Homeಚಳವಳಿಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

ಕನ್ನಡಿಗರಿಗೆ ಉದ್ಯೋಗ: ಸಮಸ್ಯೆಯ ಮೂಲಕ್ಕೆ ಹೋಗಿ ಪರಿಹಾರ ಹುಡುಕೋಣ

- Advertisement -
- Advertisement -
| ಬಿ. ಶ್ರೀಪಾದ ಭಟ್ |

ಓದುಗರಿಗೆ ಸೂಚನೆ:
ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು ಅವರು ಬಲವಾಗಿ ಪ್ರತಿಪಾದಿಸುತ್ತಿದ್ದು, ಕೆಲವು ಲೇಕಕರು ಅದನ್ನು ಅನುಸರಿಸಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಈ ಲೇಕನದಲ್ಲಿನ ಬಾಶೆಯ ಬಳಕೆಯಲ್ಲಿ ನಿಮಗೆ ಕಂಡುಬರುವ ವ್ಯತ್ಯಾಸವನ್ನು, ಪ್ರೂಫ್ ವ್ಯತ್ಯಾಸ ಎಂದು ಬಗೆಯಬಾರದೆಂದು ಕೋರುತ್ತೇವೆ.

ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ಕೊಡಬೇಕು, ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲು ಅವಕಾಶ ಕೊಡಬೇಕು ಎನ್ನುವ ಮಾತಿನಲ್ಲಿ ಸಹಮತ ಇದೆ. ಆದ್ರೆ ಇದು ಕೇವಲ ಬಾವನಾತ್ಮಕ ನೆಲೆಯ ಮಾದರಿಗೆ ಸೀಮಿತಗೊಂಡರೆ ಉಪಯೋಗವಿಲ್ಲ. ಇದು ಸಮಾಜೋ-ಆರ್ಥಿಕ ಆಯಾಮಗಳನ್ನ ಒಳಗೊಳ್ಳಬೇಕು. ಮೊನ್ನೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅದಿಕಾರಿಗಳು ಹಿರಿಯ ಪ್ರಾಥಮಿಕ ಶಾಲೆಗಳಿಗೆ 10,000 ಶಿಕ್ಷಕರ ನೇಮಕಾತಿ ಸಾದ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಇದಕ್ಕೆ ಅವರು ಗುಣಮಟ್ಟದ ಅಬ್ಯರ್ಥಿಗಳು ದೊರೆಯುತ್ತಿಲ್ಲ ಎಂದು ಕಾರಣ ನೀಡಿದರು.
ಕರ್ನಾಟಕದಲ್ಲಿಯೆ ಪದವಿ ಶಿಕ್ಷಣ ಪಡೆದು, ನಂತರ ಬಿಎಡ್ ಮುಗಿಸಿ ನಂತರ ಟಿಇಟಿ ಮುಗಿಸಿ ನಂತರ ಸಿಇಟಿ ಅರ್ಹತಾ ಪರೀಕ್ಷೆ ಬರೆಯುವ ಲಕ್ಷಾಂತರ ಕನ್ನಡಿಗರಲ್ಲಿ ಅರ್ಹತೆ ಇರುವವರು ದೊರಕುತ್ತಿಲ್ಲ ಎಂದರೆ ಇದು ಉಡಾಫೆ ಮತ್ತು ಬೇಜವಬ್ದಾರಿಯ ಮಾತು. ಅಬ್ಯರ್ಥಿಗಳು ಎಲ್ಲಾ ಹಂತದ ಶಿಕ್ಷಣವನ್ನು ಕರ್ನಾಟಕದಲ್ಲಿಯೆ ಪಡೆದುಕೊಳ್ಳುತ್ತಾರೆ. ಆದರೆ ಗುಣಮಟ್ಟದ ಅಬ್ಯರ್ಥಿಗಳು ದೊರಕುತ್ತಿಲ್ಲವೆಂದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರ ತಾನು ನೀಡುತ್ತಿರುವ ಶಿಕ್ಷಣವೆ ಕಳಪೆ ಗುಣಮಟ್ಟದ್ದು ಎಂದು ಒಪ್ಪಿಕೊಳ್ಳುತ್ತಿದ್ದಾರೆಯೆ? ಗುಣಮಟ್ಟದ ಅಬ್ಯರ್ಥಿಗೋಸ್ಕರ ಇನ್ನೂ ಎಶ್ಟು ಹಂತದ ಪರೀಕ್ಷೆಗಳನ್ನ ನಡೆಸುತ್ತಾರೆ? ಇಲ್ಲಿ ಸರಕಾರದ ನಿಜದ ಉದ್ದೇಶವೇನು? ಇಲ್ಲಿ ಕನ್ನಡಿಗ ಅಬ್ಯರ್ಥಿಗಳಿದ್ದರೂ ನೇಮಕಾತಿ ಆಗುತ್ತಿಲ್ಲ. ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಸಾವಿರಾರು ಬ್ಯಾಕ್ ಲಾಗ್ ಹುದ್ದೆಗಳು (ಪ್ರವರ್ಗ) ಖಾಲಿ ಇವೆ. ಆದರೆ ಅವುಗಳಿಗೆ  ನೇಮಕಾತಿ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಅಬ್ಯರ್ಥಿಗಳೆಲ್ಲರೂ ಸಹಜವಾಗಿಯೆ ಕನ್ನಡಿಗರು ಆಗಿರುತ್ತಾರೆ. ಇದನ್ನು ಪ್ರಶ್ನಿಸಿ ಹೋರಾಟ ಮಾಡಬೇಕು. ಈ ಬಿಕ್ಕಟ್ಟು ಬಗೆಹರಿಯದೆ  ಕನ್ನಡಿಗರಿಗೆ ಮಾತ್ರ ಉದ್ಯೋಗ ಎನ್ನುವುದು ಮೇಲ್ಮಟ್ಟದಲ್ಲಿ ಉಳಿದುಕೊಂಡುಬಿಡುತ್ತದೆ.
ಮತ್ತೊಂದೆಡೆ ದುಡಿಯುವ ವರ್ಗದ ಜನರು ಯಾಕೆ ತಮ್ಮ ಹುಟ್ಟಿದ ಊರನ್ನು ತೊರೆದು ಹೊಟ್ಟೆಪಾಡಿಗೆ ಬೇರೆ ಊರಿಗೆ, ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತಾರೆ? ಇಲ್ಲಿ ಸರಕಾರದ ವೈಫಲ್ಯದ ಪಾತ್ರವೆಶ್ಟು? ಅದರ ದಿವಾಳಿ ಎದ್ದ ಆರ್ಥಿಕ ನೀತಿಗಳು ಈ ನಿರುದ್ಯೋಗಕ್ಕೆ, ವಲಸೆಗೆ ಮೂಲ ಕಾರಣ. ಇದಕ್ಕೆ ಮೊದಲು ಪರಿಹಾರ ಕಂಡುಕೊಳ್ಳಬೇಕು. ಇನ್ನು ಸರಕಾರಗಳು ಸ್ಥಳೀಯವಾಗಿ ಪರ್ಯಾಯ ಉದ್ಯೋಗಗಳನ್ನ ಸೃಶ್ಟಿ ಮಾಡದೆ ಇರುವುದು ಅಲ್ಲಿನ ಸ್ಥಳೀಯರು ವಲಸೆ ಹೋಗಲು ಮುಖ್ಯ ಕಾರಣಗಳಲ್ಲೊಂದು. ಉದಾಹರಣೆಗೆ ಕಲ್ಬುರ್ಗಿ ಜಿಲ್ಲೆಯ ಮುಖ್ಯ ಬೆಳೆ ತೊಗರಿ. ಆದರೆ ಬೆಳೆದ ತೊಗರಿಯನ್ನು ಬೇಳೆಯಾಗಿ ಪರಿವರ್ತಿಸಲು ಪಕ್ಕದ ಮಹರಾಶ್ಟ್ರ ರಾಜ್ಯಕ್ಕೆ ಕಳುಹಿಸಬೇಕು. ಅದರ ಬದಲು ಸರಕಾರವು ಈ ತೊಗರಿಯ ಬೇಳೆಯಾಗಿ ಪರಿವರ್ತಿಸುವ ಉದ್ಯಮವನ್ನ ಕಲ್ಬುರ್ಗಿಯಲ್ಲಿಯೆ ಸ್ಥಾಪಿಸಬೇಕು. ಆಗ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆ. ಅವರು ಬೇರೆ ಊರು, ರಾಜ್ಯಗಳಿಗೆ ವಲಸೆ ಹೋಗುವುದು ತಪ್ಪುತ್ತದೆ. ಇದು ಬೇರೆ ರಾಜ್ಯಗಳಿಂದ ಬರುವ ವಲಸಿಗರಿಗೂ ಅನ್ವಯಿಸುತ್ತದೆ. ಇದೊಂದು ಉದಾಹರಣೆ. ಇಂತಹ ನೂರಾರು ಅವಕಾಶಗಳಿವೆ. ಉದ್ಯೋಗ ಅವಕಾಶಗಳ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಬೇಕು.
ಇನ್ನು ಸರಕಾರಿ ಉದ್ಯೋಗ ಅವಕಾಶಗಳ ಪ್ರಮಾಣವೆಶ್ಟು? ಶೇಕಡ 2% ಕ್ಕಿಂತಲೂ ಕಡಿಮೆ. ನಿರುದ್ಯೋಗಿ  ಕನ್ನಡಿಗರೆಶ್ಟು? ಲಕ್ಷಗಳ ಸಂಖ್ಯೆಯಲ್ಲಿದ್ದಾರೆ. ಹಾಗಿದ್ದಲ್ಲಿ ಉದ್ಯೋಗ ಅವಕಾಶ ಮತ್ತು ಉದ್ಯೋಗಾಂಕ್ಷಿಗಳ ಅನುಪಾತದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಇದಕ್ಕೆ ಪರಿಹಾರವೇನು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೆ ಹೋದರೆ ಮಿಕ್ಕಂತೆ ಎಲ್ಲವೂ ರಬಸದ ಹಾಗೆ ಬಂದು ಹೀಗೆ ತೇಲಿ ಹೋಗುವ ಮಾತುಗಳಾಗುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...