Homeಕರ್ನಾಟಕಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

- Advertisement -
- Advertisement -

2020ರ ಆಗಸ್ಟ್ ತಿಂಗಳಿನಲ್ಲಿ ರೈತರ ಮನೆಗಳಿಗೆ ನಿಗೂಢ ಮೂಲಗಳಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ಬರುತ್ತಿದ್ದ ವರದಿಯಾಗಿತ್ತು. ಅಪರಿಚಿತ ಮೂಲಗಳಿಂದ ಭಾರತಕ್ಕೆ ಪ್ರವೇಶಿಸುವ “ಅನುಮಾನಾಸ್ಪದ / ಅಪೇಕ್ಷಿಸದ ಬೀಜ ಪಾರ್ಸೆಲ್‌ಗಳ” ಬಗ್ಗೆ ಜಾಗರೂಕರಾಗಿರಿ. ಇದು ದೇಶದ ಜೀವವೈವಿಧ್ಯತೆಗೆ ಅಪಾಯಕಾರಿಯಾಗಿದೆ ಎಂದು ಕೇಂದ್ರವು ರಾಜ್ಯ ಸರ್ಕಾರಗಳು ಮತ್ತು ಬೀಜ ಉದ್ಯಮ ಮತ್ತು ಸಂಶೋಧನಾ ಸಂಸ್ಥೆಗಳನ್ನು ಎಚ್ಚರಿಸಿತ್ತು.

“ಕಳೆದ ಕೆಲವು ತಿಂಗಳುಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಅನುಮಾನಾಸ್ಪದ ಬೀಜ ಸಾಗಣೆಗಳು ವರದಿಯಾಗಿವೆ. ಅಮೆರಿಕ, ಕೆನಡಾ, ಯುಕೆ, ನ್ಯೂಜಿಲೆಂಡ್, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈ ರೀತಿಯ ಘಟನೆಗಳು ವರದಿಯಾಗಿವೆ” ಎಂದು ಕೃಷಿ ಸಚಿವಾಲಯ ಕಳೆದ ವರ್ಷ ತಿಳಿಸಿತ್ತು.

ಆಗಿನಿಂದ ವಾಟ್ಸಾಪ್‌ನಲ್ಲಿ “ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ರೈತರಿಗೆ ಬರುತ್ತಿವೆ. ಅವುಗಳನ್ನು ಹೊಲಕ್ಕೆ ಹಾಕಿದರೆ ಬೆಳೆಯೆಲ್ಲಾ ನಾಶವಾಗುತ್ತದೆ. ಭೂಮಿಯ ಫಲವತ್ತತೆ ಹಾಳಾಗುತ್ತದೆ. ಅವುಗಳಲ್ಲಿ ವೈರಸ್ ಸಹ ಇವೆ” ಎಂಬ ಫೇಕ್‌ ಸುದ್ದಿಯೊಂದು ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ನಿಖರ ತನಿಖೆ ನಡೆದಿಲ್ಲ ಮತ್ತು ಯಾವುದೇ ಆಧಾರಗಳು ಸಿಕ್ಕಿಲ್ಲ.

ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ್ ಸೂಗೂರರವರು ಜೂನ್ 1 ರಂದು “ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಿನಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಅನಾಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು” ಎಂದು ಪತ್ರಿಕಾ ಹೇಳಿಕೆ ನೀಡಿದ್ದು ಅದನ್ನು ಪ್ರಜಾವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಗಳು ವರದಿ ಮಾಡಿವೆ.

ಈ ರೀತಿ ಚೀನಾದಿಂದ ಬಿತ್ತನೆ ಬೀಜಗಳು ಪಾರ್ಸೆಲ್ ಬಂದಿದ್ದೆ ಆದರೆ ಅದು ನಮ್ಮ ದೇಶವನ್ನು ದೊಡ್ಡ ಅಪಾಯಕ್ಕೆ ದೂಡಲಿದೆ. ಈ ಕುರಿತು ತೀವ್ರ ತನಿಖೆ ನಡೆಸಿ ಅದರ ಮೂಲವನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಿಲ್ಲ ಏಕೆ? ಭಾರತ ಸರ್ಕಾರ ಇದರ ಬಗ್ಗೆ ಮಾತನಾಡಿಲ್ಲ. ಪತ್ರಿಕೆಗಳಲ್ಲಿ ಚರ್ಚೆಯಾಗುತ್ತಿಲ್ಲ. ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದರು ಎಂಬುದು ವಿವಾದಕ್ಕೆ ಕಾರಣವಾಗಿದೆ.

“ರಾಜ್ಯದಲ್ಲಿ ಇಂತಹ ಬೀಜಗಳು ಬಂದಿರುವ ಬಗ್ಗೆ ವರದಿಯಾಗಿಲ್ಲ, ಮುನ್ನೆಚ್ಚರಿಕೆಯಾಗಿ ರೈತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇವೆ” ಎಂದು ಸಹ ಅದೇ ಅಧಿಕಾರಿ ಹೇಳಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಅವರಿಂದ ಸ್ಪಷ್ಟನೆ ಪಡೆಯಲು ಪ್ರಯತ್ನಿಸಿತು.

