Homeಚಳವಳಿಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

- Advertisement -
- Advertisement -
| ಬಿ. ಶ್ರೀಪಾದ ಭಟ್ |

ಓದುಗರಿಗೆ ಸೂಚನೆ:
ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದು, ಕೆಲವು ಲೇಕಕರು ಅದನ್ನು ಅನುಸರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಈ ಲೇಕನದಲ್ಲಿನ ಬಾಶೆಯ ಬಳಕೆಯಲ್ಲಿ ನಿಮಗೆ ಕಂಡುಬರುವ ವ್ಯತ್ಯಾಸವನ್ನು, ಪ್ರೂಫ್ ವ್ಯತ್ಯಾಸ ಎಂದು ಬಗೆಯಬಾರದೆಂದು ಕೋರುತ್ತೇವೆ.

ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಕೊಡಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಅವಕಾಶ ಕೊಡಬೇಕು ಎನ್ನುವ ಮಾತಿನಲ್ಲಿ ಸಹಮತ ಇದೆ. ಆದ್ರೆ ಇದು ಕೇವಲ ಬಾವನಾತ್ಮಕ ನೆಲೆಯ ಮಾದರಿಗೆ ಸೀಮಿತಗೊಂಡರೆ ಉಪಯೋಗವಿಲ್ಲ. ಇದು ಸಮಾಜೋ-ಆರ್ಥಿಕ ಆಯಾಮಗಳನ್ನ ಒಳಗೊಳ್ಳಬೇಕು. ಮೊನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅದಿಕಾರಿಗಳು ಹಿರಿಯ ಪ್ರಾಥಮಿಕ ಶಾಲೆಗಳಿಗೆ 10,000 ಶಿಕ್ಷಕರ ನೇಮಕಾತಿ ಸಾದ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದಕ್ಕೆ ಅವರು ಗುಣಮಟ್ಟದ ಅಬ್ಯರ್ಥಿಗಳು ದೊರೆಯುತ್ತಿಲ್ಲ ಎಂದು ಕಾರಣ ನೀಡಿದರು.
ಕರ್ನಾಟಕದಲ್ಲಿಯೆ ಪದವಿ ಶಿಕ್ಷಣ ಪಡೆದು, ನಂತರ ಬಿಎಡ್ ಮುಗಿಸಿ ನಂತರ ಟಿಇಟಿ ಮುಗಿಸಿ ನಂತರ ಸಿಇಟಿ ಅರ್ಹತಾ ಪರೀಕ್ಷೆ ಬರೆಯುವ ಲಕ್ಷಾಂತರ ಕನ್ನಡಿಗರಲ್ಲಿ ಅರ್ಹತೆ ಇರುವವರು ದೊರಕುತ್ತಿಲ್ಲ ಎಂದರೆ ಇದು ಉಡಾಫೆ ಮತ್ತು ಬೇಜವಬ್ದಾರಿಯ ಮಾತು. ಅಬ್ಯರ್ಥಿಗಳು ಎಲ್ಲಾ ಹಂತದ ಶಿಕ್ಷಣವನ್ನು ಕರ್ನಾಟಕದಲ್ಲಿಯೆ ಪಡೆದುಕೊಳ್ಳುತ್ತಾರೆ. ಆದರೆ ಗುಣಮಟ್ಟದ ಅಬ್ಯರ್ಥಿಗಳು ದೊರಕುತ್ತಿಲ್ಲವೆಂದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರ ತಾನು ನೀಡುತ್ತಿರುವ ಶಿಕ್ಷಣವೆ ಕಳಪೆ ಗುಣಮಟ್ಟದ್ದು ಎಂದು ಒಪ್ಪಿಕೊಳ್ಳುತ್ತಿದ್ದಾರೆಯೆ? ಗುಣಮಟ್ಟದ ಅಬ್ಯರ್ಥಿಗೋಸ್ಕರ ಇನ್ನೂ ಎಶ್ಟು ಹಂತದ ಪರೀಕ್ಷೆಗಳನ್ನ ನಡೆಸುತ್ತಾರೆ? ಇಲ್ಲಿ ಸರಕಾರದ ನಿಜದ ಉದ್ದೇಶವೇನು? ಇಲ್ಲಿ ಕನ್ನಡಿಗ ಅಬ್ಯರ್ಥಿಗಳಿದ್ದರೂ ನೇಮಕಾತಿ ಆಗುತ್ತಿಲ್ಲ. ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಾವಿರಾರು ಬ್ಯಾಕ್ ಲಾಗ್ ಹುದ್ದೆಗಳು (ಪ್ರವರ್ಗ) ಖಾಲಿ ಇವೆ. ಆದರೆ ಅವುಗಳಿಗೆ  ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಅಬ್ಯರ್ಥಿಗಳೆಲ್ಲರೂ ಸಹಜವಾಗಿಯೆ ಕನ್ನಡಿಗರು ಆಗಿರುತ್ತಾರೆ. ಇದನ್ನು ಪ್ರಶ್ನಿಸಿ ಹೋರಾಟ ಮಾಡಬೇಕು. ಈ ಬಿಕ್ಕಟ್ಟು ಬಗೆಹರಿಯದೆ  ಕನ್ನಡಿಗರಿಗೆ ಮಾತ್ರ ಉದ್ಯೋಗ ಎನ್ನುವುದು ಮೇಲ್ಮಟ್ಟದಲ್ಲಿ ಉಳಿದುಕೊಂಡುಬಿಡುತ್ತದೆ.
