Homeಕರೋನಾ ತಲ್ಲಣಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

ಸಾವು, ಉದ್ಯೋಗ ನಷ್ಟ, ಆತಂಕ: ಖಿನ್ನತೆ ಶಮನಕಾರಿ ಔಷಧಿಗಳ ಮಾರಾಟ ಶೇ. 23 ರಷ್ಟು ಏರಿಕೆ

- Advertisement -
- Advertisement -

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಈಗ ಹೆಚ್ಚಿನ ಜನರು ತಮ್ಮನ್ನು ಸಂಪರ್ಕಿಸುತ್ತಿದ್ದಾರೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ಹೇಳುತ್ತಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಅಲ್ಲದೆ ಖಿನ್ನತೆ-ಶಮನಕಾರಿ ಔಷಧಿಗಳ ಮಾರಾಟವು ಕಳೆದ ಒಂದು ವರ್ಷದಲ್ಲಿ ಸುಮಾರು 23 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಫಾರ್ಮಾ ಉದ್ಯಮವು ಅಂಕಿಅಂಶಗಳನ್ನು ನೀಡಿದೆ.

ಭಾರತದಲ್ಲಿ 9 ಲಕ್ಷಕ್ಕೂ ಹೆಚ್ಚು ಔಷಧಿಕಾರರನ್ನು ಪ್ರತಿನಿಧಿಸುವ ಆಲ್ ಇಂಡಿಯನ್ ಒರಿಜಿನ್ ಕೆಮಿಸ್ಟ್ & ಡಿಸ್ಟ್ರಿಬ್ಯೂಟರ್ಸ್ (ಎಐಒಸಿಡಿ-ಎಡಬ್ಲ್ಯೂಎಸಿಎಸ್) ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ಅಗ್ರ ಐದು ಖಿನ್ನತೆ-ನಿರೋಧಕ ಔಷಧಿಗಳ ಮಾರಾಟವು 2020ರಲ್ಲಿ 177 ಕೋಟಿ ರೂ. ಇದ್ದುದು ಏಪ್ರಿಲ್ 2021 ರಲ್ಲಿ 218 ಕೋಟಿ ರೂ.ಗೆ ಏರಿತು. ಇದು ಶೇಕಡಾ 23 ರಷ್ಟು ಏರಿಕೆಯಾಗಿದೆ. 2019 ರ ಏಪ್ರಿಲ್‌ನಲ್ಲಿ ಈ ಔಷಧಿಗಳ ಮಾರಾಟವು 186 ಕೋಟಿ ರೂ. ಮೌಲ್ಯದಾಗಿತ್ತು. ಇದರರ್ಥ ಏಪ್ರಿಲ್ 2019 ರಿಂದ 2020 ರ ಏಪ್ರಿಲ್ ವರೆಗೆ ಮಾರಾಟದಲ್ಲಿ ಶೇಕಡಾ ಐದು ರಷ್ಟು ಕುಸಿತ ಕಂಡುಬಂದಿತ್ತು.

AIOCD-AWACS ನಿಂದ ಉಲ್ಲೇಖಿಸಲ್ಪಡುವ ಔಷಧಿಗಳಲ್ಲಿ ಅಬಾಟ್‌ನ ಪ್ರೋಥಿಯಾಡೆನ್, ಫಿಜರ್‌ನ ಅಟಿವಾನ್, ಡಾ. ರೆಡ್ಡಿಸ್ ಲ್ಯಾಬ್‌ನ ಟ್ರಿಪ್ಟೋಮರ್ ಮತ್ತು ಸನ್ ಫಾರ್ಮಾದ ನೆಕ್ಸಿಟೊ ಮತ್ತು ನೆಕ್ಸಿಟೊ ಪ್ಲಸ್ ಸೇರಿವೆ.

ಸಾಂಕ್ರಾಮಿಕ ಪೂರ್ವದ ದಿನಗಳಿಗೆ ಹೋಲಿಸಿದರೆ ಹೆಚ್ಚಿನ ಜನರು ಈಗ ತಮ್ಮ ಜೊತೆ ಸಮಾಲೋಚಿಸುತ್ತಿದ್ದಾರೆ ಮತ್ತು ನಾವು ರೋಗಿಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸುತ್ತಿದ್ದೇವೆ ಎಂದು ಮಾನಸಿಕ ಆರೋಗ್ಯ ತಜ್ಞರು ಮತ್ತು ಮನೋವೈದ್ಯರು ತಿಳಿಸಿದ್ದಾರೆ.

ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಪಡೆಯುವ ಜನರ ಮೊದಲ ವರ್ಗವೆಂದರೆ ಕೋವಿಡ್‌ನಿಂದ ಚೇತರಿಸಿಕೊಂಡವರು ಮತ್ತು ಖಿನ್ನತೆ ಮತ್ತು ಆತಂಕದಂತಹ ಚೇತರಿಕೆಯ ನಂತರದ ತೊಂದರೆಗಳನ್ನು ತೋರಿಸುತ್ತಿರುವ ಗುಂಪು.

ಎರಡನೆಯ ಗುಂಪಿನಲ್ಲಿ ಸಾಮಾನ್ಯ ಸಾಂಕ್ರಾಮಿಕ ಸನ್ನಿವೇಶದಿಂದ ಪ್ರಭಾವಿತರಾದವರು ಅಥವಾ ಪ್ರೀತಿಪಾತ್ರರ ಸಾವು, ಉದ್ಯೋಗ ನಷ್ಟ ಅಥವಾ ಸಂಬಂಧಗಳಲ್ಲಿನ ತೊಂದರೆಗಳನ್ನು ಎದುರಿಸುತ್ತಿರುವ ಜನ.

ಸಾಂಕ್ರಾಮಿಕ ಸಮಯದಲ್ಲಿ ಮದ್ಯದ ಲಭ್ಯತೆ ಅಥವಾ ಕಡಿಮೆ ಲಭ್ಯತೆಯಿಂದಾಗಿ ಖಿನ್ನತೆಯ ಲಕ್ಷಣಗಳನ್ನು ಪ್ರದರ್ಶಿಸುವವರು ಮಾನಸಿಕ ಆರೋಗ್ಯ ರೋಗಿಗಳ ಮೂರನೇ ವರ್ಗವಾಗಿದೆ,

ದೇಶದ ಉನ್ನತ ಮಾನಸಿಕ ಆರೋಗ್ಯ ಸಂಸ್ಥೆಯಾದ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ-ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ವೈದ್ಯರು ಮೇ ಆರಂಭದ ವೇಳೆಗೆ ಸಹಾಯ ಪಡೆಯುವ ಜನರ ಸಂಖ್ಯೆಯಲ್ಲಿ ಇದೇ ರೀತಿಯ ಏರಿಕೆ ಕಂಡುಬಂದಿದೆ ಎಂದು ಒಪ್ಪಿಕೊಂಡರು.
ಮೇ ಮೊದಲ ವಾರದಲ್ಲಿ ಸಂಸ್ಥೆ ನಡೆಸುತ್ತಿರುವ ಸಹಾಯವಾಣಿಯಲ್ಲಿ ಸ್ವೀಕರಿಸಿದ ದೈನಂದಿನ ಯಾತನೆ ಕರೆಗಳಲ್ಲಿ 40 ಪ್ರತಿಶತದಷ್ಟು ಹೆಚ್ಚಳವನ್ನು ತೋರಿಸಿವೆ.

‘‘fear-o-demic’’

ಮಾನಸಿಕ ಆರೋಗ್ಯ ತಜ್ಞರು ದೇಶದ ಎರಡನೇ ಕೋವಿಡ್ ಅಲೆಯು ‘‘fear-o-demic’’
ಗೆ ಕಾರಣವಾಗಿದೆ ಎಂದು ನಂಬುತ್ತಾರೆ. ಅಂದರೆ, ಜನರು ಕೋವಿಡ್‌ಗೆ ಸಾಯುವ ಅಥವಾ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುವ ಅಥವಾ ಉದ್ಯೋಗ ಕಳೆದುಕೊಳ್ಳುವ ಬಗ್ಗೆ ಚಿಂತಿತರಾಗಿದ್ದಾರೆ.

ಈ ಭಯವು ಜನರಲ್ಲಿ ಆತಂಕ ಮತ್ತು ಖಿನ್ನತೆಗೆ ಮತ್ತಷ್ಟು ಕಾರಣವಾಗಿದೆ. ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಇತರ ಪ್ರಮುಖ ಅಂಶಗಳು ಹಣಕಾಸಿನ ಬಿಕ್ಕಟ್ಟು, ಸಂಬಂಧದ ಸಮಸ್ಯೆಗಳು ಮತ್ತು ಲಾಕ್‌ಡೌನ್ ಕಾರಣಕ್ಕೆ ಹಲವಾರು ತಿಂಗಳುಗಳ ಕಾಲ ಮನೆಯೊಳಗೆ ಇರುವಂತೆ ಆಗುವುದು….

ಹೀಗೆ ಖಿನ್ನತೆಯಿಂದ ನರಳುವವರು ಖಿನ್ನತೆ-ನಿರೋಧಕ ಶಮನಕಾರಿ ಔಷಧಿಗಳ ಮೊರೆ ಹೋಗುತ್ತಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...