ಸರ್ ಚೀನಾ ಬಿತ್ತನೆ ಬೀಜಗಳ ಮಾಹಿತಿಯ ಮೂಲ ಯಾವುದು? ಸರ್ಕಾರದಿಂದ ಈ ಕುರಿತು ಆದೇಶ ಬಂದಿದೆಯೇ ಎಂದು ಡಾ. ರತೇಂದ್ರನಾಥ್ ಸೂಗೂರರವರನ್ನು ಪ್ರಶ್ನಿಸಿದೆವು. “ಮೊದಲಿಗೆ ಆದೇಶವಿದೆ ಎಂದರು. ಅದರ ಪ್ರತಿ ಕಳಿಸಿ ಎಂದಾಕ್ಷಣ, ಅದು ವ್ಯಾಟ್ಸಾಪ್‌ನಲ್ಲಿ ಬಂದೈತ್ರಿ, ಆಮ್ಯಾಲ ಅದನ್ನ ಕಳಿಸ್ತೀನಿ” ಎಂದರು.

ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶ್ ಅವರನ್ನು ನಾನುಗೌರಿ. ಕಾಂ ಸಂಪರ್ಕಿಸಿ, ಇಲಾಖೆಯಿಂದ ಇಂತಹ ಆದೇಶವಿದೆಯೇ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಅವರು, ‘ಸದ್ಯಕ್ಕೆ ಅಂತಹ ಆದೇಶವೇ ಇಲ್ಲ. ಅದೂ ವ್ಯಾಟ್ಸಾಪ್ ಮೂಲಕ ಇಂತಹ ಆದೇಶ ಹೊರಡಿಸಲೂ ಆಗದು. ಕಳೆದ ವರ್ಷ ಕೇಂದ್ರ ಸರ್ಕಾರದ ಕೃಷಿ ಇಲಾಖೆ ಹೊರಡಿಸಿದ ಒಂದು ಸುತ್ತೋಲೆ ಪ್ರಕಾರ, ಅನಾಮಿಕ ವಿಳಾಸದಿಂದ ಬಂದ ಬಿತ್ತನೆ ಬೀಜಗಳನ್ನು ರೈತರು ಬಳಸಬಾರದು ಎಂಬ ಸೂಚನೆಯಿದೆ. ಅದರಲ್ಲಿ ಚೀನಾ ದೇಶದ ಪ್ರಸ್ತಾಪವಿಲ್ಲ. ಆದರೆ ಅಂತಹ ಬೀಜಗಳ ಪಾರ್ಸೆಲ್ ಬಂದಿರುವುದನ್ನು ನಾನು ಮತ್ತು ನನ್ನ ಸಹಮಿತ್ರ ಅಧಿಕಾರಿಗಳು ಇಲ್ಲಿವರೆಗೆ ಕಂಡೇ ಇಲ್ಲ’ ಎಂದರು.

ಈ ಕುರಿತು ಸಂಪೂರ್ಣ ವಿವರ ಪಡೆಯಲು, ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ವೆಂಕಟರಮಣರೆಡ್ಡಿಯವರನ್ನು ಸಂಪರ್ಕಿಸಿದಾಗ  ‘ಸದ್ಯಕ್ಕೆ ಅಂತಹ ಯಾವ ಆದೇಶವೂ ಇಲ್ಲ. ವ್ಯಾಟ್ಸಾಪ್ ಮೂಲಕ ಅಂತಹ ಆದೇಶವನ್ನೂ ಇಲಾಖೆ ನೀಡುವುದಿಲ್ಲ. 2020ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು, ಅನಾಮಧೇಯ ವಿಳಾಸಗಳಿಂದ ಬರುವ ಬಿತ್ತನೆ ಬೀಜಗಳ ಬಗ್ಗೆ ಎಚ್ಚರವಿರಲಿ ಎಂಬ ಸುತ್ತೋಲೆ ಹೊರಡಿಸಿತ್ತು. ಈಗೇನೂ ಅಂಥಾದ್ದಿಲ್ಲ. ಕಲಬುರಗಿ ಅಧಿಕಾರಿ ಹೀಗೇಕೆ ಮಾಡಿದರು ಎಂಬುದನ್ನು ವಿಚಾರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ಕಳಿಸಿದ ಕಳೆದ ವರ್ಷದ ಆದೇಶದ ಪ್ರತಿ

ಇಂತಹ ವಿಚಾರಗಳಲ್ಲಿ ಕೃಷಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಮತ್ತು ಅನಗತ್ಯ ಗೊಂದಲ ಉಂಟು ಮಾಡಬಾರದು. ಈ ರೀತಿ ಬಿತ್ತನೆ ಬೀಜಗಳು ಬರುತ್ತಿದ್ದರೆ ಅದರ ಮೂಲ ಪತ್ತೆ ಹಚ್ಚುವುದು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡದಲ್ಲ. ಹಾಗಾಗಿ ಅದು ನಿಜವಾಗಿದ್ದರೆ ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅನಗತ್ಯ ಭಯ ಮೂಡಿಸದೆ ಸ್ಪಷ್ಟನೆ ನೀಡಬೇಕು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಳ್ಳಾರಿಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಅವರು 2021ರ ಜೂನ್ 2ರಂದು ಪ್ರಕಟಣೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...