ಮತ್ತೊಂದೆಡೆ ದುಡಿಯುವ ವರ್ಗದ ಜನರು ಯಾಕೆ ತಮ್ಮ ಹುಟ್ಟಿದ ಊರನ್ನು ತೊರೆದು ಹೊಟ್ಟೆಪಾಡಿಗೆ ಬೇರೆ ಊರಿಗೆ, ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಾರೆ? ಇಲ್ಲಿ ಸರಕಾರದ ವೈಫಲ್ಯದ ಪಾತ್ರವೆಶ್ಟು? ಅದರ ದಿವಾಳಿ ಎದ್ದ ಆರ್ಥಿಕ ನೀತಿಗಳು ಈ ನಿರುದ್ಯೋಗಕ್ಕೆ, ವಲಸೆಗೆ ಮೂಲ ಕಾರಣ. ಇದಕ್ಕೆ ಮೊದಲು ಪರಿಹಾರ ಕಂಡುಕೊಳ್ಳಬೇಕು. ಇನ್ನು ಸರಕಾರಗಳು ಸ್ಥಳೀಯವಾಗಿ ಪರ್ಯಾಯ ಉದ್ಯೋಗಗಳನ್ನ ಸೃಶ್ಟಿ ಮಾಡದೆ ಇರುವುದು ಅಲ್ಲಿನ ಸ್ಥಳೀಯರು ವಲಸೆ ಹೋಗಲು ಮುಖ್ಯ ಕಾರಣಗಳಲ್ಲೊಂದು. ಉದಾಹರಣೆಗೆ ಕಲ್ಬುರ್ಗಿ ಜಿಲ್ಲೆಯ ಮುಖ್ಯ ಬೆಳೆ ತೊಗರಿ. ಆದರೆ ಬೆಳೆದ ತೊಗರಿಯನ್ನು ಬೇಳೆಯಾಗಿ ಪರಿವರ್ತಿಸಲು ಪಕ್ಕದ ಮಹರಾಶ್ಟ್ರ ರಾಜ್ಯಕ್ಕೆ ಕಳುಹಿಸಬೇಕು. ಅದರ ಬದಲು ಸರಕಾರವು ಈ ತೊಗರಿಯ ಬೇಳೆಯಾಗಿ ಪರಿವರ್ತಿಸುವ ಉದ್ಯಮವನ್ನ ಕಲ್ಬುರ್ಗಿಯಲ್ಲಿಯೆ ಸ್ಥಾಪಿಸಬೇಕು. ಆಗ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆ. ಅವರು ಬೇರೆ ಊರು, ರಾಜ್ಯಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ಇದು ಬೇರೆ ರಾಜ್ಯಗಳಿಂದ ಬರುವ ವಲಸಿಗರಿಗೂ ಅನ್ವಯಿಸುತ್ತದೆ. ಇದೊಂದು ಉದಾಹರಣೆ. ಇಂತಹ ನೂರಾರು ಅವಕಾಶಗಳಿವೆ. ಉದ್ಯೋಗ ಅವಕಾಶಗಳ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು.
ಇನ್ನು ಸರಕಾರಿ ಉದ್ಯೋಗ ಅವಕಾಶಗಳ ಪ್ರಮಾಣವೆಶ್ಟು? ಶೇಕಡ 2% ಕ್ಕಿಂತಲೂ ಕಡಿಮೆ. ನಿರುದ್ಯೋಗಿ  ಕನ್ನಡಿಗರೆಶ್ಟು? ಲಕ್ಷಗಳ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದಲ್ಲಿ ಉದ್ಯೋಗ ಅವಕಾಶ ಮತ್ತು ಉದ್ಯೋಗಾಂಕ್ಷಿಗಳ ಅನುಪಾತದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಇದಕ್ಕೆ ಪರಿಹಾರವೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೆ ಹೋದರೆ ಮಿಕ್ಕಂತೆ ಎಲ್ಲವೂ ರಬಸದ ಹಾಗೆ ಬಂದು ಹೀಗೆ ತೇಲಿ ಹೋಗುವ ಮಾತುಗಳಾಗುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...