ತನೆ ಬೀಜಗಳ ಬಗ್ಗೆ ಎಚ್ಚರವಿರಲಿ ಎಂಬ ಸುತ್ತೋಲೆ ಹೊರಡಿಸಿತ್ತು. ಈಗೇನೂ ಅಂಥಾದ್ದಿಲ್ಲ. ಕಲಬುರಗಿ ಅಧಿಕಾರಿ ಹೀಗೇಕೆ ಮಾಡಿದರು ಎಂಬುದನ್ನು ವಿಚಾರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ಕಳಿಸಿದ ಕಳೆದ ವರ್ಷದ ಆದೇಶದ ಪ್ರತಿ

ಇಂತಹ ವಿಚಾರಗಳಲ್ಲಿ ಕೃಷಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಮತ್ತು ಅನಗತ್ಯ ಗೊಂದಲ ಉಂಟು ಮಾಡಬಾರದು. ಈ ರೀತಿ ಬಿತ್ತನೆ ಬೀಜಗಳು ಬರುತ್ತಿದ್ದರೆ ಅದರ ಮೂಲ ಪತ್ತೆ ಹಚ್ಚುವುದು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡದಲ್ಲ. ಹಾಗಾಗಿ ಅದು ನಿಜವಾಗಿದ್ದರೆ ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅನಗತ್ಯ ಭಯ ಮೂಡಿಸದೆ ಸ್ಪಷ್ಟನೆ ನೀಡಬೇಕು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಳ್ಳಾರಿಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಅವರು 2021ರ ಜೂನ್ 2ರಂದು ಪ್ರಕಟಣೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...